AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಬ್ಬರ್ ಸಿಂಗ್’ ನೆನಪಿಸುತ್ತಿದೆ ‘ಉಸ್ತಾದ್ ಭಗತ್ ಸಿಂಗ್’: ಟ್ರೈಲರ್ ಬಿಡುಗಡೆ

Ustaad Bhagath Singh: ನಟ, ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ನಟನೆಯ ಮತ್ತೊಂದು ಸಿನಿಮಾ ಬಿಡುಗಡೆಗೆ ರೆಡಿಯಾಗಿದ್ದು ಅದುವೇ ‘ಉಸ್ತಾದ್ ಭಗತ್ ಸಿಂಗ್’. ಸಿನಿಮಾದ ಟ್ರೈಲರ್ ಇಂದು ಬಿಡುಗಡೆ ಆಗಿದ್ದು, ಪವನ್ ಕಲ್ಯಾಣ್ ಮತ್ತೊಮ್ಮೆ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪವನ್ ಕಲ್ಯಾಣ್ ಅವರಿಗೆ ದೊಡ್ಡ ಹಿಟ್ ನೀಡಿದ ‘ಗಬ್ಬರ್ ಸಿಂಗ್’ ಸಿನಿಮಾದ ಹಾಸ್ಯಮಯ ಪೊಲೀಸ್ ಪಾತ್ರಧಾರಿ ಪಾತ್ರವೇ ‘ಉಸ್ತಾದ್ ಭಗತ್ ಸಿಂಗ್’ನಲ್ಲಿಯೂ ಇರಲಿದೆ ಎಂಬುದನ್ನು ಟ್ರೈಲರ್ ಸ್ಪಷ್ಟವಾಗಿ ಹೇಳುತ್ತಿದೆ.

‘ಗಬ್ಬರ್ ಸಿಂಗ್’ ನೆನಪಿಸುತ್ತಿದೆ ‘ಉಸ್ತಾದ್ ಭಗತ್ ಸಿಂಗ್’: ಟ್ರೈಲರ್ ಬಿಡುಗಡೆ
Pawan Kalyan
ಮಂಜುನಾಥ ಸಿ.
|

Updated on: Mar 14, 2026 | 7:27 PM

Share

ನಟ, ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ (Pawan Kalyan) ನಟನೆಯ ಮತ್ತೊಂದು ಸಿನಿಮಾ ಬಿಡುಗಡೆಗೆ ರೆಡಿಯಾಗಿದ್ದು ಅದುವೇ ‘ಉಸ್ತಾದ್ ಭಗತ್ ಸಿಂಗ್’. ಸಿನಿಮಾದ ಟ್ರೈಲರ್ ಇಂದು ಬಿಡುಗಡೆ ಆಗಿದ್ದು, ಪವನ್ ಕಲ್ಯಾಣ್ ಮತ್ತೊಮ್ಮೆ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪವನ್ ಕಲ್ಯಾಣ್ ಅವರಿಗೆ ದೊಡ್ಡ ಹಿಟ್ ನೀಡಿದ ‘ಗಬ್ಬರ್ ಸಿಂಗ್’ ಸಿನಿಮಾದ ಹಾಸ್ಯಮಯ ಪೊಲೀಸ್ ಪಾತ್ರಧಾರಿ ಪಾತ್ರವೇ ‘ಉಸ್ತಾದ್ ಭಗತ್ ಸಿಂಗ್’ನಲ್ಲಿಯೂ ಇರಲಿದೆ ಎಂಬುದನ್ನು ಟ್ರೈಲರ್ ಸ್ಪಷ್ಟವಾಗಿ ಹೇಳುತ್ತಿದೆ.

ಪವನ್ ಕಲ್ಯಾಣ್ ಮತ್ತು ಹರೀಶ್ ಶಂಕರ್ ‘ಗಬ್ಬರ್ ಸಿಂಗ್’ ಅಂತಹ ಬ್ಲಾಕ್‌ಬಸ್ಟರ್ ಸಿನಿಮಾ ನೀಡಿದ್ದ ಈ ಜೋಡಿ. ಇದೇ ಜೋಡಿ ಈಗ ‘ಉಸ್ತಾದ್ ಭಗತ್ ಸಿಂಗ್’ ಮೂಲಕ ಮತ್ತೆ ಒಂದಾಗಿದೆ, ಆದರೆ ಹಳೆಯ ಫಾರ್ಮುಲಾನಲ್ಲಿಯೇ ಹೊಸ ಸಿನಿಮಾ ಮಾಡಿದ್ದಾರೆ ಎಂಬುದು ದಟ್ಟವಾಗಿ ಟ್ರೈಲರ್​​ನಲ್ಲಿ ಕಾಣುತ್ತಿದೆ. ಆದರೆ ಇದೇ ರೀತಿಯ ಪವನ್ ಅನ್ನು ನೋಡಲು ಅಭಿಮಾನಿಗಳು ಸಹ ಕಾತರದಿಂದಿದ್ದರು, ಹಾಗಾಗಿ ಈಗ ಬಿಡುಗಡೆ ಆಗಿರುವ ಟ್ರೈಲರ್ ಚಿತ್ರದ ಮೇಲಿನ ನಿರೀಕ್ಷೆಯನ್ನು ಆಕಾಶಕ್ಕೆ ಏರಿಸಿದೆ.

ಟ್ರೈಲರ್​​ನಲ್ಲಿ ಪವನ್ ಕಲ್ಯಾಣ್ ಮತ್ತೊಮ್ಮೆ ಖಾಕಿ ತೊಟ್ಟು ಅಬ್ಬರಿಸಿದ್ದಾರೆ. ಟ್ರೈಲರ್‌ನಲ್ಲಿ ಅವರ ಮ್ಯಾನರಿಸಂ, ಸ್ಟೈಲ್ ಮತ್ತು ಖಡಕ್ ಡೈಲಾಗ್‌ಗಳು ಅಭಿಮಾನಿಗಳಿಗೆ ಹಳೆಯ ‘ಗಬ್ಬರ್ ಸಿಂಗ್’ ನೆನಪಿಸುತ್ತಿವೆ. ಹರೀಶ್ ಶಂಕರ್ ಅವರು ಪವನ್ ಕಲ್ಯಾಣ್​​ಗೆ ಕೆಲವು ಪವರ್​​ಫುಲ್ ಡೈಲಾಗ್​​ಗಳನ್ನು ನೀಡಿದ್ದಾರೆ. ‘ಈ ಸಲ ಕೇವಲ ಮನರಂಜನೆ ಮಾತ್ರವಲ್ಲ, ಯುದ್ಧವೂ ಇರುತ್ತದೆ’ ಎಂಬ ಡೈಲಾಗ್‌ ವೈರಲ್ ಆಗುವುದು ಪಕ್ಕಾ. ಮಾತ್ರವಲ್ಲದೆ ಪವನ್ ಅವರು ಸಖತ್ ಕಾಮಿಡಿ ಸಹ ಮಾಡಿದಂತಿದ್ದಾರೆ. ಅದರಲ್ಲೂ ‘ಗಬ್ಬರ್ ಸಿಂಗ್’ ಶೈಲಿಯ ಕಾಮಿಡಿ ಪ್ರೇಕ್ಷಕರಿಗೆ ಪಕ್ಕಾ ಹಿಡಿಸಲಿದೆ.

ಇದನ್ನೂ ಓದಿ:ಮಹೇಶ್ ಬಾಬು ಅಭಿಮಾನಿಗಳ ಬಳಿ ಕ್ಷಮೆ ಕೇಳಿದ ಪವನ್ ಕಲ್ಯಾಣ್ ಆಪ್ತ ನಿರ್ದೇಶಕ

ಸಿನಿಮಾಕ್ಕೆ ದೇವಿಶ್ರೀ ಪ್ರಸಾದ್ ಹಾಡುಗಳಿಗೆ ಸಂಗೀತ ನೀಡಿದ್ದರೆ ಹಿನ್ನೆಲೆ ಸಂಗೀತವನ್ನು ಎಸ್ ತಮನ್ ನೀಡಿದ್ದಾರೆ. ಸಿನಿಮಾದ ಟ್ರೈಲರ್​​ನಲ್ಲಿ ತೋರಿಸಿರುವಂತೆ ಪವನ್ ಕಲ್ಯಾಣ್ ಹಾಡೊಂದರಲ್ಲಿ ಸಖತ್ ಆಗಿ ಡ್ಯಾನ್ಸ್ ಸಹ ಮಾಡಿದ್ದಾರೆ. ಅಸಲಿಗೆ ಪವನ್ ಕಲ್ಯಾಣ್​​ಗೆ ಡ್ಯಾನ್ಸ್ ಎಂದರೆ ಆಗುವುದಿಲ್ಲ ಆದರೆ ಈ ಸಿನಿಮಾನಲ್ಲಿ ಅವರು ಡ್ಯಾನ್ಸ್ ಮಾಡಿದ್ದಾರೆ. ಸಿನಿಮಾದ ಟ್ರೈಲರ್​​ನಲ್ಲಿ ಪವನ್ ಕಲ್ಯಾಣ್ ಹೊರತಾಗಿ ಶ್ರೀಲೀಲಾ ಬಹಳ ಗಮನ ಸೆಳೆಯುತ್ತಿದ್ದಾರೆ. ಮುದ್ದು-ಮುದ್ದಿ ಯುವತಿಯಾಗಿ ಅವರು ಸಖತ್ ಆಗಿ ಕಾಣುತ್ತಿದ್ದಾರೆ.

‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ತಮಿಳಿನ ಸೂಪರ್ ಹಿಟ್ ಚಿತ್ರ ‘ತೆರಿ’ಯ ರೀಮೇಕ್ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಖಾತ್ರಿ ಇಲ್ಲ. ಸಿನಿಮಾದ ಟ್ರೈಲರ್, ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಕ್ಕೆ ಒಳ್ಳೆಯ ಪ್ರಚಾರ ದೊರಕಿಸಿಕೊಡುವ ಸಂಭವ ಇದೆ. ಮಾರ್ಚ್ 19ಕ್ಕೆ ಸಿನಿಮಾ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ