‘ಸರ್ಕಾರ ಕೊಡೋ ಸಂಬಳದಲ್ಲಿ ಒಂದು ರೂಪಾಯಿನೂ ಬಿಡಲ್ಲ’; ಪವನ್ ಕಲ್ಯಾಣ್

ಪವನ್ ಕಲ್ಯಾಣ್ ಅವರು ಪ್ರತಿ ಚಿತ್ರಕ್ಕೆ ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಅವರಿಗೆ ಬೇರೆ ಬೇರೆ ಮೂಲಗಳಿಂದ ಹಣ ಬರುತ್ತದೆ. ಆದಾಗ್ಯೂ ಅವರು ಸಂಬಳ ಪಡೆಯೋದಾಗಿ ಹೇಳಿದ್ದಾರೆ. ಇದಕ್ಕೆ ಕಾರಣ ಕೂಡ ನೀಡಿದ್ದಾರೆ.

 ‘ಸರ್ಕಾರ ಕೊಡೋ ಸಂಬಳದಲ್ಲಿ ಒಂದು ರೂಪಾಯಿನೂ ಬಿಡಲ್ಲ’; ಪವನ್ ಕಲ್ಯಾಣ್
ಪವನ್ ಕಲ್ಯಾಣ್
Follow us
ರಾಜೇಶ್ ದುಗ್ಗುಮನೆ
|

Updated on:Jun 11, 2024 | 1:49 PM

ಪವನ್ ಕಲ್ಯಾಣ್ (Pawan Kalyan) ಅವರು ಈ ಬಾರಿ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಕಂಡಿದ್ದಾರೆ. ಕಳೆದ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಅವರಿಗೆ ಗೆಲ್ಲೋಕೆ ಸಾಧ್ಯವಾಗಿರಲಿಲ್ಲ. ಆದರೆ, ಈ ಬಾರಿ ಅವರ ಪಕ್ಷದಿಂದ ಸ್ಪರ್ಧಿಸಿದ ಎಲ್ಲಾ 21 ಸ್ಥಾನಗಳಲ್ಲಿ ಅವರಿಗೆ ಗೆಲುವು ಸಿಕ್ಕಿದೆ. ಅವರು ಸಂಭಾವನೆ ವಿಚಾರದಲ್ಲಿ ಈಗ ಮಾತನಾಡಿದ್ದಾರೆ. ತಮಗೆ ಸರ್ಕಾರ ನೀಡುವ ಸಂಬಳದಲ್ಲಿ ಅಷ್ಟೂ ಹಣವನ್ನು ಪಡೆಯೋದಾಗಿ ಪವನ್ ಕಲ್ಯಾಣ್  ಹೇಳಿದ್ದಾರೆ. ಇದಕ್ಕೆ ಕಾರಣ ಕೂಡ ನೀಡಿದ್ದಾರೆ.

ಪವನ್ ಕಲ್ಯಾಣ್ ಅವರು ಪ್ರತಿ ಚಿತ್ರಕ್ಕೆ ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಅವರಿಗೆ ಬೇರೆ ಬೇರೆ ಮೂಲಗಳಿಂದ ಹಣ ಬರುತ್ತದೆ. ಆದಾಗ್ಯೂ ಅವರು ಸಂಬಳ ಪಡೆಯೋದಾಗಿ ಹೇಳಿದ್ದಾರೆ.  ‘ನಾನು ನನ್ನ ಸಂಪೂರ್ಣ ಸಂಭಾವನೆಯನ್ನು ಪಡೆಯುತ್ತೇನೆ. ನಾನು ಸಾರ್ವಜನಿಕರ ತೆರಿಗೆ ಹಣವನ್ನು ಸಂಭಾವನೆಯಾಗಿ ಪಡೆಯುತ್ತಿದ್ದೇನೆ ಅನ್ನೋದು ನನಗೆ ನೆನಪಾಗುತ್ತಿರಬೇಕು. ನಾನು ಖರ್ಚು ಮಾಡುವ ಪ್ರತಿ ರೂಪಾಯಿಗೂಜ ವಾಬ್ದಾರನಾಗಿರಲು ಬಯಸುತ್ತೇನೆ. ಹೀಗಾಗಿ ಪೂರ್ತಿ ಸಂಭಾವನೆ ಪಡೆಯುತ್ತೇನೆ. ಅವರ ಹಣವನ್ನು ಬಳಸಿದ್ದಕ್ಕಾಗಿ ನನ್ನನ್ನು ಜನರು ಪ್ರಶ್ನಿಸಬೇಕೆಂದು ನಾನು ಬಯಸುತ್ತೇನೆ’ ಎಂದಿದ್ದಾರೆ ಅವರು.

‘ಜವಾಬ್ದಾರಿಯುತ ಸರ್ಕಾರ ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ತೋರಿಸಲು ನಾನು ಬಯಸುತ್ತೇನೆ. ನಾನು ಆ ಬದಲಾವಣೆಯನ್ನು ತರಬೇಕಿದೆ. ನಿಜವಾದ ಶಾಸಕರು ಹೇಗೆ ಇರುತ್ತಾರೆ ಮತ್ತು ನಿಜವಾದ ನಾಯಕರಾಗುವುದು ಹೇಗೆ ಎಂಬುದನ್ನು ತೋರಿಸಬೇಕಿದೆ’ ಎಂದಿದ್ದಾರೆ ಪವನ್ ಕಲ್ಯಾಣ್.

ಇದನ್ನೂ ಓದಿ: ಈಗ ಅಪ್ಪಿ ಮುದ್ದಾಡುತ್ತಿರುವ ಚಿರಂಜೀವಿ-ಪವನ್ ಕಲ್ಯಾಣ್ ಹಿಂದೊಮ್ಮೆ ಕಿತ್ತಾಡಿಕೊಂಡಿದ್ದು ನೆನಪಿದೆಯೇ?

ಟಿಡಿಪಿ ನೇತೃತ್ವದ ಸಂಪುಟದಲ್ಲಿ ಪವನ್ ಕಲ್ಯಾಣ್ ಯಾವ ಖಾತೆಯನ್ನು ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡಲು ಅಭಿಮಾನಿಗಳು ಮತ್ತು ಪ್ರೇಕ್ಷಕರು ಕಾಯುತ್ತಿದ್ದಾರೆ. ಶಾಸಕರ ವೇತನ ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತದೆ. ಆಂಧ್ರ ಪ್ರದೇಶದಲ್ಲಿ ಶಾಸಕರಿಗೆ ತಿಂಗಳ ಸಂಭಾವನೆ 1,25,000 ಇದೆ ಎನ್ನಲಾಗಿದೆ. ಇದರ ಜೊತೆಗೆ ಇತರ ಭತ್ಯೆಗಳು ಕೂಡ ಸಿಗುತ್ತವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:01 pm, Mon, 10 June 24

ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ಸತೀಶ್ ಜಾರಕಿಹೊಳಿಯದ್ದೇ ಫುಲ್ ಹವಾ..!
ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ಸತೀಶ್ ಜಾರಕಿಹೊಳಿಯದ್ದೇ ಫುಲ್ ಹವಾ..!
ರಾಜ್ಯಾಧ್ಯಕ್ಷ ರೇಸ್​ನಲ್ಲಿ ಸೋಮಣ್ಣ ಇದ್ದಾರಾ? ಸಿದ್ದೇಶ್ವರ್ ಏನಂದ್ರು ನೋಡಿ
ರಾಜ್ಯಾಧ್ಯಕ್ಷ ರೇಸ್​ನಲ್ಲಿ ಸೋಮಣ್ಣ ಇದ್ದಾರಾ? ಸಿದ್ದೇಶ್ವರ್ ಏನಂದ್ರು ನೋಡಿ
ಬಿಗ್ ಬಾಸ್​ನಿಂದ 50 ಲಕ್ಷ ಇನ್ನೂ ಬಂದಿಲ್ಲ: ವೇದಿಕೆಯಲ್ಲೇ ಹೇಳಿದ ಹನುಮಂತ
ಬಿಗ್ ಬಾಸ್​ನಿಂದ 50 ಲಕ್ಷ ಇನ್ನೂ ಬಂದಿಲ್ಲ: ವೇದಿಕೆಯಲ್ಲೇ ಹೇಳಿದ ಹನುಮಂತ
ಗುಡ್ಡದ ತುತ್ತ ತುದಿಯಲ್ಲಿ ಕಾಡ್ಗಿಚ್ಚು: ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ಗುಡ್ಡದ ತುತ್ತ ತುದಿಯಲ್ಲಿ ಕಾಡ್ಗಿಚ್ಚು: ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ಜಮ್ಮು-ಕಾಶ್ಮೀರದ ಸೋನಾಮಾರ್ಗ್​ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ
ಜಮ್ಮು-ಕಾಶ್ಮೀರದ ಸೋನಾಮಾರ್ಗ್​ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ
Weekly Horoscope: ಫೆಬ್ರವರಿ 10 ರಿಂದ 16ರವರೆಗಿನ ವಾರ ಭವಿಷ್ಯ
Weekly Horoscope: ಫೆಬ್ರವರಿ 10 ರಿಂದ 16ರವರೆಗಿನ ವಾರ ಭವಿಷ್ಯ
Daily Devotional: ಗುರು ನೇರ ಸಂಚಾರ ಈ ರಾಶಿಯವರಿಗೆ ಅದೃಷ್ಟ
Daily Devotional: ಗುರು ನೇರ ಸಂಚಾರ ಈ ರಾಶಿಯವರಿಗೆ ಅದೃಷ್ಟ
Daily Horoscope: ಈ ರಾಶಿಯವರಿಗೆ ಆರ್ಥಿಕ ವಿಚಾರದಲ್ಲಿ ಕಲಹ ಸಾಧ್ಯತೆ
Daily Horoscope: ಈ ರಾಶಿಯವರಿಗೆ ಆರ್ಥಿಕ ವಿಚಾರದಲ್ಲಿ ಕಲಹ ಸಾಧ್ಯತೆ
ಸೆಲೆಬ್ರಿಟಿ ಕ್ರಿಕೆಟ್ ಲೀಗ್: ಕಿಚ್ಚ ಸುದೀಪ್ ನಾಯಕತ್ವದ ಪಡೆ ಹೇಗಿದೆ ನೋಡಿ
ಸೆಲೆಬ್ರಿಟಿ ಕ್ರಿಕೆಟ್ ಲೀಗ್: ಕಿಚ್ಚ ಸುದೀಪ್ ನಾಯಕತ್ವದ ಪಡೆ ಹೇಗಿದೆ ನೋಡಿ
ಟಿವಿ9 ಜೊತೆ ಕನ್ನಡದಲ್ಲೇ ಮಾತು ಆರಂಭಿಸಿದ ಚಾಹಲ್; ವಿಡಿಯೋ ನೋಡಿ
ಟಿವಿ9 ಜೊತೆ ಕನ್ನಡದಲ್ಲೇ ಮಾತು ಆರಂಭಿಸಿದ ಚಾಹಲ್; ವಿಡಿಯೋ ನೋಡಿ