AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ವಿಚಾರದಲ್ಲಿ ಎಡವಿದ ಪವನ್​ ಕಲ್ಯಾಣ್; ‘ಭೀಮ್ಲಾ ನಾಯಕ್​’ಗೆ ಗೆಲುವು ಬಲು ಕಷ್ಟ?

ಪವನ್​ ಕಲ್ಯಾಣ್​ಗೆ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಸಾಕಷ್ಟು ಅಭಿಮಾನಿಗಳಿದ್ದಾರೆ. ಕರ್ನಾಟಕದ ಅನೇಕ ಕಡೆಗಳಲ್ಲಿ ಅವರನ್ನು ಆರಾಧಿಸುವವರಿದ್ದಾರೆ. ಈ ಕಾರಣಕ್ಕೆ ಅವರ ಚಿತ್ರಗಳು ಕರ್ನಾಟಕದಲ್ಲೂ ಒಳ್ಳೆಯ ಕಲೆಕ್ಷನ್​ ಮಾಡುತ್ತದೆ.

ಒಂದು ವಿಚಾರದಲ್ಲಿ ಎಡವಿದ ಪವನ್​ ಕಲ್ಯಾಣ್; ‘ಭೀಮ್ಲಾ ನಾಯಕ್​’ಗೆ ಗೆಲುವು ಬಲು ಕಷ್ಟ?
ಭೀಮ್ಲಾ ನಾಯಕ್
TV9 Web
| Edited By: |

Updated on: Feb 18, 2022 | 1:54 PM

Share

ನಟ ಪವನ್​ ಕಲ್ಯಾಣ್​ಗೆ (Pawan Kalyan) ಟಾಲಿವುಡ್​ನಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಅವರ ಸಿನಿಮಾ ನೋಡೋಕೆ ಅಭಿಮಾನಿಗಳ ದಂಡೇ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತದೆ. ಮೊದಲ ದಿನ ಮುಂಜಾನೆ 5 ಗಂಟೆಗೆ ಅವರ ಸಿನಿಮಾ ಶೋ ಇದ್ದರೂ ಹೌಸ್​ಫುಲ್​ ಪ್ರದರ್ಶನ ಕಾಣುತ್ತದೆ. ಅವರ ಸಿನಿಮಾಗೆ ಅಷ್ಟು ತಾಕತ್ತಿದೆ. ಈಗ ಅವರ ನಟನೆಯ ‘ಭೀಮ್ಲಾ ನಾಯಕ್​’ (Bheemla Nayak) ಸಿನಿಮಾ ತೆರೆಗೆ ಬರುತ್ತಿದೆ. ಈ ಸಿನಿಮಾ ನೋಡೋಕೆ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಆದರೆ, ಈ ಸಿನಿಮಾದ ಹಿಂದಿ ಅವತರಣಿಕೆಗೆ ಸಂಕಷ್ಟ ಎದುರಾಗುವ ಸೂಚನೆ ಸಿಕ್ಕಿದೆ. ಈ ಬಗ್ಗೆ ಹೆಚ್ಚು ಗಮನ ವಹಿಸದೇ ಇದ್ದರೆ ಈ ಸಿನಿಮಾಗೆ ಹಿಂದಿಯಲ್ಲಿ ಗೆಲುವು ಸಿಗೋದು ಬಲುಕಷ್ಟ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.

ಮಲಯಾಳಂನ ‘ಅಯ್ಯಪ್ಪನುಮ್​ ಕೋಶಿಯುಮ್​’ ಸಿನಿಮಾದ ರಿಮೇಕ್​ ‘ಭೀಮ್ಲಾ ನಾಯಕ್’. ಪೊಲೀಸ್​ ಹಾಗೂ ಮಾಜಿ ಸೈನಿಕನ ನಡುವೆ ನಡೆಯುವ ಅಹಂನ ಕಥೆ ಇದಾಗಿದೆ. ಈ ಸಿನಿಮಾ ಮಲಯಾಳಂನಲ್ಲಿ ಮೆಚ್ಚುಗೆ ಪಡೆದುಕೊಂಡಿತ್ತು. ಪೃಥ್ವಿರಾಜ್​ ಹಾಗೂ ಬಿಜು ಮೆನನ್​ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಪೃಥ್ವಿರಾಜ್​ ಪಾತ್ರವನ್ನು ರಾಣಾ ದಗ್ಗುಬಾಟಿ ಹಾಗೂ ಬಿಜು ಮಾಡಿದ್ದ ಪಾತ್ರವನ್ನು ಪವನ್​ ಕಲ್ಯಾಣ್​ ನಿರ್ವಹಿಸುತ್ತಿದ್ದಾರೆ. ಈ ಸಿನಿಮಾ ಫೆಬ್ರವರಿ 25ರಂದು ತೆರೆಗೆ ಬರುತ್ತಿದೆ. ಹಿಂದಿ ಭಾಷೆಗೆ ಡಬ್​ ಆಗಿಯೂ ಈ ಚಿತ್ರ ರಿಲೀಸ್​ ಆಗುತ್ತಿದೆ. ಆದರೆ, ಹಿಂದಿ ವಿಭಾಗದಲ್ಲಿ ಚಿತ್ರತಂಡದವರು ಅಷ್ಟಾಗಿ ಪ್ರಚಾರ ಮಾಡುತ್ತಿಲ್ಲ. ಇದರಿಂದ ಹಿಂದಿ ವರ್ಷನ್​ ಕಲೆಕ್ಷನ್​ ತಗ್ಗಬಹುದು.

ಪವನ್​ ಕಲ್ಯಾಣ್​ಗೆ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಸಾಕಷ್ಟು ಅಭಿಮಾನಿಗಳಿದ್ದಾರೆ. ಕರ್ನಾಟಕದ ಅನೇಕ ಕಡೆಗಳಲ್ಲಿ ಅವರನ್ನು ಆರಾಧಿಸುವವರಿದ್ದಾರೆ. ಈ ಕಾರಣಕ್ಕೆ ಅವರ ಚಿತ್ರಗಳು ಕರ್ನಾಟಕದಲ್ಲೂ ಒಳ್ಳೆಯ ಕಲೆಕ್ಷನ್​ ಮಾಡುತ್ತದೆ. ಹೀಗಾಗಿ, ಈ ಭಾಗದಲ್ಲಿ ಅಷ್ಟಾಗಿ ಸಿನಿಮಾಗೆ ಪ್ರಚಾರ ನೀಡದಿದ್ದರೂ ಅಭಿಮಾನಿಗಳು ಬಂದು ಚಿತ್ರ ವೀಕ್ಷಿಸುತ್ತಾರೆ. ಆ ಬಳಿಕ ಸಿನಿಮಾ ಬಗ್ಗೆ ಟಾಕ್​ ಶುರುವಾದರೆ ಸಿನಿಮಾ ಕಲೆಕ್ಷನ್​ ಹೆಚ್ಚುತ್ತದೆ. ಆದರೆ, ಹಿಂದಿಯಲ್ಲಿ ಹಾಗೆ ಆಗುವುದಿಲ್ಲ.

ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸಿನಿಮಾ ಹಿಂದಿಯಲ್ಲಿ 100 ಕೋಟಿ ಕಲೆಕ್ಷನ್​ ಮಾಡಿದೆ. ಇದಕ್ಕೆ ಹಲವು ಕಾರಣಗಳಿವೆ. ಅಲ್ಲು ಅರ್ಜುನ್​ ಅವರ ಈ ಮೊದಲ ಸಿನಿಮಾಗಳು ಹಿಂದಿಗೆ ಡಬ್​ ಆಗಿ ಯೂಟ್ಯೂಬ್​ನಲ್ಲಿ ಬಿಡುಗಡೆ ಆಗಿದೆ. ಇದು ಕೋಟಿಕೋಟಿ ವೀಕ್ಷಣೆ ಕಂಡಿದೆ. ಹೀಗಾಗಿ, ಅನೇಕರಿಗೆ ಅವರ ಪರಿಚಯ ಇತ್ತು. ಇದು ‘ಪುಷ್ಪ’ ಸಿನಿಮಾ ಕಲೆಕ್ಷನ್​ ಹೆಚ್ಚೋಕೆ ಪ್ರಮುಖ ಕಾರಣವಾಗಿತ್ತು. ಆದರೆ, ಪವನ್​ ಕಲ್ಯಾಣ್​ ವಿಚಾರದಲ್ಲಿ ಆ ರೀತಿ ಆಗುವುದಿಲ್ಲ.

‘ಭೀಮ್ಲಾ ನಾಯಕ್​’ ತೆರೆಕಾಣೋಕೆ ಕೆಲವೇ ದಿನಗಳು ಬಾಕಿ ಇದೆ. ಈಗಲೂ ತಂಡದವರು ಹಿಂದಿಯಲ್ಲಿ ಅಬ್ಬರದ ಪ್ರಚಾರ ಮಾಡದೆ ಇದ್ದರೆ ಸಿನಿಮಾ ಅಲ್ಲಿ ಗೆಲ್ಲೋದು ಕಷ್ಟಸಾಧ್ಯ ಎನ್ನುವ ಮಾತು ಕೇಳಿ ಬಂದಿದೆ.

ಇದನ್ನೂ ಓದಿ: ‘ಭೀಮ್ಲಾ ನಾಯಕ್’ ಸಿನಿಮಾಗೆ ರಾಣಾ ದಗ್ಗುಬಾಟಿ ಪಡೆಯುತ್ತಿರುವ ಸಂಭಾವನೆ ಇಷ್ಟೊಂದಾ?

ಪವನ್​ ಕಲ್ಯಾಣ್​ ಅಭಿಮಾನಿಗಳಿಗೆ ‘ಭೀಮ್ಲಾ ನಾಯಕ್​’ ನಿರ್ಮಾಪಕರ ಕ್ಷಮೆ; ಖುಷಿಪಟ್ಟಿದ್ದು ರಾಜಮೌಳಿ

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು