Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕೀಲ್​ ಸಾಬ್​ ಹಿಟ್​ ಏನೋ ಆಯ್ತು, ಆದರೂ ಅಭಿಮಾನಿಗಳಿಗೆ ಕಹಿ ಸುದ್ದಿ!

ಪವನ್​ ಕಲ್ಯಾಣ್​ ಸಿನಿಮಾ ಪ್ರಚಾರಕ್ಕಾಗಿ ಸಾಕಷ್ಟು ಸುತ್ತಾಟ ನಡೆಸಿದ್ದರು. ಪರಿಣಾಮ ಪವನ್​ ಕಲ್ಯಾಣ್​ ಅವರ ಜತೆ ಇದ್ದ ಸಿಬ್ಬಂದಿಗೆ ಕೊವಿಡ್​ ಪಾಸಿಟಿವ್​ ವರದಿ ಬಂದಿದೆ.

ವಕೀಲ್​ ಸಾಬ್​ ಹಿಟ್​ ಏನೋ ಆಯ್ತು, ಆದರೂ ಅಭಿಮಾನಿಗಳಿಗೆ ಕಹಿ ಸುದ್ದಿ!
(ವಕೀಲ್​ ಸಾಬ್​ ಸಿನಿಮಾದಲ್ಲಿ ಪವನ್​ ಕಲ್ಯಾಣ್​)
Follow us
ರಾಜೇಶ್ ದುಗ್ಗುಮನೆ
|

Updated on: Apr 11, 2021 | 5:43 PM

ಪವನ್​ ಕಲ್ಯಾಣ್​ ನಟನೆಯ ವಕೀಲ್​ ಸಾಬ್​ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಕೊರೊನಾ ಅಬ್ಬರದ ನಡುವೆಯೂ ಸಿನಿಮಾ ಇಷ್ಟೊಂದು ಕಲೆಕ್ಷನ್​ ಮಾಡುತ್ತಿರುವುದಕ್ಕೆ ಅಭಿಮಾನಿಗಳು ಫುಲ್​ ಖುಷ್​ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಂಭ್ರಮಾಚರಣೆ ಜೋರಾಗಿದೆ. ಈ ಮಧ್ಯೆ, ಅಭಿಮಾನಿಗಳಿಗೆ ಬ್ಯಾಡ್​ ನ್ಯೂಸ್ ಒಂದು ಸಿಕ್ಕಿದೆ. ಪವನ್​ ಕಲ್ಯಾಣ್​ ಸಿನಿಮಾ ಪ್ರಚಾರಕ್ಕಾಗಿ ಸಾಕಷ್ಟು ಸುತ್ತಾಟ ನಡೆಸಿದ್ದರು. ಪರಿಣಾಮ ಪವನ್​ ಕಲ್ಯಾಣ್​ ಅವರ ಜತೆ ಇದ್ದ ಸಿಬ್ಬಂದಿಗೆ ಕೊವಿಡ್​ ಪಾಸಿಟಿವ್​ ವರದಿ ಬಂದಿದೆ. ಇದು ಪವನ್​ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ, ಮುಂಜಾಗೃತಾ ಕ್ರಮವಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪವನ್​ ಕಲ್ಯಾಣ್​ ಕ್ವಾರಂಟೈನ್​ ವಿಚಾರವನ್ನು ಜನೇಸನಾ ಪಕ್ಷದ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಪವನ್​ ಕಲ್ಯಾಣ್​ ಆಪ್ತ ಸಿಬ್ಬಂದಿಗೆ ಕೊರೊನಾ ಕಾಣಿಸಿಕೊಂಡಿದೆ. ಅವರು ಹಲವು ದಿನಗಳಿಂದ ಪವನ್​ ಕಲ್ಯಾಣ್​ ಜತೆಯಲ್ಲೇ ಇದ್ದರು. ಹೀಗಾಗಿ, ಪವನ್​ ಕೆಲ ದಿನಗಳ ಕಾಲ ಕ್ವಾರಂಟೈನ್​ನಲ್ಲಿ ಇರಲಿದ್ದಾರೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಅಭಿಮಾನಿಗಳಿಗೆ ಇದು ಬಲು ದೊಡ್ಡ ನಿರಾಸೆ ಉಂಟು ಮಾಡಿದೆ. ವಕೀಲ್​ ಸಾಬ್ ಗೆಲುವಿನ​ ಖುಷಿಯನ್ನು ಆಚರಿಸಿಕೊಳ್ಳಲು ವಕೀಲ್​ ಸಾಬ್​ ಸಕ್ಸಸ್​ ಮೀಟ್​ ಕಾರ್ಯಕ್ರಮವನ್ನು ಚಿತ್ರತಂಡ ಹಮ್ಮಿಕೊಳ್ಳಲು ನಿರ್ಧರಿಸಿತ್ತು. ಇದರ ಜತೆಗೆ ತಿರುಪತಿ ಉಪಚುನಾವಣೆಯ ಪ್ರಚಾರದ ಭಾಗವಾಗಿ ರೋಡ್​ ಶೋನಲ್ಲೂ  ಪವನ್​ ಪಾಲ್ಗೊಳ್ಳಬೇಕಿತ್ತು. ಆದರೆ, ಇದು ಈಗ ಸಾಧ್ಯವಾಗೋದು ಅನುಮಾನ ಎನ್ನಲಾಗುತ್ತಿದೆ. ಸದ್ಯ ಈ ವಿಚಾರ ಅಭಿಮಾನಿಗಳಿಗೆ ಬೇಸರಮೂಡಿಸಿದೆ.

ದೇಶದಲ್ಲಿ ಕೊರೊನಾ ವೈರಸ್​ ಹೆಚ್ಚುತ್ತಿದೆ. ಹೀಗಾಗಿ, ಅನೇಕ ರಾಜ್ಯಗಳಲ್ಲಿ ಕೊರೊನಾ ವೈರಸ್​ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಅಂತೆಯೇ ಅನೇಕ ರಾಜ್ಯಗಳಲ್ಲಿ ಚಿತ್ರಮಂದಿರಗಳ ಶೇ.50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ಇದೆ. ಹೀಗಿದ್ದರೂ ವಕೀಲ್​ ಸಾಬ್​ ಸಿನಿಮಾ ಒಳ್ಳೆಯ ಕಲೆಕ್ಷನ್​ ಮಾಡಿತ್ತು. ಇದು ಪವನ್​ ಕಲ್ಯಾಣ್​ ಅವರ ಒಳ್ಳೆಯ ಕಂಬ್ಯಾಕ್​ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

Vakeel Saab Collection: ಪವನ್​ ಕಲ್ಯಾಣ್​ ವಕೀಲ್​ ಸಾಬ್​ ಚಿತ್ರ ಮೊದಲ ದಿನ ಮಾಡಿದ ಕಲೆಕ್ಷನ್​ ಎಷ್ಟು?

ಥಿಯೇಟರ್ ಗಾಜು ಒಡೆದು ಹಾಕಿದ ಪವನ್ ಕಲ್ಯಾಣ್ ಫ್ಯಾನ್ಸ್! ಕಾರಣ ಚಿಕ್ಕದೊಂದು ಟ್ರೇಲರ್

ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ