AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ವಿಚಾರದಲ್ಲಿ ಎಡವಿದ ಪವನ್​ ಕಲ್ಯಾಣ್; ‘ಭೀಮ್ಲಾ ನಾಯಕ್​’ಗೆ ಗೆಲುವು ಬಲು ಕಷ್ಟ?

ಪವನ್​ ಕಲ್ಯಾಣ್​ಗೆ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಸಾಕಷ್ಟು ಅಭಿಮಾನಿಗಳಿದ್ದಾರೆ. ಕರ್ನಾಟಕದ ಅನೇಕ ಕಡೆಗಳಲ್ಲಿ ಅವರನ್ನು ಆರಾಧಿಸುವವರಿದ್ದಾರೆ. ಈ ಕಾರಣಕ್ಕೆ ಅವರ ಚಿತ್ರಗಳು ಕರ್ನಾಟಕದಲ್ಲೂ ಒಳ್ಳೆಯ ಕಲೆಕ್ಷನ್​ ಮಾಡುತ್ತದೆ.

ಒಂದು ವಿಚಾರದಲ್ಲಿ ಎಡವಿದ ಪವನ್​ ಕಲ್ಯಾಣ್; ‘ಭೀಮ್ಲಾ ನಾಯಕ್​’ಗೆ ಗೆಲುವು ಬಲು ಕಷ್ಟ?
ಭೀಮ್ಲಾ ನಾಯಕ್
TV9 Web
| Edited By: |

Updated on: Feb 18, 2022 | 1:54 PM

Share

ನಟ ಪವನ್​ ಕಲ್ಯಾಣ್​ಗೆ (Pawan Kalyan) ಟಾಲಿವುಡ್​ನಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಅವರ ಸಿನಿಮಾ ನೋಡೋಕೆ ಅಭಿಮಾನಿಗಳ ದಂಡೇ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತದೆ. ಮೊದಲ ದಿನ ಮುಂಜಾನೆ 5 ಗಂಟೆಗೆ ಅವರ ಸಿನಿಮಾ ಶೋ ಇದ್ದರೂ ಹೌಸ್​ಫುಲ್​ ಪ್ರದರ್ಶನ ಕಾಣುತ್ತದೆ. ಅವರ ಸಿನಿಮಾಗೆ ಅಷ್ಟು ತಾಕತ್ತಿದೆ. ಈಗ ಅವರ ನಟನೆಯ ‘ಭೀಮ್ಲಾ ನಾಯಕ್​’ (Bheemla Nayak) ಸಿನಿಮಾ ತೆರೆಗೆ ಬರುತ್ತಿದೆ. ಈ ಸಿನಿಮಾ ನೋಡೋಕೆ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಆದರೆ, ಈ ಸಿನಿಮಾದ ಹಿಂದಿ ಅವತರಣಿಕೆಗೆ ಸಂಕಷ್ಟ ಎದುರಾಗುವ ಸೂಚನೆ ಸಿಕ್ಕಿದೆ. ಈ ಬಗ್ಗೆ ಹೆಚ್ಚು ಗಮನ ವಹಿಸದೇ ಇದ್ದರೆ ಈ ಸಿನಿಮಾಗೆ ಹಿಂದಿಯಲ್ಲಿ ಗೆಲುವು ಸಿಗೋದು ಬಲುಕಷ್ಟ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.

ಮಲಯಾಳಂನ ‘ಅಯ್ಯಪ್ಪನುಮ್​ ಕೋಶಿಯುಮ್​’ ಸಿನಿಮಾದ ರಿಮೇಕ್​ ‘ಭೀಮ್ಲಾ ನಾಯಕ್’. ಪೊಲೀಸ್​ ಹಾಗೂ ಮಾಜಿ ಸೈನಿಕನ ನಡುವೆ ನಡೆಯುವ ಅಹಂನ ಕಥೆ ಇದಾಗಿದೆ. ಈ ಸಿನಿಮಾ ಮಲಯಾಳಂನಲ್ಲಿ ಮೆಚ್ಚುಗೆ ಪಡೆದುಕೊಂಡಿತ್ತು. ಪೃಥ್ವಿರಾಜ್​ ಹಾಗೂ ಬಿಜು ಮೆನನ್​ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಪೃಥ್ವಿರಾಜ್​ ಪಾತ್ರವನ್ನು ರಾಣಾ ದಗ್ಗುಬಾಟಿ ಹಾಗೂ ಬಿಜು ಮಾಡಿದ್ದ ಪಾತ್ರವನ್ನು ಪವನ್​ ಕಲ್ಯಾಣ್​ ನಿರ್ವಹಿಸುತ್ತಿದ್ದಾರೆ. ಈ ಸಿನಿಮಾ ಫೆಬ್ರವರಿ 25ರಂದು ತೆರೆಗೆ ಬರುತ್ತಿದೆ. ಹಿಂದಿ ಭಾಷೆಗೆ ಡಬ್​ ಆಗಿಯೂ ಈ ಚಿತ್ರ ರಿಲೀಸ್​ ಆಗುತ್ತಿದೆ. ಆದರೆ, ಹಿಂದಿ ವಿಭಾಗದಲ್ಲಿ ಚಿತ್ರತಂಡದವರು ಅಷ್ಟಾಗಿ ಪ್ರಚಾರ ಮಾಡುತ್ತಿಲ್ಲ. ಇದರಿಂದ ಹಿಂದಿ ವರ್ಷನ್​ ಕಲೆಕ್ಷನ್​ ತಗ್ಗಬಹುದು.

ಪವನ್​ ಕಲ್ಯಾಣ್​ಗೆ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಸಾಕಷ್ಟು ಅಭಿಮಾನಿಗಳಿದ್ದಾರೆ. ಕರ್ನಾಟಕದ ಅನೇಕ ಕಡೆಗಳಲ್ಲಿ ಅವರನ್ನು ಆರಾಧಿಸುವವರಿದ್ದಾರೆ. ಈ ಕಾರಣಕ್ಕೆ ಅವರ ಚಿತ್ರಗಳು ಕರ್ನಾಟಕದಲ್ಲೂ ಒಳ್ಳೆಯ ಕಲೆಕ್ಷನ್​ ಮಾಡುತ್ತದೆ. ಹೀಗಾಗಿ, ಈ ಭಾಗದಲ್ಲಿ ಅಷ್ಟಾಗಿ ಸಿನಿಮಾಗೆ ಪ್ರಚಾರ ನೀಡದಿದ್ದರೂ ಅಭಿಮಾನಿಗಳು ಬಂದು ಚಿತ್ರ ವೀಕ್ಷಿಸುತ್ತಾರೆ. ಆ ಬಳಿಕ ಸಿನಿಮಾ ಬಗ್ಗೆ ಟಾಕ್​ ಶುರುವಾದರೆ ಸಿನಿಮಾ ಕಲೆಕ್ಷನ್​ ಹೆಚ್ಚುತ್ತದೆ. ಆದರೆ, ಹಿಂದಿಯಲ್ಲಿ ಹಾಗೆ ಆಗುವುದಿಲ್ಲ.

ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸಿನಿಮಾ ಹಿಂದಿಯಲ್ಲಿ 100 ಕೋಟಿ ಕಲೆಕ್ಷನ್​ ಮಾಡಿದೆ. ಇದಕ್ಕೆ ಹಲವು ಕಾರಣಗಳಿವೆ. ಅಲ್ಲು ಅರ್ಜುನ್​ ಅವರ ಈ ಮೊದಲ ಸಿನಿಮಾಗಳು ಹಿಂದಿಗೆ ಡಬ್​ ಆಗಿ ಯೂಟ್ಯೂಬ್​ನಲ್ಲಿ ಬಿಡುಗಡೆ ಆಗಿದೆ. ಇದು ಕೋಟಿಕೋಟಿ ವೀಕ್ಷಣೆ ಕಂಡಿದೆ. ಹೀಗಾಗಿ, ಅನೇಕರಿಗೆ ಅವರ ಪರಿಚಯ ಇತ್ತು. ಇದು ‘ಪುಷ್ಪ’ ಸಿನಿಮಾ ಕಲೆಕ್ಷನ್​ ಹೆಚ್ಚೋಕೆ ಪ್ರಮುಖ ಕಾರಣವಾಗಿತ್ತು. ಆದರೆ, ಪವನ್​ ಕಲ್ಯಾಣ್​ ವಿಚಾರದಲ್ಲಿ ಆ ರೀತಿ ಆಗುವುದಿಲ್ಲ.

‘ಭೀಮ್ಲಾ ನಾಯಕ್​’ ತೆರೆಕಾಣೋಕೆ ಕೆಲವೇ ದಿನಗಳು ಬಾಕಿ ಇದೆ. ಈಗಲೂ ತಂಡದವರು ಹಿಂದಿಯಲ್ಲಿ ಅಬ್ಬರದ ಪ್ರಚಾರ ಮಾಡದೆ ಇದ್ದರೆ ಸಿನಿಮಾ ಅಲ್ಲಿ ಗೆಲ್ಲೋದು ಕಷ್ಟಸಾಧ್ಯ ಎನ್ನುವ ಮಾತು ಕೇಳಿ ಬಂದಿದೆ.

ಇದನ್ನೂ ಓದಿ: ‘ಭೀಮ್ಲಾ ನಾಯಕ್’ ಸಿನಿಮಾಗೆ ರಾಣಾ ದಗ್ಗುಬಾಟಿ ಪಡೆಯುತ್ತಿರುವ ಸಂಭಾವನೆ ಇಷ್ಟೊಂದಾ?

ಪವನ್​ ಕಲ್ಯಾಣ್​ ಅಭಿಮಾನಿಗಳಿಗೆ ‘ಭೀಮ್ಲಾ ನಾಯಕ್​’ ನಿರ್ಮಾಪಕರ ಕ್ಷಮೆ; ಖುಷಿಪಟ್ಟಿದ್ದು ರಾಜಮೌಳಿ

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!