AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಓಜಿ’ ಶೂಟಿಂಗ್ ಪ್ರಾರಂಭಿಸಿದ ಪವನ್ ಕಲ್ಯಾಣ್, ಸಾಕಷ್ಟು ಬದಲಾವಣೆ

Pawan Kalyan: ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಅರ್ಧಕ್ಕೆ ನಿಲ್ಲಿಸಿದ್ದ ಸಿನಿಮಾಗಳ ಚಿತ್ರೀಕರಣ ಮುಂದುವರೆಸಿದ್ದಾರೆ. ಈಗಾಗಲೇ ‘ಹರಿ ಹರ ವೀರ ಮಲ್ಲು’ ಸಿನಿಮಾ ಚಿತ್ರೀಕರಣ ಮುಗಿಸಿರುವ ಪವನ್, ಇದೀಗ ‘ಓಜಿ’ ಸಿನಿಮಾ ಕೈಗೆತ್ತುಕೊಂಡಿದ್ದಾರೆ. ಡಿಸಿಎಂ ಆಗಿರುವ ಕಾರಣ ಅವರ ಇಮೇಜಿಗೆ ತಕ್ಕಂತೆ ಕತೆಯಲ್ಲಿ ಸಾಕಷ್ಟು ಬದಲಾವಣೆ ಮಾಡಿದ್ದಾರಂತೆ ನಿರ್ದೇಶಕರು.

‘ಓಜಿ’ ಶೂಟಿಂಗ್ ಪ್ರಾರಂಭಿಸಿದ ಪವನ್ ಕಲ್ಯಾಣ್, ಸಾಕಷ್ಟು ಬದಲಾವಣೆ
Pawan Kalyan
ಮಂಜುನಾಥ ಸಿ.
|

Updated on: May 14, 2025 | 10:54 AM

Share

ಆಂಧ್ರ ಪ್ರದೇಶದ ಉಪ ಮುಖ್ಯ ಮಂತ್ರಿ ಆದ ಬಳಿಕ ಪವನ್ ಕಲ್ಯಾಣ್ (Pawan Kalyan) ಚಿತ್ರರಂಗದಿಂದ ವಿರಾಮ ಪಡೆದಿದ್ದರು. ತಾವಿನ್ನು ಸಿನಿಮಾಗಳಲ್ಲಿ ನಟಿಸುವುದಿಲ್ಲ ಎಂದು ಸಹ ಹೇಳಿದ್ದರು. ಆದರೆ ಅವರು ಚಿತ್ರರಂಗವನ್ನು ಬಿಟ್ಟರೂ, ಚಿತ್ರರಂಗ ಅವರನ್ನು ಬಿಡುತ್ತಿಲ್ಲ. ಪವನ್ ಕಲ್ಯಾಣ್, ಆಂಧ್ರ ವಿಧಾನಸಭೆ ಚುನಾವಣೆಗೆ ಮುಂಚೆ ಪವನ್ ಕಲ್ಯಾಣ್ ಕೆಲ ಸಿನಿಮಾಗಳಲ್ಲಿ ನಟಿಸುತ್ತಿದ್ದರು. ಅವುಗಳನ್ನು ಅರ್ಧಕ್ಕೆ ಬಿಟ್ಟು ಚುನಾವಣೆಗೆ ಧುಮುಕಿದ್ದರು. ಈಗ ನಿರ್ಮಾಪಕರ ಒತ್ತಡದ ಕಾರಣಕ್ಕೆ ಅರ್ಧಕ್ಕೆ ನಿಲ್ಲಿಸಿದ್ದ ಸಿನಿಮಾಗಳನ್ನು ಪುನಃ ಪ್ರಾರಂಭಿಸಿದ್ದಾರೆ ಪವನ್ ಕಲ್ಯಾಣ್.

‘ಹರಿ ಹರ ವೀರ ಮಲ್ಲು’ ಸಿನಿಮಾ ಚಿತ್ರೀಕರಣ ಮೊದಲು ಆರಂಭಿಸಿದ್ದ ಪವನ್ ಕಲ್ಯಾಣ್ ಆ ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. ಅದರ ಬೆನ್ನಲ್ಲೆ ಈಗ ‘ಓಜಿ’ ಸಿನಿಮಾ ಶೂಟಿಂಗ್ ಪ್ರಾರಂಭ ಮಾಡಿದ್ದಾರೆ. ‘ಹರಿ ಹರ ವೀರ ಮಲ್ಲು’ ಸಿನಿಮಾದ ಚಿತ್ರೀಕರಣ ನಡೆಸಿದ ಸೆಟ್​ನಲ್ಲಿಯೇ ‘ಓಜಿ’ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಿದ್ದಾರೆ. ಪವನ್ ಕಲ್ಯಾಣ್​ಗಾಗಿ ‘ಓಜಿ’ ಸಿನಿಮಾದ ಕತೆ, ಪ್ರೊಡಕ್ಷನ್​ನಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆಯಂತೆ.

ಇದನ್ನೂ ಓದಿ:ಒಟಿಟಿಗಳಿಂದ ಪವನ್ ಕಲ್ಯಾಣ್ ಸಿನಿಮಾಗಳ ಮೇಲೆ ಒತ್ತಡ, ಸಂಕಷ್ಟದಲ್ಲಿ ನಿರ್ಮಾಪಕರು

ಸಿನಿಮಾದ ಚಿತ್ರೀಕರಣವನ್ನು ಹಲವು ಕಡೆಗಳಲ್ಲಿ ಮಾಡಲು ಚಿತ್ರತಂಡ ಈ ಮೊದಲು ಯೋಜಿಸಿತ್ತು. ಹೈದರಾಬಾದ್, ಕಲ್ಕತ್ತ ಸೇರಿದಂತೆ ವಿದೇಶಗಳಲ್ಲಿಯೂ ಸಿನಿಮಾದ ಚಿತ್ರೀಕರಣ ಮಾಡಲು ಯೋಜನೆ ಹಾಕಲಾಗಿತ್ತು. ಆದರೆ ಈಗ ಪವನ್ ಕಲ್ಯಾಣ್ ಅನುಕೂಲಕ್ಕಾಗಿ ಸೆಟ್​ನಲ್ಲಿಯೇ ಇಡೀ ಸಿನಿಮಾದ ಚಿತ್ರೀಕರಣ ಮಾಡಲು ಮುಂದಾಗಿದೆ ಚಿತ್ರತಂಡ. ಅದು ಮಾತ್ರವೇ ಕತೆಯಲ್ಲಿ ಸಹ ಸಾಕಷ್ಟು ಬದಲಾವಣೆಗಳನ್ನು ಮಾಡಲಾಗಿದೆಯಂತೆ. ಪವನ್​ರ ಈಗಿನ ರಾಜಕಾರಣಿ ಇಮೇಜಿಗೆ ಹೊಂದುವಂತೆ ಕತೆ ಹಾಗೂ ಸಂಭಾಷಣೆಗಳನ್ನು ಬದಲಾವಣೆ ಮಾಡಲಾಗಿದೆಯಂತೆ.

ಸಿನಿಮಾದ ತಾಂತ್ರಿಕ ವರ್ಗದಲ್ಲಿ ಸಹ ಕೆಲ ಬದಲಾವಣೆಗಳು ಆಗಿವೆ. ಸಿನಿಮಾಟೊಗ್ರಾಫರ್ ರವಿ ಚಂದ್ರನ್ ಅವರಿಗಿದ್ದರು. ಆದರೆ ಈಗ ಆ ಸ್ಥಾನಕ್ಕೆ ಮನೋಜ್ ಪರಮಹಂಸ ಬಂದಿದ್ದಾರೆ. ಇದು ಮಾತ್ರವೇ ಅಲ್ಲದೆ ಇತರೆ ಕೆಲವು ವಿಭಾಗದಲ್ಲಿಯೂ ತಂತ್ರಜ್ಞರನ್ನು ಬದಲಾವಣೆ ಮಾಡಲಾಗಿದೆ. ಈ ಸಿನಿಮಾದಲ್ಲಿ ಕೆಲವು ವಿದೇಶಿ ನಟರು ಸಹ ನಟಿಸುತ್ತಿದ್ದಾರೆ. ಜಪಾನಿನ ಸೂಪರ್ ಸ್ಟಾರ್ ಕಜುಕಿ ಕಿಟಾಮುರಾ ನಟಿಸಲಿದ್ದಾರೆ. ಅವರ ಜೊತೆಗೆ ಥಾಯ್ ನಟ ಥಾಯಾ ಪನ್​ಸ್ರಿಗನ್ ಅವರು ಸಹ ನಟಿಸುತ್ತಿದ್ದಾರೆ. ಇದೇ ಸಿನಿಮಾ ಮೂಲಕ ಪವನ್ ಕಲ್ಯಾಣ್ ಅವರ ಪುತ್ರ ಸಹ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ