AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆಗೆ ಬಳಿಕ ಬಿಡುಗಡೆ ಆಗಲಿದೆ ಪವನ್ ಕಲ್ಯಾಣ್ ಹೊಸ ಸಿನಿಮಾ

Pawan Kalyan: ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಗೆ ತಯಾರಾಗುತ್ತಿರುವ ಪವನ್ ಕಲ್ಯಾಣ್​ ಸಿನಿಮಾಗಳಿಂದಲೂ ದೂರವಾಗಿಲ್ಲ. ಅವರ ನಟನೆಯ ಹೊಸ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

ಚುನಾವಣೆಗೆ ಬಳಿಕ ಬಿಡುಗಡೆ ಆಗಲಿದೆ ಪವನ್ ಕಲ್ಯಾಣ್ ಹೊಸ ಸಿನಿಮಾ
Follow us
ಮಂಜುನಾಥ ಸಿ.
|

Updated on: Feb 06, 2024 | 8:24 PM

ತೆಲುಗು ಚಿತ್ರರಂಗದ (Tollywood) ಟಾಪ್ ನಟರಲ್ಲಿ ಒಬ್ಬರಾದ ಪವನ್ ಕಲ್ಯಾಣ್ (Pawan Kalyan) ಈಗ ತಮ್ಮ ಸಂಪೂರ್ಣ ಗಮನ ಹಾಗೂ ಸಮಯವನ್ನು ರಾಜಕೀಯಕ್ಕೆ ಮೀಸಲಾಗಿರಿಸಿದ್ದಾರೆ. ಆಂಧ್ರ ಪ್ರದೇಶ ರಾಜಕೀಯದಲ್ಲಿ ಸಕ್ರಿಯವಾಗಿರುವ ಪವನ್ ಕಲ್ಯಾಣ್ ಕೆಲವೇ ತಿಂಗಳಲ್ಲಿ ನಡೆಯಲಿರುವ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಗೆ ತಯಾರಾಗುತ್ತಿದ್ದಾರೆ. ಇದರ ನಡುವೆ ಪವನ್ ಕಲ್ಯಾಣ್ ನಟಿಸಿರುವ ‘ಹರಿ ಹರ ವೀರಮಲ್ಲು’, ‘ಉಸ್ತಾದ್ ಭಗತ್ ಸಿಂಗ್’ ಹಾಗೂ ‘ಓಜಿ’ ಸಿನಿಮಾಗಳು ಬಿಡುಗಡೆಗೆ ರೆಡಿಯಾಗಿವೆ. ಇದೀಗ ಪವನ್ ನಟನೆಯ ಒಂದು ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ.

ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ ಕೆಲವೇ ತಿಂಗಳಲ್ಲಿ ನಡೆಯಲಿದೆ. ಚುನಾವಣೆ ಸಮೀಪಿಸಿದಾಗ ಪವನ್ ಕಲ್ಯಾಣ್​ರ ಸಿನಿಮಾ ಬಿಡುಗಡೆ ಮಾಡಲಾಗುತ್ತದೆ. ಆ ಮೂಲಕ ಸಿನಿಮಾವನ್ನು ಅವರ ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತದೆ ಎಂಬ ಚರ್ಚೆ ನಡೆಯುತ್ತಿತ್ತು. ಇದೀಗ ಪವನ್ ಕಲ್ಯಾಣ್​ರ ಹೊಸ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದ್ದು ಆಂಧ್ರದ ಚುನಾವಣೆ ಮುಗಿದ ಬಳಿಕ ಹೊಸ ಸಿನಿಮಾ ಬಿಡುಗಡೆಗೆ ಯೋಜನೆ ಮಾಡಲಾಗಿದೆ.

ಇದನ್ನೂ ಓದಿ:ಪವನ್ ಕಲ್ಯಾಣ್​ 4ನೇ ಮದುವೆಯಾಗ್ತಾರೆ, ರಾಜಕೀಯದಲ್ಲಿ ಏಳ್ಗೆಯಿಲ್ಲ: ವೇಣು ಸ್ವಾಮಿ ಭವಿಷ್ಯ

ಪವನ್ ಕಲ್ಯಾಣ್​ರ ‘ಓಜಿ’ ಸಿನಿಮಾ ಸೆಪ್ಟೆಂಬರ್ 27ರಂದು ಬಿಡುಗಡೆ ಆಗಲಿದೆ. ಗ್ಯಾಂಗ್​ಸ್ಟರ್ ಸಿನಿಮಾ ಇದಾಗಿದ್ದು ಸಿನಿಮಾನಲ್ಲಿ ಭೂಗತ ಲೋಕದ ಡಾನ್​ ಪಾತ್ರದಲ್ಲಿ ಪವನ್ ಕಲ್ಯಾಣ್ ನಟಿಸಿದ್ದಾರೆ. ಸಿನಿಮಾ ರೆಟ್ರೋ ಕತೆಯನ್ನು ಒಳಗೊಂಡಿದೆ. ಸಿನಿಮಾದ ಟೀಸರ್ ಒಂದು ಐದು ತಿಂಗಳ ಹಿಂದೆಯೇ ಬಿಡುಗಡೆ ಆಗಿತ್ತು, ಪ್ರೋಮೋನಲ್ಲಿ ಪವನ್ ಕಲ್ಯಾಣ್​ರ ಆಕ್ಷನ್ ಅವತಾರದ ಗ್ಲಿಂಪ್ಸ್​ ಅನ್ನು ತೋರಿಸಲಾಗಿತ್ತು.

‘ಓಜಿ’ ಸಿನಿಮಾವನ್ನು ಸುಜಿತ್ ನಿರ್ದೇಶನ ಮಾಡಿದ್ದಾರೆ. ಸುಜಿತ್ ಈ ಹಿಂದೆ ‘ರನ್ ರಾಜ ರನ್’ ಹಾಗೂ ಪ್ರಭಾಸ್ ನಟನೆಯ ‘ಸಾಹೋ’ ಸಿನಿಮಾ ನಿರ್ದೇಶನ ಮಾಡಿದ್ದರು. ಅವರ ಮೂರನೇ ಸಿನಿಮಾ ‘ಓಜಿ’. ‘ಆರ್​ಆರ್​ಆರ್’ ಸಿನಿಮಾ ನಿರ್ಮಾಣ ಮಾಡಿದ್ದ ಡಿವಿವಿ ದಯಾನಂದ್ ಅವರೇ ‘ಓಜಿ’ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಸಿನಿಮಾಕ್ಕೆ ಎಸ್​ಎಸ್ ತಮನ್ ಸಂಗೀತ ನೀಡಿದ್ದಾರೆ. ಸಿನಿಮಾದಲ್ಲಿ ಪ್ರಿಯಾಂಕಾ ಅರುಲ್ ಮೋಹನ್ ನಾಯಕಿಯಾಗಿ ನಟಿಸಿದ್ದಾರೆ. ಬಾಲಿವುಡ್ ನಟ ಇಮ್ರಾನ್ ಹಶ್ಮಿ ವಿಲನ್. ಪ್ರಕಾಶ್ ರೈ, ಶ್ರಿಯಾ ರೆಡ್ಡಿ ಇನ್ನೂ ಕೆಲವು ಜನಪ್ರಿಯ ನಟರು ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...