AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್ ಕಲ್ಯಾಣ್ ಹಳೆಯ ಚಿತ್ರಕ್ಕೆ ಕೊನೆಗೂ ಬಂತು ರಿಲೀಸ್ ಭಾಗ್ಯ

ಪವನ್ ಕಲ್ಯಾಣ್ ರಾಜಕೀಯ ಕಾರಣಕ್ಕೆ ಹೊಸ ಸಿನಿಮಾ ಒಪ್ಪಿಕೊಳ್ಳೋದು ಹಾಗಿರಲಿ, ಈ ಮೊದಲು ಸಹಿ ಹಾಕಿದ ಸಿನಿಮಾಗಳನ್ನು ಮಾಡಿ ಮುಗಿಸಿದರೆ ಸಾಕಾಗಿದೆ. ಈಗ ಅವರು ದೊಡ್ಡ ಬಿಡುವು ಪಡೆದು ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈಗ ಅವರ ಹಳೆಯ ಚಿತ್ರ ಒಂದಕ್ಕೆ ರಿಲೀಸ್ ಭಾಗ್ಯ ಸಿಗುತ್ತಿದೆ ಅನ್ನೋದು ವಿಶೇಷ.

ಪವನ್ ಕಲ್ಯಾಣ್ ಹಳೆಯ ಚಿತ್ರಕ್ಕೆ ಕೊನೆಗೂ ಬಂತು ರಿಲೀಸ್ ಭಾಗ್ಯ
ಪವನ್ ಕಲ್ಯಾಣ್
ರಾಜೇಶ್ ದುಗ್ಗುಮನೆ
|

Updated on: May 14, 2025 | 7:27 AM

Share

ಪವನ್ ಕಲ್ಯಾಣ್ (Pawan Kalyan) ಸದ್ಯ ರಾಜಕೀಯದಲ್ಲಿ ಬ್ಯುಸಿ ಇದ್ದಾರೆ. ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಆಗಿರೋ ಅವರು ಆಡಳಿತದ ಕಡೆ ಗಮನ ಹರಿಸುತ್ತಿದ್ದಾರೆ. ಈಗ ಅವರಿಗೆ ಒಪ್ಪಿಕೊಂಡ ಸಿನಿಮಾ ಕೆಲಸಗಳನ್ನು ಮಾಡಿ ಮುಗಿಸಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಕಾರಣಕ್ಕೆ ಪವನ್ ಕಲ್ಯಾಣ್ ಅವರು ರಾಜಕೀಯದಿಂದ ಬಿಡುವು ಮಾಡಿಕೊಂಡು, ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸುತ್ತಿದ್ದಾರೆ. ಇದರಿಂದ ಅವರ ಹಳೆಯ ಚಿತ್ರಕ್ಕೆ ಕೊನೆಗೂ ರಿಲೀಸ್ ಭಾಗ್ಯ ಸಿಕ್ಕಂತೆ ಆಗಿದೆ. ಈ ವಿಚಾರ ಪವನ್ ಫ್ಯಾನ್ಸ್​ಗೆ ಖುಷಿ ಕೊಟ್ಟಿದೆ.

ಪವನ್ ಕಲ್ಯಾಣ್ ನಟನೆಯ ‘ಒಜಿ’ ಸಿನಿಮಾ ಘೋಷಣೆ ಆಗಿದ್ದು 2022ರಲ್ಲಿ. ಆ ಬಳಿಕ ಈ ಚಿತ್ರದ ಶೂಟ್ ವಿಳಂಬ ಆಗುತ್ತಲೇ ಹೋಯಿತು. ಸಿನಿಮಾ ತಂಡದಿಂದ ಒಂದಷ್ಟು ಪೋಸ್ಟರ್​ಗಳು ಬಂದವೇ ಹೊರತು ಸಿನಿಮಾ ಮಾತ್ರ ರಿಲೀಸ್ ಆಗಲೇ ಇಲ್ಲ. ಈಗ ಚಿತ್ರದ ರಿಲೀಸ್ ದಿನಾಂಕದ ಬಗ್ಗೆ ಒಂದಷ್ಟು ಮಾಹಿತಿ ಹೊರ ಬಿದ್ದಿದೆ. ಈ ಚಿತ್ರ ಸೆಪ್ಟೆಂಬರ್​ನಲ್ಲಿ ರಿಲೀಸ್ ಆಗಬಹುದು ಎನ್ನಲಾಗುತ್ತಿದೆ.

‘ಒಜಿ’ ಚಿತ್ರವನ್ನು ಸುಜೀತ್ ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ‘ಸಾಹೋ’ ಹೆಸರಿನ ಡಿಸಾಸ್ಟರ್ ಚಿತ್ರವನ್ನು ಅವರು ನೀಡಿದ್ದರು. ಆ ಬಳಿಕ ಅವರಿಗೆ ‘ಒಜಿ’ ಆಫರ್ ಸಿಕ್ಕಿತಾದರೂ ಶೂಟಿಂಗ್ ಮಾತ್ರ ಪೂರ್ಣಗೊಂಡಿರಲಿಲ್ಲ. ಈಗ ಪವನ್ ಕಲ್ಯಾಣ್ ಅವರು ದೊಡ್ಡ ಮನಸ್ಸು ಮಾಡಿ ಡೇಟ್ಸ್ ಕೊಟ್ಟಿದ್ದಾರೆ. ಹೀಗಾಗಿ, ಸುಜೀತ್ ಅವರು ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಆಗಲಿದ್ದಾರೆ.

ಇದನ್ನೂ ಓದಿ
Image
ರಶ್ಮಿಕಾ ಮಂದಣ್ಣ ಹೀರೋ ಜೊತೆ ತೆಲುಗು ಸಿನಿಮಾ ಘೋಷಿಸಿದ ಸಪ್ತಮಿ ಗೌಡ
Image
ರಾಜ್​ಕುಮಾರ್ ಸದಾ ಬಿಳಿ ಪಂಚೆ, ಶರ್ಟ್​ನಲ್ಲೇ ಇರುತ್ತಿದ್ದರೇಕೆ?
Image
ನನ್ನ ತಂದೆ ಪಾಕಿಸ್ತಾನದವರು ಎಂದಿದ್ದ ಶಾರುಖ್ ಖಾನ್; ಈ ಕಾರಣಕ್ಕೆ ಮೌನ?
Image
‘ಕೂಲಿ’ ಸಿನಿಮಾದ ಬಹುತೇಕ ಶೂಟ್​ನ ಬಾಡಿ ಡಬಲ್​ ಮೂಲಕವೇ ಮುಗಿಸಿದ ನಿರ್ದೇಶಕ

ಪವನ್ ಕಲ್ಯಾಣ್ ಕೊಟ್ಟ ಡೇಟ್ಸ್​ನಲ್ಲಿ ಶೂಟಿಂಗ್ ಪೂರ್ಣಗೊಳಿಸಲು ‘ಒಜಿ’ ತಂಡ ಪ್ಲ್ಯಾನ್ ಮಾಡಿಕೊಂಡಿದೆ. ಅವರು ಇಂದು (ಮೇ 14) ಸೆಟ್ ಸೇರುತ್ತಿರುವ ಹಿನ್ನೆಲೆಯಲ್ಲಿ ತಂಡದಿಂದ ಏನಾದರೂ ಹೊಸ ಘೋಷಣೆಯ ನಿರೀಕ್ಷೆಯಲ್ಲಿ ಫ್ಯಾನ್ಸ್ ಇದ್ದಾರೆ. ಈ ಚಿತ್ರವನ್ನು ಡಿವಿವಿ ದಾನಯ್ಯ ಅವರು ನಿರ್ಮಾಣ ಮಾಡುತ್ತಿದ್ದಾರೆ. ಅವರು ಹಾಕಿದ ಹಣಕ್ಕೆ ಬಡ್ಡಿ ಬೆಳೆಯುತ್ತಿದ್ದು, ಚಿಂತೆಗೆ ಒಳಗಾಗುತ್ತಿದ್ದಾರೆ. ಪವನ್ ಕಲ್ಯಾಣ್ ಸೆಟ್ ಸೇರಿರುವುದರಿಂದ ಅವರು ಕೊಂಚ ನಿಟ್ಟುಸಿರು ಬಿಡುವಂತೆ ಆಗಿದೆ.

ಇದನ್ನೂ ಓದಿ: ಪವನ್ ಕಲ್ಯಾಣ್ ಸಿನಿಮಾದಲ್ಲಿ ಜಪಾನಿನ ಸೂಪರ್ ಸ್ಟಾರ್ ನಟ

ಪವನ್ ಕಲ್ಯಾಣ್ ಅವರು ‘ಹರಿ ಹರ ವೀರ ಮಲ್ಲು’, ‘ಉಸ್ತಾದ್ ಭಗತ್ ಸಿಂಗ್’ ಚಿತ್ರಕ್ಕೂ ಡೇಟ್ಸ್ ಕೊಟ್ಟಿದ್ದಾರೆ. ಅವುಗಳ ಶೂಟ್​ನೂ ಕೂಡ ಅವರು ಪೂರ್ಣಗೊಳಿಸಲಿದ್ದಾರೆ. ಇದು ಪವನ್ ಕಲ್ಯಾಣ್ ಫ್ಯಾನ್ಸ್​ಗೆ ಖುಷಿ ಕೊಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ