AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆಗೆ ಬಳಿಕ ಬಿಡುಗಡೆ ಆಗಲಿದೆ ಪವನ್ ಕಲ್ಯಾಣ್ ಹೊಸ ಸಿನಿಮಾ

Pawan Kalyan: ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಗೆ ತಯಾರಾಗುತ್ತಿರುವ ಪವನ್ ಕಲ್ಯಾಣ್​ ಸಿನಿಮಾಗಳಿಂದಲೂ ದೂರವಾಗಿಲ್ಲ. ಅವರ ನಟನೆಯ ಹೊಸ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

ಚುನಾವಣೆಗೆ ಬಳಿಕ ಬಿಡುಗಡೆ ಆಗಲಿದೆ ಪವನ್ ಕಲ್ಯಾಣ್ ಹೊಸ ಸಿನಿಮಾ
ಮಂಜುನಾಥ ಸಿ.
|

Updated on: Feb 06, 2024 | 8:24 PM

Share

ತೆಲುಗು ಚಿತ್ರರಂಗದ (Tollywood) ಟಾಪ್ ನಟರಲ್ಲಿ ಒಬ್ಬರಾದ ಪವನ್ ಕಲ್ಯಾಣ್ (Pawan Kalyan) ಈಗ ತಮ್ಮ ಸಂಪೂರ್ಣ ಗಮನ ಹಾಗೂ ಸಮಯವನ್ನು ರಾಜಕೀಯಕ್ಕೆ ಮೀಸಲಾಗಿರಿಸಿದ್ದಾರೆ. ಆಂಧ್ರ ಪ್ರದೇಶ ರಾಜಕೀಯದಲ್ಲಿ ಸಕ್ರಿಯವಾಗಿರುವ ಪವನ್ ಕಲ್ಯಾಣ್ ಕೆಲವೇ ತಿಂಗಳಲ್ಲಿ ನಡೆಯಲಿರುವ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಗೆ ತಯಾರಾಗುತ್ತಿದ್ದಾರೆ. ಇದರ ನಡುವೆ ಪವನ್ ಕಲ್ಯಾಣ್ ನಟಿಸಿರುವ ‘ಹರಿ ಹರ ವೀರಮಲ್ಲು’, ‘ಉಸ್ತಾದ್ ಭಗತ್ ಸಿಂಗ್’ ಹಾಗೂ ‘ಓಜಿ’ ಸಿನಿಮಾಗಳು ಬಿಡುಗಡೆಗೆ ರೆಡಿಯಾಗಿವೆ. ಇದೀಗ ಪವನ್ ನಟನೆಯ ಒಂದು ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ.

ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ ಕೆಲವೇ ತಿಂಗಳಲ್ಲಿ ನಡೆಯಲಿದೆ. ಚುನಾವಣೆ ಸಮೀಪಿಸಿದಾಗ ಪವನ್ ಕಲ್ಯಾಣ್​ರ ಸಿನಿಮಾ ಬಿಡುಗಡೆ ಮಾಡಲಾಗುತ್ತದೆ. ಆ ಮೂಲಕ ಸಿನಿಮಾವನ್ನು ಅವರ ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತದೆ ಎಂಬ ಚರ್ಚೆ ನಡೆಯುತ್ತಿತ್ತು. ಇದೀಗ ಪವನ್ ಕಲ್ಯಾಣ್​ರ ಹೊಸ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದ್ದು ಆಂಧ್ರದ ಚುನಾವಣೆ ಮುಗಿದ ಬಳಿಕ ಹೊಸ ಸಿನಿಮಾ ಬಿಡುಗಡೆಗೆ ಯೋಜನೆ ಮಾಡಲಾಗಿದೆ.

ಇದನ್ನೂ ಓದಿ:ಪವನ್ ಕಲ್ಯಾಣ್​ 4ನೇ ಮದುವೆಯಾಗ್ತಾರೆ, ರಾಜಕೀಯದಲ್ಲಿ ಏಳ್ಗೆಯಿಲ್ಲ: ವೇಣು ಸ್ವಾಮಿ ಭವಿಷ್ಯ

ಪವನ್ ಕಲ್ಯಾಣ್​ರ ‘ಓಜಿ’ ಸಿನಿಮಾ ಸೆಪ್ಟೆಂಬರ್ 27ರಂದು ಬಿಡುಗಡೆ ಆಗಲಿದೆ. ಗ್ಯಾಂಗ್​ಸ್ಟರ್ ಸಿನಿಮಾ ಇದಾಗಿದ್ದು ಸಿನಿಮಾನಲ್ಲಿ ಭೂಗತ ಲೋಕದ ಡಾನ್​ ಪಾತ್ರದಲ್ಲಿ ಪವನ್ ಕಲ್ಯಾಣ್ ನಟಿಸಿದ್ದಾರೆ. ಸಿನಿಮಾ ರೆಟ್ರೋ ಕತೆಯನ್ನು ಒಳಗೊಂಡಿದೆ. ಸಿನಿಮಾದ ಟೀಸರ್ ಒಂದು ಐದು ತಿಂಗಳ ಹಿಂದೆಯೇ ಬಿಡುಗಡೆ ಆಗಿತ್ತು, ಪ್ರೋಮೋನಲ್ಲಿ ಪವನ್ ಕಲ್ಯಾಣ್​ರ ಆಕ್ಷನ್ ಅವತಾರದ ಗ್ಲಿಂಪ್ಸ್​ ಅನ್ನು ತೋರಿಸಲಾಗಿತ್ತು.

‘ಓಜಿ’ ಸಿನಿಮಾವನ್ನು ಸುಜಿತ್ ನಿರ್ದೇಶನ ಮಾಡಿದ್ದಾರೆ. ಸುಜಿತ್ ಈ ಹಿಂದೆ ‘ರನ್ ರಾಜ ರನ್’ ಹಾಗೂ ಪ್ರಭಾಸ್ ನಟನೆಯ ‘ಸಾಹೋ’ ಸಿನಿಮಾ ನಿರ್ದೇಶನ ಮಾಡಿದ್ದರು. ಅವರ ಮೂರನೇ ಸಿನಿಮಾ ‘ಓಜಿ’. ‘ಆರ್​ಆರ್​ಆರ್’ ಸಿನಿಮಾ ನಿರ್ಮಾಣ ಮಾಡಿದ್ದ ಡಿವಿವಿ ದಯಾನಂದ್ ಅವರೇ ‘ಓಜಿ’ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಸಿನಿಮಾಕ್ಕೆ ಎಸ್​ಎಸ್ ತಮನ್ ಸಂಗೀತ ನೀಡಿದ್ದಾರೆ. ಸಿನಿಮಾದಲ್ಲಿ ಪ್ರಿಯಾಂಕಾ ಅರುಲ್ ಮೋಹನ್ ನಾಯಕಿಯಾಗಿ ನಟಿಸಿದ್ದಾರೆ. ಬಾಲಿವುಡ್ ನಟ ಇಮ್ರಾನ್ ಹಶ್ಮಿ ವಿಲನ್. ಪ್ರಕಾಶ್ ರೈ, ಶ್ರಿಯಾ ರೆಡ್ಡಿ ಇನ್ನೂ ಕೆಲವು ಜನಪ್ರಿಯ ನಟರು ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ