AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ-ರಾಜಕಾರಣಿ ಪವನ್​ ಕಲ್ಯಾಣ್​ಗೆ ಕೊರೊನಾ ಪಾಸಿಟಿವ್​; ಆಸ್ಪತ್ರೆಗೆ ದಾಖಲು

ಪವನ್​ ಕಲ್ಯಾಣ್​ ವಕೀಲ್​ ಸಾಬ್​ ಸಿನಿಮಾ ಇತ್ತೀಚೆಗೆ ತೆರೆಕಂಡಿತ್ತು. ಈ ಚಿತ್ರದ ಪ್ರಚಾರಕ್ಕಾಗಿ ಅವರು ಸಾಕಷ್ಟು ಸುತ್ತಾಟ ನಡೆಸಿದ್ದರು. ಪರಿಣಾಮ ಪವನ್​ ಕಲ್ಯಾಣ್​ ಅವರ ಜತೆ ಇದ್ದ ಸಿಬ್ಬಂದಿಗೆ ಕೊವಿಡ್​ ಪಾಸಿಟಿವ್​ ವರದಿ ಬಂದಿತ್ತು.

ನಟ-ರಾಜಕಾರಣಿ ಪವನ್​ ಕಲ್ಯಾಣ್​ಗೆ ಕೊರೊನಾ ಪಾಸಿಟಿವ್​; ಆಸ್ಪತ್ರೆಗೆ ದಾಖಲು
ಪವನ್​ ಕಲ್ಯಾಣ್​ - ವಕೀಲ್​ ಸಾಬ್​ ಸಿನಿಮಾ ಪೋಸ್ಟರ್​
ರಾಜೇಶ್ ದುಗ್ಗುಮನೆ
|

Updated on: Apr 16, 2021 | 5:47 PM

Share

ಜನಸೇನಾ ಪಕ್ಷದ ಮುಖ್ಯಸ್ಥ ಹಾಗೂ ಟಾಲಿವುಡ್​ ನಟ ಪವನ್​ ಕಲ್ಯಾಣ್​ ಸಿಬ್ಬಂದಿಗೆ ಇತ್ತೀಚೆಗೆ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿತ್ತು. ಹೀಗಾಗಿ ಅವರು ಹೋಂ ಕ್ವಾರಂಟೈನ್​ ಆಗಿದ್ದರು. ಈಗ ಅವರನ್ನು ಕೂಡ ಪರೀಕ್ಷೆಗೆ ಒಳಪಡಿಸಲಾಗಿದ್ದು, ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದೆ. ಪವನ್​ ಕಲ್ಯಾಣ್​ ನಟನೆಯ ವಕೀಲ್​ ಸಾಬ್​ ಸಿನಿಮಾ ಇತ್ತೀಚೆಗೆ ತೆರೆಕಂಡಿತ್ತು. ಈ ಚಿತ್ರದ ಪ್ರಚಾರಕ್ಕಾಗಿ ಅವರು ಸಾಕಷ್ಟು ಸುತ್ತಾಟ ನಡೆಸಿದ್ದರು. ಪರಿಣಾಮ ಪವನ್​ ಕಲ್ಯಾಣ್​ ಅವರ ಜತೆ ಇದ್ದ ಸಿಬ್ಬಂದಿಗೆ ಕೊವಿಡ್​ ಪಾಸಿಟಿವ್​ ವರದಿ ಬಂದಿತ್ತು. ಇದು ಪವನ್​ ಆತಂಕಕ್ಕೆ ಕಾರಣವಾಗಿತ್ತು. ಹೀಗಾಗಿ, ಅವರು ಹೋಂ ಕ್ವಾರಂಟೈನ್​ ಆಗಿದ್ದರು. ಈಗ ಪವನ್​ ಕಲ್ಯಾಣ್​ಗೂ ಕೊರೊನಾ ಬಂದಿರುವುದರಿಂದ​ ಆಸ್ಪತ್ರೆಗೆ ಶಿಫ್ಟ್​ ಆಗಿದ್ದಾರೆ. ತಜ್ಞರ ತಂಡ ಅವರಿಗೆ ಚಿಕಿತ್ಸೆ ನೀಡುವ ಕೆಲಸ ಮಾಡುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಲೋಕಸಭಾ ಉಪಚುನಾವಣೆಯಲ್ಲಿ ತಿರುಪತಿ ಕ್ಷೇತ್ರದಲ್ಲಿ ಜನಸೇನಾ ಪಕ್ಷ ಸ್ಪರ್ಧೆ ಮಾಡುತ್ತಿದೆ. ಶನಿವಾರ (ಏಪ್ರಿಲ್ 17) ಇಲ್ಲಿ ಮತದಾನ ಕೂಡ ನಡೆಯುತ್ತಿದೆ. ಹೀಗಾಗಿ ಪವನ್​ ಈ ತಿಂಗಳ ಆರಂಭದಲ್ಲಿ ಅಲ್ಲಿಗೆ ತೆರಳಿ ಪ್ರಚಾರ ಕೂಡ ನಡೆಸಿದ್ದರು. ನಂತರ ಸಿನಿಮಾ ಪ್ರಚಾರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಈ ವೇಳೆ ಪವನ್​ ಕಲ್ಯಾಣ್​ ಸಾಕಷ್ಟು ಜನರ ಸಂಪರ್ಕಕ್ಕೆ ಬಂದಿದ್ದರು. ನಂತರದ ದಿನಗಳಲ್ಲಿ ಪವನ್​ ಕಲ್ಯಾಣ್​ಗೆ ಜ್ವರ ಹಾಗೂ ಮೈಕೈ ನೋವು ಕಾಣಿಸಿಕೊಂಡಿತ್ತು.

ಪವನ್​ ಕಲ್ಯಾಣ್​ ನಟನೆಯ ವಕೀಲ್​ ಸಾಬ್​ ಚಿತ್ರ ಏಪ್ರಿಲ್​ 9ರಂದು ತೆರೆಗೆ ಬಂದಿತ್ತು. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಕೊರೊನಾ ಅಬ್ಬರದ ನಡುವೆಯೂ ಸಿನಿಮಾ ಇಷ್ಟೊಂದು ಕಲೆಕ್ಷನ್​ ಮಾಡುತ್ತಿರುವುದಕ್ಕೆ ಅಭಿಮಾನಿಗಳು ಫುಲ್​ ಖುಷ್​ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಂಭ್ರಮಾಚರಣೆ ಜೋರಾಗಿದೆ.

ಇದನ್ನೂ ಓದಿ: Coronavirus Live Updates: ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಕೊರೊನಾ ಸೋಂಕು ದೃಢ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ