AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕೀಲ್​ ಸಾಬ್​ ಹಿಟ್​ ಏನೋ ಆಯ್ತು, ಆದರೂ ಅಭಿಮಾನಿಗಳಿಗೆ ಕಹಿ ಸುದ್ದಿ!

ಪವನ್​ ಕಲ್ಯಾಣ್​ ಸಿನಿಮಾ ಪ್ರಚಾರಕ್ಕಾಗಿ ಸಾಕಷ್ಟು ಸುತ್ತಾಟ ನಡೆಸಿದ್ದರು. ಪರಿಣಾಮ ಪವನ್​ ಕಲ್ಯಾಣ್​ ಅವರ ಜತೆ ಇದ್ದ ಸಿಬ್ಬಂದಿಗೆ ಕೊವಿಡ್​ ಪಾಸಿಟಿವ್​ ವರದಿ ಬಂದಿದೆ.

ವಕೀಲ್​ ಸಾಬ್​ ಹಿಟ್​ ಏನೋ ಆಯ್ತು, ಆದರೂ ಅಭಿಮಾನಿಗಳಿಗೆ ಕಹಿ ಸುದ್ದಿ!
(ವಕೀಲ್​ ಸಾಬ್​ ಸಿನಿಮಾದಲ್ಲಿ ಪವನ್​ ಕಲ್ಯಾಣ್​)
ರಾಜೇಶ್ ದುಗ್ಗುಮನೆ
|

Updated on: Apr 11, 2021 | 5:43 PM

Share

ಪವನ್​ ಕಲ್ಯಾಣ್​ ನಟನೆಯ ವಕೀಲ್​ ಸಾಬ್​ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಕೊರೊನಾ ಅಬ್ಬರದ ನಡುವೆಯೂ ಸಿನಿಮಾ ಇಷ್ಟೊಂದು ಕಲೆಕ್ಷನ್​ ಮಾಡುತ್ತಿರುವುದಕ್ಕೆ ಅಭಿಮಾನಿಗಳು ಫುಲ್​ ಖುಷ್​ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಂಭ್ರಮಾಚರಣೆ ಜೋರಾಗಿದೆ. ಈ ಮಧ್ಯೆ, ಅಭಿಮಾನಿಗಳಿಗೆ ಬ್ಯಾಡ್​ ನ್ಯೂಸ್ ಒಂದು ಸಿಕ್ಕಿದೆ. ಪವನ್​ ಕಲ್ಯಾಣ್​ ಸಿನಿಮಾ ಪ್ರಚಾರಕ್ಕಾಗಿ ಸಾಕಷ್ಟು ಸುತ್ತಾಟ ನಡೆಸಿದ್ದರು. ಪರಿಣಾಮ ಪವನ್​ ಕಲ್ಯಾಣ್​ ಅವರ ಜತೆ ಇದ್ದ ಸಿಬ್ಬಂದಿಗೆ ಕೊವಿಡ್​ ಪಾಸಿಟಿವ್​ ವರದಿ ಬಂದಿದೆ. ಇದು ಪವನ್​ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ, ಮುಂಜಾಗೃತಾ ಕ್ರಮವಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪವನ್​ ಕಲ್ಯಾಣ್​ ಕ್ವಾರಂಟೈನ್​ ವಿಚಾರವನ್ನು ಜನೇಸನಾ ಪಕ್ಷದ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಪವನ್​ ಕಲ್ಯಾಣ್​ ಆಪ್ತ ಸಿಬ್ಬಂದಿಗೆ ಕೊರೊನಾ ಕಾಣಿಸಿಕೊಂಡಿದೆ. ಅವರು ಹಲವು ದಿನಗಳಿಂದ ಪವನ್​ ಕಲ್ಯಾಣ್​ ಜತೆಯಲ್ಲೇ ಇದ್ದರು. ಹೀಗಾಗಿ, ಪವನ್​ ಕೆಲ ದಿನಗಳ ಕಾಲ ಕ್ವಾರಂಟೈನ್​ನಲ್ಲಿ ಇರಲಿದ್ದಾರೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಅಭಿಮಾನಿಗಳಿಗೆ ಇದು ಬಲು ದೊಡ್ಡ ನಿರಾಸೆ ಉಂಟು ಮಾಡಿದೆ. ವಕೀಲ್​ ಸಾಬ್ ಗೆಲುವಿನ​ ಖುಷಿಯನ್ನು ಆಚರಿಸಿಕೊಳ್ಳಲು ವಕೀಲ್​ ಸಾಬ್​ ಸಕ್ಸಸ್​ ಮೀಟ್​ ಕಾರ್ಯಕ್ರಮವನ್ನು ಚಿತ್ರತಂಡ ಹಮ್ಮಿಕೊಳ್ಳಲು ನಿರ್ಧರಿಸಿತ್ತು. ಇದರ ಜತೆಗೆ ತಿರುಪತಿ ಉಪಚುನಾವಣೆಯ ಪ್ರಚಾರದ ಭಾಗವಾಗಿ ರೋಡ್​ ಶೋನಲ್ಲೂ  ಪವನ್​ ಪಾಲ್ಗೊಳ್ಳಬೇಕಿತ್ತು. ಆದರೆ, ಇದು ಈಗ ಸಾಧ್ಯವಾಗೋದು ಅನುಮಾನ ಎನ್ನಲಾಗುತ್ತಿದೆ. ಸದ್ಯ ಈ ವಿಚಾರ ಅಭಿಮಾನಿಗಳಿಗೆ ಬೇಸರಮೂಡಿಸಿದೆ.

ದೇಶದಲ್ಲಿ ಕೊರೊನಾ ವೈರಸ್​ ಹೆಚ್ಚುತ್ತಿದೆ. ಹೀಗಾಗಿ, ಅನೇಕ ರಾಜ್ಯಗಳಲ್ಲಿ ಕೊರೊನಾ ವೈರಸ್​ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಅಂತೆಯೇ ಅನೇಕ ರಾಜ್ಯಗಳಲ್ಲಿ ಚಿತ್ರಮಂದಿರಗಳ ಶೇ.50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ಇದೆ. ಹೀಗಿದ್ದರೂ ವಕೀಲ್​ ಸಾಬ್​ ಸಿನಿಮಾ ಒಳ್ಳೆಯ ಕಲೆಕ್ಷನ್​ ಮಾಡಿತ್ತು. ಇದು ಪವನ್​ ಕಲ್ಯಾಣ್​ ಅವರ ಒಳ್ಳೆಯ ಕಂಬ್ಯಾಕ್​ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

Vakeel Saab Collection: ಪವನ್​ ಕಲ್ಯಾಣ್​ ವಕೀಲ್​ ಸಾಬ್​ ಚಿತ್ರ ಮೊದಲ ದಿನ ಮಾಡಿದ ಕಲೆಕ್ಷನ್​ ಎಷ್ಟು?

ಥಿಯೇಟರ್ ಗಾಜು ಒಡೆದು ಹಾಕಿದ ಪವನ್ ಕಲ್ಯಾಣ್ ಫ್ಯಾನ್ಸ್! ಕಾರಣ ಚಿಕ್ಕದೊಂದು ಟ್ರೇಲರ್

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್