AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ಪವನ್ ಅಲ್ಲ, ಬಿರುಗಾಳಿ’; ಪ್ರಧಾನಿ ಮೋದಿ ಹೊಗಳಿಕೆಗೆ ಪವನ್ ರಿಯಾಕ್ಷನ್ ನೋಡಿ

‘ಜನಸೇನಾ ಪರವಾಗಿ ನನ್ನ ಧನ್ಯವಾದ. ಇಲ್ಲಿಗೆ ಬರೋಕೆ ಅವಕಾಶ ನೀಡಿದ್ದಕ್ಕೆ ಧನ್ಯವಾದ. 2014ರಲ್ಲಿ ಇಲ್ಲಿಂದಲೇ ಆರಂಭ ಆಗಿತ್ತು. 15 ವರ್ಷ ಪ್ರಧಾನಿ ನಮ್ಮ ದೇಶದಲ್ಲಿ ಪ್ರಧಾನಿ ಆಗಿರಬೇಕು ಎಂದು ನಾನು ಹಾಗೂ ಚಂದ್ರಬಾಬು ನಾಯ್ಡು ಮಾತನಾಡಿಕೊಂಡಿದ್ದೆವು’ ಎಂದಿದ್ದಾರೆ ಪವನ್.

‘ನೀವು ಪವನ್ ಅಲ್ಲ, ಬಿರುಗಾಳಿ’; ಪ್ರಧಾನಿ ಮೋದಿ ಹೊಗಳಿಕೆಗೆ ಪವನ್ ರಿಯಾಕ್ಷನ್ ನೋಡಿ
ಪವನ್-ಮೋದಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 08, 2024 | 8:00 AM

Share

ಪವನ್ ಕಲ್ಯಾಣ್ (Pawan Kalyan) ಅವರ ಜನಸೇನಾ ಪಕ್ಷ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಜಯಭೇರಿ ಭಾರಿಸಿದೆ. ಈ ಗೆಲುವಿನಿಂದ ಅವರು ರಾಜಕೀಯದಲ್ಲಿ ಮೊದಲ ಬಾರಿಗೆ ನಗು ಬೀರುವಂತೆ ಆಗಿದೆ. ವಿಧಾನಸಭೆಯಲ್ಲಿ ಸ್ಪರ್ಧಿಸಿದ 17 ಕ್ಷೇತ್ರಗಳಲ್ಲಿ 17 ಕ್ಷೇತ್ರಗಳನ್ನು ಅವರು ಗೆದ್ದಿದ್ದಾರೆ. ಲೋಕಸಭೆಯಲ್ಲಿ ಸಿಕ್ಕ ಎರಡೂ ಕ್ಷೇತ್ರದಲ್ಲಿ ಅವರ ಪಕ್ಷ ಗೆಲುವು ಕಂಡಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಎನ್​​ಡಿಎ ಸಭೆಯಲ್ಲಿ ಮೋದಿ ಅವರು ಪವನ್ ಕಲ್ಯಾಣ್ ಅವರನ್ನು ಹೊಗಳಿದ್ದಾರೆ.

ಪವನ್ ಕಲ್ಯಾಣ್ ಅವರ ಆಂಧ್ರ ಪ್ರದೇಶದಲ್ಲಿ ಕ್ಲೀನ್ ಸ್ವೀಪ್ ಮಾಡಿದ್ದಾರೆ. ಈ ಕಾರಣಕ್ಕೆ ಪ್ರಧಾನಿ ಮೋದಿಗೆ ಅವರ ಬಗ್ಗೆ ಹೆಮ್ಮೆ ಬಂದಿದೆ. ಹೀಗಾಗಿ, ಪವನ್ ಬಗ್ಗೆ ಅವರು ಮೆಚ್ಚುಗೆ ಸೂಚಿಸಿದ್ದಾರೆ. ಪವನ ಎಂದರೆ ಗಾಳಿ ಎಂಬರ್ಥ ಇದೆ. ‘ಇವರು ಪವನ (ಗಾಳಿ) ಅಲ್ಲ ಬಿರುಗಾಳಿ’ ಎಂದು ಪವನ್​ ಅವರನ್ನು ಹೊಗಳಿದ್ದಾರೆ ಮೋದಿ. ಇದರಿಂದ ಅವರು ಖುಷಿ ಪಟ್ಟಿದ್ದಾರೆ.

ಪವನ್ ಕಲ್ಯಾಣ್ ಅವರು ಮೋದಿ ಅವರ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ‘ಜನಸೇನಾ ಪರವಾಗಿ ನನ್ನ ಧನ್ಯವಾದ. ಇಲ್ಲಿಗೆ ಬರೋಕೆ ಅವಕಾಶ ನೀಡಿದ್ದಕ್ಕೆ ಧನ್ಯವಾದ. 2014ರಲ್ಲಿ ಇಲ್ಲಿಂದಲೇ ಆರಂಭ ಆಗಿತ್ತು. 15 ವರ್ಷ ಪ್ರಧಾನಿ ನಮ್ಮ ದೇಶದಲ್ಲಿ ಪ್ರಧಾನಿ ಆಗಿರಬೇಕು ಎಂದು ನಾನು ಹಾಗೂ ಚಂದ್ರಬಾಬು ನಾಯ್ಡು ಮಾತನಾಡಿಕೊಂಡಿದ್ದೆವು. ಅದು ಸಂಭವಿಸುತ್ತಿದೆ. ನೀವು ಇಡೀ ದೇಶಕ್ಕೆ ಸ್ಫೂರ್ತಿ’ ಎಂದು ಮೋದಿ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು ಪವನ್.

2008ರಲ್ಲಿ ಪವನ್ ಕಲ್ಯಾಣ್ ಅವರು ರಾಜಕೀಯಕ್ಕೆ ಬಂದರು. ‘ಪ್ರಜಾ ರಾಜ್ಯಂ ಪಕ್ಷದ’ ಯುವ ಪಡೆಗೆ ಅವರು ಮುಖ್ಯಸ್ಥರಾಗಿದ್ದರು. ಆದರೆ, ಅನಾರೋಗ್ಯ ಕಾರಣದಿಂದ ಅವರು ಚುನಾವಣೆಯಿಂದ ಹಿಂದೆ ಸರಿದರು. 2014ರಲ್ಲಿ ಅವರು ಜನಸೇನಾ ಪಕ್ಷಕ್ಕೆ ಮರಳಿದರು.

ಇದನ್ನೂ ಓದಿ: ಪವನ್ ಕಲ್ಯಾಣ್​ಗೆ ತುಚ್ಛ ಪದ ಬಳಸಿದ್ದ ಪೋಸಾನಿ ಕೃಷ್ಣ ಸಿನಿಮಾ ಬದುಕು ಅಂತ್ಯ?

ಪವನ್ ಕಲ್ಯಾಣ್ ಅವರಿಗೆ ಈಗ 55 ವರ್ಷ ವಯಸ್ಸು. ಚಿರಂಜೀವಿ, ನಾಗೇಂದ್ರ ಬಾಬು ಇವರ ಸಹೋದರರು. ಪವನ್ ಕಲ್ಯಾಣ್ ಅವರು ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ.  ಅವರು ಇತ್ತೀಚೆಗೆ ಸಿನಿಮಾ ರಂಗದಲ್ಲಿ ಅಷ್ಟಾಗಿ ಆಸಕ್ತಿ ತೋರಿಸುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ
2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ
ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್, ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯ
ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್, ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯ
ಮೂರು ತಿಂಗಳ ಗರ್ಭಿಣಿಯ ಕಪಾಳಕ್ಕೆ ಹೊಡೆದ ಪೊಲೀಸ್ ಅಧಿಕಾರಿ
ಮೂರು ತಿಂಗಳ ಗರ್ಭಿಣಿಯ ಕಪಾಳಕ್ಕೆ ಹೊಡೆದ ಪೊಲೀಸ್ ಅಧಿಕಾರಿ
ರೈತರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ: ಹಾಲಿಗೆ ಪ್ರೋತ್ಸಾಧನ ಏರಿಕೆ
ರೈತರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ: ಹಾಲಿಗೆ ಪ್ರೋತ್ಸಾಧನ ಏರಿಕೆ