AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vakeel Saab Collection: ಪವನ್​ ಕಲ್ಯಾಣ್​ ವಕೀಲ್​ ಸಾಬ್​ ಚಿತ್ರ ಮೊದಲ ದಿನ ಮಾಡಿದ ಕಲೆಕ್ಷನ್​ ಎಷ್ಟು?

Pawan Kalyan | Vakeel Saab First Day Collection: ವಕೀಲ್​ ಸಾಬ್​ ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದೆ. ಈ ಚಿತ್ರಕ್ಕೆ ಮೊದಲ ದಿನ ಆದ ಕಲೆಕ್ಷನ್​ ಎಷ್ಟು ಎಂಬುದಕ್ಕೆ ಉತ್ತರ ಸಿಕ್ಕಿದೆ. ಗಲ್ಲಾಪೆಟ್ಟೆಗೆಯಲ್ಲಿ ವಕೀಲ್​ ಸಾಬ್​ ಧೂಳೆಬ್ಬಿಸಿದೆ.

Vakeel Saab Collection: ಪವನ್​ ಕಲ್ಯಾಣ್​ ವಕೀಲ್​ ಸಾಬ್​ ಚಿತ್ರ ಮೊದಲ ದಿನ ಮಾಡಿದ ಕಲೆಕ್ಷನ್​ ಎಷ್ಟು?
ವಕೀಲ್​ ಸಾಬ್​ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
| Edited By: |

Updated on: Apr 10, 2021 | 12:05 PM

Share

ಪವನ್​ ಕಲ್ಯಾಣ್​ ನಟನೆಯ ಬಹುನಿರೀಕ್ಷಿತ ಸಿನಿಮಾ ‘ವಕೀಲ್​ ಸಾಬ್​’ ಶುಕ್ರವಾರ (ಏ.9) ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ನಾಲ್ಕು ವರ್ಷಗಳ ಬಳಿಕ ಪವನ್​ ಕಲ್ಯಾಣ್​ ಅವರು ದೊಡ್ಡ ಪರದೆ ಮೇಲೆ ಕಾಣಿಸಿಕೊಂಡಿದ್ದರಿಂದ ಅವರ ಅಭಿಮಾನಿಗಳು ಮುಗಿಬಿದ್ದು ಸಿನಿಮಾ ನೋಡಿದ್ದಾರೆ. ಮೊದಲ ದಿನದ ಟಿಕೆಟ್​ಗಳು ಬಹುತೇಕ ಕಡೆಗಳಲ್ಲಿ ಸೋಲ್ಡ್​ ಔಟ್​ ಆಗಿದ್ದವು. ಪರಿಣಾಮವಾಗಿ ಫಸ್ಟ್​ ಡೇ ಈ ಚಿತ್ರಕ್ಕೆ ಒಳ್ಳೆಯ ಕಲೆಕ್ಷನ್​ ಆಗಿದೆ.

ಸಿನಿಮಾ ವ್ಯವಹಾರಕ್ಕೆ ಈಗ ಮೊದಲಿನಂತಹ ವಾತಾವರಣ ಇಲ್ಲ. ಕೊರೊನಾ ಕಾಟ, ಶೇ.50ರಷ್ಟು ಆಸನ ಮಿತಿಯಂತಹ ಅಡೆತಡೆಗಳಿವೆ. ಹಾಗಾಗಿ ಗಲ್ಲಾಪೆಟ್ಟಿಗೆಯಲ್ಲಿ ಭಾರಿ ಲಾಭವನ್ನು ನಿರೀಕ್ಷಿಸುವುದು ಕಷ್ಟವಾಗುತ್ತಿದೆ. ಅದರ ನಡುವೆಯೂ ವಕೀಲ್​ ಸಾಬ್​ ಸಿನಿಮಾ ಮೊದಲ ದಿನ ಒಳ್ಳೆಯ ಕಮಾಯಿ ಮಾಡಿದೆ. ಆಂಧ್ರ ಮತ್ತು ತೆಲಂಗಾಣದಲ್ಲಿ ಈ ಚಿತ್ರಕ್ಕೆ ಏ.9ರಂದು 28 ಕೋಟಿ ರೂ. ಗಳಿಕೆ ಆಗಿದೆ ಎಂಬ ಮಾಹಿತಿ ಕೇಳಿಬಂದಿದೆ.

ಭಾರತ ಮಾತ್ರವಲ್ಲದೆ ವಿದೇಶದಲ್ಲೂ ಈ ಚಿತ್ರ ಬಿಡುಗಡೆಯಾಗಿದೆ. ವಿಶ್ವಾದ್ಯಂತ ಪವನ್​ ಕಲ್ಯಾಣ್​ ಅವರಿಗೆ ಅಭಿಮಾನಿಗಳಿದ್ದು, ಅಲ್ಲೆಲ್ಲವೂ ಫ್ಯಾನ್ಸ್​ ಈ ಸಿನಿಮಾವನ್ನು ಇಷ್ಟಪಟ್ಟಿದ್ದಾರೆ. ವಿದೇಶಿ ಗಳಿಕೆಯನ್ನೂ ಸೇರಿದರೆ ಮೊದಲ ದಿನವೇ ವಕೀಲ್​ ಸಾಬ್​ ಅಂದಾಜು 40ರಿಂದ 42 ಕೋಟಿ ರೂ. ಕಲೆಕ್ಷನ್​ ಮಾಡಿದೆ ಎಂದು ವರದಿ ಆಗಿದೆ. ಆದರೆ ಚಿತ್ರತಂಡದ ಕಡೆಯಿಂದ ಇನ್ನೂ ಅಧಿಕೃತವಾಗಿ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

ಹಿಂದಿಯ ‘ಪಿಂಕ್​’ ಸಿನಿಮಾದ ತೆಲುಗು ರಿಮೇಕ್​ ಆಗಿ ‘ವಕೀಲ್​ ಸಾಬ್​‘ ಮೂಡಿಬಂದಿದೆ. ಬಾಲಿವುಡ್​ನಲ್ಲಿ ಅಮಿತಾಭ್​ ಬಚ್ಚನ್​ ಮಾಡಿದ್ದ ಪಾತ್ರವನ್ನು ತೆಲುಗಿನಲ್ಲಿ ಪವನ್​ ಕಲ್ಯಾಣ್​ ಮಾಡಿದ್ದಾರೆ. ಈ ಚಿತ್ರಕ್ಕೆ ಪ್ರೇಕ್ಷಕರಿಂದ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಅತಿಯಾಗಿ ಮೆಚ್ಚಿಕೊಂಡಿದ್ದರೆ, ಇನ್ನೂ ಕೆಲವರು ಡಬ್ಬಾ ಸಿನಿಮಾ ಎಂದು ತೆಗಳಿದ್ದಾರೆ. ಹಾಗಾಗಿ #DisasterVakeelSaab ಎಂಬ ಹ್ಯಾಶ್​ಟ್ಯಾಗ್​ ಕೂಡ ಟ್ರೆಂಡ್​ ಆಗಿತ್ತು. ಇದರ ನಡುವೆಯೂ ಮೊದಲ ದಿನ 40ರಿಂದ 42 ಕೋಟಿ ರೂ. ಕಲೆಕ್ಷನ್​ ಮಾಡಿದೆ ಎಂಬುದೇ ಪವನ್​ ಕಲ್ಯಾಣ್​ ಫ್ಯಾನ್ಸ್​ಗೆ ಖುಷಿ ನೀಡುವ ಸಂಗತಿ.​

ಈ ಚಿತ್ರಕ್ಕೆ ವೇಣು ಶ್ರೀರಾಮ್​ ನಿರ್ದೇಶನ ಮಾಡಿದ್ದಾರೆ. ಥಮನ್​ ಅವರ ಹಿನ್ನೆಲೆ ಸಂಗೀತ ಎಲ್ಲರಿಗೂ ಇಷ್ಟ ಆಗಿದೆ. ನಿವೇತಾ ಥಾಮಸ್​, ಅನನ್ಯಾ, ಅಂಜಲಿ, ಪ್ರಕಾಶ್​ ರಾಜ್​, ಶ್ರುತಿ ಹಾಸನ್​ ಮುಂತಾದವರು ನಟಿಸಿದ್ದಾರೆ. ಮೊದಲ ದಿನ ಕೆಲವು ಕಡೆಗಳಲ್ಲಿ ಪ್ರದರ್ಶನ ವಿಳಂಬವಾದ ಹಿನ್ನೆಲೆಯಲ್ಲಿ ಪವನ್​ ಕಲ್ಯಾಣ್​ ಫ್ಯಾನ್ಸ್​ ಚಿತ್ರಮಂದಿರಕ್ಕೆ ಕಲ್ಲು ಹೊಡೆದ ಘಟನೆ ಕೂಡ ನಡೆದಿದೆ.

ಇದನ್ನೂ ಓದಿ: Vakeel Saab Review: ವಕೀಲ್​ ಸಾಬ್​ ಟ್ವಿಟರ್​ ವಿಮರ್ಶೆ; ಪವನ್​ ಕಲ್ಯಾಣ್​ ಅಭಿಮಾನಿಗಳಿಗೆ ಈ ಸಿನಿಮಾ ಇಷ್ಟವಾಯ್ತಾ?

Vakeel Saab: ವಕೀಲ್​ ಸಾಬ್​ ನೋಡಲು ಬಂದು ಥಿಯೇಟರ್​ಗೆ ಕಲ್ಲು ಹೊಡೆದ ಪವನ್​ ಕಲ್ಯಾಣ್​ ಫ್ಯಾನ್ಸ್​! ಕಾರಣ ಏನು?

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್