ಭಗವದ್ಗೀತ ಅಲ್ಲ, ಇದು ಭಗತ್ ಗೀತ: ಪವರ್​​ಫುಲ್ ಪೊಲೀಸ್ ಆಗಿ ಪವನ್

Ustaad Bhagat Singh: ಪವನ್ ಕಲ್ಯಾಣ್ ಅವರು ರಾಜಕೀಯ ಮತ್ತು ಸಿನಿಮಾಗಳನ್ನು ಜೊತೆಯಾಗಿ ತೂಗಿಸಿಕೊಂಡು ಹೋಗುತ್ತಿದ್ದಾರೆ. ಪವನ್ ಕಲ್ಯಾಣ್ ಅವರು ಡಿಸಿಎಂ ಆಗುವ ಮುನ್ನ ಮೂರು ಸಿನಿಮಾಗಳನ್ನು ಒಪ್ಪಿಕೊಂಡಿದ್ದರು. ಅವುಗಳಲ್ಲಿ ಎರಡರ ಚಿತ್ರೀಕರಣ ಮುಗಿಸಿ ಬಿಡುಗಡೆ ಆಗಿದ್ದವು. ಇದೀಗ ಮೂರನೇ ಸಿನಿಮಾ ‘ಉಸ್ತಾದ್ ಭಗತ್ ಸಿಂಗ್’ ಬಿಡುಗಡೆ ಆಗಲಿದ್ದು, ಸಿನಿಮಾದ ಟೀಸರ್ ಇಂದಷ್ಟೆ ಬಿಡುಗಡೆ ಆಗಿದೆ.

ಭಗವದ್ಗೀತ ಅಲ್ಲ, ಇದು ಭಗತ್ ಗೀತ: ಪವರ್​​ಫುಲ್ ಪೊಲೀಸ್ ಆಗಿ ಪವನ್
Ustaad Bhagat Singh

Updated on: Mar 07, 2026 | 10:52 PM

ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan), ಉಪ ಮುಖ್ಯಮಂತ್ರಿ ಆಗಿರುವ ಜೊತೆಗೆ ಹಲವು ಕೆಲವು ಪ್ರಮುಖ ಖಾತೆಗಳನ್ನು ನಿಭಾಯಿಸುತ್ತಿರುವ ಮಂತ್ರಿ ಸಹ. ಪವನ್ ಕಲ್ಯಾಣ್ ಅವರು ರಾಜಕೀಯ ಮತ್ತು ಸಿನಿಮಾಗಳನ್ನು ಜೊತೆಯಾಗಿ ತೂಗಿಸಿಕೊಂಡು ಹೋಗುತ್ತಿದ್ದಾರೆ. ಪವನ್ ಕಲ್ಯಾಣ್ ಅವರು ಡಿಸಿಎಂ ಆಗುವ ಮುನ್ನ ಮೂರು ಸಿನಿಮಾಗಳನ್ನು ಒಪ್ಪಿಕೊಂಡಿದ್ದರು. ಅವುಗಳಲ್ಲಿ ಎರಡರ ಚಿತ್ರೀಕರಣ ಮುಗಿಸಿ ಬಿಡುಗಡೆ ಆಗಿದ್ದವು. ಇದೀಗ ಮೂರನೇ ಸಿನಿಮಾ ‘ಉಸ್ತಾದ್ ಭಗತ್ ಸಿಂಗ್’ ಬಿಡುಗಡೆ ಆಗಲಿದ್ದು, ಸಿನಿಮಾದ ಟೀಸರ್ ಇಂದಷ್ಟೆ ಬಿಡುಗಡೆ ಆಗಿದೆ.

ಇಂದು (ಮಾರ್ಚ್ 07) ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ಸಣ್ಣ ಟೀಸರ್ ಅಷ್ಟೇ ಬಿಡುಗಡೆ ಆಗಿದೆ. ಕೇವಲ 43 ಸೆಕೆಂಡುಗಳ ಟೀಸರ್ ಇದಾಗಿದ್ದು, ಅಷ್ಟರಲ್ಲೇ ಸಿನಿಮಾನಲ್ಲಿ ಪವನ್ ಕಲ್ಯಾಣ್ ಎಷ್ಟು ಪವರ್​​ಫುಲ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂಬುದನ್ನು ತೋರಿಸಲಾಗಿದೆ. ಸಿನಿಮಾನಲ್ಲಿ ಪವನ್ ಕಲ್ಯಾಣ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದು, ‘ಗಬ್ಬರ್ ಸಿಂಗ್’ ಮಾದರಿಯ ತಮಾಷೆ ಪ್ರವೃತ್ತಿಯ ಖಡಕ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಪವನ್ ಕಲ್ಯಾಣ್ ಕಾಣಿಸಿಕೊಂಡಿದ್ದಾರೆ. ಟೀಸರ್​​ನಲ್ಲಿ ಕೆಲವು ಪಂಚಿಂಗ್ ಡೈಲಾಗ್​​ಗಳು ಸಹ ಇವೆ. ಜೊತೆಗೆ ಸಣ್ಣ ಆಕ್ಷನ್ ತುಣುಕುಗಳು ಸಹ ಇವೆ.

ಹರೀಶ್ ಶಂಕರ್ ನಿರ್ದೇಶನ ಮಾಡಿರುವ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ, ಪವನ್ ಕಲ್ಯಾಣ್ ಅವರು ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುಂಚೆ ಶುರು ಮಾಡಿದ್ದ ಸಿನಿಮಾ. ಈ ಸಿನಿಮಾನಲ್ಲಿ ಕನ್ನಡತಿ ಶ್ರೀಲೀಲಾ ನಾಯಕಿ. ಮೈತ್ರಿ ಮೂವಿ ಮೇಕರ್ಸ್ ಸಿನಿಮಾಕ್ಕೆ ಬಂಡವಾಳ ಹೂಡಿದೆ. ಸಿನಿಮಾದ ಟೀಸರ್​​ನಲ್ಲಿ ಒಂದು ಮಹತ್ವದ ಅಂಶವನ್ನು ಅಭಿಮಾನಿಗಳು ಗುರುತಿಸಿದ್ದಾರೆ. ಸಿನಿಮಾದ ಸಂಗೀತ ನಿರ್ದೇಶಕ ಎಂದು ಎಸ್ ತಮನ್ ಹೆಸರು ಬಳಸಲಾಗಿದೆ. ಅಸಲಿಗೆ ದೇವಿ ಶ್ರೀ ಪ್ರಸಾದ್ ಅವರು ಮೊದಲು ಈ ಸಿನಿಮಾದ ಸಂಗೀತ ನಿರ್ದೇಶಕನಾಗಿದ್ದರು. ದೇವಿಶ್ರೀ ಪ್ರಸಾದ್ ಅವರು ಹಾಡುಗಳನ್ನು ಮಾಡಿದ್ದರೆ, ಹಿನ್ನೆಲೆ ಸಂಗೀತವನ್ನು ಎಸ್ ತಮನ್ ನೀಡಿದ್ದಾರೆ.

ಇದನ್ನೂ ಓದಿ:

ಈ ಮೊದಲು ಮಾರ್ಚ್ 26 ರಂದು ಬಿಡುಗಡೆಯಾಗಬೇಕಿದ್ದ ಈ ಸಿನಿಮಾ, ಈಗ ಒಂದು ವಾರ ಮೊದಲೇ ಅಂದರೆ ಮಾರ್ಚ್ 19 ರಂದೇ ಬಿಡುಗಡೆ ಆಗಲಿದೆ. ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ದಿನಾಂಕ ಬದಲಾವಣೆ ಆದ ಕಾರಣ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ಬಿಡುಗಡೆಯನ್ನು ಪ್ರೀಪಾನ್ ಮಾಡಿಕೊಳ್ಳಲಾಗಿದೆ. ಇದೀಗ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ರಣ್ವೀರ್ ಸಿಂಗ್ ಅವರ ‘ಧುರಂಧರ್ 2’ ಸಿನಿಮಾಕ್ಕೆ ಪೈಪೋಟಿ ನೀಡಲಿದೆ. ಸಿನಿಮಾ ಮಾರ್ಚ್ 19ಕ್ಕೆ ಬಿಡುಗಡೆ ಆಗಲಿದ್ದು, ಪವನ್ ಕಲ್ಯಾಣ್ ಉಪ ಮುಖ್ಯಮಂತ್ರಿ ಆದ ಬಳಿಕ ಬಿಡುಗಡೆ ಆಗುತ್ತಿರುವ ಮೂರನೇ ಸಿನಿಮಾ ಇದಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us