Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್ ಕಲ್ಯಾಣ್ ಪುತ್ರನ ಅಗ್ನಿ ಅವಘಡದ ವೇಳೆ ಪ್ರಧಾನಿ ನರೇಂದ್ರ ಮೋದಿ ಸಹಾಯ

ನಟ ಪವನ್ ಕಲ್ಯಾಣ್ ಅವರ ಪುತ್ರ ಮಾರ್ಕ್ ಶಂಕರ್ ಇತ್ತೀಚೆಗೆ ಅಗ್ನಿ ಅವಘಡದಲ್ಲಿ ಸಿಲುಕಿದಾಗ ಎಲ್ಲರಿಗೂ ಆತಂಕ ಆಗಿತ್ತು. ಆ ಕಷ್ಟದ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಸಹಾಯ ಮಾಡಿದ್ದರು. ಅದಕ್ಕಾಗಿ ಈಗ ಪವನ್ ಕಲ್ಯಾಣ್ ಅವರು ಈಗ ಧನ್ಯವಾದ ಅರ್ಪಿಸಿದ್ದಾರೆ. ಆ ಕುರಿತು ಇಲ್ಲಿದೆ ಮಾಹಿತಿ..

ಪವನ್ ಕಲ್ಯಾಣ್ ಪುತ್ರನ ಅಗ್ನಿ ಅವಘಡದ ವೇಳೆ ಪ್ರಧಾನಿ ನರೇಂದ್ರ ಮೋದಿ ಸಹಾಯ
Pawan Kalyan, Narendra Modi
Follow us
ಮದನ್​ ಕುಮಾರ್​
|

Updated on:Apr 13, 2025 | 5:41 PM

ಟಾಲಿವುಡ್ ನಟ, ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಕುಟಂಬಕ್ಕೆ ಇತ್ತೀಚೆಗೆ ಒಂದು ಸಮಸ್ಯೆ ಎದುರಾಗಿತ್ತು. ಪವನ್ ಕಲ್ಯಾಣ್ ಪುತ್ರ ಮಾರ್ಕ್​ ಶಂಕರ್​ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ. ಸಿಂಗಾಪುರದಲ್ಲಿ ಸಂಭವಿಸಿದ ಈ ಘಟನೆಯಿಂದ 8 ವರ್ಷದ ಮಾರ್ಕ್​ ಶಂಕರ್​ಗೆ ಸುಟ್ಟ ಗಾಯಗಳಾದವು. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಅಗ್ನಿ ಅವಘಡ ಸಂಭವಿಸಿದಾಗ ಪವನ್ ಕಲ್ಯಾಣ್ ಕುಟುಂಬಕ್ಕೆ ನರೇಂದ್ರ ಮೋದಿ ಸಹಾಯ ಮಾಡಿದ್ದರು. ಅದಕ್ಕಾಗಿ ಈಗ ಪವನ್ ಕಲ್ಯಾಣ್ ಅವರು ಮೋದಿಗೆ ಧನ್ಯವಾದ ತಿಳಿಸಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಅವರು ಧನ್ಯವಾದ ತಿಳಿಸಿದ್ದಾರೆ.

‘ನನ್ನ ಮಗ ಮಾರ್ಕ್ ಶಂಕರ್ ಸಿಂಗಾಪುರದ ಬೇಸಿಗೆ ಶಿಬಿರದಲ್ಲಿ ಇದ್ದಾಗ ಅಗ್ನಿ ಅವಘಡ ಸಂಭವಿಸಿತು. ಆ ವೇಳೆ ಸಹಾಯ ಮಾಡಿದ್ದಕ್ಕಾಗಿ ಮಾನ್ಯ ಪ್ರಧಾನ ಮಂತ್ರಿ ಅವರಿಗೆ ಹೃತ್ಪೂರ್ವಕವಾಗಿ ಧನ್ಯವಾದ ಅರ್ಪಿಸುತ್ತೇನೆ. ಈ ಕಷ್ಟದ ಸಂದರ್ಭದಲ್ಲಿ ಸಿಂಗಾಪುರದಲ್ಲಿ ಇರುವ ಭಾರತೀಯ ರಾಯಭಾರಿ ಕಚೇರಿ ಕೂಡ ಸ್ಪಂದಿಸಿತು’ ಎಂದು ಪವನ್ ಕಲ್ಯಾಣ್ ಅವರು ‘ಎಕ್ಸ್’ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
ಅಗ್ನಿ ಅವಘಡದ ಬಳಿಕ ಪವನ್ ಕಲ್ಯಾಣ್ ಮಗನ ಸ್ಥಿತಿ ಹೇಗಿದೆ? ಇಲ್ಲಿದೆ ಮಾಹಿತಿ
Image
ಸಮಸ್ಯೆ ಗಂಭೀರ: ಮಗನ ಆರೋಗ್ಯದ ಬಗ್ಗೆ ಪವನ್ ಕಲ್ಯಾಣ್ ಮಾತು
Image
ಶಾಲೆಯಲ್ಲಿ ಬೆಂಕಿ ಅವಘಡ, ಪವನ್ ಕಲ್ಯಾಣ್ ಪುತ್ರನಿಗೆ ತೀವ್ರ ಗಾಯ
Image
ಪವನ್​ ಕಲ್ಯಾಣ್​ ಚಿತ್ರವನ್ನು ತನ್ನ ರಕ್ತದಲ್ಲಿ ಬಿಡಿಸಿದ ಕಟ್ಟಾಭಿಮಾನಿ

ಚೇತರಿಸಿಕೊಳ್ಳುತ್ತಿರುವ ಮಾರ್ಕ್ ಶಂಕರ್​ನನ್ನು ಸಿಂಗಾಪುರದಿಂದ ಹೈದರಾಬಾದ್​​ಗೆ ಕರೆದುಕೊಂಡು ಬರಲಾಗಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿವೆ. ಮಗನನ್ನು ಪವನ್ ಕಲ್ಯಾಣ್ ಅವರು ಎತ್ತಿಕೊಂಡು ಬಂದಿದ್ದಾರೆ. ಮಾರ್ಕ್ ಶಂಕರ್ ಇನ್ನೂ ಚೇತರಿಸಿಕೊಳ್ಳುವುದು ಬಾಕಿ ಇದೆ. ಆತ ಬೇಗ ಗುಣಮುಖನಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ: ಮತ್ತೊಂದು ಮದುವೆ ಬಗ್ಗೆ ಪವನ್ ಕಲ್ಯಾಣ್ ಮಾಜಿ ಪತ್ನಿ ಮಾತು

ಇತ್ತೀಚೆಗೆ ಪವನ್ ಕಲ್ಯಾಣ್ ಅವರ ಸಹೋದರ ಮೆಗಾ ಸ್ಟಾರ್ ಚಿರಂಜೀವಿ ಕೂಡ ಅಪ್​ಡೇಟ್ ನೀಡಿದ್ದರು. ಆದಷ್ಟು ಬೇಗ ಮಾರ್ಕ್ ಶಂಕರ್ ಗುಣಮುಖನಾಗುತ್ತಾನೆ ಎಂಬ ಭರವಸೆಯನ್ನು ಅವರು ನೀಡಿದ್ದರು. ‘ಅಗ್ನಿ ಅವಘಡ ನಡೆದ ಬಳಿಕ ಬೇರೆ ಬೇರೆ ಹಳ್ಳಿ ಹಾಗೂ ಪ್ರದೇಶದ ಜನರು ಒಟ್ಟಾಗಿ ನಮ್ಮ ಫ್ಯಾಮಿಲಿಗಾಗಿ ಪ್ರಾರ್ಥನೆ ಮಾಡಿದರು. ಮಾರ್ಕ್ ಶಂಕರ್ ಚೇತರಿಸಿಕೊಳ್ಳಲಿ ಅಂತ ಆಶೀರ್ವಾದ ಮಾಡಿದರು. ನನ್ನ ಸಹೋದರ ಪವನ್ ಕಲ್ಯಾಣ್ ಪರವಾಗಿ ಮತ್ತು ನಮ್ಮ ಕುಟುಂಬದ ಪರವಾಗಿ ನಾನು ಹೃತ್ಪೂರ್ವಕವಾಗಿ ನಿಮ್ಮಲ್ಲರ ಬೆಂಬಲಕ್ಕೆ ಧನ್ಯವಾದ ತಿಳಿಸುತ್ತೇನೆ’ ಎಂದು ಚಿರಂಜೀವಿ ಬರೆದುಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 4:47 pm, Sun, 13 April 25

ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ