AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಓಜಿ’ ಶೂಟಿಂಗ್ ಪ್ರಾರಂಭಿಸಿದ ಪವನ್ ಕಲ್ಯಾಣ್, ಸಾಕಷ್ಟು ಬದಲಾವಣೆ

Pawan Kalyan: ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಅರ್ಧಕ್ಕೆ ನಿಲ್ಲಿಸಿದ್ದ ಸಿನಿಮಾಗಳ ಚಿತ್ರೀಕರಣ ಮುಂದುವರೆಸಿದ್ದಾರೆ. ಈಗಾಗಲೇ ‘ಹರಿ ಹರ ವೀರ ಮಲ್ಲು’ ಸಿನಿಮಾ ಚಿತ್ರೀಕರಣ ಮುಗಿಸಿರುವ ಪವನ್, ಇದೀಗ ‘ಓಜಿ’ ಸಿನಿಮಾ ಕೈಗೆತ್ತುಕೊಂಡಿದ್ದಾರೆ. ಡಿಸಿಎಂ ಆಗಿರುವ ಕಾರಣ ಅವರ ಇಮೇಜಿಗೆ ತಕ್ಕಂತೆ ಕತೆಯಲ್ಲಿ ಸಾಕಷ್ಟು ಬದಲಾವಣೆ ಮಾಡಿದ್ದಾರಂತೆ ನಿರ್ದೇಶಕರು.

‘ಓಜಿ’ ಶೂಟಿಂಗ್ ಪ್ರಾರಂಭಿಸಿದ ಪವನ್ ಕಲ್ಯಾಣ್, ಸಾಕಷ್ಟು ಬದಲಾವಣೆ
Pawan Kalyan
ಮಂಜುನಾಥ ಸಿ.
|

Updated on: May 14, 2025 | 10:54 AM

Share

ಆಂಧ್ರ ಪ್ರದೇಶದ ಉಪ ಮುಖ್ಯ ಮಂತ್ರಿ ಆದ ಬಳಿಕ ಪವನ್ ಕಲ್ಯಾಣ್ (Pawan Kalyan) ಚಿತ್ರರಂಗದಿಂದ ವಿರಾಮ ಪಡೆದಿದ್ದರು. ತಾವಿನ್ನು ಸಿನಿಮಾಗಳಲ್ಲಿ ನಟಿಸುವುದಿಲ್ಲ ಎಂದು ಸಹ ಹೇಳಿದ್ದರು. ಆದರೆ ಅವರು ಚಿತ್ರರಂಗವನ್ನು ಬಿಟ್ಟರೂ, ಚಿತ್ರರಂಗ ಅವರನ್ನು ಬಿಡುತ್ತಿಲ್ಲ. ಪವನ್ ಕಲ್ಯಾಣ್, ಆಂಧ್ರ ವಿಧಾನಸಭೆ ಚುನಾವಣೆಗೆ ಮುಂಚೆ ಪವನ್ ಕಲ್ಯಾಣ್ ಕೆಲ ಸಿನಿಮಾಗಳಲ್ಲಿ ನಟಿಸುತ್ತಿದ್ದರು. ಅವುಗಳನ್ನು ಅರ್ಧಕ್ಕೆ ಬಿಟ್ಟು ಚುನಾವಣೆಗೆ ಧುಮುಕಿದ್ದರು. ಈಗ ನಿರ್ಮಾಪಕರ ಒತ್ತಡದ ಕಾರಣಕ್ಕೆ ಅರ್ಧಕ್ಕೆ ನಿಲ್ಲಿಸಿದ್ದ ಸಿನಿಮಾಗಳನ್ನು ಪುನಃ ಪ್ರಾರಂಭಿಸಿದ್ದಾರೆ ಪವನ್ ಕಲ್ಯಾಣ್.

‘ಹರಿ ಹರ ವೀರ ಮಲ್ಲು’ ಸಿನಿಮಾ ಚಿತ್ರೀಕರಣ ಮೊದಲು ಆರಂಭಿಸಿದ್ದ ಪವನ್ ಕಲ್ಯಾಣ್ ಆ ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. ಅದರ ಬೆನ್ನಲ್ಲೆ ಈಗ ‘ಓಜಿ’ ಸಿನಿಮಾ ಶೂಟಿಂಗ್ ಪ್ರಾರಂಭ ಮಾಡಿದ್ದಾರೆ. ‘ಹರಿ ಹರ ವೀರ ಮಲ್ಲು’ ಸಿನಿಮಾದ ಚಿತ್ರೀಕರಣ ನಡೆಸಿದ ಸೆಟ್​ನಲ್ಲಿಯೇ ‘ಓಜಿ’ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಿದ್ದಾರೆ. ಪವನ್ ಕಲ್ಯಾಣ್​ಗಾಗಿ ‘ಓಜಿ’ ಸಿನಿಮಾದ ಕತೆ, ಪ್ರೊಡಕ್ಷನ್​ನಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆಯಂತೆ.

ಇದನ್ನೂ ಓದಿ:ಒಟಿಟಿಗಳಿಂದ ಪವನ್ ಕಲ್ಯಾಣ್ ಸಿನಿಮಾಗಳ ಮೇಲೆ ಒತ್ತಡ, ಸಂಕಷ್ಟದಲ್ಲಿ ನಿರ್ಮಾಪಕರು

ಸಿನಿಮಾದ ಚಿತ್ರೀಕರಣವನ್ನು ಹಲವು ಕಡೆಗಳಲ್ಲಿ ಮಾಡಲು ಚಿತ್ರತಂಡ ಈ ಮೊದಲು ಯೋಜಿಸಿತ್ತು. ಹೈದರಾಬಾದ್, ಕಲ್ಕತ್ತ ಸೇರಿದಂತೆ ವಿದೇಶಗಳಲ್ಲಿಯೂ ಸಿನಿಮಾದ ಚಿತ್ರೀಕರಣ ಮಾಡಲು ಯೋಜನೆ ಹಾಕಲಾಗಿತ್ತು. ಆದರೆ ಈಗ ಪವನ್ ಕಲ್ಯಾಣ್ ಅನುಕೂಲಕ್ಕಾಗಿ ಸೆಟ್​ನಲ್ಲಿಯೇ ಇಡೀ ಸಿನಿಮಾದ ಚಿತ್ರೀಕರಣ ಮಾಡಲು ಮುಂದಾಗಿದೆ ಚಿತ್ರತಂಡ. ಅದು ಮಾತ್ರವೇ ಕತೆಯಲ್ಲಿ ಸಹ ಸಾಕಷ್ಟು ಬದಲಾವಣೆಗಳನ್ನು ಮಾಡಲಾಗಿದೆಯಂತೆ. ಪವನ್​ರ ಈಗಿನ ರಾಜಕಾರಣಿ ಇಮೇಜಿಗೆ ಹೊಂದುವಂತೆ ಕತೆ ಹಾಗೂ ಸಂಭಾಷಣೆಗಳನ್ನು ಬದಲಾವಣೆ ಮಾಡಲಾಗಿದೆಯಂತೆ.

ಸಿನಿಮಾದ ತಾಂತ್ರಿಕ ವರ್ಗದಲ್ಲಿ ಸಹ ಕೆಲ ಬದಲಾವಣೆಗಳು ಆಗಿವೆ. ಸಿನಿಮಾಟೊಗ್ರಾಫರ್ ರವಿ ಚಂದ್ರನ್ ಅವರಿಗಿದ್ದರು. ಆದರೆ ಈಗ ಆ ಸ್ಥಾನಕ್ಕೆ ಮನೋಜ್ ಪರಮಹಂಸ ಬಂದಿದ್ದಾರೆ. ಇದು ಮಾತ್ರವೇ ಅಲ್ಲದೆ ಇತರೆ ಕೆಲವು ವಿಭಾಗದಲ್ಲಿಯೂ ತಂತ್ರಜ್ಞರನ್ನು ಬದಲಾವಣೆ ಮಾಡಲಾಗಿದೆ. ಈ ಸಿನಿಮಾದಲ್ಲಿ ಕೆಲವು ವಿದೇಶಿ ನಟರು ಸಹ ನಟಿಸುತ್ತಿದ್ದಾರೆ. ಜಪಾನಿನ ಸೂಪರ್ ಸ್ಟಾರ್ ಕಜುಕಿ ಕಿಟಾಮುರಾ ನಟಿಸಲಿದ್ದಾರೆ. ಅವರ ಜೊತೆಗೆ ಥಾಯ್ ನಟ ಥಾಯಾ ಪನ್​ಸ್ರಿಗನ್ ಅವರು ಸಹ ನಟಿಸುತ್ತಿದ್ದಾರೆ. ಇದೇ ಸಿನಿಮಾ ಮೂಲಕ ಪವನ್ ಕಲ್ಯಾಣ್ ಅವರ ಪುತ್ರ ಸಹ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?