AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಓಜಿ’ ಸಿನಿಮಾ ಟ್ರೇಲರ್ ಈವೆಂಟ್​ನಲ್ಲಿ ಮಳೆಯಲ್ಲಿ ನೆನೆದು ಹಾಸಿಗೆ ಹಿಡಿದ ಪವನ್ ಕಲ್ಯಾಣ್

ಪವನ್ ಕಲ್ಯಾಣ್ ನಟನೆಯ ‘ಓಜಿ’ ಸಿನಿಮಾದ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಮಳೆಯಲ್ಲಿ ನೆನೆದ ಪರಿಣಾಮ ಅವರಿಗೆ ತೀವ್ರ ಜ್ವರ ಕಾಣಿಸಿದೆ. ಜ್ವರದ ಹೊರತಾಗಿಯೂ ಅವರು ವಿಧಾನಸಭಾ ಅಧಿವೇಶನದಲ್ಲಿ ಭಾಗವಹಿಸಿದ್ದರು. ಇದರಿಂದ ಜ್ವರ ಉಲ್ಬಣಗೊಂಡಿದೆ. ವೈದ್ಯರ ಸಲಹೆ ಮೇರೆಗೆ ಈಗ ವಿಶ್ರಾಂತಿ ಪಡೆಯುತ್ತಿದ್ದಾರೆ.

‘ಓಜಿ’ ಸಿನಿಮಾ ಟ್ರೇಲರ್ ಈವೆಂಟ್​ನಲ್ಲಿ ಮಳೆಯಲ್ಲಿ ನೆನೆದು ಹಾಸಿಗೆ ಹಿಡಿದ ಪವನ್ ಕಲ್ಯಾಣ್
ಪವನ್
ರಾಜೇಶ್ ದುಗ್ಗುಮನೆ
|

Updated on: Sep 24, 2025 | 6:59 AM

Share

ಪವನ್ ಕಲ್ಯಾಣ್ ನಟನೆಯ ‘ಓಜಿ’ ಸಿನಿಮಾ ಸೆಪ್ಟೆಂಬರ್ 25ರಂದು ರಿಲೀಸ್ ರಿಲೀಸ್ ಆಗುತ್ತಿದೆ. ಈ ಸಿನಿಮಾ ಬಗ್ಗೆ ಅವರ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾದ ಟ್ರೇಲರ್ ಕೋಟ್ಯಂತರ ಬಾರಿ ವೀಕ್ಷಣೆ ಕಂಡಿದೆ. ಹೀಗಿರುವಾಗಲೇ ಪವನ್ ಕಲ್ಯಾಣ್ ಅವರು ಹಾಸಿಗೆ ಹಿಡಿದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಸಿನಿಮಾದ ಟ್ರೇಲರ್ ಲಾಂಚ್ ಈವೆಂಟ್. ಈ ವೇಳೆ ಅವರು ಮಳೆಯಲ್ಲಿ ನೆನೆದಿದ್ದರು. ಹೀಗಾಗಿ ಅವರಿಗೆ ತೀವ್ರ ಜ್ವರ ಕಾಣಿಸಿದೆ.

ಹೈದರಾಬಾದ್ ಎಲ್​ಬಿ ಸ್ಟೇಡಿಯಂನಲ್ಲಿ ಸೆಪ್ಟೆಂಬರ್ 21ರಂದು ಸಿನಿಮಾದ ಟ್ರೇಲರ್ ಲಾಂಚ್ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ವೇದಿಕೆಯಲ್ಲೇ ಟ್ರೈಲರ್ ಲಾಂಚ್ ಆಗಬೇಕಿತ್ತು. ಆದರೆ, ಟ್ರೇಲರ್ ರೆಡಿ ಇರದ ಕಾರಣ ಅದನ್ನು ರಿಲೀಸ್ ಮಾಡಲು ಸಾಧ್ಯವಾಗಲೇ ಇಲ್ಲ. ಇದೇ ಸಮಯಕ್ಕೆ ಮಳೆ ಕೂಡ ಜೋರಾಯಿತು.

ಪವನ್ ಕಲ್ಯಾಣ್ ಅವರು 35-40 ನಿಮಿಷಗಳ ಕಾಲ ಮಳೆಯಲ್ಲೇ ಇದ್ದರು. ಇದರಿಂದ ಅವರಿಗೆ ಇನ್​ಫೆಕ್ಷನ್ ಆಗಿದ್ದು ಜ್ವರ ಬಂದಿದೆ ಎನ್ನಲಾಗಿದೆ. ಆದರೆ, ಪವನ್ ಕಲ್ಯಾಣ್ ಅವರು ಛಲ ಬಿಡುವ ವ್ಯಕ್ತಿಯಲ್ಲ. ಅವರು ಸೋಮವಾರ ಅಮರಾವತಿಗೆ ಪ್ರಯಾಣ ಬೆಳೆಸಿದ್ದು, ವಿಧಾನಸಭೆ ಅಧಿವೇಶನದಲ್ಲಿ ಭಾಗಿಯಾಗಿದ್ದರು. ಇದರಿಂದ ಜ್ವರ ಮತ್ತಷ್ಟು ಹೆಚ್ಚಿದೆ. ಹೀಗಾಗಿ, ವಿಶ್ರಾಂತಿಯಲ್ಲಿದ್ದಾರೆ.

ಇದನ್ನೂ ಓದಿ
Image
ರಿಯಾಲಿಟಿ ಶೋ ತೊರೆಯುವ ನಿರ್ಧಾರಕ್ಕೆ ಬಂದ ಧನಶ್ರೀ; ಕಾರಣ ಏನು?
Image
‘ಕಾಂತಾರ: ಚಾಪ್ಟರ್ 1’ ಅವಧಿ ಅದೆಷ್ಟು ದೀರ್ಘ; ಇಲ್ಲಿದೆ ಸೆನ್ಸಾರ್ ವಿವರ
Image
ಮಾಡಿದ ಆ ಒಂದು ತಪ್ಪಿಗೆ ವೇದಿಕೆ ಮೇಲೆ ಅನುಶ್ರೀಗೆ ಕ್ಷಮೆ ಕೇಳಿದ ರಿಷಬ್
Image
‘BBK 12’ ಆರಂಭಕ್ಕೆ ಕೆಲವೇ ದಿನ ಬಾಕಿ ಇರುವಾಗ ಬಂತು ಸ್ಪರ್ಧಿಗಳ ಹೊಸ ಪಟ್ಟಿ

‘ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರಿಗೆ ವೈರಲ್ ಜ್ವರ ಕಾಣಿಸಿದೆ. ಕಳೆದ ಎರಡು ದಿನಗಳಿಂದ ಅವರು ಜ್ವರದಿಂದ ಬಳಲುತ್ತಿದ್ದಾರೆ. ಜ್ವರದ ಹೊರತಾಗಿಯೂ, ಅವರು ಸೋಮವಾರ ವಿಧಾನಸಭಾ ಅಧಿವೇಶನಕ್ಕೆ ಹಾಜರಾಗಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಸೋಮವಾರ ರಾತ್ರಿಯಿಂದ ಜ್ವರದ ತೀವ್ರತೆ ಹೆಚ್ಚಾಗಿದೆ. ಈ ಸಂದರ್ಭದಲ್ಲಿ, ವೈದ್ಯರು ಪರೀಕ್ಷೆಗಳನ್ನು ನಡೆಸಿ ಚಿಕಿತ್ಸೆ ನೀಡುತ್ತಿದ್ದಾರೆ. ಅವರು ವಿಶ್ರಾಂತಿ ಪಡೆಯಲು ಸಲಹೆ ನೀಡಿದ್ದಾರೆ. ಹೀಗಾಗಿ, ಅವರು ಕೆಲವು ದಿನ ವಿಶ್ರಾಂತಿಯಲ್ಲಿ ಇರಲಿದ್ದಾರೆ’ ಎಂದು ಪವನ್ ಕಲ್ಯಾಣ್ ತಂಡದವರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ‘ಓಜಿ’ ಸಿನಿಮಾದಲ್ಲಿ ಪವನ್ ಕಲ್ಯಾಣ್ ಎದುರು ಅಬ್ಬರಿಸುವ ಕನ್ನಡಿಗ ಸೌರವ್ ಲೋಕೇಶ್

‘OG’ ಸಿನಿಮಾಗೆ ಸುಜಿತ್ ನಿರ್ದೇಶನ ಇದೆ. ಈ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಲು ಅವರು ಕೂಡ ಕಾರಣ. ಆದರೆ, ಸಿನಿಮಾ ರಿಲೀಸ್ ವೇಳೆ ಅವರು ಅಸ್ವಸ್ಥಗೊಂಡಿರುವುದು ಫ್ಯಾನ್ಸ್ ಬೇಸರಕ್ಕೆ ಕಾರಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಾಕಿ ಹಣಕ್ಕಾಗಿ ಮಹಿಳೆಯ ಕಪಾಳಕ್ಕೆ ಬಾರಿಸಿದ ಅಂಗಡಿ ಓನರ್
ಬಾಕಿ ಹಣಕ್ಕಾಗಿ ಮಹಿಳೆಯ ಕಪಾಳಕ್ಕೆ ಬಾರಿಸಿದ ಅಂಗಡಿ ಓನರ್
ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಮರಗಳ ಮಾರಣಹೋಮ
ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಮರಗಳ ಮಾರಣಹೋಮ
ಫುಲ್​​ ಟೈಟ್​​ ಆಗಿ ಆಸ್ಪತ್ರೆಗೆ ಬಂದ ವೈದ್ಯನಿಗೆ ಸಾರ್ವಜನಿಕರಿಂದ ಧರ್ಮದೇಟು
ಫುಲ್​​ ಟೈಟ್​​ ಆಗಿ ಆಸ್ಪತ್ರೆಗೆ ಬಂದ ವೈದ್ಯನಿಗೆ ಸಾರ್ವಜನಿಕರಿಂದ ಧರ್ಮದೇಟು
ಟಿಟಿಡಿಗೆ ಬಮುಲ್ ಪ್ರತಿನಿತ್ಯ ಎಷ್ಟು ತುಪ್ಪ ಕೊಡುತ್ತೆ ಗೊತ್ತಾ?
ಟಿಟಿಡಿಗೆ ಬಮುಲ್ ಪ್ರತಿನಿತ್ಯ ಎಷ್ಟು ತುಪ್ಪ ಕೊಡುತ್ತೆ ಗೊತ್ತಾ?
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು