AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾದಲ್ಲಿ ಮಾಸ್ ಆಗಿರೋ ಪವನ್ ಕಲ್ಯಾಣ್ ರಿಯಲ್​ ಲೈಫ್​ನಲ್ಲಿ ಹೇಗೆ? ಇಲ್ಲಿದೆ ನೋಡಿ ಉತ್ತರ

ಪವನ್ ಕಲ್ಯಾಣ್ ಅವರ ನೇತೃತ್ವದ ಜನಸೇನಾ ಪಕ್ಷವು ಟಿಡಿಪಿ ಹಾಗೂ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಪವನ್ ಕಲ್ಯಾಣ್ ಅವರು ತಮ್ಮ ಪಕ್ಷದವರಿಂದಲೇ ಟೀಕೆ ಎದುರಿಸಬೇಕಾಯಿತು.  ಆದಾಗ್ಯೂ ಪವನ್ ಕಲ್ಯಾಣ್ ಅವರು ಈ ಟೀಕೆಗಳನ್ನು ಮೆಟ್ಟಿ ನಿಂತರು. ಅವರು ರಿಯಲ್ ಲೈಫ್​ನಲ್ಲಿ ಹೇಗೆ ಎಂಬುದನ್ನು ಕೆಲವರು ವಿವರಿಸಿದ್ದಾರೆ.

ಸಿನಿಮಾದಲ್ಲಿ ಮಾಸ್ ಆಗಿರೋ ಪವನ್ ಕಲ್ಯಾಣ್ ರಿಯಲ್​ ಲೈಫ್​ನಲ್ಲಿ ಹೇಗೆ? ಇಲ್ಲಿದೆ ನೋಡಿ ಉತ್ತರ
ಪವನ್ ಕಲ್ಯಾಣ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 11, 2024 | 7:57 AM

Share

ಪವನ್ ಕಲ್ಯಾಣ್ (Pawan Kalyan) ಅವರು ರಾಜಕೀಯಕ್ಕೆ ಬಂದು ಹಲವು ವರ್ಷಗಳು ಕಳೆದಿವೆ. ಇದೇ ಮೊದಲ ಬಾರಿಗೆ ಅವರಿಗೆ ಅಧಿಕಾರ ಸಿಕ್ಕಿದೆ. ಅವರ ಪಕ್ಷ ಟಿಡಿಪಿ ಜೊತೆ ಮೈತ್ರಿ ಮಾಡಿಕೊಂಡು ಗೆಲುವು ಕಂಡಿದೆ. ಈ ಗೆಲುವಿನಿಂದ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಪವನ್ ತೆರೆಮೇಲೆ ಮಾಸ್ ಆಗಿ ಕಾಣಿಸಿಕೊಳ್ಳುತ್ತಾರೆ. ನಿಜ ಜೀವನದಲ್ಲಿ ಅವರು ಹೇಗೆ? ಈ ಪ್ರಶ್ನೆಗೆ ತಮಿಳು ನಟ ವಿಜಯ್ ಸೇತುಪತಿ ಅವರು ಉತ್ತರ ನೀಡಿದ್ದಾರೆ.

ಪವನ್ ಕಲ್ಯಾಣ್ ಅವರ ನೇತೃತ್ವದ ಜನಸೇನಾ ಪಕ್ಷವು ಟಿಡಿಪಿ ಹಾಗೂ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಪವನ್ ಕಲ್ಯಾಣ್ ಅವರು ತಮ್ಮ ಪಕ್ಷದವರಿಂದಲೇ ಟೀಕೆ ಎದುರಿಸಬೇಕಾಯಿತು.  ಆದಾಗ್ಯೂ ಪವನ್ ಕಲ್ಯಾಣ್ ಅವರು ಈ ಟೀಕೆಗಳನ್ನು ಮೆಟ್ಟಿ ನಿಂತರು. ಹಲವು ತ್ಯಾಗಗಳನ್ನು ಅವರು ಮಾಡಿದರು. ಇತ್ತೀಚೆಗೆ ಅನೇಕರು ಪವನ್ ಕಲ್ಯಾಣ್ ಅವರನ್ನು ಹೊಗಳುತ್ತಿದ್ದಾರೆ. ವಿಜಯ್ ಸೇತುಪತಿ ಕೂಡ ಪವನ್ ಅವರ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಅವರು ನಿಜ ಜೀವನದಲ್ಲೂ ಮಾಸ್ ಎಂದಿದ್ದಾರೆ.

‘ಪವನ್ ಕಲ್ಯಾಣ್ ಅವರ ಶ್ರಮಕ್ಕೆ ನಾನು ಗೌರವ ಸೂಚಿಸುತ್ತೇನೆ. ಅವರ ಬಗ್ಗೆ ನನಗೆ ಖುಷಿ ಇದೆ. ರಾಜಕೀಯದಲ್ಲಿ ಸ್ಪರ್ಧಿಸುತ್ತಿರುವುದಕ್ಕೆ ಅವರನ್ನು ಅನೇಕರು ಟೀಕಿಸಿದ್ದರು. ಅವರ ಸ್ಥಿರತೆ ಬಗ್ಗೆ ಮೆಚ್ಚುಗೆ ಇದೆ. ಅವರ ಕಥೆಯಲ್ಲಿ ಅವರೇ ಹೀರೋ. ಎಲ್ಲರಲ್ಲೂ ಆ ಸ್ಥಿರತೆ ಬೇಕು. ವೈಯಕ್ತಿವಾಗಿ ನನಗೆ ಅವರು ಗೊತ್ತಿಲ್ಲ. ಆದರೆ ನನ್ನ ತೆಲುಗು ಗೆಳೆಯರು ವಾಟ್ಸಾಪ್​​ನಲ್ಲಿ ಅವರ ಗೆಲುವಿನ ಬಗ್ಗೆ ಹೇಳಿದ್ದಾರೆ. ಅವರು ಎಷ್ಟುಪಟ್ಟು ಗೆದ್ದಿದ್ದಾರೆ ಎಂದು ತಿಳಿಯಿತು’ ಎಂದು ವಿಜಯ್ ಹೇಳಿದ್ದಾರೆ.

ಇದನ್ನೂ ಓದಿ:  ‘ಸರ್ಕಾರ ಕೊಡೋ ಸಂಬಳದಲ್ಲಿ ಒಂದು ರೂಪಾಯಿನೂ ಬಿಡಲ್ಲ’; ಪವನ್ ಕಲ್ಯಾಣ್

‘ಪವನ್ ಅವರು ಕೇವಲ ಸಿನಿಮಾಗಳಲ್ಲಿ ಅಲ್ಲ ನಿಜ ಜೀವನದಲ್ಲೂ ಮಾಸ್’ ಎಂದು ವಿಜಯ್ ಸೇತುಪತಿ ಅವರು ಹೊಗಳಿದ್ದಾರೆ. ‘ಮಹಾರಾಜು’ ಸಿನಿಮಾದ ಈವೆಂಟ್​​ನಲ್ಲಿ ಈ ಬಗ್ಗೆ ವಿಜಯ್ ಮಾತನಾಡಿದ್ದಾರೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಎನ್​ಡಿಎ ಸಭೆಯಲ್ಲಿ ಪವನ್ ಕಲ್ಯಾಣ್ ಅವರನ್ನು ಹೊಗಳಿದ್ದರು. ಪವನ ಎಂದರೆ ಗಾಳಿ ಎಂದರ್ಥ. ‘ನೀವು ಪವನ ಅಲ್ಲ ಬಿರುಗಾಳಿ’ ಎಂದು ಮೆಚ್ಚುಗೆ ಸೂಚಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?