AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್​ ಕಲ್ಯಾಣ್​-ರಾಣಾ ದಗ್ಗುಬಾಟಿ ದ್ವೇಷದ ಕಥೆಗೆ ಹೆಸರೇನು? ಆ.15ರಂದು ಬಯಲಾಗುತ್ತೆ ಹೊಸ ವಿಷಯ

ಈ ಸಿನಿಮಾದಲ್ಲಿ ಭೀಮ್ಲಾ ನಾಯಕ್​ ಎಂಬ ಪೊಲೀಸ್​ ಅಧಿಕಾರಿ ಪಾತ್ರದಲ್ಲಿ ಪವನ್​ ಕಲ್ಯಾಣ್​ ಅವರು ಕಾಣಿಸಿಕೊಳ್ಳಲಿದ್ದಾರೆ. ಆದರೆ ರಾಣಾ ದಗ್ಗುಬಾಟಿ ಅವರ ಗೆಟಪ್​ ಮತ್ತು ಪಾತ್ರದ ಹೆಸರಿನ ಬಗ್ಗೆ ಚಿತ್ರತಂಡ ಸುಳಿವು ಬಿಟ್ಟುಕೊಟ್ಟಿಲ್ಲ.

ಪವನ್​ ಕಲ್ಯಾಣ್​-ರಾಣಾ ದಗ್ಗುಬಾಟಿ ದ್ವೇಷದ ಕಥೆಗೆ ಹೆಸರೇನು? ಆ.15ರಂದು ಬಯಲಾಗುತ್ತೆ ಹೊಸ ವಿಷಯ
ಪವನ್​ ಕಲ್ಯಾಣ್​, ರಾಣಾ ದಗ್ಗುಬಾಟಿ
TV9 Web
| Updated By: ಮದನ್​ ಕುಮಾರ್​|

Updated on: Aug 14, 2021 | 8:28 AM

Share

ಟಾಲಿವುಡ್​ನ ಸ್ಟಾರ್​ ನಟರಾದ ಪವನ್ ಕಲ್ಯಾಣ್​ (Pawan Kalyan) ಮತ್ತು ರಾಣಾ ದಗ್ಗುಬಾಟಿ (Rana Daggubati) ಜೊತೆಯಾಗಿ ಸಿನಿಮಾ ಮಾಡುತ್ತಿರುವುದು ಅವರ ಅಭಿಮಾನಿಗಳಿಗೆ ಸಖತ್​ ಖುಷಿ ನೀಡಿದೆ. ಆದರೆ ಈ ಬಹುನಿರೀಕ್ಷಿತ ಸಿನಿಮಾದ ಶೀರ್ಷಿಕೆ ಏನು ಎಂಬುದು ಈವರೆಗೂ ಬಹಿರಂಗ ಆಗಿಲ್ಲ. ಚಿತ್ರದ ಟೈಟಲ್​ ಏನೆಂದು ತಿಳಿದುಕೊಳ್ಳಲು ಸಿನಿಪ್ರಿಯರು ಬಹಳ ದಿನಗಳಿಂದ ಕಾದಿದ್ದಾರೆ. ಅದಕ್ಕೀಗ ಚಿತ್ರತಂಡ ಸಮಯ ನಿಗದಿ ಮಾಡಿದೆ. ಭಾನುವಾರ (ಆ.15) ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬೆಳಗ್ಗೆ 9.45ಕ್ಕೆ ಶೀರ್ಷಿಕೆ ಅನಾವರಣ ಆಗಲಿದೆ. ಅಷ್ಟೇ ಅಲ್ಲ, ಇನ್ನೂ ಕೆಲವು ಸರ್ಪ್ರೈಸ್​ಗಳು ಅಭಿಮಾನಿಗಳಿಗಾಗಿ ಕಾದಿವೆ.

ಅಂದಹಾಗೆ, ಪವನ್​ ಕಲ್ಯಾಣ್​ ಮತ್ತು ರಾಣಾ ದಗ್ಗುಬಾಟಿ ಜೊತೆಯಾಗಿ ನಟಿಸುತ್ತಿರುವುದು ಒಂದು ರಿಮೇಕ್ ಸಿನಿಮಾದಲ್ಲಿ. ಮಲಯಾಳಂ ಸೂಪರ್​ ಹಿಟ್​ ಚಿತ್ರ ‘ಅಯ್ಯಪ್ಪನುಮ್​ ಕೋಶಿಯುಂ’ ಚಿತ್ರ ತೆಲುಗಿಗೆ ರಿಮೇಕ್​ ಆಗುತ್ತಿದ್ದು, ಅದರಲ್ಲಿ ಪವನ್​ ಕಲ್ಯಾಣ್​ ಹಾಗೂ ರಾಣಾ ದಗ್ಗುಬಾಟಿ ಮುಖಾಮುಖಿ ಆಗುತ್ತಿದ್ದಾರೆ. ಅಹಂಕಾರ ಮತ್ತು ಒಣ ಪ್ರತಿಷ್ಠೆಯ ಕಾರಣಕ್ಕಾಗಿ ಪರಸ್ಪರ ದ್ವೇಷ ಬೆಳೆಸಿಕೊಳ್ಳುವ ಇಬ್ಬರು ವ್ಯಕ್ತಿಗಳ ಕಥೆಯನ್ನು ಈ ಸಿನಿಮಾ ಹೊಂದಿದೆ. ಇಂಥ ಕಥೆಗೆ ಪವರ್​ಫುಲ್​ ಆದಂತಹ ಶೀರ್ಷಿಕೆ ಯಾವುದಿರಬಹುದು ಎಂಬ ಕೌತುಕಕ್ಕೆ ಭಾನುವಾರ ತೆರೆ ಬೀಳಲಿದೆ.

ಸಿತಾರಾ ಎಂಟರ್​ಟೇನ್​ಮೆಂಟ್ಸ್​ ಸಂಸ್ಥೆ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಟೈಟಲ್ ಲಾಂಚ್​ ಬಗ್ಗೆ ಸುದ್ದಿ ತಿಳಿಸಲು ಸೋಶಿಯಲ್​ ಮೀಡಿಯಾದಲ್ಲಿ ನಿರ್ಮಾಪಕರು ಪೋಸ್ಟ್​ವೊಂದನ್ನು ಮಾಡಿದ್ದಾರೆ. ಅದರಲ್ಲಿ ಪವನ್​ ಕಲ್ಯಾಣ್​ ಅವರು ಲುಂಗಿ ಧರಿಸಿ ನಡೆದುಹೋಗುತ್ತಿರುವ ಲುಕ್​ ಇದೆ. ಈ ಸಿನಿಮಾದಲ್ಲಿ ಭೀಮ್ಲಾ ನಾಯಕ್​ ಎಂಬ ಪೊಲೀಸ್​ ಅಧಿಕಾರಿ ಪಾತ್ರ​ನಲ್ಲಿ ಪವನ್​ ಕಲ್ಯಾಣ್​ ಅವರು ಕಾಣಿಸಿಕೊಳ್ಳಲಿದ್ದಾರೆ. ಆದರೆ ರಾಣಾ ದಗ್ಗುಬಾಟಿ ಅವರ ಗೆಟಪ್​ ಮತ್ತು ಪಾತ್ರದ ಹೆಸರಿನ ಬಗ್ಗೆ ಚಿತ್ರತಂಡ ಸುಳಿವು ಬಿಟ್ಟುಕೊಟ್ಟಿಲ್ಲ.

ಭಾನುವಾರ ಶೀರ್ಷಿಕೆ ಅನಾವರಣದ ಜೊತೆಗೆ ಚಿಕ್ಕ ಟೀಸರ್​ ಅಥವಾ ಮೋಷನ್​ ಪೋಸ್ಟರ್​ ಬಿಡುಗಡೆ ಆಗುವ ಸಾಧ್ಯತೆ ಇದೆ ಅದಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಕೊರೊನಾ ಎರಡನೇ ಅಲೆ ಬಳಿಕ ಈ ಚಿತ್ರದ ಶೂಟಿಂಗ್​ ಭರದಿಂದ ಸಾಗಿದೆ. 2022ರ ಜನವರಿ 12ರಂದು ಬಿಡುಗಡೆ ಮಾಡುವ ಗುರಿ ಇಟ್ಟುಕೊಂಡು ಕೆಲಸಗಳನ್ನು ಮಾಡಲಾಗುತ್ತಿದೆ. ಸಾಗರ್​ ಚಂದ್ರ ನಿರ್ದೇಶನ ಮಾಡುತ್ತಿದ್ದಾರೆ. ಥಮನ್​ ಎಸ್​. ಸಂಗೀತ ಸಂಯೋಜನೆಯ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ನಾಯಕಿಯಾಗಿ ನಿತ್ಯಾ ಮೆನನ್​ ನಟಿಸುತ್ತಿದ್ದಾರೆ.

ಇದನ್ನೂ ಓದಿ:

ಪವನ್​ ಕಲ್ಯಾಣ್​ ಪುತ್ರ ಅಕಿರ ನಂದನ್​ ಮಾರ್ಷಲ್ ಆರ್ಟ್ಸ್​ ವಿಡಿಯೋ ವೈರಲ್​

ಪವನ್​ ಕಲ್ಯಾಣ್​ ಭವಿಷ್ಯದ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗಪಡಿಸಿದ ಜ್ಯೋತಿಷಿಗಳು

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ