AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ವಿಚಾರದಲ್ಲಿ ಎಡವಿದ ಪವನ್​ ಕಲ್ಯಾಣ್; ‘ಭೀಮ್ಲಾ ನಾಯಕ್​’ಗೆ ಗೆಲುವು ಬಲು ಕಷ್ಟ?

ಪವನ್​ ಕಲ್ಯಾಣ್​ಗೆ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಸಾಕಷ್ಟು ಅಭಿಮಾನಿಗಳಿದ್ದಾರೆ. ಕರ್ನಾಟಕದ ಅನೇಕ ಕಡೆಗಳಲ್ಲಿ ಅವರನ್ನು ಆರಾಧಿಸುವವರಿದ್ದಾರೆ. ಈ ಕಾರಣಕ್ಕೆ ಅವರ ಚಿತ್ರಗಳು ಕರ್ನಾಟಕದಲ್ಲೂ ಒಳ್ಳೆಯ ಕಲೆಕ್ಷನ್​ ಮಾಡುತ್ತದೆ.

ಒಂದು ವಿಚಾರದಲ್ಲಿ ಎಡವಿದ ಪವನ್​ ಕಲ್ಯಾಣ್; ‘ಭೀಮ್ಲಾ ನಾಯಕ್​’ಗೆ ಗೆಲುವು ಬಲು ಕಷ್ಟ?
ಭೀಮ್ಲಾ ನಾಯಕ್
TV9 Web
| Edited By: |

Updated on: Feb 18, 2022 | 1:54 PM

Share

ನಟ ಪವನ್​ ಕಲ್ಯಾಣ್​ಗೆ (Pawan Kalyan) ಟಾಲಿವುಡ್​ನಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಅವರ ಸಿನಿಮಾ ನೋಡೋಕೆ ಅಭಿಮಾನಿಗಳ ದಂಡೇ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತದೆ. ಮೊದಲ ದಿನ ಮುಂಜಾನೆ 5 ಗಂಟೆಗೆ ಅವರ ಸಿನಿಮಾ ಶೋ ಇದ್ದರೂ ಹೌಸ್​ಫುಲ್​ ಪ್ರದರ್ಶನ ಕಾಣುತ್ತದೆ. ಅವರ ಸಿನಿಮಾಗೆ ಅಷ್ಟು ತಾಕತ್ತಿದೆ. ಈಗ ಅವರ ನಟನೆಯ ‘ಭೀಮ್ಲಾ ನಾಯಕ್​’ (Bheemla Nayak) ಸಿನಿಮಾ ತೆರೆಗೆ ಬರುತ್ತಿದೆ. ಈ ಸಿನಿಮಾ ನೋಡೋಕೆ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಆದರೆ, ಈ ಸಿನಿಮಾದ ಹಿಂದಿ ಅವತರಣಿಕೆಗೆ ಸಂಕಷ್ಟ ಎದುರಾಗುವ ಸೂಚನೆ ಸಿಕ್ಕಿದೆ. ಈ ಬಗ್ಗೆ ಹೆಚ್ಚು ಗಮನ ವಹಿಸದೇ ಇದ್ದರೆ ಈ ಸಿನಿಮಾಗೆ ಹಿಂದಿಯಲ್ಲಿ ಗೆಲುವು ಸಿಗೋದು ಬಲುಕಷ್ಟ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.

ಮಲಯಾಳಂನ ‘ಅಯ್ಯಪ್ಪನುಮ್​ ಕೋಶಿಯುಮ್​’ ಸಿನಿಮಾದ ರಿಮೇಕ್​ ‘ಭೀಮ್ಲಾ ನಾಯಕ್’. ಪೊಲೀಸ್​ ಹಾಗೂ ಮಾಜಿ ಸೈನಿಕನ ನಡುವೆ ನಡೆಯುವ ಅಹಂನ ಕಥೆ ಇದಾಗಿದೆ. ಈ ಸಿನಿಮಾ ಮಲಯಾಳಂನಲ್ಲಿ ಮೆಚ್ಚುಗೆ ಪಡೆದುಕೊಂಡಿತ್ತು. ಪೃಥ್ವಿರಾಜ್​ ಹಾಗೂ ಬಿಜು ಮೆನನ್​ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಪೃಥ್ವಿರಾಜ್​ ಪಾತ್ರವನ್ನು ರಾಣಾ ದಗ್ಗುಬಾಟಿ ಹಾಗೂ ಬಿಜು ಮಾಡಿದ್ದ ಪಾತ್ರವನ್ನು ಪವನ್​ ಕಲ್ಯಾಣ್​ ನಿರ್ವಹಿಸುತ್ತಿದ್ದಾರೆ. ಈ ಸಿನಿಮಾ ಫೆಬ್ರವರಿ 25ರಂದು ತೆರೆಗೆ ಬರುತ್ತಿದೆ. ಹಿಂದಿ ಭಾಷೆಗೆ ಡಬ್​ ಆಗಿಯೂ ಈ ಚಿತ್ರ ರಿಲೀಸ್​ ಆಗುತ್ತಿದೆ. ಆದರೆ, ಹಿಂದಿ ವಿಭಾಗದಲ್ಲಿ ಚಿತ್ರತಂಡದವರು ಅಷ್ಟಾಗಿ ಪ್ರಚಾರ ಮಾಡುತ್ತಿಲ್ಲ. ಇದರಿಂದ ಹಿಂದಿ ವರ್ಷನ್​ ಕಲೆಕ್ಷನ್​ ತಗ್ಗಬಹುದು.

ಪವನ್​ ಕಲ್ಯಾಣ್​ಗೆ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಸಾಕಷ್ಟು ಅಭಿಮಾನಿಗಳಿದ್ದಾರೆ. ಕರ್ನಾಟಕದ ಅನೇಕ ಕಡೆಗಳಲ್ಲಿ ಅವರನ್ನು ಆರಾಧಿಸುವವರಿದ್ದಾರೆ. ಈ ಕಾರಣಕ್ಕೆ ಅವರ ಚಿತ್ರಗಳು ಕರ್ನಾಟಕದಲ್ಲೂ ಒಳ್ಳೆಯ ಕಲೆಕ್ಷನ್​ ಮಾಡುತ್ತದೆ. ಹೀಗಾಗಿ, ಈ ಭಾಗದಲ್ಲಿ ಅಷ್ಟಾಗಿ ಸಿನಿಮಾಗೆ ಪ್ರಚಾರ ನೀಡದಿದ್ದರೂ ಅಭಿಮಾನಿಗಳು ಬಂದು ಚಿತ್ರ ವೀಕ್ಷಿಸುತ್ತಾರೆ. ಆ ಬಳಿಕ ಸಿನಿಮಾ ಬಗ್ಗೆ ಟಾಕ್​ ಶುರುವಾದರೆ ಸಿನಿಮಾ ಕಲೆಕ್ಷನ್​ ಹೆಚ್ಚುತ್ತದೆ. ಆದರೆ, ಹಿಂದಿಯಲ್ಲಿ ಹಾಗೆ ಆಗುವುದಿಲ್ಲ.

ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸಿನಿಮಾ ಹಿಂದಿಯಲ್ಲಿ 100 ಕೋಟಿ ಕಲೆಕ್ಷನ್​ ಮಾಡಿದೆ. ಇದಕ್ಕೆ ಹಲವು ಕಾರಣಗಳಿವೆ. ಅಲ್ಲು ಅರ್ಜುನ್​ ಅವರ ಈ ಮೊದಲ ಸಿನಿಮಾಗಳು ಹಿಂದಿಗೆ ಡಬ್​ ಆಗಿ ಯೂಟ್ಯೂಬ್​ನಲ್ಲಿ ಬಿಡುಗಡೆ ಆಗಿದೆ. ಇದು ಕೋಟಿಕೋಟಿ ವೀಕ್ಷಣೆ ಕಂಡಿದೆ. ಹೀಗಾಗಿ, ಅನೇಕರಿಗೆ ಅವರ ಪರಿಚಯ ಇತ್ತು. ಇದು ‘ಪುಷ್ಪ’ ಸಿನಿಮಾ ಕಲೆಕ್ಷನ್​ ಹೆಚ್ಚೋಕೆ ಪ್ರಮುಖ ಕಾರಣವಾಗಿತ್ತು. ಆದರೆ, ಪವನ್​ ಕಲ್ಯಾಣ್​ ವಿಚಾರದಲ್ಲಿ ಆ ರೀತಿ ಆಗುವುದಿಲ್ಲ.

‘ಭೀಮ್ಲಾ ನಾಯಕ್​’ ತೆರೆಕಾಣೋಕೆ ಕೆಲವೇ ದಿನಗಳು ಬಾಕಿ ಇದೆ. ಈಗಲೂ ತಂಡದವರು ಹಿಂದಿಯಲ್ಲಿ ಅಬ್ಬರದ ಪ್ರಚಾರ ಮಾಡದೆ ಇದ್ದರೆ ಸಿನಿಮಾ ಅಲ್ಲಿ ಗೆಲ್ಲೋದು ಕಷ್ಟಸಾಧ್ಯ ಎನ್ನುವ ಮಾತು ಕೇಳಿ ಬಂದಿದೆ.

ಇದನ್ನೂ ಓದಿ: ‘ಭೀಮ್ಲಾ ನಾಯಕ್’ ಸಿನಿಮಾಗೆ ರಾಣಾ ದಗ್ಗುಬಾಟಿ ಪಡೆಯುತ್ತಿರುವ ಸಂಭಾವನೆ ಇಷ್ಟೊಂದಾ?

ಪವನ್​ ಕಲ್ಯಾಣ್​ ಅಭಿಮಾನಿಗಳಿಗೆ ‘ಭೀಮ್ಲಾ ನಾಯಕ್​’ ನಿರ್ಮಾಪಕರ ಕ್ಷಮೆ; ಖುಷಿಪಟ್ಟಿದ್ದು ರಾಜಮೌಳಿ

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ