AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್ ಕಲ್ಯಾಣ್ ಪುತ್ರನ ಅಗ್ನಿ ಅವಘಡದ ವೇಳೆ ಪ್ರಧಾನಿ ನರೇಂದ್ರ ಮೋದಿ ಸಹಾಯ

ನಟ ಪವನ್ ಕಲ್ಯಾಣ್ ಅವರ ಪುತ್ರ ಮಾರ್ಕ್ ಶಂಕರ್ ಇತ್ತೀಚೆಗೆ ಅಗ್ನಿ ಅವಘಡದಲ್ಲಿ ಸಿಲುಕಿದಾಗ ಎಲ್ಲರಿಗೂ ಆತಂಕ ಆಗಿತ್ತು. ಆ ಕಷ್ಟದ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಸಹಾಯ ಮಾಡಿದ್ದರು. ಅದಕ್ಕಾಗಿ ಈಗ ಪವನ್ ಕಲ್ಯಾಣ್ ಅವರು ಈಗ ಧನ್ಯವಾದ ಅರ್ಪಿಸಿದ್ದಾರೆ. ಆ ಕುರಿತು ಇಲ್ಲಿದೆ ಮಾಹಿತಿ..

ಪವನ್ ಕಲ್ಯಾಣ್ ಪುತ್ರನ ಅಗ್ನಿ ಅವಘಡದ ವೇಳೆ ಪ್ರಧಾನಿ ನರೇಂದ್ರ ಮೋದಿ ಸಹಾಯ
Pawan Kalyan, Narendra Modi
ಮದನ್​ ಕುಮಾರ್​
|

Updated on:Apr 13, 2025 | 5:41 PM

Share

ಟಾಲಿವುಡ್ ನಟ, ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಕುಟಂಬಕ್ಕೆ ಇತ್ತೀಚೆಗೆ ಒಂದು ಸಮಸ್ಯೆ ಎದುರಾಗಿತ್ತು. ಪವನ್ ಕಲ್ಯಾಣ್ ಪುತ್ರ ಮಾರ್ಕ್​ ಶಂಕರ್​ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ. ಸಿಂಗಾಪುರದಲ್ಲಿ ಸಂಭವಿಸಿದ ಈ ಘಟನೆಯಿಂದ 8 ವರ್ಷದ ಮಾರ್ಕ್​ ಶಂಕರ್​ಗೆ ಸುಟ್ಟ ಗಾಯಗಳಾದವು. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಅಗ್ನಿ ಅವಘಡ ಸಂಭವಿಸಿದಾಗ ಪವನ್ ಕಲ್ಯಾಣ್ ಕುಟುಂಬಕ್ಕೆ ನರೇಂದ್ರ ಮೋದಿ ಸಹಾಯ ಮಾಡಿದ್ದರು. ಅದಕ್ಕಾಗಿ ಈಗ ಪವನ್ ಕಲ್ಯಾಣ್ ಅವರು ಮೋದಿಗೆ ಧನ್ಯವಾದ ತಿಳಿಸಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಅವರು ಧನ್ಯವಾದ ತಿಳಿಸಿದ್ದಾರೆ.

‘ನನ್ನ ಮಗ ಮಾರ್ಕ್ ಶಂಕರ್ ಸಿಂಗಾಪುರದ ಬೇಸಿಗೆ ಶಿಬಿರದಲ್ಲಿ ಇದ್ದಾಗ ಅಗ್ನಿ ಅವಘಡ ಸಂಭವಿಸಿತು. ಆ ವೇಳೆ ಸಹಾಯ ಮಾಡಿದ್ದಕ್ಕಾಗಿ ಮಾನ್ಯ ಪ್ರಧಾನ ಮಂತ್ರಿ ಅವರಿಗೆ ಹೃತ್ಪೂರ್ವಕವಾಗಿ ಧನ್ಯವಾದ ಅರ್ಪಿಸುತ್ತೇನೆ. ಈ ಕಷ್ಟದ ಸಂದರ್ಭದಲ್ಲಿ ಸಿಂಗಾಪುರದಲ್ಲಿ ಇರುವ ಭಾರತೀಯ ರಾಯಭಾರಿ ಕಚೇರಿ ಕೂಡ ಸ್ಪಂದಿಸಿತು’ ಎಂದು ಪವನ್ ಕಲ್ಯಾಣ್ ಅವರು ‘ಎಕ್ಸ್’ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
ಅಗ್ನಿ ಅವಘಡದ ಬಳಿಕ ಪವನ್ ಕಲ್ಯಾಣ್ ಮಗನ ಸ್ಥಿತಿ ಹೇಗಿದೆ? ಇಲ್ಲಿದೆ ಮಾಹಿತಿ
Image
ಸಮಸ್ಯೆ ಗಂಭೀರ: ಮಗನ ಆರೋಗ್ಯದ ಬಗ್ಗೆ ಪವನ್ ಕಲ್ಯಾಣ್ ಮಾತು
Image
ಶಾಲೆಯಲ್ಲಿ ಬೆಂಕಿ ಅವಘಡ, ಪವನ್ ಕಲ್ಯಾಣ್ ಪುತ್ರನಿಗೆ ತೀವ್ರ ಗಾಯ
Image
ಪವನ್​ ಕಲ್ಯಾಣ್​ ಚಿತ್ರವನ್ನು ತನ್ನ ರಕ್ತದಲ್ಲಿ ಬಿಡಿಸಿದ ಕಟ್ಟಾಭಿಮಾನಿ

ಚೇತರಿಸಿಕೊಳ್ಳುತ್ತಿರುವ ಮಾರ್ಕ್ ಶಂಕರ್​ನನ್ನು ಸಿಂಗಾಪುರದಿಂದ ಹೈದರಾಬಾದ್​​ಗೆ ಕರೆದುಕೊಂಡು ಬರಲಾಗಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿವೆ. ಮಗನನ್ನು ಪವನ್ ಕಲ್ಯಾಣ್ ಅವರು ಎತ್ತಿಕೊಂಡು ಬಂದಿದ್ದಾರೆ. ಮಾರ್ಕ್ ಶಂಕರ್ ಇನ್ನೂ ಚೇತರಿಸಿಕೊಳ್ಳುವುದು ಬಾಕಿ ಇದೆ. ಆತ ಬೇಗ ಗುಣಮುಖನಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ: ಮತ್ತೊಂದು ಮದುವೆ ಬಗ್ಗೆ ಪವನ್ ಕಲ್ಯಾಣ್ ಮಾಜಿ ಪತ್ನಿ ಮಾತು

ಇತ್ತೀಚೆಗೆ ಪವನ್ ಕಲ್ಯಾಣ್ ಅವರ ಸಹೋದರ ಮೆಗಾ ಸ್ಟಾರ್ ಚಿರಂಜೀವಿ ಕೂಡ ಅಪ್​ಡೇಟ್ ನೀಡಿದ್ದರು. ಆದಷ್ಟು ಬೇಗ ಮಾರ್ಕ್ ಶಂಕರ್ ಗುಣಮುಖನಾಗುತ್ತಾನೆ ಎಂಬ ಭರವಸೆಯನ್ನು ಅವರು ನೀಡಿದ್ದರು. ‘ಅಗ್ನಿ ಅವಘಡ ನಡೆದ ಬಳಿಕ ಬೇರೆ ಬೇರೆ ಹಳ್ಳಿ ಹಾಗೂ ಪ್ರದೇಶದ ಜನರು ಒಟ್ಟಾಗಿ ನಮ್ಮ ಫ್ಯಾಮಿಲಿಗಾಗಿ ಪ್ರಾರ್ಥನೆ ಮಾಡಿದರು. ಮಾರ್ಕ್ ಶಂಕರ್ ಚೇತರಿಸಿಕೊಳ್ಳಲಿ ಅಂತ ಆಶೀರ್ವಾದ ಮಾಡಿದರು. ನನ್ನ ಸಹೋದರ ಪವನ್ ಕಲ್ಯಾಣ್ ಪರವಾಗಿ ಮತ್ತು ನಮ್ಮ ಕುಟುಂಬದ ಪರವಾಗಿ ನಾನು ಹೃತ್ಪೂರ್ವಕವಾಗಿ ನಿಮ್ಮಲ್ಲರ ಬೆಂಬಲಕ್ಕೆ ಧನ್ಯವಾದ ತಿಳಿಸುತ್ತೇನೆ’ ಎಂದು ಚಿರಂಜೀವಿ ಬರೆದುಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 4:47 pm, Sun, 13 April 25

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು