AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪವನ್​ ಕಲ್ಯಾಣ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಫೇಕ್​’

ಪವನ್​ ಕಲ್ಯಾಣ್​ ಅವರ ಜತೆ ಇದ್ದ ಸಿಬ್ಬಂದಿಗೆ ಕೊವಿಡ್​ ಪಾಸಿಟಿವ್​ ವರದಿ ಬಂದಿತ್ತು. ನಂತರ ಪರೀಕ್ಷೆ ಮಾಡಿದಾಗ ಪವನ್​ ಕಲ್ಯಾಣ್​ಗೂ ಕೊರೊನಾ ಪಾಸಿಟಿವ್​ ಬಂದು ಆಸ್ಪತ್ರೆಗೆ ಶಿಫ್ಟ್​ ಆಗಿದ್ದರು.

'ಪವನ್​ ಕಲ್ಯಾಣ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಫೇಕ್​'
ಪವನ್​ ಕಲ್ಯಾಣ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು
ರಾಜೇಶ್ ದುಗ್ಗುಮನೆ
|

Updated on:Apr 17, 2021 | 8:21 PM

Share

‘ಪವನ್​ ಕಲ್ಯಾಣ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಫೇಕ್​’- ಹೀಗೆಂದು ನಾವು ಹೇಳುತ್ತಿಲ್ಲ. ಖ್ಯಾತ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ಹೀಗೊಂದು ಆರೋಪ ಮಾಡಿದ್ದಾರೆ. ಜನಸೇನಾ ಪಕ್ಷದ ಮುಖ್ಯಸ್ಥ ಹಾಗೂ ಟಾಲಿವುಡ್​ ನಟ ಪವನ್​ ಕಲ್ಯಾಣ್​ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವಿಚಾರದ ಬಗ್ಗೆ ನಿರ್ದೇಶಕ ರಾಮ್​ ಗೋಪಾಲ್​ ಸರಣಿ ಟ್ವೀಟ್​ ಮಾಡಿದ್ದಾರೆ. ಪವನ್​ ಕಲ್ಯಾಣ್​ ಅವರ ಜತೆ ಇದ್ದ ಸಿಬ್ಬಂದಿಗೆ ಕೊವಿಡ್​ ಪಾಸಿಟಿವ್​ ವರದಿ ಬಂದಿತ್ತು. ನಂತರ ಪರೀಕ್ಷೆ ಮಾಡಿದಾಗ ಪವನ್​ ಕಲ್ಯಾಣ್​ಗೂ ಕೊರೊನಾ ಪಾಸಿಟಿವ್​ ಬಂದು ಆಸ್ಪತ್ರೆಗೆ ಶಿಫ್ಟ್​ ಆಗಿದ್ದರು. ಅವರು ಆಸ್ಪತ್ರೆಯಲ್ಲಿರುವ ಫೋಟೋ ಒಂದು ಸಾಮಾಜಿಕ ಜಾಲಯಾಣದಲ್ಲಿ ವೈರಲ್​ ಆಗಿತ್ತು. ಈ ಬಗ್ಗೆ ರಾಮ್​ ಗೋಪಾಲ್​ ಟ್ವೀಟ್​ ಮಾಡಿದ್ದಾರೆ.

ಬರಿಗಣ್ಣಿನಿಂದ ಕೂಡ ನೋಡಲಾಗದ ಒಂದು ಸಣ್ಣ ವೈರಸ್ ಪವನ್ ಕಲ್ಯಾಣ್ ಅವರನ್ನು ಇಂತಹ ಅಸಹಾಯಕ ಪರಿಸ್ಥಿತಿಗೆ ತಳ್ಳಿ ಹಾಕಿದೆ. ಇದರಲ್ಲಿ ಹೀರೋ ಎನ್ನುವ ಶಬ್ದ ಎಲ್ಲಾದರೂ ಇದೆಯಾ ಎಂದು ಕೇಳಿದ್ದಾರೆ. ಈ ಟ್ವೀಟ್​ ನೋಡಿದ ಬೆನ್ನಲ್ಲೇ ಪವನ್​ ಕಲ್ಯಾಣ್​ ಅಭಿಮಾನಿಗಳು ಸಿಟ್ಟಾಗಿದ್ದಾರೆ. ಆದರೆ, ಈ ಬಗ್ಗೆ ರಾಮ್​ ಗೋಪಾಲ್​ ವರ್ಮಾ ತಲೆಕೆಡಿಸಿಕೊಂಡಿಲ್ಲ.

ಮತ್ತೊಂದು ಟ್ವೀಟ್​ ಮಾಡಿರುವ ಆರ್​ಜಿವಿ, ಪವನ್​ಗೆ ಬಂದಿರೋದು ಕೊವಿಡ್​ ಎಂದು ಎಲ್ಲರೂ ಹೇಳುತ್ತಾರೆ. ಆದರೆ, ವಕೀಲ್​ ಸಾಬ್​ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಗಳಿಕೆ ಮಾಡಿಲ್ಲ. ಇದಕ್ಕಾಗಿ ಪವನ್​ ಕಲ್ಯಾಣ ಈ ಸ್ಥಿತಿ ತಲುಪಿದ್ದಾರೆ. ಅಭಿಮಾನಿಗಳೇ ಬನ್ನಿ. ನಿಮ್ಮ ಲೈಫ್​ ರಿಸ್ಕ್​ ಮಾಡಿಕೊಂಡು ಸಿನಿಮಾ ವೀಕ್ಷಿಸಿ. ಪವನ್​ ಜೇಬನ್ನು ತುಂಬಿಸಿ ಎಂದಿದ್ದಾರೆ. ಮುಂದುವರಿದು ಪವನ್​ ಟ್ರೀಟ್​ಮೆಂಟ್​ ಪಡೆಯುತ್ತಿರುವುದು ನಕಲಿ ಫೋಟೋ ಎಂದು ಜರಿದಿದ್ದಾರೆ.

ಇದನ್ನೂ ಓದಿ: Coronavirus News Live Updates: ಕೊರೊನಾ ಚಿಕಿತ್ಸೆಗೆ ಬಳಸುವ ರೆಮ್​ಡೆಸಿವಿರ್ ಔಷಧಿಯ ದರ ಕಡಿತ

Published On - 8:19 pm, Sat, 17 April 21

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ