AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚಿತು ಪವನ್ ಕಲ್ಯಾಣ್ ಸಾಲ; ಒಟ್ಟಾರೆ ಆಸ್ತಿ ಎಷ್ಟು? ಅಫಿಡವಿಟ್​ನಲ್ಲಿ ಮಾಹಿತಿ ನೀಡಿದ ನಟ

Pawan Kalyan Net Worth: ಕಾಕಿನಾಡು ಜಿಲ್ಲೆಯ ಪೀಟಾಪುರಮ್ ವಿಧಾನಸಭಾ ಕ್ಷೇತ್ರದಿಂದ ಪವನ್ ಕಲ್ಯಾಣ್ ಸ್ಪರ್ಧೆ ಮಾಡುತ್ತಿದ್ದಾರೆ. ಅವರ ಚರಾಸ್ಥಿ ಹಾಗೂ ಸ್ಥಿರಾಸ್ತಿ ಮೊತ್ತ 136 ಕೋಟಿ ರೂಪಾಯಿ ಎಂದು ಮಾಹಿತಿ ನೀಡಿದ್ದಾರೆ. 2019ರಲ್ಲಿ ಅವರ ಆಸ್ತಿ 52.85 ಕೋಟಿ ರೂಪಾಯಿ ಇತ್ತು. ಈಗ ಅದು ದ್ವಿಗುಣವಾಗಿದೆ. ಅದೇ ರೀತಿ ಸಾಲದಲ್ಲೂ ಏರಿಕೆ ಆಗಿದೆ.

ಹೆಚ್ಚಿತು ಪವನ್ ಕಲ್ಯಾಣ್ ಸಾಲ; ಒಟ್ಟಾರೆ ಆಸ್ತಿ ಎಷ್ಟು? ಅಫಿಡವಿಟ್​ನಲ್ಲಿ ಮಾಹಿತಿ ನೀಡಿದ ನಟ
ಪವನ್ ಕಲ್ಯಾಣ್
ರಾಜೇಶ್ ದುಗ್ಗುಮನೆ
|

Updated on:Apr 24, 2024 | 10:59 AM

Share

ನಟ ಪವನ್​ ಕಲ್ಯಾಣ್ (Pawan Kalyan) ಅವರು ಸದ್ಯ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದಾರೆ. ಇದಕ್ಕಾಗಿ ಅವರು ನಾಮಿನೇಷನ್ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಅವರು ಆಸ್ತಿ ವಿವರ ನೀಡಿದ್ದಾರೆ. 2019ರಿಂದ 2024ರವರೆಗೆ ಅವರ ಸಾಲದಲ್ಲಿ ಏರಿಕೆ ಆಗಿದೆ. ಒಟ್ಟಾರೆ ಆಸ್ತಿ, ತಮ್ಮ ಬಳಿ ಇರುವ ಚರಾಸ್ತಿ ಹಾಗೂ ಸ್ಥಿರಾಸ್ತಿಗಳ ಕುರಿತು ಪವನ್​ ಕಲ್ಯಾಣ್ ಮಾಹಿತಿ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಕಾಕಿನಾಡು ಜಿಲ್ಲೆಯ ಪೀಟಾಪುರಮ್ ವಿಧಾನಸಭಾ ಕ್ಷೇತ್ರದಿಂದ ಪವನ್ ಕಲ್ಯಾಣ್ ಸ್ಪರ್ಧೆ ಮಾಡುತ್ತಿದ್ದಾರೆ. ಅವರ ಚರಾಸ್ಥಿ ಹಾಗೂ ಸ್ಥಿರಾಸ್ತಿ ಮೊತ್ತ 136 ಕೋಟಿ ರೂಪಾಯಿ ಎಂದು ಮಾಹಿತಿ ನೀಡಿದ್ದಾರೆ. 2019ರಲ್ಲಿ ಅವರ ಆಸ್ತಿ 52.85 ಕೋಟಿ ರೂಪಾಯಿ ಇತ್ತು. ಈಗ ಅದು ದ್ವಿಗುಣವಾಗಿದೆ. ಅದೇ ರೀತಿ ಸಾಲದಲ್ಲೂ ಏರಿಕೆ ಆಗಿದೆ. ಸಿನಿಮಾಗೆ ಪಡೆದ ಅಡ್ವಾನ್ಸ್ ಹಾಗೂ ಸಾಲದ ಮೊತ್ತ ಸೇರಿ 65.76 ಕೋಟಿ ರೂಪಾಯಿ ಇದೆ. ಇದರಲ್ಲಿ ಸಾಲದ ಮೊತ್ತ 17.56 ಕೋಟಿ ರೂಪಾಯಿ ಇದೆ.

ರಾಜಕೀಯಕ್ಕೆ ಬರುವ ಮೊದಲು ಅವರ ವಿರುದ್ಧ ಯಾವುದೇ ಕ್ರಿಮಿನಲ್ ಕೇಸ್ ಇರಲಿಲ್ಲ. ಈಗ ಅವರ ವಿರುದ್ಧ 8 ಪ್ರಕರಣಗಳು ಇವೆ. 18 ಕೋಟಿ ರೂಪಾಯಿ ಮೌಲ್ಯದ ಕೃಷಿ ಭೂಮಿ, 52. 85 ಕೋಟಿ ರೂಪಾಯಿ ಬೆಲೆಯ ಕೃಷಿಯೇತರ ಭೂಮಿ, 31 ಕೋಟಿ ರೂಪಾಯಿ ಮೌಲ್ಯದ ರೆಸಿಡೆನ್ಶಿಯಲ್ ಬಿಲ್ಡಿಂಗ್ ಅವರ ಹೆಸರಲ್ಲಿದೆ. ಅವರ ಪತ್ನಿ ಕೊನಿಡೆಲಾ ಅನ್ನಾ ಅವರ ಆಸ್ತಿ 2.95 ಕೋಟಿ ರೂಪಾಯಿ ಇದೆ.

ಇದನ್ನೂ ಓದಿ: ‘ಉಸ್ತಾದ್ ಭಗತ್ ಸಿಂಗ್’ ಟೀಸರ್ ಬಿಡುಗಡೆ: ಮಾಸ್​ಗೆ ಮಾಸ್ ಪವನ್​ ಕಲ್ಯಾಣ್

2018-19ರಿಂದ ಆರಂಭ ಆಗಿ 2022-23ರವರೆಗೆ ಅವರ ಆದಾಯ 60.77 ಕೋಟಿ ರೂಪಾಯಿ ಇದೆ. ಬ್ಯಾಂಕ್​ನಲ್ಲಿ 16.48 ಕೋಟಿ ರೂಪಾಯಿ ಇದೆ. ಅವರ ಪತ್ನಿ ಖಾತೆಯಲ್ಲಿ 86 ಲಕ್ಷ ರೂಪಾಯಿ ಇದೆ. ಪವನ್ ಕಲ್ಯಾಣ್ ಅವರು 2019ರಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಆದರೆ, ಅವರಿಗೆ ಗೆಲುವು ಸಿಗಲಿಲ್ಲ. ಆ ಬಳಿಕ ಅವರು ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆದರು. ಈಗ ಪವನ್ ಮತ್ತೆ ರಾಜಕೀಯದತ್ತ ಒಲವು ತೋರಿದ್ದಾರೆ. ಹೀಗಾಗಿ, ಸಿನಿಮಾ ಕೆಲಸಗಳು ಅರ್ಧಕ್ಕೆ ನಿಂತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:59 am, Wed, 24 April 24

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ