AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿಯನ್ನು ರಾಜ ಭಾಷೆ ಎಂದು ಕರೆದ ಪವನ್ ಕಲ್ಯಾಣ್; ಕೇಳಿ ಬಂತು ಟೀಕೆ

ಪವನ್ ಕಲ್ಯಾಣ್ ಅವರ 'ಹಿಂದಿ ರಾಜ ಭಾಷೆ' ಹೇಳಿಕೆ ದಕ್ಷಿಣ ಭಾರತದಲ್ಲಿ ಭಾರಿ ವಿವಾದ ಸೃಷ್ಟಿಸಿದೆ. ಹಿಂದೆ ಹಿಂದಿ ಹೇರಿಕೆಯನ್ನು ತೀವ್ರವಾಗಿ ವಿರೋಧಿಸಿದ್ದ ಪವನ್, ಈಗ ತಮ್ಮ ನಿಲುವನ್ನು ಬದಲಾಯಿಸಿರುವುದಕ್ಕೆ ಪ್ರಾದೇಶಿಕ ಭಾಷಾ ಅಭಿಮಾನಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದೇಶಕ್ಕೆ ಯಾವುದೇ ರಾಷ್ಟ್ರಭಾಷೆ ಇಲ್ಲ ಎಂಬ ಸಂವಿಧಾನದ ನಿಯಮವನ್ನು ನೆನಪಿಸುತ್ತಾ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಜನಸೇನಾ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಹಿಂದಿಯನ್ನು ರಾಜ ಭಾಷೆ ಎಂದು ಕರೆದ ಪವನ್ ಕಲ್ಯಾಣ್; ಕೇಳಿ ಬಂತು ಟೀಕೆ
ಪವನ್ ಕಲ್ಯಾಣ್
ರಾಜೇಶ್ ದುಗ್ಗುಮನೆ
|

Updated on: Jul 03, 2026 | 9:38 AM

Share

ಮುಖ್ಯಾಂಶಗಳು

  • ಪವನ್ ಕಲ್ಯಾಣ್ 'ಹಿಂದಿ ರಾಜ ಭಾಷೆ' ಹೇಳಿಕೆ ಬಗ್ಗೆ ಚರ್ಚೆ
  • ಜನಸೇನಾ ಮುಖ್ಯಸ್ಥನ ನಿಲುವಿನ ತಿರುವಿಗೆ ಕಾರಣವೇನು?
  • ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರ ಆಕ್ರೋಶ

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರ ಹೊಸ ಹೇಳಿಕೆಯೊಂದು ದಕ್ಷಿಣ ಭಾರತದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದೆ. ಈ ಹಿಂದೆ ‘ಹಿಂದಿ ಹೇರಿಕೆ’ಯನ್ನು ವಿರೋಧಿಸುತ್ತಿದ್ದ ಪವನ್, ಈಗ ಇದ್ದಕ್ಕಿದ್ದಂತೆ ಹಿಂದಿ ಭಾಷೆಯ ಪರವಾಗಿ ಬ್ಯಾಟ್ ಬೀಸಿರುವುದು ಪ್ರಾದೇಶಿಕ ಭಾಷಾ ಅಭಿಮಾನಿಗಳಲ್ಲಿ ಅಸಮಾಧಾನ ಮೂಡಿಸಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದ್ದ, ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.

ಸಭೆಯಲ್ಲಿ ಹೇಳಿಕೆ

ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಪವನ್ ಕಲ್ಯಾಣ್, ತೆಲುಗು ಬಿಟ್ಟು ಹಿಂದಿಯಲ್ಲಿ ಭಾಷಣ ಮಾಡಲು ಆರಂಭಿಸಿದರು. ಇದಕ್ಕೆ ಕಾರಣ ನೀಡಿದ ಅವರು, ‘ನಾನು ಹಿಂದಿಯಲ್ಲಿ ಏಕೆ ಮಾತನಾಡುತ್ತಿದ್ದೇನೆ ಎಂದರೆ, ನಾವೆಲ್ಲರೂ ಗೌರವಿಸುವ, ಆದರಿಸುವ ಭಾಷೆ ಅದು. ನಮ್ಮ ರಾಷ್ಟ್ರೀಯ ಭಾಷೆಗಳಲ್ಲಿ ಒಂದಾದ ನಮ್ಮ ಭಾಷೆ, ರಾಜಭಾಷೆ ಹಿಂದಿ. ನಮ್ಮ ಭಾಷೆಗಳು ಭಿನ್ನವಾಗಿದ್ದರೂ, ನಮ್ಮ ಭಾವನೆ ಹಾಗೂ ಭಾರತೀಯತೆ ಒಂದೇ’ ಎಂದು ಪ್ರತಿಪಾದಿಸಿದರು.

ಪವನ್ ಬಗೆಗಿನ ಟ್ವೀಟ್

ಈ ಹಿಂದಿನ ನಿಲುವು ಏನಿತ್ತು?

ರಾಜಕೀಯಕ್ಕೆ ಬರುವ ಮುನ್ನ ಹಾಗೂ ಆರಂಭದ ದಿನಗಳಲ್ಲಿ ಪವನ್ ಕಲ್ಯಾಣ್ ದಕ್ಷಿಣ ಭಾರತದ ಭಾಷೆಗಳ ಮೇಲಿನ ಹಿಂದಿ ಹೇರಿಕೆಯನ್ನು ಬಲವಾಗಿ ಖಂಡಿಸುತ್ತಿದ್ದರು. ‘ಉತ್ತರ ಭಾರತದ ನಾಯಕರು ದಕ್ಷಿಣದವರನ್ನು ದ್ವಿತೀಯ ದರ್ಜೆಯ ಪ್ರಜೆಗಳಂತೆ ನೋಡಬಾರದು. ನಮಗೆ ನಮ್ಮದೇ ಆದ ಪ್ರಾದೇಶಿಕ ಅಸ್ಮಿತೆ ಇದೆ. ತಮಿಳು ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಲಾಗುತ್ತದೆ, ಅದೇ ರೀತಿ ಹಿಂದಿ ಭಾಷೆಯ ಸಿನಿಮಾಗಳನ್ನು ತಮಿಳಿಗೆ ಡಬ್ ಮಾಡಲಾಗುತ್ತದೆಯೇ’ ಎಂದು ಅವರು ಪ್ರಶ್ನೆ ಮಾಡಿದ್ದರು. ಆದರೆ, ಈಗ ಹಿಂದಿಯನ್ನು ರಾಜಭಾಷೆ ಎಂದು ಹೊಗಳುವ ಮೂಲಕ ತಮ್ಮ ಹಳೆಯ ನಿಲುವಿಗೆ ಸಂಪೂರ್ಣ ವಿರುದ್ಧವಾಗಿ ನಡೆದುಕೊಂಡಿದ್ದಾರೆ.

ಇದನ್ನೂ ಓದಿ: ಹೊಸ ಸಿನಿಮಾಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್

ವ್ಯಕ್ತವಾಗುತ್ತಿರುವ ತೀವ್ರ ವಿರೋಧ

ಪವನ್ ಕಲ್ಯಾಣ್ ಅವರ ಈ ಮಾತಿಗೆ ಸೋಶಿಯಲ್ ಮೀಡಿಯಾದಲ್ಲಿ ಹಾಗೂ ಪ್ರಾದೇಶಿಕ ಭಾಷಾ ಹೋರಾಟಗಾರರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಭಾರತಕ್ಕೆ ಯಾವುದೇ ಒಂದು ನಿರ್ದಿಷ್ಟ ರಾಷ್ಟ್ರಭಾಷೆ ಇಲ್ಲ. ಸಂವಿಧಾನದ ಪ್ರಕಾರ ಎಲ್ಲವೂ ಅಧಿಕೃತ ಭಾಷೆಗಳೇ ಆಗಿರುವಾಗ ಪವನ್ ಕಲ್ಯಾಣ್ ಹಿಂದಿಯ ಪರ ನಿಲುವು ತೋರಿಸುತ್ತಿರುವುದು ಎಷ್ಟು ಸರಿ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ದೇವೇಗೌಡ್ರು ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ
ದೇವೇಗೌಡ್ರು ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ
ಸಿಜೆಪಿ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ ಪೊಲೀಸರ ರಜೆ ರದ್ದು
ಸಿಜೆಪಿ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ ಪೊಲೀಸರ ರಜೆ ರದ್ದು
ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ 8 ಸೇತುವೆಗಳು ಜಲಾವೃತ
ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ 8 ಸೇತುವೆಗಳು ಜಲಾವೃತ
ಬಿಪಿಎಲ್ ಕಾರ್ಡುದಾರರಿಗೆ ಗುಡ್​ ನ್ಯೂಸ್ ನೀಡಿದ ಆಹಾರ ಸಚಿವ ಮುನಿಯಪ್ಪ
ಬಿಪಿಎಲ್ ಕಾರ್ಡುದಾರರಿಗೆ ಗುಡ್​ ನ್ಯೂಸ್ ನೀಡಿದ ಆಹಾರ ಸಚಿವ ಮುನಿಯಪ್ಪ
ಬಿಡಾಡಿ ವಾಹನಗಳ ಟೋಯಿಂಗ್: ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳು ಜಪ್ತಿ
ಬಿಡಾಡಿ ವಾಹನಗಳ ಟೋಯಿಂಗ್: ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳು ಜಪ್ತಿ
‘ಸ್ವಾರ್ಥ ಬಿಡಿ’: ಚಿತ್ರರಂಗದವರ ಬಗ್ಗೆ ಸಾಧುಕೋಕಿಲ ಬೇಸರ
‘ಸ್ವಾರ್ಥ ಬಿಡಿ’: ಚಿತ್ರರಂಗದವರ ಬಗ್ಗೆ ಸಾಧುಕೋಕಿಲ ಬೇಸರ
ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ: ಸಿಂಹ
ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ: ಸಿಂಹ
ಸಾರಿಗೆ ಸಚಿವರ ಕ್ಷೇತ್ರದಲ್ಲೇ ಗೋದಾಮಾಗಿ ಮಾರ್ಪಟ್ಟಿರುವ ಬಸ್​​ ನಿಲ್ದಾಣ!
ಸಾರಿಗೆ ಸಚಿವರ ಕ್ಷೇತ್ರದಲ್ಲೇ ಗೋದಾಮಾಗಿ ಮಾರ್ಪಟ್ಟಿರುವ ಬಸ್​​ ನಿಲ್ದಾಣ!
ಚಾಲಕನ ಜೀವಕ್ಕಿಂತ ಬಿಯರ್ ಬಾಟಲಿಯೇ ಮುಖ್ಯವಾಯಿತೇ?
ಚಾಲಕನ ಜೀವಕ್ಕಿಂತ ಬಿಯರ್ ಬಾಟಲಿಯೇ ಮುಖ್ಯವಾಯಿತೇ?
ನೀಟ್ ಪ್ರತಿಭಟನೆ, ಮೋದಿ ಹೇಳಿಕೆ ಬಗ್ಗೆ ಪ್ರಲ್ಹಾದ್ ಜೋಶಿ ಮಹತ್ವದ ಹೇಳಿಕೆ
ನೀಟ್ ಪ್ರತಿಭಟನೆ, ಮೋದಿ ಹೇಳಿಕೆ ಬಗ್ಗೆ ಪ್ರಲ್ಹಾದ್ ಜೋಶಿ ಮಹತ್ವದ ಹೇಳಿಕೆ