AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯದ ಬೆಲೆ ಇಳಿಸುವ ಭರವಸೆ ನೀಡಿದ ಪವನ್ ಕಲ್ಯಾಣ್: ಯುವಕರು ಫುಲ್ ಖುಷ್

Pawan Kalyan: ತಾವು ಅಧಿಕಾರಕ್ಕೆ ಬಂದರೆ ಆಂಧ್ರ ಪ್ರದೇಶದಲ್ಲಿ ಮದ್ಯದ ಬೆಲೆ ಇಳಿಸುವುದಾಗಿ ನಟ, ರಾಜಕಾರಣಿ ಪವನ್ ಕಲ್ಯಾಣ್ ಭರವಸೆ ನೀಡಿದ್ದಾರೆ.

ಮದ್ಯದ ಬೆಲೆ ಇಳಿಸುವ ಭರವಸೆ ನೀಡಿದ ಪವನ್ ಕಲ್ಯಾಣ್: ಯುವಕರು ಫುಲ್ ಖುಷ್
ಪವನ್ ಕಲ್ಯಾಣ್
Follow us
ಮಂಜುನಾಥ ಸಿ.
|

Updated on: Jun 30, 2023 | 9:47 PM

ಆಂಧ್ರ ಪ್ರದೇಶ (Andhra Pradesh) ವಿಧಾನಸಭೆ ಚುನಾವಣೆ ಸನಿಹದಲ್ಲಿದ್ದು ನಟ, ಜನಸೇನಾ ರಾಜಕೀಯ ಪಕ್ಷ ಸಂಸ್ಥಾಪಕ ಪವನ್ ಕಲ್ಯಾಣ್ (Pawan Kalyan) ಈ ಬಾರಿಯ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ಹಠತೊಟ್ಟು ಪ್ರಚಾರ, ರಾಜ್ಯ ಪ್ರವಾಸದಲ್ಲಿ ತೊಡಗಿದ್ದಾರೆ. ಕೆಲವು ದಿನಗಳ ಹಿಂದೆ ಅನ್ನವರಂನಲ್ಲಿ ಪ್ರಾರಂಭಿಸಿದ್ದ ವಾರಾಹಿ ಯಾತ್ರೆಯನ್ನು ಭೀಮವರಂನಲ್ಲಿ ಮುಕ್ತಾಯ ಮಾಡಿದ ಪವನ್ ಕಲ್ಯಾಣ್ ಆಡಳಿತ ಪಕ್ಷ ವೈಸಿಪಿ ವಿರುದ್ಧ ಟೀಕಾ ಪ್ರಹಾರ ಮಾಡಿರುವ ಜೊತೆಗೆ ಕೆಲವು ಭರವಸೆಗಳನ್ನೂ ಸಹ ನೀಡಿದ್ದು, ಮದ್ಯದ (Liquor) ಬೆಲೆ ಇಳಿಸುವುದು ಅದರಲ್ಲಿ ಒಂದು.

ಭೀಮವರಂನಲ್ಲಿ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಿದ ಪವನ್ ಕಲ್ಯಾಣ್, ”ಸಿಎಂ ಜಗನ್ ಮೋಹನ್ ರೆಡ್ಡಿ ಅಧಿಕಾರಕ್ಕೆ ಬರುವ ಮುನ್ನ ಸಂಪೂರ್ಣ ಮದ್ಯ ನಿಷೇಧ ಮಾಡುವುದಾಗಿ ಹೇಳಿದ್ದರು. ಆದರೆ ಹೇಳಿದಂತೆ ನಡೆದುಕೊಳ್ಳಲಿಲ್ಲ ಅದರ ಬದಲಾಗಿ ಯಾವುದ್ಯಾವುದೋ ಬ್ರ್ಯಾಂಡ್​ಗಳನ್ನು ಬಿಟ್ಟು ಬಡವರ ಆರೋಗ್ಯದ ಜೊತೆ ಆಟವಾಡುತ್ತಿದ್ದಾರೆ. ಮಾತ್ರವಲ್ಲದೆ ಈಗಿರುವ ಮದ್ಯದ ಮೇಲೆ ಭಾರಿ ತೆರಿಗೆ ವಿಧಿಸಿ, ದರಗಳನ್ನು ಹೆಚ್ಚು ಮಾಡಿ ಬಡ ಜನರು, ಶ್ರಮಿಕ ವರ್ಗ ಕಳ್ಳಭಟ್ಟಿ ಕುಡಿಯುವಂತೆ ಪ್ರೇರೇಪಿಸಿದ್ದಾರೆ” ಎಂದಿದ್ದಾರೆ.

”ಬೀರಾ ಎನ್ನುವ ಬಿಯರ್ ಬ್ರ್ಯಾಂಡ್​ಗೆ ಬೇರೆ ದರಪಟ್ಟಿ ಅಂಟಿಸಿ ಭಾರಿ ಮೊತ್ತಕ್ಕೆ ಮಾರಾಟ ಮಾಡುತ್ತಿದ್ದಾರೆ. ನಾನು ಒಪ್ಪಿಕೊಳ್ಳುತ್ತೇನೆ ಮದ್ಯ ನಿಷೇಧ ಸುಲಭವಲ್ಲ, ಅದರಿಂದ ರಾಜ್ಯಕ್ಕೂ ಆರ್ಥಿಕ ಹೊಡೆತ ಬೀಳುತ್ತದೆ. ಆದರೆ ಒಂದೊಮ್ಮೆ ನಾವು ಅಧಿಕಾರಕ್ಕೆ ಬಂದರೆ ಏರಿರುವ ಮದ್ಯದ ಬೆಲೆಯನ್ನು ಇಳಿಸುತ್ತೇವೆ. ಜೊತೆಗೆ ಒಂದೊಮ್ಮೆ ಯಾವುದಾದರೂ ಪ್ರದೇಶದಲ್ಲಿ ಮಹಿಳೆಯರು ಮದ್ಯ ನಿಷೇಧಕ್ಕೆ ಆಗ್ರಹಿಸಿದರೆ ಆ ಪ್ರದೇಶದಲ್ಲಿ ಸಂಪೂರ್ಣ ಮದ್ಯ ನಿಷೇಧ ಮಾಡುತ್ತೇವೆ” ಎಂದಿದ್ದಾರೆ ಪವನ್ ಕಲ್ಯಾಣ್.

ಇದನ್ನೂ ಓದಿ:ಪವನ್ ಕಲ್ಯಾಣ್ ಸಿನಿಮಾ ನೋಡಿ ಸಿಟ್ಟಾಗಿದ್ದ ಅಮಿತಾಬ್ ಬಚ್ಚನ್: ಯಾಕೆ? ಸಿನಿಮಾ ಯಾವುದು?

ದೇಶದಲ್ಲಿ ಅತಿ ಹೆಚ್ಚು ಬೆಲೆಗೆ ಮದ್ಯ ಮಾರುವ ರಾಜ್ಯಗಳಲ್ಲಿ ಆಂಧ್ರ ಪ್ರದೇಶವೂ ಒಂದು. ಮದ್ಯದ ಮೇಲೆ ಭಾರಿ ತೆರಿಗೆಯನ್ನು ಆಂಧ್ರ ಪ್ರದೇಶದಲ್ಲಿ ವಿಧಿಸಲಾಗಿದೆ. ಮಾತ್ರವಲ್ಲದೆ ರಾಜ್ಯದ ಡಿಸ್ಟಿಲರಿ, ಬ್ರೂವರಿಗಳು ಸರ್ಕಾರದ ಅಧೀನದಲ್ಲಿದ್ದು ಮಾಲೀಕರಿಗೆ ಕೇವಲ ಲೀಜ್ ಹಣವನ್ನು ಮಾತ್ರವೇ ನೀಡಿ ವಶೀಲಿಬಾಜಿ ಮಾಡಿ ಲೈಸೆನ್ಸ್ ಪಡೆದ ಕೆಲವರು ಆ ಡಿಸ್ಟಿಲರಿ, ಬ್ರೂವರಿಗಳಲ್ಲಿ ತಮ್ಮದೇ ಹೊಸ ಬ್ರ್ಯಾಂಡ್​ಗಳ ಮಧ್ಯವನ್ನು ತಯಾರಿಸಿ ಮಾರುಕಟ್ಟೆಗೆ ಬಿಟ್ಟಿದ್ದಾರೆ. ವಿಪಕ್ಷಗಳು ಆರೋಪಿಸಿರುವಂತೆ ಸರ್ಕಾರವೇ ಕಳಪೆ ಮದ್ಯವನ್ನು ಜನರಿಗೆ ಕುಡಿಸುತ್ತಿದ್ದು, ತಮ್ಮದೇ ಮದ್ಯವನ್ನು ಮಾರಾಟ ಮಾಡುವಂತೆ ಮದ್ಯದ ಅಂಗಡಿಗಳಿಗೆ ನಿರ್ದೇಶನ ನೀಡಿವೆಯಂತೆ.

ಇನ್ನು ಪವನ್ ಕಲ್ಯಾಣ್, ಈ ಬಾರಿ ತಮ್ಮ ಜನಸೇನಾ ಪಕ್ಷವನ್ನು ಹೇಗಾದರೂ ಮಾಡಿ ಅಧಿಕಾರಕ್ಕೆ ತರಬೇಕೆಂಬ ಅತ್ಯುತ್ಸಾಹದಲ್ಲಿ ಜೋರು ಪ್ರಚಾರದಲ್ಲಿ ನಿರತರಾಗಿದ್ದಾರೆ. ಈಗಾಗಲೇ ಚಂದ್ರಬಾಬು ನಾಯ್ಡು ನಾಯಕತ್ವದ ಟಿಡಿಪಿ ಪಕ್ಷದೊಟ್ಟಿಗೆ ಕೈಜೋಡಿಸಿದ್ದಾರೆ. ಚುನಾವಣೆಯಲ್ಲಿ ಪವನ್​ರ ಜನಸೇನಾ ಹಾಗೂ ಟಿಡಿಪಿ ಪಕ್ಷಗಳು ಸೀಟು ಹಂಚಿಕೆ ಆಧಾರದಲ್ಲಿ ಚುನಾವಣೆಗೆ ಹೋಗಲಿವೆ ಎಂಬ ಮಾತುಗಳೂ ಕೇಳಿಬರುತ್ತಿವೆ. ಆದರೆ ಈ ಬಗ್ಗೆ ಎರಡೂ ಪಕ್ಷಗಳ ಮುಖಂಡರು ಸ್ಪಷ್ಟನೆ ನೀಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದಾರೆ: ಸೀಮಂತ್ ಸಿಂಗ್
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದಾರೆ: ಸೀಮಂತ್ ಸಿಂಗ್
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ