AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಯಲ್ಲಿ ಬೆಂಕಿ ಅವಘಡ, ಪವನ್ ಕಲ್ಯಾಣ್ ಪುತ್ರನಿಗೆ ತೀವ್ರ ಗಾಯ

Pawan Kalyan: ಪವನ್ ಕಲ್ಯಾಣ್ ಕುಟುಂಬದಲ್ಲಿ ಸಣ್ಣ ಅವಘಡ ನಡೆದಿದೆ. ಪವನ್ ಕಲ್ಯಾಣ್ ಅವರ ಕಿರಿಯ ಮಗ ಮಾರ್ಕ್ ಶಂಕರ್ ವಿದ್ಯಾಭ್ಯಾಸ ಮಾಡುತ್ತಿರುವ ಶಾಲೆಯಲ್ಲಿ ಬೆಂಕಿ ಅವಘಡ ನಡೆದಿದ್ದು, ಘಟನೆಯಲ್ಲಿ ಪವನ್ ಪುತ್ರನಿಗೆ ತೀವ್ರ ಸುಟ್ಟಗಾಯಗಳಾಗಿದ್ದು, ಉಸಿರಾಟದ ಸಮಸ್ಯೆ ಸಹ ಕಾಣಿಸಿಕೊಂಡಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಶಾಲೆಯಲ್ಲಿ ಬೆಂಕಿ ಅವಘಡ, ಪವನ್ ಕಲ್ಯಾಣ್ ಪುತ್ರನಿಗೆ ತೀವ್ರ ಗಾಯ
Pawan Kalyan
ಮಂಜುನಾಥ ಸಿ.
|

Updated on:Apr 08, 2025 | 11:12 AM

Share

ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಪುತ್ರನಿಗೆ ಅವಘಡವೊಂದರಲ್ಲಿ ಗಾಯಗಳಾಗಿವೆ. ಪವನ್ ಕಲ್ಯಾಣ್ ಕಿರಿಯ ಪುತ್ರ ಮಾರ್ಕ್ ಶಂಕರ್ ಕಲಿಯುತ್ತಿರುವ ಶಾಲೆಯಲ್ಲಿ ನಡೆದ ಬೆಂಕಿ ಅವಘಡ ನಡೆದಿದ್ದು, ಮಾರ್ಕ್​ಗೆ ತೀವ್ರ ಸುಟ್ಟ ಗಾಯಗಳಾಗಿವೆ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಪವನ್ ಕಲ್ಯಾಣ್ ಸಿಂಗಪುರಕ್ಕೆ ತೆರಳಿದ್ದು, ಪುತ್ರನ ಆರೈಕೆಯಲ್ಲಿ ತೊಡಗಲಿದ್ದಾರೆ.

ಪವನ್ ಕಲ್ಯಾಣ್ ಕಿರಿಯ ಪುತ್ರ ಮಾರ್ಕ್, ಸಿಂಗಪುರದ ಶಾಲೆಯಲ್ಲಿ ಕಲಿಯುತ್ತಿದ್ದಾರೆ. ಅವರ ಪತ್ನಿಯೂ ಸಹ ಸಿಂಗಪುರದಲ್ಲಿಯೇ ನೆಲೆಸಿದ್ದಾರೆ. ಪವನ್ ಕಲ್ಯಾಣ್ ಅವರು ಆಗಾಗ್ಗೆ ಸಿಂಗಪುರಕ್ಕೆ ಹೋಗಿ ಬರುತ್ತಿರುತ್ತಾರೆ. ಇತ್ತೀಚೆಗೆ ಮಾರ್ಕ್ ಶಂಕರ್ ಕಲಿಯುತ್ತಿದ್ದ ಶಾಲೆಯಲ್ಲಿ ಬೆಂಕಿ ಅವಘಡ ನಡೆದಿದ್ದು, ಅವಘಡದಲ್ಲಿ ಮಾರ್ಕ್​ರ ಕಾಲು, ಬೆನ್ನು, ಕೈಗಳಿಗೆ ತೀವ್ರ ಸುಟ್ಟ ಗಾಯಗಳಾಗಿವೆ. ಇದರ ಜೊತೆಗೆ ಅತಿಯಾದ ಹೊಗೆಯಿಂದಾಗಿ ಉಸಿರಾಟದ ಸಮಸ್ಯೆಯೂ ಸಹ ಮಾರ್ಕ್​ಗೆ ಕಾಣಿಸಿಕೊಂಡಿದ್ದು, ಮಾರ್ಕ್ ಶಂಕರ್ ಅನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪವನ್ ಕಲ್ಯಾಣ್ ಮೂರನೇ ಪತ್ನಿ ಅನ್ನಾ ಲೆಜ್ನೇವಾ ಅವರಿಗೆ ಇಬ್ಬರು ಮಕ್ಕಳು ಮಾರ್ಕ್ ಶಂಕರ್ ಮತ್ತು ಪೊಲೇನಾ ಅಂಜನಾ. ಈ ಇಬ್ಬರೂ ಸಹ ಸಿಂಗಪುರದಲ್ಲಿ ನೆಲೆಸಿದ್ದಾರೆ. ಅಲ್ಲಿಯೇ ಶಾಲೆ ಕಲಿಯುತ್ತಿದ್ದಾರೆ. ಪವನ್ ಕಲ್ಯಾಣ್ ಅವರ ಎರಡನೇ ಪತ್ನಿ ರೇಣುಕಾ ಅವರಿಗೂ ಇಬ್ಬರು ಮಕ್ಕಳು. ಅಕಿರಾ ನಂದ ಮತ್ತು ಆದ್ಯಾ, ಅಕಿರಾ ನಂದ ಸಿನಿಮಾ ಹೀರೋ ಆಗಲು ಸಜ್ಜಾಗಿದ್ದಾರೆ. ಈಗಾಗಲೇ ಅವರು ಪವನ್ ಕಲ್ಯಾಣ್ ನಟನೆಯ ಇನ್ನೂ ಬಿಡುಗಡೆ ಆಗದ ‘ಓಜಿ’ ಸಿನಿಮಾನಲ್ಲಿ ನಟಿಸಿದ್ದಾರೆ ಎನ್ನಲಾಗುತ್ತಿದೆ. ಪವನ್ ಕಲ್ಯಾಣ್ ಅವರ ಮೊದಲೇ ಪತ್ನಿ ನಂದಿನಿಗೆ ಮಕ್ಕಳಾಗಿರಲಿಲ್ಲ.

ಇದನ್ನೂ ಓದಿ:ಶೂಟ್​ಗೆ ಬರದ ಪವನ್ ಕಲ್ಯಾಣ್; ಆ ಸಿನಿಮಾ ಬಿಟ್ಟು ಸಲ್ಮಾನ್ ಖಾನ್ ಮೊರೆ ಹೋದ ನಿರ್ದೇಶಕ

ರಾಜಕೀಯದಲ್ಲಿ ಬ್ಯುಸಿಯಾಗಿರುವ ಪವನ್ ಕಲ್ಯಾಣ್ ಹೆಚ್ಚಿನ ಸಮಯ ಆಂಧ್ರದಲ್ಲಿಯೇ ಕಳೆಯುತ್ತಾರೆ. ತಿಂಗಳಿಗೆ, ವಾರಕ್ಕೆ ಒಮ್ಮೆ ಅವರು ಸಿಂಗಪುರಕ್ಕೆ ಹೋಗಿ ಮಕ್ಕಳು, ಕುಟುಂಬವನ್ನು ಭೇಟಿ ಆಗಿ ಬರುತ್ತಾರೆ ಎನ್ನಲಾಗುತ್ತದೆ. ಪವನ್ ಕಲ್ಯಾಣ್, ರಾಜಕೀಯದಲ್ಲಿ ಸಕ್ರಿಯರಾದ ಬಳಿಕ ಸಿನಿಮಾಗಳಲ್ಲಿ ನಟಿಸುವುದು ಬಹಳ ಕಡಿಮೆ ಮಾಡಿದ್ದಾರೆ. ಈ ಮೊದಲು ಪ್ರಾರಂಭಿಸಿದ್ದ ಕೆಲ ಸಿನಿಮಾಗಳನ್ನು ಪೂರ್ಣಗೊಳಿಸುತ್ತಿದ್ದಾರೆ. ಅವುಗಳಲ್ಲಿ ‘ಹರಿಹರ ವೀರ ಮಲ್ಲು’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಅದರ ಬಳಿಕ ‘ಓಜಿ’ ಸಿನಿಮಾ ತೆರೆಗೆ ಬರಲಿದೆ. ‘ಉಸ್ತಾದ್ ಗಬ್ಬರ್’ ಸಿನಿಮಾದ ಚಿತ್ರೀಕರಣ ಇನ್ನಷ್ಟೆ ಆರಂಭ ಆಗಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:11 am, Tue, 8 April 25

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು