AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾದಲ್ಲಿ ಮಾಸ್ ಆಗಿರೋ ಪವನ್ ಕಲ್ಯಾಣ್ ರಿಯಲ್​ ಲೈಫ್​ನಲ್ಲಿ ಹೇಗೆ? ಇಲ್ಲಿದೆ ನೋಡಿ ಉತ್ತರ

ಪವನ್ ಕಲ್ಯಾಣ್ ಅವರ ನೇತೃತ್ವದ ಜನಸೇನಾ ಪಕ್ಷವು ಟಿಡಿಪಿ ಹಾಗೂ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಪವನ್ ಕಲ್ಯಾಣ್ ಅವರು ತಮ್ಮ ಪಕ್ಷದವರಿಂದಲೇ ಟೀಕೆ ಎದುರಿಸಬೇಕಾಯಿತು.  ಆದಾಗ್ಯೂ ಪವನ್ ಕಲ್ಯಾಣ್ ಅವರು ಈ ಟೀಕೆಗಳನ್ನು ಮೆಟ್ಟಿ ನಿಂತರು. ಅವರು ರಿಯಲ್ ಲೈಫ್​ನಲ್ಲಿ ಹೇಗೆ ಎಂಬುದನ್ನು ಕೆಲವರು ವಿವರಿಸಿದ್ದಾರೆ.

ಸಿನಿಮಾದಲ್ಲಿ ಮಾಸ್ ಆಗಿರೋ ಪವನ್ ಕಲ್ಯಾಣ್ ರಿಯಲ್​ ಲೈಫ್​ನಲ್ಲಿ ಹೇಗೆ? ಇಲ್ಲಿದೆ ನೋಡಿ ಉತ್ತರ
ಪವನ್ ಕಲ್ಯಾಣ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Jun 11, 2024 | 7:57 AM

ಪವನ್ ಕಲ್ಯಾಣ್ (Pawan Kalyan) ಅವರು ರಾಜಕೀಯಕ್ಕೆ ಬಂದು ಹಲವು ವರ್ಷಗಳು ಕಳೆದಿವೆ. ಇದೇ ಮೊದಲ ಬಾರಿಗೆ ಅವರಿಗೆ ಅಧಿಕಾರ ಸಿಕ್ಕಿದೆ. ಅವರ ಪಕ್ಷ ಟಿಡಿಪಿ ಜೊತೆ ಮೈತ್ರಿ ಮಾಡಿಕೊಂಡು ಗೆಲುವು ಕಂಡಿದೆ. ಈ ಗೆಲುವಿನಿಂದ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಪವನ್ ತೆರೆಮೇಲೆ ಮಾಸ್ ಆಗಿ ಕಾಣಿಸಿಕೊಳ್ಳುತ್ತಾರೆ. ನಿಜ ಜೀವನದಲ್ಲಿ ಅವರು ಹೇಗೆ? ಈ ಪ್ರಶ್ನೆಗೆ ತಮಿಳು ನಟ ವಿಜಯ್ ಸೇತುಪತಿ ಅವರು ಉತ್ತರ ನೀಡಿದ್ದಾರೆ.

ಪವನ್ ಕಲ್ಯಾಣ್ ಅವರ ನೇತೃತ್ವದ ಜನಸೇನಾ ಪಕ್ಷವು ಟಿಡಿಪಿ ಹಾಗೂ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಪವನ್ ಕಲ್ಯಾಣ್ ಅವರು ತಮ್ಮ ಪಕ್ಷದವರಿಂದಲೇ ಟೀಕೆ ಎದುರಿಸಬೇಕಾಯಿತು.  ಆದಾಗ್ಯೂ ಪವನ್ ಕಲ್ಯಾಣ್ ಅವರು ಈ ಟೀಕೆಗಳನ್ನು ಮೆಟ್ಟಿ ನಿಂತರು. ಹಲವು ತ್ಯಾಗಗಳನ್ನು ಅವರು ಮಾಡಿದರು. ಇತ್ತೀಚೆಗೆ ಅನೇಕರು ಪವನ್ ಕಲ್ಯಾಣ್ ಅವರನ್ನು ಹೊಗಳುತ್ತಿದ್ದಾರೆ. ವಿಜಯ್ ಸೇತುಪತಿ ಕೂಡ ಪವನ್ ಅವರ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಅವರು ನಿಜ ಜೀವನದಲ್ಲೂ ಮಾಸ್ ಎಂದಿದ್ದಾರೆ.

‘ಪವನ್ ಕಲ್ಯಾಣ್ ಅವರ ಶ್ರಮಕ್ಕೆ ನಾನು ಗೌರವ ಸೂಚಿಸುತ್ತೇನೆ. ಅವರ ಬಗ್ಗೆ ನನಗೆ ಖುಷಿ ಇದೆ. ರಾಜಕೀಯದಲ್ಲಿ ಸ್ಪರ್ಧಿಸುತ್ತಿರುವುದಕ್ಕೆ ಅವರನ್ನು ಅನೇಕರು ಟೀಕಿಸಿದ್ದರು. ಅವರ ಸ್ಥಿರತೆ ಬಗ್ಗೆ ಮೆಚ್ಚುಗೆ ಇದೆ. ಅವರ ಕಥೆಯಲ್ಲಿ ಅವರೇ ಹೀರೋ. ಎಲ್ಲರಲ್ಲೂ ಆ ಸ್ಥಿರತೆ ಬೇಕು. ವೈಯಕ್ತಿವಾಗಿ ನನಗೆ ಅವರು ಗೊತ್ತಿಲ್ಲ. ಆದರೆ ನನ್ನ ತೆಲುಗು ಗೆಳೆಯರು ವಾಟ್ಸಾಪ್​​ನಲ್ಲಿ ಅವರ ಗೆಲುವಿನ ಬಗ್ಗೆ ಹೇಳಿದ್ದಾರೆ. ಅವರು ಎಷ್ಟುಪಟ್ಟು ಗೆದ್ದಿದ್ದಾರೆ ಎಂದು ತಿಳಿಯಿತು’ ಎಂದು ವಿಜಯ್ ಹೇಳಿದ್ದಾರೆ.

ಇದನ್ನೂ ಓದಿ:  ‘ಸರ್ಕಾರ ಕೊಡೋ ಸಂಬಳದಲ್ಲಿ ಒಂದು ರೂಪಾಯಿನೂ ಬಿಡಲ್ಲ’; ಪವನ್ ಕಲ್ಯಾಣ್

‘ಪವನ್ ಅವರು ಕೇವಲ ಸಿನಿಮಾಗಳಲ್ಲಿ ಅಲ್ಲ ನಿಜ ಜೀವನದಲ್ಲೂ ಮಾಸ್’ ಎಂದು ವಿಜಯ್ ಸೇತುಪತಿ ಅವರು ಹೊಗಳಿದ್ದಾರೆ. ‘ಮಹಾರಾಜು’ ಸಿನಿಮಾದ ಈವೆಂಟ್​​ನಲ್ಲಿ ಈ ಬಗ್ಗೆ ವಿಜಯ್ ಮಾತನಾಡಿದ್ದಾರೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಎನ್​ಡಿಎ ಸಭೆಯಲ್ಲಿ ಪವನ್ ಕಲ್ಯಾಣ್ ಅವರನ್ನು ಹೊಗಳಿದ್ದರು. ಪವನ ಎಂದರೆ ಗಾಳಿ ಎಂದರ್ಥ. ‘ನೀವು ಪವನ ಅಲ್ಲ ಬಿರುಗಾಳಿ’ ಎಂದು ಮೆಚ್ಚುಗೆ ಸೂಚಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್