AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್​ ಕಲ್ಯಾಣ್​ ಬಳಸುವ ಆಯುಧಗಳಿವು; ಫೋಟೋ ಸಮೇತ ಬಯಲಾಯ್ತು ಅಚ್ಚರಿಯ ವಿಚಾರ

ಸಾಮಾನ್ಯವಾಗಿ ಚಿತ್ರತಂಡದವರು ಇಂತಹ ಮಾಹಿತಿಯನ್ನು ಬಿಟ್ಟುಕೊಡುವುದಿಲ್ಲ. ಶೂಟಿಂಗ್​ ಮುಗಿಯುವ ತನಕ ಎಷ್ಟು ಸಾಧ್ಯವೋ ಅಷ್ಟು ಗೌಪ್ಯತೆಯನ್ನು ಕಾಪಾಡಿಕೊಳ್ಳಲಾಗುತ್ತದೆ. ಆದರೆ ಪವನ್​ ಕಲ್ಯಾಣ್ ಬಳಸುವ ಆಯುಧಗಳ ಬಗ್ಗೆ ನಿರ್ಮಾಪಕರೇ ಮಾಹಿತಿ ಬಿಟ್ಟುಕೊಟ್ಟಿದ್ದಾರೆ. ಈ ಫೋಟೋ ನೋಡಿ ಅನೇಕರು ಹುಬ್ಬೇರಿಸಿದ್ದಾರೆ. ಇದರಿಂದಾಗಿ ಸಿನಿಮಾ ಮೇಲಿನ ಕ್ರೇಜ್​ ಹೆಚ್ಚಾಗಿದೆ.

ಪವನ್​ ಕಲ್ಯಾಣ್​ ಬಳಸುವ ಆಯುಧಗಳಿವು; ಫೋಟೋ ಸಮೇತ ಬಯಲಾಯ್ತು ಅಚ್ಚರಿಯ ವಿಚಾರ
ಹರೀಶ್ ಶಂಕರ್​, ಪವನ್​ ಕಲ್ಯಾಣ್​
ಮದನ್​ ಕುಮಾರ್​
|

Updated on: Sep 05, 2023 | 3:07 PM

Share

ನಟ ಪವನ್​ ಕಲ್ಯಾಣ್​ (Pawan Kalyan) ಅವರು ರಾಜಕೀಯ ಮತ್ತು ಸಿನಿಮಾ ಎರಡೂ ಕ್ಷೇತ್ರದಲ್ಲಿ ಬ್ಯುಸಿ ಆಗಿದ್ದಾರೆ. ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ. ‘ಒಜಿ’, ‘ಹರಿ ಹರ ವೀರ ಮಲ್ಲು’, ‘ಉಸ್ತಾದ್​ ಭಗತ್​ ಸಿಂಗ್​’ ಸಿನಿಮಾಗಳ ಮೇಲೆ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ಈ ಚಿತ್ರಗಳ ಬಗ್ಗೆ ಹೊಸ ಹೊಸ ಅಪ್​ಡೇಟ್​ ಕೇಳಿಬರುತ್ತಿವೆ. ಇತ್ತೀಚೆಗೆ ಪವನ್​ ಕಲ್ಯಾಣ್​ ಅವರು ಬರ್ತ್​ಡೇ (Pawan Kalyan Birthday) ಆಚರಿಸಿಕೊಂಡರು. ಹುಟ್ಟುಹಬ್ಬದ ಪ್ರಯುಕ್ತ ಈ ಸಿನಿಮಾ ತಂಡಗಳಿಂದ ಪೋಸ್ಟರ್​ ಮತ್ತು ಪ್ರೋಮೋ ಬಿಡುಗಡೆ ಆಯಿತು. ಈಗ ಇನ್ನೊಂದು ಅಚ್ಚರಿಯ ವಿಚಾರ ಬಹಿರಂಗ ಆಗಿದೆ. ‘ಉಸ್ತಾದ್​ ಭಗತ್​ ಸಿಂಗ್​’ (Ustaad Bhagat Singh) ಸಿನಿಮಾದಲ್ಲಿ ಪವನ್​ ಕಲ್ಯಾಣ್​ ಅವರು ಬಳಸಲಿರುವ ಆಯುಧಗಳ ವಿವರವನ್ನು ನೀಡಲಾಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಅದರ ಫೋಟೋ ಸಖತ್​ ವೈರಲ್​ ಆಗಿದೆ.

‘ಉಸ್ತಾದ್​ ಭಗತ್​ ಸಿಂಗ್​’ ಸಿನಿಮಾಗೆ ಶೂಟಿಂಗ್​ ನಡೆಯುತ್ತಿದೆ. ಈ ಸಿನಿಮಾಗೆ ಹರೀಶ್​ ಶಂಕರ್​ ನಿರ್ದೇಶನ ಮಾಡುತ್ತಿದ್ದಾರೆ. ಪ್ರತಿಷ್ಠಿತ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ ಮೂಲಕ ಈ ಚಿತ್ರ ನಿರ್ಮಾಣ ಆಗುತ್ತಿದೆ. ಈ ಸಂಸ್ಥೆಯ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಒಂದು ಫೋಟೋ ಹಂಚಿಕೊಳ್ಳಲಾಗಿದೆ. ಇದರಲ್ಲಿ ಹಲವು ಬಗೆಯ ಮಾರಕಾಸ್ತ್ರಗಳಿವೆ. ಇದೆಲ್ಲವನ್ನೂ ಫೈಟಿಂಗ್​ ದೃಶ್ಯದಲ್ಲಿ ಪವನ್​ ಕಲ್ಯಾಣ್​ ಬಳಕೆ ಮಾಡಲಿದ್ದಾರೆ ಎಂಬ ಮಾಹಿತಿಯನ್ನು ಚಿತ್ರತಂಡ ಹಂಚಿಕೊಂಡಿದೆ. ಆ ಮೂಲಕ ‘ಉಸ್ತಾದ್​ ಭಗತ್​ ಸಿಂಗ್​’ ಚಿತ್ರವು ಆ್ಯಕ್ಷನ್​ ಪ್ರಿಯರಿಗೆ ಇಷ್ಟ ಆಗಲಿದೆ ಎಂಬ ಸುಳಿವನ್ನು ನೀಡಲಾಗಿದೆ.

‘ಮೈತ್ರಿ ಮೂವೀ ಮೇಕರ್ಸ್​’  ಟ್ವಿಟರ್​ ಪೋಸ್ಟ್​:

ಹಲವು ಬಗೆಯ ಮಚ್ಚು, ಲಾಂಗ್​, ಕೊಡಲಿಯ ಜೊತೆ ನಿಂತುಕೊಂಡು ನಿರ್ದೇಶಕ ಹರೀಶ್ ಶಂಕರ್​ ಅವರು ಪೋಸ್​ ನೀಡಿದ್ದಾರೆ. ‘ದೊಡ್ಡ ಆ್ಯಕ್ಷನ್​ ದೃಶ್ಯದ ಚಿತ್ರೀಕರಣಕ್ಕೆ ಎಲ್ಲ ಸಿದ್ಧತೆ ನಡೆದಿದೆ. ಉಸ್ತಾದ್​ ಭಗತ್​ ಸಿಂಗ್​ ಸಿನಿಮಾಗೆ ಶೂಟಿಂಗ್​ ಪುನಃ ಆರಂಭ ಆಗಲಿದೆ’ ಎಂಬ ಕ್ಯಾಪ್ಷನ್​ ಜೊತೆಗೆ ಈ ಫೋಟೋವನ್ನು ಹಂಚಿಕೊಳ್ಳಲಾಗಿದೆ. ಪವನ್​ ಕಲ್ಯಾಣ್​ ಅವರ ಅಭಿಮಾನಿಗಳ ವಲಯದಲ್ಲಿ ಈ ಫೋಟೋ ವೈರಲ್​ ಆಗಿದೆ. ಇದನ್ನು ಕಂಡು ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: ಪವನ್​ ಕಲ್ಯಾಣ್​ ಜತೆಗಿನ ಮೊದಲ ಶಾಟ್​ ನೆನೆದು ಖುಷಿಪಟ್ಟ ನಿಧಿ ಅಗರ್​ವಾಲ್​

ಸಾಮಾನ್ಯವಾಗಿ ಚಿತ್ರತಂಡದವರು ಇಂತಹ ಮಾಹಿತಿಯನ್ನು ಬಿಟ್ಟುಕೊಡುವುದಿಲ್ಲ. ಶೂಟಿಂಗ್​ ಮುಗಿಯುವ ತನಕ ಎಷ್ಟು ಸಾಧ್ಯವೋ ಅಷ್ಟು ಗೌಪ್ಯತೆಯನ್ನು ಕಾಪಾಡಿಕೊಳ್ಳಲಾಗುತ್ತದೆ. ಆದರೆ ಪವನ್​ ಕಲ್ಯಾಣ್ ಬಳಸುವ ಆಯುಧಗಳ ಬಗ್ಗೆ ‘ಉಸ್ತಾದ್​ ಭಗತ್​ ಸಿಂಗ್​’ ಚಿತ್ರತಂಡದಿಂದ ಮಾಹಿತಿ ಬಿಟ್ಟುಕೊಡಲಾಗಿದೆ. ಈ ಫೋಟೋ ನೋಡಿ ಅನೇಕರು ಹುಬ್ಬೇರಿಸಿದ್ದಾರೆ. ಇದರಿಂದಾಗಿ ಸಿನಿಮಾ ಮೇಲಿನ ಕ್ರೇಜ್​ ಹೆಚ್ಚಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು