AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಕ್ರೋಚ್ ಬೆಂಬಲಿಸಿದ ಪ್ರಕಾಶ್ ರಾಜ್​​ಗೆ ಪವನ್ ಕಲ್ಯಾಣ್ ಕೌಂಟರ್

ಇತ್ತೀಚೆಗೆ ಆರಂಭವಾದ 'ಕಾಕ್ರೋಚ್ ಜನತಾ ಪಾರ್ಟಿ' ಚಳವಳಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಈ ಚಳವಳಿಯ ವಿರುದ್ಧ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ತೀವ್ರ ವಾಗ್ದಾಳಿ ನಡೆಸಿದ್ದು, ಇದು ದೇಶವನ್ನು ಒಡೆಯುವ ಯತ್ನವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಬಲಿಗರನ್ನು 'ಸಂಕುಚಿತ ಮನಸ್ಸಿನವರು' ಎಂದಿದ್ದಾರೆ. ಇದಕ್ಕೆ ಪ್ರತ್ಯುತ್ತರವಾಗಿ, ಈ ಚಳವಳಿಯನ್ನು ಬೆಂಬಲಿಸುತ್ತಿರುವ ಪ್ರಕಾಶ್ ರಾಜ್, ತಮ್ಮ ಹಕ್ಕುಗಳಿಗಾಗಿ ಹೋರಾಡುವುದಾಗಿ ಹೇಳಿದ್ದಾರೆ.

ಕಾಕ್ರೋಚ್ ಬೆಂಬಲಿಸಿದ ಪ್ರಕಾಶ್ ರಾಜ್​​ಗೆ ಪವನ್ ಕಲ್ಯಾಣ್ ಕೌಂಟರ್
ಪ್ರಕಾಶ್ ರಾಜ್​-ಪವನ್
ರಾಜೇಶ್ ದುಗ್ಗುಮನೆ
|

Updated on: Jun 16, 2026 | 8:45 AM

Share

ಇತ್ತೀಚೆಗೆ ಆರಂಭ ಆಗಿರೋ ‘ಕಾಕ್ರೋಚ್ ಜನತಾ ಪಾರ್ಟಿ’ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಾರ್ವಜನಿಕರಿಂದಲೂ ಇದಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಕೆಲವರು ಇದನ್ನು ಸಂಚು ಎಂದು ಕರೆದಿದ್ದಾರೆ. ಈಗ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಈ ಚಳವಳಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಸಂಘಟನೆ ಮತ್ತು ಇದನ್ನು ಬೆಂಬಲಿಸುವವರು ದೇಶವನ್ನು ಒಡೆಯುವ ಮತ್ತು ಭಾರತದ ಸಮಗ್ರತೆಯನ್ನು ದುರ್ಬಲಗೊಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ. ಇತ್ತೀಚೆಗೆ ಪ್ರಕಾಶ್ ರಾಜ್ ಅವರು  (Prakash Raj) ‘ಕಾಕ್ರೋಚ್ ಜನತಾ ಪಾರ್ಟಿ’ಯನ್ನು ಬೆಂಬಲಿಸಿದ್ದರು. ಈ ಬೆನ್ನಲ್ಲೇ ಪವನ್ ಕಲ್ಯಾಣ್ ಈ ಹೇಳಿಕೆ ನೀಡಿರುವುದು ವಿಶೇಷ.

ದೆಹಲಿಯಲ್ಲಿ ನಡೆದ ಜನಸೇನಾ ಪಕ್ಷದ (JSP) ಸಭೆಯಲ್ಲಿ ಮಾತನಾಡಿದ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್, ‘ಇತ್ತೀಚೆಗೆ ನೀವು ಈ ಜಿರಳೆಗಳ (ಕಾಕ್ರೋಚ್) ಬಗ್ಗೆ ಕೇಳಿರಬಹುದು. ಒಂದು ಸಣ್ಣ ಇರುವೆ ಕೂಡ ದೊಡ್ಡ ಹಾವನ್ನು ಕೊಲ್ಲಬಲ್ಲದು’ ಎಂದಿದ್ದಾರೆ.

ಬೆಂಬಲಿಗರನ್ನು ‘ಸಂಕುಚಿತ ಮನಸ್ಸಿನವರು’ ಎಂದಿದ್ದೇಕೆ?

‘ದೇಶದ ರಾಜಕಾರಣದ ಆಳ ಗೊತ್ತಿಲ್ಲದ ಕೆಲವು ಸಂಕುಚಿತ ಮನಸ್ಸಿನ ಜನರು, ದೇಶವನ್ನು ಒಡೆಯುವ ಆಲೋಚನೆಗಳ ಮೂಲಕ ಭಾರತದ ಸಮಗ್ರತೆಯನ್ನು ಹಾಳು ಮಾಡಲು ನೋಡುತ್ತಿದ್ದಾರೆ. ನಾವು ಇಂತಹ ಆಲೋಚನೆಗಳಿಗೆ ಬಲಿಯಾಗಬಾರದು. ಸಣ್ಣ ಬುದ್ಧಿಯ ಕೋಟ್ಯಂತರ ಜನರು ಒಂದಾದರೆ ಅದರ ಪ್ರಭಾವ ದೊಡ್ಡದಾಗಿರುತ್ತದೆ, ಅದು ಒಳ್ಳೆಯದಕ್ಕಾದರೂ ಆಗಬಹುದು ಅಥವಾ ಕೆಟ್ಟದ್ದಕ್ಕಾದರೂ ಆಗಬಹುದು. ಹಾಗಾಗಿ ನಾವು ಇದರ ವಿರುದ್ಧ ಹೋರಾಡಬೇಕೇ ಹೊರತು, ಇದರಲ್ಲಿ ಭಾಗಿಯಾಗಬಾರದು’ ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ.

ಇದನ್ನೂ ಓದಿ: ‘ಗಾಳಿ ಸುದ್ದಿ ನಂಬಬೇಡಿ’; ಧರ್ಮಸ್ಥಳ ಪ್ರಕರಣದ ಆರೋಪಕ್ಕೆ ಪ್ರಕಾಶ್ ರಾಜ್ ಪ್ರತಿಕ್ರಿಯೆ

ಇದಕ್ಕೂ ಮುನ್ನ ಸುದ್ದಿಸಂಸ್ಥೆ ‘ಎಎನ್‌ಐ’ ಜೊತೆ ಮಾತನಾಡಿದ್ದ ಅವರು, ‘ಅವರಿಗೆ ಯಾಕೆ ಇಷ್ಟೊಂದು ಕೋಪ ಇದೆಯೋ ಗೊತ್ತಿಲ್ಲ. ಜಿರಳೆಗಳು ಯಾವಾಗಲೂ ಚರಂಡಿಯಲ್ಲೇ ಇರುತ್ತವೆ. ಅಂದರೆ ಬಹುಶಃ ಅವರ ನೋವು ಏನೆಂದು ನನಗೆ ಅರ್ಥವಾಗುತ್ತದೆ’ಎಂದು ಲೇವಡಿ ಮಾಡಿದ್ದರು.

ಪ್ರಕಾಶ್ ರಾಜ್ ಹೇಳಿದ್ದೇನು?

ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಪ್ರಕಾಶ್ ರಾಜ್, ‘ಪ್ರತಿಭಟನೆ ಮಾಡುವವರನ್ನು ನೀವು ಪಾಕಿಸ್ತಾನಿಗಳು ಎಂದರೂ ನಮಗೆ ಭಯವಿಲ್ಲ, ಭಯೋತ್ಪಾದಕರು ಎಂದರೂ ಹೆದರುವುದಿಲ್ಲ, ಜಿರಳೆಗಳು (ಕಾಕ್ರೋಚ್) ಎಂದು ಕರೆದರೂ ನಾವು ಭಯ ವಿಚಲಿರತಾಗುವುದಿಲ್ಲ. ಜನರಿಂದ ಆಯ್ಕೆಯಾದ ನಾಯಕರು ತಮ್ಮ ಕೆಲಸವನ್ನು ಸರಿಯಾಗಿ ಮಾಡಬೇಕು. ನೀವು ರಾಜಕೀಯ ಮಾಡುವುದನ್ನು ಬಿಟ್ಟು ನಮಗೆ ಕೆಲಸ ಕೊಡಿ. ಈ ದೇಶದ ಯುವಕರು ತಮ್ಮ ಹಕ್ಕಿಗಾಗಿ ಹೋರಾಡಲು ನಿರ್ಧರಿಸಿದ್ದಾರೆ’ ಎಂದು ಪ್ರಕಾಶ್ ರಾಜ್ ಆಕ್ರೋಶ ಹೊರಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ