AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್​ ಕಲ್ಯಾಣ್​-ರಾಣಾ ದಗ್ಗುಬಾಟಿ ದ್ವೇಷದ ಕಥೆಗೆ ಹೆಸರೇನು? ಆ.15ರಂದು ಬಯಲಾಗುತ್ತೆ ಹೊಸ ವಿಷಯ

ಈ ಸಿನಿಮಾದಲ್ಲಿ ಭೀಮ್ಲಾ ನಾಯಕ್​ ಎಂಬ ಪೊಲೀಸ್​ ಅಧಿಕಾರಿ ಪಾತ್ರದಲ್ಲಿ ಪವನ್​ ಕಲ್ಯಾಣ್​ ಅವರು ಕಾಣಿಸಿಕೊಳ್ಳಲಿದ್ದಾರೆ. ಆದರೆ ರಾಣಾ ದಗ್ಗುಬಾಟಿ ಅವರ ಗೆಟಪ್​ ಮತ್ತು ಪಾತ್ರದ ಹೆಸರಿನ ಬಗ್ಗೆ ಚಿತ್ರತಂಡ ಸುಳಿವು ಬಿಟ್ಟುಕೊಟ್ಟಿಲ್ಲ.

ಪವನ್​ ಕಲ್ಯಾಣ್​-ರಾಣಾ ದಗ್ಗುಬಾಟಿ ದ್ವೇಷದ ಕಥೆಗೆ ಹೆಸರೇನು? ಆ.15ರಂದು ಬಯಲಾಗುತ್ತೆ ಹೊಸ ವಿಷಯ
ಪವನ್​ ಕಲ್ಯಾಣ್​, ರಾಣಾ ದಗ್ಗುಬಾಟಿ
TV9 Web
| Edited By: |

Updated on: Aug 14, 2021 | 8:28 AM

Share

ಟಾಲಿವುಡ್​ನ ಸ್ಟಾರ್​ ನಟರಾದ ಪವನ್ ಕಲ್ಯಾಣ್​ (Pawan Kalyan) ಮತ್ತು ರಾಣಾ ದಗ್ಗುಬಾಟಿ (Rana Daggubati) ಜೊತೆಯಾಗಿ ಸಿನಿಮಾ ಮಾಡುತ್ತಿರುವುದು ಅವರ ಅಭಿಮಾನಿಗಳಿಗೆ ಸಖತ್​ ಖುಷಿ ನೀಡಿದೆ. ಆದರೆ ಈ ಬಹುನಿರೀಕ್ಷಿತ ಸಿನಿಮಾದ ಶೀರ್ಷಿಕೆ ಏನು ಎಂಬುದು ಈವರೆಗೂ ಬಹಿರಂಗ ಆಗಿಲ್ಲ. ಚಿತ್ರದ ಟೈಟಲ್​ ಏನೆಂದು ತಿಳಿದುಕೊಳ್ಳಲು ಸಿನಿಪ್ರಿಯರು ಬಹಳ ದಿನಗಳಿಂದ ಕಾದಿದ್ದಾರೆ. ಅದಕ್ಕೀಗ ಚಿತ್ರತಂಡ ಸಮಯ ನಿಗದಿ ಮಾಡಿದೆ. ಭಾನುವಾರ (ಆ.15) ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬೆಳಗ್ಗೆ 9.45ಕ್ಕೆ ಶೀರ್ಷಿಕೆ ಅನಾವರಣ ಆಗಲಿದೆ. ಅಷ್ಟೇ ಅಲ್ಲ, ಇನ್ನೂ ಕೆಲವು ಸರ್ಪ್ರೈಸ್​ಗಳು ಅಭಿಮಾನಿಗಳಿಗಾಗಿ ಕಾದಿವೆ.

ಅಂದಹಾಗೆ, ಪವನ್​ ಕಲ್ಯಾಣ್​ ಮತ್ತು ರಾಣಾ ದಗ್ಗುಬಾಟಿ ಜೊತೆಯಾಗಿ ನಟಿಸುತ್ತಿರುವುದು ಒಂದು ರಿಮೇಕ್ ಸಿನಿಮಾದಲ್ಲಿ. ಮಲಯಾಳಂ ಸೂಪರ್​ ಹಿಟ್​ ಚಿತ್ರ ‘ಅಯ್ಯಪ್ಪನುಮ್​ ಕೋಶಿಯುಂ’ ಚಿತ್ರ ತೆಲುಗಿಗೆ ರಿಮೇಕ್​ ಆಗುತ್ತಿದ್ದು, ಅದರಲ್ಲಿ ಪವನ್​ ಕಲ್ಯಾಣ್​ ಹಾಗೂ ರಾಣಾ ದಗ್ಗುಬಾಟಿ ಮುಖಾಮುಖಿ ಆಗುತ್ತಿದ್ದಾರೆ. ಅಹಂಕಾರ ಮತ್ತು ಒಣ ಪ್ರತಿಷ್ಠೆಯ ಕಾರಣಕ್ಕಾಗಿ ಪರಸ್ಪರ ದ್ವೇಷ ಬೆಳೆಸಿಕೊಳ್ಳುವ ಇಬ್ಬರು ವ್ಯಕ್ತಿಗಳ ಕಥೆಯನ್ನು ಈ ಸಿನಿಮಾ ಹೊಂದಿದೆ. ಇಂಥ ಕಥೆಗೆ ಪವರ್​ಫುಲ್​ ಆದಂತಹ ಶೀರ್ಷಿಕೆ ಯಾವುದಿರಬಹುದು ಎಂಬ ಕೌತುಕಕ್ಕೆ ಭಾನುವಾರ ತೆರೆ ಬೀಳಲಿದೆ.

ಸಿತಾರಾ ಎಂಟರ್​ಟೇನ್​ಮೆಂಟ್ಸ್​ ಸಂಸ್ಥೆ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಟೈಟಲ್ ಲಾಂಚ್​ ಬಗ್ಗೆ ಸುದ್ದಿ ತಿಳಿಸಲು ಸೋಶಿಯಲ್​ ಮೀಡಿಯಾದಲ್ಲಿ ನಿರ್ಮಾಪಕರು ಪೋಸ್ಟ್​ವೊಂದನ್ನು ಮಾಡಿದ್ದಾರೆ. ಅದರಲ್ಲಿ ಪವನ್​ ಕಲ್ಯಾಣ್​ ಅವರು ಲುಂಗಿ ಧರಿಸಿ ನಡೆದುಹೋಗುತ್ತಿರುವ ಲುಕ್​ ಇದೆ. ಈ ಸಿನಿಮಾದಲ್ಲಿ ಭೀಮ್ಲಾ ನಾಯಕ್​ ಎಂಬ ಪೊಲೀಸ್​ ಅಧಿಕಾರಿ ಪಾತ್ರ​ನಲ್ಲಿ ಪವನ್​ ಕಲ್ಯಾಣ್​ ಅವರು ಕಾಣಿಸಿಕೊಳ್ಳಲಿದ್ದಾರೆ. ಆದರೆ ರಾಣಾ ದಗ್ಗುಬಾಟಿ ಅವರ ಗೆಟಪ್​ ಮತ್ತು ಪಾತ್ರದ ಹೆಸರಿನ ಬಗ್ಗೆ ಚಿತ್ರತಂಡ ಸುಳಿವು ಬಿಟ್ಟುಕೊಟ್ಟಿಲ್ಲ.

ಭಾನುವಾರ ಶೀರ್ಷಿಕೆ ಅನಾವರಣದ ಜೊತೆಗೆ ಚಿಕ್ಕ ಟೀಸರ್​ ಅಥವಾ ಮೋಷನ್​ ಪೋಸ್ಟರ್​ ಬಿಡುಗಡೆ ಆಗುವ ಸಾಧ್ಯತೆ ಇದೆ ಅದಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಕೊರೊನಾ ಎರಡನೇ ಅಲೆ ಬಳಿಕ ಈ ಚಿತ್ರದ ಶೂಟಿಂಗ್​ ಭರದಿಂದ ಸಾಗಿದೆ. 2022ರ ಜನವರಿ 12ರಂದು ಬಿಡುಗಡೆ ಮಾಡುವ ಗುರಿ ಇಟ್ಟುಕೊಂಡು ಕೆಲಸಗಳನ್ನು ಮಾಡಲಾಗುತ್ತಿದೆ. ಸಾಗರ್​ ಚಂದ್ರ ನಿರ್ದೇಶನ ಮಾಡುತ್ತಿದ್ದಾರೆ. ಥಮನ್​ ಎಸ್​. ಸಂಗೀತ ಸಂಯೋಜನೆಯ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ನಾಯಕಿಯಾಗಿ ನಿತ್ಯಾ ಮೆನನ್​ ನಟಿಸುತ್ತಿದ್ದಾರೆ.

ಇದನ್ನೂ ಓದಿ:

ಪವನ್​ ಕಲ್ಯಾಣ್​ ಪುತ್ರ ಅಕಿರ ನಂದನ್​ ಮಾರ್ಷಲ್ ಆರ್ಟ್ಸ್​ ವಿಡಿಯೋ ವೈರಲ್​

ಪವನ್​ ಕಲ್ಯಾಣ್​ ಭವಿಷ್ಯದ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗಪಡಿಸಿದ ಜ್ಯೋತಿಷಿಗಳು

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ