‘ನೀವು ಪವನ್ ಅಲ್ಲ, ಬಿರುಗಾಳಿ’; ಪ್ರಧಾನಿ ಮೋದಿ ಹೊಗಳಿಕೆಗೆ ಪವನ್ ರಿಯಾಕ್ಷನ್ ನೋಡಿ

‘ಜನಸೇನಾ ಪರವಾಗಿ ನನ್ನ ಧನ್ಯವಾದ. ಇಲ್ಲಿಗೆ ಬರೋಕೆ ಅವಕಾಶ ನೀಡಿದ್ದಕ್ಕೆ ಧನ್ಯವಾದ. 2014ರಲ್ಲಿ ಇಲ್ಲಿಂದಲೇ ಆರಂಭ ಆಗಿತ್ತು. 15 ವರ್ಷ ಪ್ರಧಾನಿ ನಮ್ಮ ದೇಶದಲ್ಲಿ ಪ್ರಧಾನಿ ಆಗಿರಬೇಕು ಎಂದು ನಾನು ಹಾಗೂ ಚಂದ್ರಬಾಬು ನಾಯ್ಡು ಮಾತನಾಡಿಕೊಂಡಿದ್ದೆವು’ ಎಂದಿದ್ದಾರೆ ಪವನ್.

‘ನೀವು ಪವನ್ ಅಲ್ಲ, ಬಿರುಗಾಳಿ’; ಪ್ರಧಾನಿ ಮೋದಿ ಹೊಗಳಿಕೆಗೆ ಪವನ್ ರಿಯಾಕ್ಷನ್ ನೋಡಿ
ಪವನ್-ಮೋದಿ
Follow us
| Updated By: ರಾಜೇಶ್ ದುಗ್ಗುಮನೆ

Updated on: Jun 08, 2024 | 8:00 AM

ಪವನ್ ಕಲ್ಯಾಣ್ (Pawan Kalyan) ಅವರ ಜನಸೇನಾ ಪಕ್ಷ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಜಯಭೇರಿ ಭಾರಿಸಿದೆ. ಈ ಗೆಲುವಿನಿಂದ ಅವರು ರಾಜಕೀಯದಲ್ಲಿ ಮೊದಲ ಬಾರಿಗೆ ನಗು ಬೀರುವಂತೆ ಆಗಿದೆ. ವಿಧಾನಸಭೆಯಲ್ಲಿ ಸ್ಪರ್ಧಿಸಿದ 17 ಕ್ಷೇತ್ರಗಳಲ್ಲಿ 17 ಕ್ಷೇತ್ರಗಳನ್ನು ಅವರು ಗೆದ್ದಿದ್ದಾರೆ. ಲೋಕಸಭೆಯಲ್ಲಿ ಸಿಕ್ಕ ಎರಡೂ ಕ್ಷೇತ್ರದಲ್ಲಿ ಅವರ ಪಕ್ಷ ಗೆಲುವು ಕಂಡಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಎನ್​​ಡಿಎ ಸಭೆಯಲ್ಲಿ ಮೋದಿ ಅವರು ಪವನ್ ಕಲ್ಯಾಣ್ ಅವರನ್ನು ಹೊಗಳಿದ್ದಾರೆ.

ಪವನ್ ಕಲ್ಯಾಣ್ ಅವರ ಆಂಧ್ರ ಪ್ರದೇಶದಲ್ಲಿ ಕ್ಲೀನ್ ಸ್ವೀಪ್ ಮಾಡಿದ್ದಾರೆ. ಈ ಕಾರಣಕ್ಕೆ ಪ್ರಧಾನಿ ಮೋದಿಗೆ ಅವರ ಬಗ್ಗೆ ಹೆಮ್ಮೆ ಬಂದಿದೆ. ಹೀಗಾಗಿ, ಪವನ್ ಬಗ್ಗೆ ಅವರು ಮೆಚ್ಚುಗೆ ಸೂಚಿಸಿದ್ದಾರೆ. ಪವನ ಎಂದರೆ ಗಾಳಿ ಎಂಬರ್ಥ ಇದೆ. ‘ಇವರು ಪವನ (ಗಾಳಿ) ಅಲ್ಲ ಬಿರುಗಾಳಿ’ ಎಂದು ಪವನ್​ ಅವರನ್ನು ಹೊಗಳಿದ್ದಾರೆ ಮೋದಿ. ಇದರಿಂದ ಅವರು ಖುಷಿ ಪಟ್ಟಿದ್ದಾರೆ.

ಪವನ್ ಕಲ್ಯಾಣ್ ಅವರು ಮೋದಿ ಅವರ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ‘ಜನಸೇನಾ ಪರವಾಗಿ ನನ್ನ ಧನ್ಯವಾದ. ಇಲ್ಲಿಗೆ ಬರೋಕೆ ಅವಕಾಶ ನೀಡಿದ್ದಕ್ಕೆ ಧನ್ಯವಾದ. 2014ರಲ್ಲಿ ಇಲ್ಲಿಂದಲೇ ಆರಂಭ ಆಗಿತ್ತು. 15 ವರ್ಷ ಪ್ರಧಾನಿ ನಮ್ಮ ದೇಶದಲ್ಲಿ ಪ್ರಧಾನಿ ಆಗಿರಬೇಕು ಎಂದು ನಾನು ಹಾಗೂ ಚಂದ್ರಬಾಬು ನಾಯ್ಡು ಮಾತನಾಡಿಕೊಂಡಿದ್ದೆವು. ಅದು ಸಂಭವಿಸುತ್ತಿದೆ. ನೀವು ಇಡೀ ದೇಶಕ್ಕೆ ಸ್ಫೂರ್ತಿ’ ಎಂದು ಮೋದಿ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು ಪವನ್.

2008ರಲ್ಲಿ ಪವನ್ ಕಲ್ಯಾಣ್ ಅವರು ರಾಜಕೀಯಕ್ಕೆ ಬಂದರು. ‘ಪ್ರಜಾ ರಾಜ್ಯಂ ಪಕ್ಷದ’ ಯುವ ಪಡೆಗೆ ಅವರು ಮುಖ್ಯಸ್ಥರಾಗಿದ್ದರು. ಆದರೆ, ಅನಾರೋಗ್ಯ ಕಾರಣದಿಂದ ಅವರು ಚುನಾವಣೆಯಿಂದ ಹಿಂದೆ ಸರಿದರು. 2014ರಲ್ಲಿ ಅವರು ಜನಸೇನಾ ಪಕ್ಷಕ್ಕೆ ಮರಳಿದರು.

ಇದನ್ನೂ ಓದಿ: ಪವನ್ ಕಲ್ಯಾಣ್​ಗೆ ತುಚ್ಛ ಪದ ಬಳಸಿದ್ದ ಪೋಸಾನಿ ಕೃಷ್ಣ ಸಿನಿಮಾ ಬದುಕು ಅಂತ್ಯ?

ಪವನ್ ಕಲ್ಯಾಣ್ ಅವರಿಗೆ ಈಗ 55 ವರ್ಷ ವಯಸ್ಸು. ಚಿರಂಜೀವಿ, ನಾಗೇಂದ್ರ ಬಾಬು ಇವರ ಸಹೋದರರು. ಪವನ್ ಕಲ್ಯಾಣ್ ಅವರು ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ.  ಅವರು ಇತ್ತೀಚೆಗೆ ಸಿನಿಮಾ ರಂಗದಲ್ಲಿ ಅಷ್ಟಾಗಿ ಆಸಕ್ತಿ ತೋರಿಸುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಚಾಮುಂಡೇಶ್ವರಿ ವರ್ಧಂತಿ ಮಹತ್ವವೇನು? ಪ್ರಧಾನ ಅರ್ಚಕರು ವಿವರಿಸಿದ್ದಾರೆ ನೋಡಿ
ಚಾಮುಂಡೇಶ್ವರಿ ವರ್ಧಂತಿ ಮಹತ್ವವೇನು? ಪ್ರಧಾನ ಅರ್ಚಕರು ವಿವರಿಸಿದ್ದಾರೆ ನೋಡಿ
ಇನ್ಮುಂದೆ ಎಲ್ಲೇ ಮೆಟ್ರೋ ಮಾಡಿದ್ರೂ ಡಬಲ್ ಡೆಕ್ಕರ್​: ಡಿಕೆ ಶಿವಕುಮಾರ್
ಇನ್ಮುಂದೆ ಎಲ್ಲೇ ಮೆಟ್ರೋ ಮಾಡಿದ್ರೂ ಡಬಲ್ ಡೆಕ್ಕರ್​: ಡಿಕೆ ಶಿವಕುಮಾರ್
ಅಬ್ದುಲ್ ರಜಾಕ್​​ ಬಳಿ ಮಾಂಸ ಮಾರಾಟ ಲೈಸೆನ್ಸ್ ಇಲ್ಲ-ಆಹಾರ ಇಲಾಖೆ ಆಯುಕ್ತ
ಅಬ್ದುಲ್ ರಜಾಕ್​​ ಬಳಿ ಮಾಂಸ ಮಾರಾಟ ಲೈಸೆನ್ಸ್ ಇಲ್ಲ-ಆಹಾರ ಇಲಾಖೆ ಆಯುಕ್ತ
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?