AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕೀಲ್​ ಸಾಬ್​ ಹಿಟ್​ ಏನೋ ಆಯ್ತು, ಆದರೂ ಅಭಿಮಾನಿಗಳಿಗೆ ಕಹಿ ಸುದ್ದಿ!

ಪವನ್​ ಕಲ್ಯಾಣ್​ ಸಿನಿಮಾ ಪ್ರಚಾರಕ್ಕಾಗಿ ಸಾಕಷ್ಟು ಸುತ್ತಾಟ ನಡೆಸಿದ್ದರು. ಪರಿಣಾಮ ಪವನ್​ ಕಲ್ಯಾಣ್​ ಅವರ ಜತೆ ಇದ್ದ ಸಿಬ್ಬಂದಿಗೆ ಕೊವಿಡ್​ ಪಾಸಿಟಿವ್​ ವರದಿ ಬಂದಿದೆ.

ವಕೀಲ್​ ಸಾಬ್​ ಹಿಟ್​ ಏನೋ ಆಯ್ತು, ಆದರೂ ಅಭಿಮಾನಿಗಳಿಗೆ ಕಹಿ ಸುದ್ದಿ!
(ವಕೀಲ್​ ಸಾಬ್​ ಸಿನಿಮಾದಲ್ಲಿ ಪವನ್​ ಕಲ್ಯಾಣ್​)
ರಾಜೇಶ್ ದುಗ್ಗುಮನೆ
|

Updated on: Apr 11, 2021 | 5:43 PM

Share

ಪವನ್​ ಕಲ್ಯಾಣ್​ ನಟನೆಯ ವಕೀಲ್​ ಸಾಬ್​ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಕೊರೊನಾ ಅಬ್ಬರದ ನಡುವೆಯೂ ಸಿನಿಮಾ ಇಷ್ಟೊಂದು ಕಲೆಕ್ಷನ್​ ಮಾಡುತ್ತಿರುವುದಕ್ಕೆ ಅಭಿಮಾನಿಗಳು ಫುಲ್​ ಖುಷ್​ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಂಭ್ರಮಾಚರಣೆ ಜೋರಾಗಿದೆ. ಈ ಮಧ್ಯೆ, ಅಭಿಮಾನಿಗಳಿಗೆ ಬ್ಯಾಡ್​ ನ್ಯೂಸ್ ಒಂದು ಸಿಕ್ಕಿದೆ. ಪವನ್​ ಕಲ್ಯಾಣ್​ ಸಿನಿಮಾ ಪ್ರಚಾರಕ್ಕಾಗಿ ಸಾಕಷ್ಟು ಸುತ್ತಾಟ ನಡೆಸಿದ್ದರು. ಪರಿಣಾಮ ಪವನ್​ ಕಲ್ಯಾಣ್​ ಅವರ ಜತೆ ಇದ್ದ ಸಿಬ್ಬಂದಿಗೆ ಕೊವಿಡ್​ ಪಾಸಿಟಿವ್​ ವರದಿ ಬಂದಿದೆ. ಇದು ಪವನ್​ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ, ಮುಂಜಾಗೃತಾ ಕ್ರಮವಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪವನ್​ ಕಲ್ಯಾಣ್​ ಕ್ವಾರಂಟೈನ್​ ವಿಚಾರವನ್ನು ಜನೇಸನಾ ಪಕ್ಷದ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಪವನ್​ ಕಲ್ಯಾಣ್​ ಆಪ್ತ ಸಿಬ್ಬಂದಿಗೆ ಕೊರೊನಾ ಕಾಣಿಸಿಕೊಂಡಿದೆ. ಅವರು ಹಲವು ದಿನಗಳಿಂದ ಪವನ್​ ಕಲ್ಯಾಣ್​ ಜತೆಯಲ್ಲೇ ಇದ್ದರು. ಹೀಗಾಗಿ, ಪವನ್​ ಕೆಲ ದಿನಗಳ ಕಾಲ ಕ್ವಾರಂಟೈನ್​ನಲ್ಲಿ ಇರಲಿದ್ದಾರೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಅಭಿಮಾನಿಗಳಿಗೆ ಇದು ಬಲು ದೊಡ್ಡ ನಿರಾಸೆ ಉಂಟು ಮಾಡಿದೆ. ವಕೀಲ್​ ಸಾಬ್ ಗೆಲುವಿನ​ ಖುಷಿಯನ್ನು ಆಚರಿಸಿಕೊಳ್ಳಲು ವಕೀಲ್​ ಸಾಬ್​ ಸಕ್ಸಸ್​ ಮೀಟ್​ ಕಾರ್ಯಕ್ರಮವನ್ನು ಚಿತ್ರತಂಡ ಹಮ್ಮಿಕೊಳ್ಳಲು ನಿರ್ಧರಿಸಿತ್ತು. ಇದರ ಜತೆಗೆ ತಿರುಪತಿ ಉಪಚುನಾವಣೆಯ ಪ್ರಚಾರದ ಭಾಗವಾಗಿ ರೋಡ್​ ಶೋನಲ್ಲೂ  ಪವನ್​ ಪಾಲ್ಗೊಳ್ಳಬೇಕಿತ್ತು. ಆದರೆ, ಇದು ಈಗ ಸಾಧ್ಯವಾಗೋದು ಅನುಮಾನ ಎನ್ನಲಾಗುತ್ತಿದೆ. ಸದ್ಯ ಈ ವಿಚಾರ ಅಭಿಮಾನಿಗಳಿಗೆ ಬೇಸರಮೂಡಿಸಿದೆ.

ದೇಶದಲ್ಲಿ ಕೊರೊನಾ ವೈರಸ್​ ಹೆಚ್ಚುತ್ತಿದೆ. ಹೀಗಾಗಿ, ಅನೇಕ ರಾಜ್ಯಗಳಲ್ಲಿ ಕೊರೊನಾ ವೈರಸ್​ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಅಂತೆಯೇ ಅನೇಕ ರಾಜ್ಯಗಳಲ್ಲಿ ಚಿತ್ರಮಂದಿರಗಳ ಶೇ.50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ಇದೆ. ಹೀಗಿದ್ದರೂ ವಕೀಲ್​ ಸಾಬ್​ ಸಿನಿಮಾ ಒಳ್ಳೆಯ ಕಲೆಕ್ಷನ್​ ಮಾಡಿತ್ತು. ಇದು ಪವನ್​ ಕಲ್ಯಾಣ್​ ಅವರ ಒಳ್ಳೆಯ ಕಂಬ್ಯಾಕ್​ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

Vakeel Saab Collection: ಪವನ್​ ಕಲ್ಯಾಣ್​ ವಕೀಲ್​ ಸಾಬ್​ ಚಿತ್ರ ಮೊದಲ ದಿನ ಮಾಡಿದ ಕಲೆಕ್ಷನ್​ ಎಷ್ಟು?

ಥಿಯೇಟರ್ ಗಾಜು ಒಡೆದು ಹಾಕಿದ ಪವನ್ ಕಲ್ಯಾಣ್ ಫ್ಯಾನ್ಸ್! ಕಾರಣ ಚಿಕ್ಕದೊಂದು ಟ್ರೇಲರ್

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ