AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುರ್ಜ್ ಖಲೀಫಾ ಮೇಲೆ ಪವನ್ ಕಲ್ಯಾಣ್, ತೆಲುಗಿಗೆ ಇದೇ ಮೊದಲು

Pawan Kalyan: ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾ ಶುರುವಾಗಿ ಐದು ವರ್ಷಗಳ ಬಳಿಕ ಕೊನೆಗೂ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರವನ್ನು ಅದ್ದೂರಿಯಾಗಿ ಮಾಡಲು ನಿರ್ಧರಿಸಲಾಗಿದ್ದು, ಸಿನಿಮಾದ ಟೀಸರ್ ಅನ್ನು ಬುರ್ಜ್ ಖಲೀಫಾ ಮೇಲೆ ಪ್ರದರ್ಶಿಸಲಾಗುತ್ತಿದೆ. ತೆಲುಗು ಸಿನಿಮಾದ ಟೀಸರ್ ಬುರ್ಜ್ ಖಲೀಫಾ ಮೇಲೆ ಪ್ರದರ್ಶನಗೊಳ್ಳುತ್ತಿರುವುದು ಇದೇ ಮೊದಲು.

ಬುರ್ಜ್ ಖಲೀಫಾ ಮೇಲೆ ಪವನ್ ಕಲ್ಯಾಣ್, ತೆಲುಗಿಗೆ ಇದೇ ಮೊದಲು
Pawan Kalyan
ಮಂಜುನಾಥ ಸಿ.
|

Updated on: May 17, 2025 | 10:34 PM

Share

ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ (Pawan Kalyan) ಚಿತ್ರರಂಗಕ್ಕೆ ಮರಳಿದ್ದು ಅವರ ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾ ಕೊನೆಗೂ ಬಿಡುಗಡೆ ಆಗುತ್ತಿದೆ. ಹಲವು ಅಡೆ-ತಡೆಗಳನ್ನು ಎದುರಿಸಿದ ಬಳಿಕ ‘ಹರಿ ಹರ ವೀರ ಮಲ್ಲು’ ಸಿನಿಮಾ ಜೂನ್ 12 ರಂದು ಬಿಡುಗಡೆ ಆಗುತ್ತಿದ್ದು, ಸಿನಿಮಾದ ಪ್ರಚಾರವನ್ನು ಬಲು ಜೋರಾಗಿ ಮಾಡಲು ಚಿತ್ರತಂಡ ನಿರ್ಧಾರ ಮಾಡಿದೆ. ಭಿನ್ನವಾಗಿ ಮತ್ತು ಅದ್ಧೂರಿಯಾಗಿ ಇರಲಿದೆ ‘ಹರಿ ಹರ ವೀರ ಮಲ್ಲು’ ಸಿನಿಮಾದ ಪ್ರಚಾರ.

‘ಹರಿ ಹರ ವೀರ ಮಲ್ಲು’ ಸಿನಿಮಾದ ಟ್ರೈಲರ್ ಅನ್ನು ದುಬೈನ ಬುರ್ಜ್ ಖಲೀಫಾ ಮೇಲೆ ಬಿಡುಗಡೆ ಮಾಡಲಾಗುತ್ತಿದೆ. ತೆಲುಗಿನ ಯಾವುದೇ ಸಿನಿಮಾದ ಟೀಸರ್ ಬುರ್ಜ್ ಖಲೀಫಾ ಮೇಲೆ ಪ್ರದರ್ಶಿತಗೊಂಡಿರಲಿಲ್ಲ. ‘ಹರಿ ಹರ ವೀರ ಮಲ್ಲು’ ಸಿನಿಮಾ ಮೊದಲು ಎನಿಸಿಕೊಳ್ಳಲಿದೆ. ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾದ ಟೀಸರ್ ಅನ್ನು ಬುರ್ಜ್ ಖಲೀಫಾ ಮೇಲೆ ಪ್ರದರ್ಶಿಸಲಾಗಿತ್ತು. ಅದೇ ದಾರಿಯನ್ನು ಈಗ ಪವನ್ ಕಲ್ಯಾಣ್ ಸಹ ಹಿಡಿದಿದ್ದಾರೆ.

ಆಂಧ್ರ ಡಿಸಿಎಂ ಆದ ಬಳಿಕ ಪವನ್ ರಾಜಕೀಯದಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿಬಿಟ್ಟಿದ್ದರು. ಹೀಗಾಗಿ ಸಿನಿಮಾಗಳಿಗೆ ಬ್ರೇಕ್ ಕೊಟ್ಟಿದ್ದರು. ಆದರೆ ‘ಹರಿ ಹರ ವೀರ ಮಲ್ಲು’ ಸಿನಿಮಾ ಚಿತ್ರೀಕರಣಕ್ಕೆ ತುಸು ಸಮಯ ನಿಗದಿಪಡಿಸಿ, ಸಿನಿಮಾ ಪೂರ್ತಿ ಮಾಡಿದ್ದಾರೆ. ಇದೀಗ ‘ಹರಿ ಹರ ವೀರ ಮಲ್ಲು’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸ ಭರದಿಂದ ಸಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಸಿನಿಪ್ರಿಯರಿಗೆ ಇಷ್ಟವಾಗಿವೆ. ಬಿಗ್ ಬಜೆಟ್ ತಯಾರಾಗಿರುವ ಹರಿ ಹರ ವೀರ ಮಲ್ಲು ಸಿನಿಮಾ ಜೂನ್ 12 ರಂದು ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ:ಪವನ್ ಕಲ್ಯಾಣ್ ಸಿನಿಮಾದಲ್ಲಿ ಜಪಾನಿನ ಸೂಪರ್ ಸ್ಟಾರ್ ನಟ

17ನೇ ಶತಮಾನದಲ್ಲಿ ಮೊಘಲ್ ಸಾಮ್ರಾಜ್ಯದ ವಿರುದ್ಧ ಹೋರಾಡಿದ ನಾಯಕನ ಪಾತ್ರದಲ್ಲಿ ಪವನ್ ಕಲ್ಯಾಣ್ ಮಿಂಚಿದ್ದಾರೆ. ಜ್ಯೋತಿ ಕೃಷ್ಣ ಮತ್ತು ಕ್ರಿಶ್ ಜಗರ್ಲಮುಡಿ ನಿರ್ದೇಶನ ಮಾಡಿದ್ದಾರೆ. ಬಾಬಿ ಡಿಯೋಲ್ ವಿಲನ್, ನಿಧಿ ಅಗರ್ವಾಲ್, ನರ್ಗಿಸ್ ಫಕ್ರಿ ಮತ್ತು ನೋರಾ ಫತೇಹಿ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ಮೆಗಾ ಸೂರ್ಯ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಎ. ದಯಾಕರ್ ರಾವ್ ಈ ಚಿತ್ರವನ್ನು ನಿರ್ಮಿಸಿದ್ದು, ಎ.ಎಂ. ರತ್ನಂ ಪ್ರಸ್ತುತಪಡಿಸುತ್ತಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನ, ಮನೋಜ್ ಪರಮಹಂಸ ಛಾಯಾಗ್ರಹಣ ಚಿತ್ರಕ್ಕಿದೆ.

ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮವನ್ನು ಆಯೋಜನೆ ಮಾಡಲು ಚಿತ್ರತಂಡ ಮುಂದಾಗಿದ್ದು ಈ ಕಾರ್ಯಕ್ರಮಕ್ಕೆ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಸಹ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?