AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪವನ್​ ಕಲ್ಯಾಣ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಫೇಕ್​’

ಪವನ್​ ಕಲ್ಯಾಣ್​ ಅವರ ಜತೆ ಇದ್ದ ಸಿಬ್ಬಂದಿಗೆ ಕೊವಿಡ್​ ಪಾಸಿಟಿವ್​ ವರದಿ ಬಂದಿತ್ತು. ನಂತರ ಪರೀಕ್ಷೆ ಮಾಡಿದಾಗ ಪವನ್​ ಕಲ್ಯಾಣ್​ಗೂ ಕೊರೊನಾ ಪಾಸಿಟಿವ್​ ಬಂದು ಆಸ್ಪತ್ರೆಗೆ ಶಿಫ್ಟ್​ ಆಗಿದ್ದರು.

'ಪವನ್​ ಕಲ್ಯಾಣ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಫೇಕ್​'
ಪವನ್​ ಕಲ್ಯಾಣ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು
ರಾಜೇಶ್ ದುಗ್ಗುಮನೆ
|

Updated on:Apr 17, 2021 | 8:21 PM

Share

‘ಪವನ್​ ಕಲ್ಯಾಣ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಫೇಕ್​’- ಹೀಗೆಂದು ನಾವು ಹೇಳುತ್ತಿಲ್ಲ. ಖ್ಯಾತ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ಹೀಗೊಂದು ಆರೋಪ ಮಾಡಿದ್ದಾರೆ. ಜನಸೇನಾ ಪಕ್ಷದ ಮುಖ್ಯಸ್ಥ ಹಾಗೂ ಟಾಲಿವುಡ್​ ನಟ ಪವನ್​ ಕಲ್ಯಾಣ್​ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವಿಚಾರದ ಬಗ್ಗೆ ನಿರ್ದೇಶಕ ರಾಮ್​ ಗೋಪಾಲ್​ ಸರಣಿ ಟ್ವೀಟ್​ ಮಾಡಿದ್ದಾರೆ. ಪವನ್​ ಕಲ್ಯಾಣ್​ ಅವರ ಜತೆ ಇದ್ದ ಸಿಬ್ಬಂದಿಗೆ ಕೊವಿಡ್​ ಪಾಸಿಟಿವ್​ ವರದಿ ಬಂದಿತ್ತು. ನಂತರ ಪರೀಕ್ಷೆ ಮಾಡಿದಾಗ ಪವನ್​ ಕಲ್ಯಾಣ್​ಗೂ ಕೊರೊನಾ ಪಾಸಿಟಿವ್​ ಬಂದು ಆಸ್ಪತ್ರೆಗೆ ಶಿಫ್ಟ್​ ಆಗಿದ್ದರು. ಅವರು ಆಸ್ಪತ್ರೆಯಲ್ಲಿರುವ ಫೋಟೋ ಒಂದು ಸಾಮಾಜಿಕ ಜಾಲಯಾಣದಲ್ಲಿ ವೈರಲ್​ ಆಗಿತ್ತು. ಈ ಬಗ್ಗೆ ರಾಮ್​ ಗೋಪಾಲ್​ ಟ್ವೀಟ್​ ಮಾಡಿದ್ದಾರೆ.

ಬರಿಗಣ್ಣಿನಿಂದ ಕೂಡ ನೋಡಲಾಗದ ಒಂದು ಸಣ್ಣ ವೈರಸ್ ಪವನ್ ಕಲ್ಯಾಣ್ ಅವರನ್ನು ಇಂತಹ ಅಸಹಾಯಕ ಪರಿಸ್ಥಿತಿಗೆ ತಳ್ಳಿ ಹಾಕಿದೆ. ಇದರಲ್ಲಿ ಹೀರೋ ಎನ್ನುವ ಶಬ್ದ ಎಲ್ಲಾದರೂ ಇದೆಯಾ ಎಂದು ಕೇಳಿದ್ದಾರೆ. ಈ ಟ್ವೀಟ್​ ನೋಡಿದ ಬೆನ್ನಲ್ಲೇ ಪವನ್​ ಕಲ್ಯಾಣ್​ ಅಭಿಮಾನಿಗಳು ಸಿಟ್ಟಾಗಿದ್ದಾರೆ. ಆದರೆ, ಈ ಬಗ್ಗೆ ರಾಮ್​ ಗೋಪಾಲ್​ ವರ್ಮಾ ತಲೆಕೆಡಿಸಿಕೊಂಡಿಲ್ಲ.

ಮತ್ತೊಂದು ಟ್ವೀಟ್​ ಮಾಡಿರುವ ಆರ್​ಜಿವಿ, ಪವನ್​ಗೆ ಬಂದಿರೋದು ಕೊವಿಡ್​ ಎಂದು ಎಲ್ಲರೂ ಹೇಳುತ್ತಾರೆ. ಆದರೆ, ವಕೀಲ್​ ಸಾಬ್​ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಗಳಿಕೆ ಮಾಡಿಲ್ಲ. ಇದಕ್ಕಾಗಿ ಪವನ್​ ಕಲ್ಯಾಣ ಈ ಸ್ಥಿತಿ ತಲುಪಿದ್ದಾರೆ. ಅಭಿಮಾನಿಗಳೇ ಬನ್ನಿ. ನಿಮ್ಮ ಲೈಫ್​ ರಿಸ್ಕ್​ ಮಾಡಿಕೊಂಡು ಸಿನಿಮಾ ವೀಕ್ಷಿಸಿ. ಪವನ್​ ಜೇಬನ್ನು ತುಂಬಿಸಿ ಎಂದಿದ್ದಾರೆ. ಮುಂದುವರಿದು ಪವನ್​ ಟ್ರೀಟ್​ಮೆಂಟ್​ ಪಡೆಯುತ್ತಿರುವುದು ನಕಲಿ ಫೋಟೋ ಎಂದು ಜರಿದಿದ್ದಾರೆ.

ಇದನ್ನೂ ಓದಿ: Coronavirus News Live Updates: ಕೊರೊನಾ ಚಿಕಿತ್ಸೆಗೆ ಬಳಸುವ ರೆಮ್​ಡೆಸಿವಿರ್ ಔಷಧಿಯ ದರ ಕಡಿತ

Published On - 8:19 pm, Sat, 17 April 21

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ