AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕೀಲ್​ ಸಾಬ್​ ಸಿನಿಮಾಗೆ ಮಹೇಶ್​ ಬಾಬು ವಿಮರ್ಶೆ! ಪವನ್​ ಕಲ್ಯಾಣ್​ ಚಿತ್ರದಲ್ಲಿ ಪ್ರಿನ್ಸ್​ ಮೆಚ್ಚಿದ್ದೇನು?

ವಕೀಲ್ ಸಾಬ್​ ಸಿನಿಮಾ ಬಗ್ಗೆ ಮಹೇಶ್​ ಬಾಬು ಅವರು ತಮ್ಮ ವಿಮರ್ಶೆ ತಿಳಿಸಿದ್ದಾರೆ. ಅವರ ಅಭಿಪ್ರಾಯವನ್ನು ಕೇಳಿದ ಬಳಿಕ ಇನ್ನಷ್ಟು ಪ್ರೇಕ್ಷಕರು ವಕೀಲ್​ ಸಾಬ್​ ನೋಡಲು ಮುಂದಾಗುತ್ತಿದ್ದಾರೆ.

ವಕೀಲ್​ ಸಾಬ್​ ಸಿನಿಮಾಗೆ ಮಹೇಶ್​ ಬಾಬು ವಿಮರ್ಶೆ! ಪವನ್​ ಕಲ್ಯಾಣ್​ ಚಿತ್ರದಲ್ಲಿ ಪ್ರಿನ್ಸ್​ ಮೆಚ್ಚಿದ್ದೇನು?
ಪವನ್​ ಕಲ್ಯಾಣ್​ - ಮಹೇಶ್​ ಬಾಬು
ಮದನ್​ ಕುಮಾರ್​
| Edited By: |

Updated on: Apr 11, 2021 | 3:39 PM

Share

‘ಪವರ್​ ಸ್ಟಾರ್’​ ಪವನ್​ ಕಲ್ಯಾಣ್​ ನಟನೆಯ ವಕೀಲ್​ ಸಾಬ್​ ಚಿತ್ರ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಪ್ರೇಕ್ಷಕರಿಂದ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಿನಿಮಾ ನೋಡಿದ ಎಲ್ಲರೂ ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಟಾಲಿವುಡ್​ನ ಸ್ಟಾರ್​ ನಟರು ಕೂಡ ವಕೀಲ್​ ಸಾಬ್​ ನೋಡಿ ಮೆಚ್ಚಿಕೊಂಡಿದ್ದಾರೆ.

ಪವನ್​ ಕಲ್ಯಾಣ್​ ಸಹೋದರ ‘ಮೆಗಾ ಸ್ಟಾರ್​’ ಚಿರಂಜೀವಿ ಅವರು ಕುಟುಂಬ ಸಮೇತರಾಗಿ ವಕೀಲ್​ ಸಾಬ್​ ನೋಡಿ ಇಷ್ಟಪಟ್ಟಿದ್ದರು. ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವ ಈ ಚಿತ್ರ ಅವರಿಗೆ ಸಖತ್ ಇಷ್ಟವಾಯಿತು. ಈಗ ಟಾಲಿವುಡ್​ ಸ್ಟಾರ್​ ನಟ ಪ್ರಿನ್ಸ್​ ಮಹೇಶ್​ ಬಾಬು ಕೂಡ ಈ ಚಿತ್ರ ಕಂಡು ಫಿದಾ ಆಗಿದ್ದಾರೆ. ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯವನ್ನು ಅವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

‘ಪವನ್​ ಕಲ್ಯಾಣ್​ ಟಾಪ್​ ಫಾರ್ಮ್​ನಲ್ಲಿ ಇದ್ದಾರೆ. ವಕೀಲ್​ ಸಾಬ್​ ಸಿನಿಮಾದಲ್ಲಿ ಪವರ್​ಫುಲ್​ ಆದಂತಹ ಪರ್ಫಾಮೆನ್ಸ್​ ನೀಡಿದ್ದಾರೆ. ಎಂಥ ಅದ್ಭುತವಾದ ಕಮ್​ಬ್ಯಾಕ್​. ಪ್ರಕಾಶ್​ ರಾಜ್​ ನಟನೆ ಕೂಡ ಬ್ರಿಲಿಯಂಟ್​’ ಎಂದು ಮಹೇಶ್​ ಬಾಬು ಅವರು ಚಿತ್ರದ ಬಗ್ಗೆ ತಮ್ಮ ವಿಮರ್ಶೆ ತಿಳಿಸಿದ್ದಾರೆ. ಅವರ ಅಭಿಪ್ರಾಯವನ್ನು ಕೇಳಿದ ಬಳಿಕ ಇನ್ನಷ್ಟು ಪ್ರೇಕ್ಷಕರು ವಕೀಲ್​ ಸಾಬ್​ ನೋಡಲು ಮುಂದಾಗುತ್ತಿದ್ದಾರೆ.

ಸಿನಿಮಾದಲ್ಲಿನ ಇನ್ನುಳಿದ ಮುಖ್ಯಪಾತ್ರಗಳಿಗೆ ಬಣ್ಣ ಹಚ್ಚಿರುವ ಅನನ್ಯಾ, ನಿವೇತಾ ಥಾಮಸ್​, ಅಂಜಲಿ ನಟನೆಯನ್ನೂ ಮಹೇಶ್​ ಬಾಬು ಮೆಚ್ಚಿಕೊಂಡಿದ್ದಾರೆ. ಥಮನ್​ ಅವರ ಹಿನ್ನಲೆ ಸಂಗೀತಕ್ಕೆ ಅವರು ಫಿದಾ ಆಗಿದ್ದಾರೆ. ಚಿತ್ರ ದೊಡ್ಡ ಯಶಸ್ಸು ಕಾಣಲಿ ಎಂದು ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ. 2018ರಲ್ಲಿ ಬಂದ ‘ಅಜ್ಞಾತವಾಸಿ’ ಸಿನಿಮಾ ಬಳಿಕ ದೀರ್ಘ ಗ್ಯಾಪ್​ ನಂತರ ಪವನ್ ಕಲ್ಯಾಣ್​​ ದೊಡ್ಡ ಪರದೆ ಮೇಲೆ ಕಾಣಿಸಿಕೊಂಡಿರುವುದರಿಂದ ಅಭಿಮಾನಿಗಳು ಈ ಚಿತ್ರವನ್ನು ಮುಗಿಬಿದ್ದು ವೀಕ್ಷಿಸಿದ್ದಾರೆ.

ಹಿಂದಿಯ ಪಿಂಕ್​ ಸಿನಿಮಾದ ತೆಲುಗು ರಿಮೇಕ್​ ಆಗಿ ವಕೀಲ್​ ಸಾಬ್​ ಮೂಡಿಬಂದಿದೆ. ಹಿಂದಿಯಲ್ಲಿ ಅಮಿತಾಭ್​ ಬಚ್ಚನ್​ ಮಾಡಿದ್ದ ಪಾತ್ರವನ್ನು ತೆಲುಗಿನಲ್ಲಿ ಪವನ್​ ಕಲ್ಯಾಣ್​ ಮಾಡಿದ್ದಾರೆ. ಮೊದಲ ದಿನ ಈ ಸಿನಿಮಾ ವಿಶ್ವಾದ್ಯಂತ ಅಂದಾಜು 40 ಕೋಟಿ ರೂ. ಗಳಿಸಿದೆ. ಆ ಮೂಲಕ ಪವನ್​ ಕಲ್ಯಾಣ್​ ಖಾತೆಗೆ ಒಂದು ಹಿಟ್​ ಸಿನಿಮಾ ಸೇರಿಕೊಂಡಂತಾಗಿದೆ. ಈ ಚಿತ್ರಕ್ಕೆ ವೇಣು ಶ್ರೀರಾಮ್​ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: Vakeel Saab Collection: ಪವನ್​ ಕಲ್ಯಾಣ್​ ವಕೀಲ್​ ಸಾಬ್​ ಚಿತ್ರ ಮೊದಲ ದಿನ ಮಾಡಿದ ಕಲೆಕ್ಷನ್​ ಎಷ್ಟು?

(Pawan Kalyan starrer Vakeel Saab movie review by Mahesh Babu)

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?