AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿ ಹೇರಿಕೆ ಗಲಾಟೆ; ತಮಿಳು ಸಿಎಂ ಸ್ಟಾಲಿನ್​ಗೆ ಟಾಂಗ್ ಕೊಟ್ಟ ಪವನ್ ಕಲ್ಯಾಣ್

ತಮಿಳುನಾಡು ಸರ್ಕಾರದ ಹಿಂದಿ ವಿರೋಧ ಮತ್ತು ಕೇಂದ್ರ ಸರ್ಕಾರದ ತ್ರಿಭಾಷಾ ನೀತಿಯ ಬಗ್ಗೆ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಮಾತನಾಡಿದ್ದಾರೆ. ತಮಿಳು ಚಲನಚಿತ್ರಗಳನ್ನು ಹಿಂದಿಗೆ ಡಬ್ ಮಾಡಿ ಆರ್ಥಿಕ ಲಾಭ ಪಡೆಯುವ ರಾಜಕಾರಣಿಗಳು ಹಿಂದಿಯನ್ನು ವಿರೋಧಿಸುವುದು ಸರಿ ಅಲ್ಲ ಎಂದಿದ್ದಾರೆ.

ಹಿಂದಿ ಹೇರಿಕೆ ಗಲಾಟೆ; ತಮಿಳು ಸಿಎಂ ಸ್ಟಾಲಿನ್​ಗೆ ಟಾಂಗ್ ಕೊಟ್ಟ ಪವನ್ ಕಲ್ಯಾಣ್
ಪವನ್-ಎಂಕೆ ಸ್ಟಾಲಿನ್
Follow us
ರಾಜೇಶ್ ದುಗ್ಗುಮನೆ
|

Updated on:Mar 15, 2025 | 10:19 AM

ತಮಿಳುನಾಡು ಸರ್ಕಾರ ಹಿಂದಿ ಹೇರಿಕೆಯನ್ನು ವಿರೋಧಿಸುತ್ತಾ ಬಂದಿದೆ. ಕೇಂದ್ರ ಸರ್ಕಾರವು ತ್ರಿಭಾಷಾ ನೀತಿಯ (NEP) ಮೂಲಕ ಹಿಂದಿ ಹೇರಿಕೆಗೆ ಪ್ರಯತ್ನಿಸುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಇತ್ತೀಚೆಗೆ ಆರೋಪಿಸಿದ್ದರು. ಈ ಬಗ್ಗೆ ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಅವರು ಮಾತನಾಡಿದ್ದಾರೆ. ‘ಈ ನಾಯಕರು ಹಿಂದಿಯನ್ನು ವಿರೋಧಿಸುತ್ತಾರೆ. ಆದರೆ, ಆರ್ಥಿಕ ಲಾಭಕ್ಕಾಗಿ ತಮಿಳು ಚಲನಚಿತ್ರಗಳನ್ನು ಹಿಂದಿಗೆ ಡಬ್ ಮಾಡುತ್ತಾರೆ’ ಎಂದು ಟೀಕೆ ಮಾಡಿದ್ದಾರೆ. ಅವರ ಹೇಳಿಕೆ ಸಂಚಲನ ಮೂಡಿಸಿದೆ.

ಕಾಕಿನಾಡಿನ ಪಿತಾಂಪುರಂನಲ್ಲಿ ನಡೆದ ಜನಸೇನಾ ಪಕ್ಷದ 12ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಪವನ್ ಕಲ್ಯಾಣ್ ಮಾತನಾಡಿದ್ದಾರೆ. ‘ಕೆಲವರು ಸಂಸ್ಕೃತ, ಹಿಂದಿಯನ್ನು ಏಕೆ ಟೀಕಿಸುತ್ತಾರೆ ಗೊತ್ತಿಲ್ಲ. ಆರ್ಥಿಕ ಲಾಭಕ್ಕಾಗಿ ತಮ್ಮ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಲು ಅವಕಾಶ ನೀಡುವ ತಮಿಳುನಾಡಿನ ರಾಜಕಾರಣಿಗಳು ಹಿಂದಿ ಭಾಷೆಯನ್ನು ಏಕೆ ವಿರೋಧಿಸುತ್ತಾರೆ? ಅವರು ಬಾಲಿವುಡ್‌ನಿಂದ ಹಣ ಮಾಡಲು ಬಯಸುತ್ತಾರೆ. ಆದರೆ, ಹಿಂದಿಯನ್ನು ಸ್ವೀಕರಿಸಲು ನಿರಾಕರಿಸುತ್ತಾರೆ, ಇದು ಯಾವ ರೀತಿಯ ತರ್ಕ’ ಎಂದು ಪ್ರಶ್ನೆ ಮಾಡಿದ್ದಾರೆ.

‘ತಮಿಳು ಸೇರಿದಂತೆ ಭಾರತಕ್ಕೆ ಎಲ್ಲಾ ಭಾಷೆಗಳು ಬೇಕು. ಯಾವುದೋ ಎರಡು ಭಾಷೆ ಮಾತ್ರ ಸಾಕಾಗಲ್ಲ. ನಾವು ಭಾಷಾ ವೈವಿಧ್ಯತೆಯನ್ನು ಅಳವಡಿಸಿಕೊಳ್ಳಬೇಕು. ನಮ್ಮ ದೇಶದ ಸಮಗ್ರತೆಯನ್ನು ಕಾಪಾಡಿಕೊಳ್ಳುವುದರ ಜೊತೆಗೆ ನಮ್ಮ ಜನರಲ್ಲಿ ಪ್ರೀತಿ ಮತ್ತು ಏಕತೆಯನ್ನು ಉತ್ತೇಜಿಸಲು ಭಾಷಾ ವೈವಿಧ್ಯತೆಯ ಅಗತ್ಯವಿದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ
Image
ಕತ್ರಿನಾ ಮಾಜಿ ಗೆಳೆಯನ ದಾಖಲೆಯನ್ನು ಮುರಿಯಲಿದ್ದಾರೆ ವಿಕ್ಕಿ ಕೌಶಲ್
Image
ಆಲಿಯಾ ಭಟ್ ಕಂಡ ಬ್ರೇಕಪ್​ಗಳು ಒಂದೆರಡಲ್ಲ; ಶಾಲೆಯಲ್ಲೇ ಆಗಿತ್ತು ಲವ್ ಫೇಲ್
Image
‘ಹಣಕ್ಕಲ್ಲ, ಹುಚ್ಚಾಟಕ್ಕೆ’; ಅಂಬಾನಿ ಮನೆ ಮದುವೆಗೆ ಬಂದ ಕಾರಣ ನೀಡಿದ ಕಿಮ್
Image
ಅಪ್ಪು ಪ್ರೀತಿ ವಿಚಾರ ಹೇಳಿದಾಗ ರಾಜ್​ಕುಮಾರ್ ಪ್ರತಿಕ್ರಿಯಿಸಿದ್ದು ಹೇಗೆ?

ಸ್ಟಾಲಿನ್ ಹೇಳಿದ್ದೇನು?

ಮಾರ್ಚ್ 13ರಂದು ತಮಿಳುನಾಡು ಸಿಎಂ ಸ್ಟಾಲಿನ್ ಅವರು ‘ಎನ್​ಇಪಿ’ಯನ್ನು ವಿರೋಧಿಸಿದ್ದರು. ಇದನ್ನು ಹಿಂದಿಯನ್ನು ಉತ್ತೇಜಿಸಲು ವಿನ್ಯಾಸಗೊಳಿಸಲಾದ ‘ಕೇಸರಿ ನೀತಿ’ ಎಂದು ಹೇಳಿದ್ದರು. ಈ ನೀತಿಯು ತಮಿಳುನಾಡಿನ ಶಿಕ್ಷಣ ವ್ಯವಸ್ಥೆಯನ್ನು ನಾಶಮಾಡುತ್ತದೆ ಎಂದಿದ್ದರು.

‘ರಾಷ್ಟ್ರೀಯ ಶಿಕ್ಷಣ ನೀತಿಯು, ಶಿಕ್ಷಣ ನೀತಿಯಲ್ಲ, ಅದು ಕೇಸರೀಕರಣದ ನೀತಿ ಆಗಿದೆ. ಈ ನೀತಿಯನ್ನು ಭಾರತದ ಅಭಿವೃದ್ಧಿಗಾಗಿ ಅಲ್ಲ, ಹಿಂದಿಯ ಅಭಿವೃದ್ಧಿಗಾಗಿ ಮಾಡಲಾಗಿದೆ. ಈ ನೀತಿಯು ತಮಿಳುನಾಡಿನ ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಾಶಪಡಿಸುತ್ತದೆ ಎಂಬ ಕಾರಣಕ್ಕಾಗಿ ನಾವು ಇದನ್ನು ವಿರೋಧಿಸುತ್ತಿದ್ದೇವೆ. NEP ಜಾರಿಗೆ ತರಲು ರಾಜ್ಯದ ಮೇಲೆ ಒತ್ತಡ ಹೇರಲು ಕೇಂದ್ರ ಸರ್ಕಾರವು ಹಣವನ್ನು ತಡೆಹಿಡಿಯುತ್ತಿದೆ’ ಎಂದು ಸ್ಟಾಲಿನ್ ಆರೋಪಿಸಿದ್ದರು.

ಇದನ್ನೂ ಓದಿ: ಭಾಷಾ ವಿವಾದ; ತಮಿಳುನಾಡಿನಲ್ಲಿ ಹಿಂದಿಯ ರೂಪಾಯಿ ಚಿಹ್ನೆಯ ಬದಲು ತಮಿಳು ಭಾಷೆಯ ರೂ. ಬಳಕೆಗೆ ನಿರ್ಧಾರ

ರೂಪಾಯಿ ಚಿಹ್ನೆ ಬದಲು

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರವು ರಾಜ್ಯ ಬಜೆಟ್‌ನ ಅಧಿಕೃತ ಲೋಗೋದಲ್ಲಿ ಭಾರತೀಯ ರೂಪಾಯಿ ಚಿಹ್ನೆಯಾದ ₹ ಬದಲಿಗೆ ತಮಿಳು ಅಕ್ಷರವಾದ ರೂ. ಬಳಸಲು ನಿರ್ಧರಿಸಿದೆ. ಈ ಬಗ್ಗೆ ಆದೇಶ ಕೂಡ ಹೊರಡಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:13 am, Sat, 15 March 25

ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ