AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ‘ಸರ್ಕಾರ ಕೊಡೋ ಸಂಬಳದಲ್ಲಿ ಒಂದು ರೂಪಾಯಿನೂ ಬಿಡಲ್ಲ’; ಪವನ್ ಕಲ್ಯಾಣ್

ಪವನ್ ಕಲ್ಯಾಣ್ ಅವರು ಪ್ರತಿ ಚಿತ್ರಕ್ಕೆ ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಅವರಿಗೆ ಬೇರೆ ಬೇರೆ ಮೂಲಗಳಿಂದ ಹಣ ಬರುತ್ತದೆ. ಆದಾಗ್ಯೂ ಅವರು ಸಂಬಳ ಪಡೆಯೋದಾಗಿ ಹೇಳಿದ್ದಾರೆ. ಇದಕ್ಕೆ ಕಾರಣ ಕೂಡ ನೀಡಿದ್ದಾರೆ.

 ‘ಸರ್ಕಾರ ಕೊಡೋ ಸಂಬಳದಲ್ಲಿ ಒಂದು ರೂಪಾಯಿನೂ ಬಿಡಲ್ಲ’; ಪವನ್ ಕಲ್ಯಾಣ್
ಪವನ್ ಕಲ್ಯಾಣ್
ರಾಜೇಶ್ ದುಗ್ಗುಮನೆ
|

Updated on:Jun 11, 2024 | 1:49 PM

Share

ಪವನ್ ಕಲ್ಯಾಣ್ (Pawan Kalyan) ಅವರು ಈ ಬಾರಿ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಕಂಡಿದ್ದಾರೆ. ಕಳೆದ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಅವರಿಗೆ ಗೆಲ್ಲೋಕೆ ಸಾಧ್ಯವಾಗಿರಲಿಲ್ಲ. ಆದರೆ, ಈ ಬಾರಿ ಅವರ ಪಕ್ಷದಿಂದ ಸ್ಪರ್ಧಿಸಿದ ಎಲ್ಲಾ 21 ಸ್ಥಾನಗಳಲ್ಲಿ ಅವರಿಗೆ ಗೆಲುವು ಸಿಕ್ಕಿದೆ. ಅವರು ಸಂಭಾವನೆ ವಿಚಾರದಲ್ಲಿ ಈಗ ಮಾತನಾಡಿದ್ದಾರೆ. ತಮಗೆ ಸರ್ಕಾರ ನೀಡುವ ಸಂಬಳದಲ್ಲಿ ಅಷ್ಟೂ ಹಣವನ್ನು ಪಡೆಯೋದಾಗಿ ಪವನ್ ಕಲ್ಯಾಣ್  ಹೇಳಿದ್ದಾರೆ. ಇದಕ್ಕೆ ಕಾರಣ ಕೂಡ ನೀಡಿದ್ದಾರೆ.

ಪವನ್ ಕಲ್ಯಾಣ್ ಅವರು ಪ್ರತಿ ಚಿತ್ರಕ್ಕೆ ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಅವರಿಗೆ ಬೇರೆ ಬೇರೆ ಮೂಲಗಳಿಂದ ಹಣ ಬರುತ್ತದೆ. ಆದಾಗ್ಯೂ ಅವರು ಸಂಬಳ ಪಡೆಯೋದಾಗಿ ಹೇಳಿದ್ದಾರೆ.  ‘ನಾನು ನನ್ನ ಸಂಪೂರ್ಣ ಸಂಭಾವನೆಯನ್ನು ಪಡೆಯುತ್ತೇನೆ. ನಾನು ಸಾರ್ವಜನಿಕರ ತೆರಿಗೆ ಹಣವನ್ನು ಸಂಭಾವನೆಯಾಗಿ ಪಡೆಯುತ್ತಿದ್ದೇನೆ ಅನ್ನೋದು ನನಗೆ ನೆನಪಾಗುತ್ತಿರಬೇಕು. ನಾನು ಖರ್ಚು ಮಾಡುವ ಪ್ರತಿ ರೂಪಾಯಿಗೂಜ ವಾಬ್ದಾರನಾಗಿರಲು ಬಯಸುತ್ತೇನೆ. ಹೀಗಾಗಿ ಪೂರ್ತಿ ಸಂಭಾವನೆ ಪಡೆಯುತ್ತೇನೆ. ಅವರ ಹಣವನ್ನು ಬಳಸಿದ್ದಕ್ಕಾಗಿ ನನ್ನನ್ನು ಜನರು ಪ್ರಶ್ನಿಸಬೇಕೆಂದು ನಾನು ಬಯಸುತ್ತೇನೆ’ ಎಂದಿದ್ದಾರೆ ಅವರು.

‘ಜವಾಬ್ದಾರಿಯುತ ಸರ್ಕಾರ ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ತೋರಿಸಲು ನಾನು ಬಯಸುತ್ತೇನೆ. ನಾನು ಆ ಬದಲಾವಣೆಯನ್ನು ತರಬೇಕಿದೆ. ನಿಜವಾದ ಶಾಸಕರು ಹೇಗೆ ಇರುತ್ತಾರೆ ಮತ್ತು ನಿಜವಾದ ನಾಯಕರಾಗುವುದು ಹೇಗೆ ಎಂಬುದನ್ನು ತೋರಿಸಬೇಕಿದೆ’ ಎಂದಿದ್ದಾರೆ ಪವನ್ ಕಲ್ಯಾಣ್.

ಇದನ್ನೂ ಓದಿ: ಈಗ ಅಪ್ಪಿ ಮುದ್ದಾಡುತ್ತಿರುವ ಚಿರಂಜೀವಿ-ಪವನ್ ಕಲ್ಯಾಣ್ ಹಿಂದೊಮ್ಮೆ ಕಿತ್ತಾಡಿಕೊಂಡಿದ್ದು ನೆನಪಿದೆಯೇ?

ಟಿಡಿಪಿ ನೇತೃತ್ವದ ಸಂಪುಟದಲ್ಲಿ ಪವನ್ ಕಲ್ಯಾಣ್ ಯಾವ ಖಾತೆಯನ್ನು ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡಲು ಅಭಿಮಾನಿಗಳು ಮತ್ತು ಪ್ರೇಕ್ಷಕರು ಕಾಯುತ್ತಿದ್ದಾರೆ. ಶಾಸಕರ ವೇತನ ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತದೆ. ಆಂಧ್ರ ಪ್ರದೇಶದಲ್ಲಿ ಶಾಸಕರಿಗೆ ತಿಂಗಳ ಸಂಭಾವನೆ 1,25,000 ಇದೆ ಎನ್ನಲಾಗಿದೆ. ಇದರ ಜೊತೆಗೆ ಇತರ ಭತ್ಯೆಗಳು ಕೂಡ ಸಿಗುತ್ತವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:01 pm, Mon, 10 June 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?