AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹರಿ ಹರ ವೀರ ಮಲ್ಲು’ ಬಿಡುಗಡೆಗೆ ಮುನ್ನ ಮತ್ತೊಂದು ಸಿನಿಮಾ ಶೂಟಿಂಗ್​​ನಲ್ಲಿ ಪವನ್

Pawan Kalyan: ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಸಿನಿಮಾ ಶುರುವಾಗಿ ಐದು ವರ್ಷಗಳಾಗಿತ್ತು. ಇದೀಗ ಪವನ್ ಕಲ್ಯಾಣ್ ಮತ್ತೊಂದು ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಿದ್ದಾರೆ. ಡಿಸಿಎಂ ಆಗುವ ಮುಂಚೆ ಪವನ್ ಮೂರು ಸಿನಿಮಾಗಳಲ್ಲಿ ನಟಿಸುತ್ತಿದ್ದರು. ಅದರಲ್ಲಿ ಒಂದು ಸಿನಿಮಾ ಮುಗಿಸಿದ್ದು ಈಗ ಮತ್ತೊಂದು ಸಿನಿಮಾದ ಚಿತ್ರೀಕರಣ ಪ್ರಾರಂಭಿಸಿದ್ದಾರೆ.

‘ಹರಿ ಹರ ವೀರ ಮಲ್ಲು’ ಬಿಡುಗಡೆಗೆ ಮುನ್ನ ಮತ್ತೊಂದು ಸಿನಿಮಾ ಶೂಟಿಂಗ್​​ನಲ್ಲಿ ಪವನ್
Pawan Kalyan
Follow us
ಮಂಜುನಾಥ ಸಿ.
|

Updated on: Jun 11, 2025 | 10:59 AM

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾ ಬರೋಬ್ಬರಿ ಐದು ವರ್ಷಗಳ ನಂತರ ಚಿತ್ರೀಕರಣ ಪೂರ್ಣವಾಗಿದ್ದು ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜೂನ್ 12 ಕ್ಕೆ ಸಿನಿಮಾ ಬಿಡುಗಡೆ ಆಗಬೇಕಿತ್ತು ಆದರೆ ಅನಿವಾರ್ಯ ಕಾರಣಗಳಿಂದಾಗಿ ಸಿನಿಮಾ ಬಿಡುಗಡೆ ಮುಂದೂಡಲ್ಪಟ್ಟಿದೆ. ‘ಹರಿ ಹರ ವೀರ ಮಲ್ಲು’ ಮಾತ್ರವೇ ಅಲ್ಲದೆ ಪವನ್ ನಟನೆಯ ಇನ್ನೂ ಎರಡು ಸಿನಿಮಾಗಳು ಕಳೆದ ಮೂರು-ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿವೆ. ಆದರೆ ಇದೀಗ ಮತ್ತೊಂದು ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಲಿದ್ದಾರೆ ಪವನ್.

ಆಂಧ್ರ ವಿಧಾನಸಭೆ ಚುನಾವಣೆಗೆ ಮುಂಚೆ ಪವನ್ ಕಲ್ಯಾಣ್ ‘ಹರಿ ಹರ ವೀರ ಮಲ್ಲು’ ಸಿನಿಮಾದ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ಮತ್ತು ‘ಓಜಿ’ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದರು. ‘ಹರಿ ಹರ ವೀರ ಮಲ್ಲು’ ಸಿನಿಮಾ ಮೊದಲು ಪ್ರಾರಂಭವಾದ ಕಾರಣ ಆ ಸಿನಿಮಾವನ್ನು ಮೊದಲು ಮುಗಿಸಿಕೊಟ್ಟರು, ಇದೀಗ ಇನ್ನೂ ಎರಡು ಸಿನಿಮಾಗಳ ಚಿತ್ರೀಕರಣ ಅರ್ಧಕ್ಕೆ ನಿಂತಿದ್ದು ಇದೀಗ ಮತ್ತೊಂದು ಸಿನಿಮಾದ ಚಿತ್ರೀಕರಣದಲ್ಲಿ ಪವನ್ ಕಲ್ಯಾಣ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

‘ಉಸ್ತಾದ್ ಭಗತ್ ಸಿಂಗ್’ ಹೆಸರಿನ ಆಕ್ಷನ್-ಕಾಮಿಡಿ ಸಿನಿಮಾನಲ್ಲಿ ಪವನ್ ಕಲ್ಯಾಣ್ ನಟಿಸುತ್ತಿದ್ದರು. ಸಿನಿಮಾದ ಟೀಸರ್ ಸಹ ಈಗಾಗಲೇ ಬಿಡುಗಡೆ ಆಗಿತ್ತು. ಸಿನಿಮಾನಲ್ಲಿ ಶ್ರೀಲೀಲಾ ನಾಯಕಿಯಾಗಿ ನಟಿಸುತ್ತಿದ್ದರು. ಅರ್ಧಕ್ಕೆ ನಿಂತಿದ್ದ ಸಿನಿಮಾದ ಚಿತ್ರೀಕರಣವನ್ನು ಈಗ ಪುನಃ ಪ್ರಾರಂಭಿಸಲಾಗಿದೆ. ಅಲ್ಯುಮ್ಯೂನಿಯಂ ಫ್ಯಾಕ್ಟರಿಯಲ್ಲಿ ಸಿನಿಮಾದ ಚಿತ್ರೀಕರಣವನ್ನು ಮಾಡಲಾಗುತ್ತಿದ್ದು, ಶ್ರೀಲೀಲಾ ಅವರು ಪವನ್ ಸಿನಿಮಾಕ್ಕಾಗಿ ಸತತ 20 ದಿನಗಳ ಕಾಲ್ ಶೀಟ್ ಸಹ ನೀಡಿದ್ದಾರಂತೆ.

ಇದನ್ನೂ ಓದಿ:ಸಿನಿಮಾ ಇಲ್ಲದೆ ಕಷ್ಟದಲ್ಲಿರೋ ತ್ರಿವಿಕ್ರಂಗೆ ದೊಡ್ಡ ಸಲಹೆ ಕೊಟ್ಟ ಪವನ್ ಕಲ್ಯಾಣ್

‘ಉಸ್ತಾದ್ ಭಗತ್ ಸಿಂಗ್’ ಸಿನಿಮಾವನ್ನು ಪವನ್ ಕಲ್ಯಾಣ್ ಕೈಬಿಟ್ಟಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾಸ್ ಸಿನಿಮಾ ಆಗಿದ್ದು, ಸಿನಿಮಾದಲ್ಲಿ ಪವನ್ ಪಾತ್ರ ತುಸು ಬೇಜವಾಬ್ದಾರಿಯ, ತಮಾಷೆ ಪ್ರವೃತ್ತಿಯ, ಸಿಡುಕು ವ್ಯಕ್ತಿತ್ವದ, ಕಾನೂನು ಕೈಗೆತ್ತಿಕೊಳ್ಳುವ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದರು. ಈಗ ಪವನ್, ಆಂಧ್ರ ಪ್ರದೇಶದ ಅತ್ಯಂತ ಜವಾಬ್ದಾರಿಯುತ ಹುದ್ದೆಯಾದ ಉಪ ಮುಖ್ಯಮಂತ್ರಿ ಹುದ್ದೆಯಲ್ಲಿರುವ ಕಾರಣ ಆ ಸಿನಿಮಾ ಈಗಿನ ಇಮೇಜಿಗೆ ಸೂಟ್ ಆಗುವುದಿಲ್ಲವೆಂದು ಸಿನಿಮಾ ಕೈಬಿಟ್ಟಿದ್ದಾರೆ ಎನ್ನಲಾಗಿತ್ತು. ಆದರೆ ಪವನ್ ಸಿನಿಮಾ ಕೈಬಿಟ್ಟಿಲ್ಲ.

ಆದರೆ ಸಿನಿಮಾದ ಚಿತ್ರಕತೆಯಲ್ಲಿ ಬದಲಾವಣೆ ಮಾಡಲಾಗಿದೆ. ಸಾಕಷ್ಟು ಸಂಭಾಷಣೆಗಳನ್ನು ಸಹ ಬದಲಾವಣೆ ಮಾಡಲಾಗಿದೆ. ಪವನ್​ರ ಈಗಿನ ಇಮೇಜಿಗೆ ತಕ್ಕಂತೆ ಕತೆ-ಚಿತ್ರಕತೆಯಲ್ಲಿ ಬದಲಾವಣೆ ಮಾಡಿ ಚಿತ್ರೀಕರಣ ಮಾಡಲಾಗುತ್ತಿದೆ. ಕೇವಲ 20 ದಿನಗಳಲ್ಲಿ ಸಿನಿಮಾದ ಚಿತ್ರೀಕರಣ ಮುಗಿಸಿಕೊಡಲಿದ್ದಾರಂತೆ ಪವನ್ ಕಲ್ಯಾಣ್. ಸಿನಿಮಾ ಅನ್ನು ಪವನ್​ರ ಆಪ್ತ ಹರೀಶ್ ಶಂಕರ್ ನಿರ್ದೇಶನ ಮಾಡುತ್ತಿದ್ದಾರೆ. ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ಬಳಿಕ ‘ಓಜಿ’ ಸಿನಿಮಾದ ಚಿತ್ರೀಕರಣವನ್ನು ಸಹ ಪವನ್ ಪ್ರಾರಂಭ ಮಾಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಬಿಜೆಪಿ ಮತ್ತು ನಾನು ಪರಸ್ಪರ ಅವಲಂಬಿತರಾಗಿದ್ದೇವೆ: ಬಸನಗೌಡ ಯತ್ನಾಳ್
ಬಿಜೆಪಿ ಮತ್ತು ನಾನು ಪರಸ್ಪರ ಅವಲಂಬಿತರಾಗಿದ್ದೇವೆ: ಬಸನಗೌಡ ಯತ್ನಾಳ್
ರಾಷ್ಟ್ರಪತಿ ಭೇಟಿಗೆ ತೆರಳುವೆ, ಮೋದಿ ಭೇಟಿಗೂ ಸಮಯ ಕೇಳಿದ್ದೇನೆ: ಸಿಎಂ
ರಾಷ್ಟ್ರಪತಿ ಭೇಟಿಗೆ ತೆರಳುವೆ, ಮೋದಿ ಭೇಟಿಗೂ ಸಮಯ ಕೇಳಿದ್ದೇನೆ: ಸಿಎಂ
ರಾಜ್ಯ ರಾಜ್ಯಕಾರಣದಲ್ಲಿ ಯಡಿಯೂರಪ್ಪ ಸಕ್ರಿಯರಾಗುವ ಹಿಂದೆ ಕಾರಣವಿದೆಯೇ?
ರಾಜ್ಯ ರಾಜ್ಯಕಾರಣದಲ್ಲಿ ಯಡಿಯೂರಪ್ಪ ಸಕ್ರಿಯರಾಗುವ ಹಿಂದೆ ಕಾರಣವಿದೆಯೇ?
ಈಶ್ವರಪ್ಪರ ಪ್ರಕಾರ ಅಲ್ಪಸಂಖ್ಯಾತರು ಅನ್ನೋದು ಕೂಡ ಒಂದು ಧರ್ಮ!
ಈಶ್ವರಪ್ಪರ ಪ್ರಕಾರ ಅಲ್ಪಸಂಖ್ಯಾತರು ಅನ್ನೋದು ಕೂಡ ಒಂದು ಧರ್ಮ!
ತಾಯಿಗೆ ಹೊಡೆಯುವಾಗ ತಂದೆಗೆ ಕೈಮುಗಿದು ಬೇಡಿದ ಮಗಳು
ತಾಯಿಗೆ ಹೊಡೆಯುವಾಗ ತಂದೆಗೆ ಕೈಮುಗಿದು ಬೇಡಿದ ಮಗಳು
ಆರೋಪಿಗಳು ಓಡಿ ಹೋಗಲು ಅವಕಾಶ ಮಾಡಿಕೊಟ್ಟ ಇಬ್ಬರು ಪೊಲೀಸರ ಅಮಾನತು
ಆರೋಪಿಗಳು ಓಡಿ ಹೋಗಲು ಅವಕಾಶ ಮಾಡಿಕೊಟ್ಟ ಇಬ್ಬರು ಪೊಲೀಸರ ಅಮಾನತು
ವಿಚಾರಣೆ ನಂತರ ಈಡಿ ಕರೆದಿದ್ದು ಯಾಕೆ ಅಂತ ಗೊತ್ತಾಗಲಿದೆ: ಸುರೇಶ್
ವಿಚಾರಣೆ ನಂತರ ಈಡಿ ಕರೆದಿದ್ದು ಯಾಕೆ ಅಂತ ಗೊತ್ತಾಗಲಿದೆ: ಸುರೇಶ್
ದೂದ್​ಗಂಗಾ, ವೇದಗಂಗಾ ಮತ್ತು ಹಿರಣ್ಯಕೇಶಿ ನದಿಗಳಲ್ಲೂ ಹೆಚ್ಚಿದ ನೀರು ಪ್ರಮಾಣ
ದೂದ್​ಗಂಗಾ, ವೇದಗಂಗಾ ಮತ್ತು ಹಿರಣ್ಯಕೇಶಿ ನದಿಗಳಲ್ಲೂ ಹೆಚ್ಚಿದ ನೀರು ಪ್ರಮಾಣ