AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್​ಗೆ ಸಂದೇಶ ಕೊಟ್ಟ ಪವನ್ ಕಲ್ಯಾಣ್; ಹೇಳಿದ ಕಿವಿಮಾತೇನು?

Pawan Kalyan: ಪವನ್ ಕಲ್ಯಾಣ್ ಅವರು ಆಂಧ್ರಪ್ರದೇಶದಲ್ಲಿ ರಾಜಕೀಯ ಯಶಸ್ಸು ಕಂಡಿದ್ದಾರೆ. ಈಗ ತಮಿಳುನಾಡು ಚುನಾವಣೆಯಲ್ಲಿ ಗೆದ್ದು ಸಿಎಂ ಆಗುವ ಆಸೆ ವಿಜಯ್​ಗೆ ಇದೆ. ಇದಕ್ಕೆ ಪವನ್ ಕಿವಿ ಮಾತು ಹೇಳಿದ್ದಾರೆ. ಪಕ್ಷದ ಬಲಪಡಿಸುವಿಕೆ ಮತ್ತು ಸ್ಥಿರತೆಯ ಮಹತ್ವವನ್ನು ಪವನ್ ಒತ್ತಿ ಹೇಳಿದ್ದಾರೆ. ಜನರನ್ನು ತಲುಪುವ ಬಲವಾದ ವ್ಯವಸ್ಥೆಯ ಅಗತ್ಯವನ್ನೂ ಅವರು ಸೂಚಿಸಿದ್ದಾರೆ.

ದಳಪತಿ ವಿಜಯ್​ಗೆ ಸಂದೇಶ ಕೊಟ್ಟ ಪವನ್ ಕಲ್ಯಾಣ್; ಹೇಳಿದ ಕಿವಿಮಾತೇನು?
ಪವನ್-ವಿಜಯ್
ರಾಜೇಶ್ ದುಗ್ಗುಮನೆ
|

Updated on:Mar 25, 2025 | 8:14 AM

Share

ಪವನ್ ಕಲ್ಯಾಣ್ (Pawan Kalyan) ಅವರು ಆಂಧ್ರ ಪ್ರದೇಶದ ರಾಜಕೀಯದಲ್ಲಿ ಯಶಸ್ಸು ಕಂಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಅವರು 100 ಪರ್ಸೆಂಟ್ ಸ್ಟ್ರೈಕ್ ರೇ​ಟ್ ಕಾಪಾಡಿಕೊಂಡಿದ್ದಾರೆ. ಅಂದರೆ ಅವರ ಪಕ್ಷದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿದ 21 ಎಂಎಲ್​ಎಗಳು ಗೆಲುವು ಕಂಡಿದ್ದಾರೆ. ಸಂಸದ ಸ್ಥಾನಕ್ಕೆ ಸ್ಪರ್ಧಿಸಿದ ಇಬ್ಬರೂ ವಿಜಯ ಪತಾಕೆ ಹಾರಿಸಿದ್ದಾರೆ. ಅವರಿಗೆ ಈಗ ರಾಜಕೀಯದಲ್ಲಿ ಒಂದು ಹಿಡಿತ ಬಂದಿದೆ. ಈಗ ಪವನ್ ಕಲ್ಯಾಣ್ ಅವರು ಭವಿಷ್ಯದ ರಾಜಕಾರಣಿ ದಳಪತಿ ವಿಜಯ್​ಗೆ ಕಿವಿಮಾತೊಂದನ್ನು ಹೇಳಿದ್ದಾರೆ.

ತಮಿಳುನಾಡು ಚುನಾವಣೆಯಲ್ಲಿ ಗೆದ್ದು ರಾಜ್ಯದ ಸಿಎಂ ಆಗುವ ಕನಸನ್ನು ವಿಜಯ್ ಕಾಣುತ್ತಾ ಇದ್ದಾರೆ. ಆದರೆ, ಪಕ್ಷ ಸ್ಥಾಪಿಸಿ ಜನರ ಮನಸ್ಸು ಗೆಲ್ಲುವುದು ಅಷ್ಟು ಸುಲಭದ ಮಾತು ಅಲ್ಲವೇ ಅಲ್ಲ. ಇದೇ ಮಾತನ್ನು ಪವನ್ ಕಲ್ಯಾಣ್ ಅವರು ಹೇಳಿದ್ದಾರೆ. ತಮಿಳು ಸಂದರ್ಶನ ಒಂದರಲ್ಲಿ ಮಾತನಾಡಿದ ಪವನ್ ಕಲ್ಯಾಣ್ ಅವರು ಈ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ.

‘ವಿಜಯ್ ಅವರಿಗೆ ಹೇಳಲು ಹೆಚ್ಚೇನೂ ಇಲ್ಲ. ಅವರು ಸಾಕಷ್ಟು ಅನುಭವ ಹೊಂದಿದ್ದಾರೆ. ಅವರು ತಮ್ಮದೇ ಪ್ರಯಾಣ ಆರಂಭಿಸಿದ್ದಾರೆ. ನಾನು ಹೇಳುವ ಒಂದು ವಿಷಯ ಎಂದರೆ ಏನೇ ಆದರೂ ವ್ಯಕ್ತಿ ಒಂದೇ ವಿಷಯಕ್ಕೆ ಸ್ಟಿಕ್ ಆಗಿ ಇರಬೇಕು. ನಿಂದನೆಗಳು ಮತ್ತು ತೀವ್ರ ಒತ್ತಡ ಇರುತ್ತದೆ. ಆದರೆ ನಮ್ಮ ನೆಲೆಯನ್ನು ಹಿಡಿದಿಟ್ಟುಕೊಳ್ಳುವುದು ಮುಖ್ಯ. ರಾಜಕೀಯದಲ್ಲಿ ನೆಲೆ ಕಂಡುಕೊಳ್ಳುವುದು ಸುಲಭವಲ್ಲ. ಆದರೆ ನಮ್ಮ ಗುರಿಯನ್ನು ಸಾಧಿಸಲು ನಾವು ಕೊನೆಯವರೆಗೂ ಇರಬೇಕು’ ಎಂದು ಪವನ್ ಕಲ್ಯಾಣ್ ಅವರು ವಿಜಯ್ ಅವರಿಗೆ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ
Image
ರಶ್ಮಿಕಾ ಅಪ್ಪನಿಗೆ ಇಲ್ಲದೆ ತೊಂದರೆ ನಿಮಗೇಕೆ; ಸಲ್ಮಾನ್ ಖಾನ್ ನೇರ ಪ್ರಶ್ನೆ
Image
‘ಕನ್ನಡ ಸಿನಿಮಾ ಎಂದಾಗ ಬೇಸರ ಆಗೋದು ಏನು ಗೊತ್ತಾ?’; ವಿವರಿಸಿದ ಯಶ್
Image
ಮೊದಲ ಸಿನಿಮಾ ಅವಕಾಶ ಕೊಟ್ಟ ನಿರ್ಮಾಪಕನಿಗೆ ಯಶ್ ಧನ್ಯವಾದ
Image
ಮನದ ಕಡಲು ಇವೆಂಟ್​ಗೆ ಬಂದ ಯಶ್, ಬಾಚಿ ತಬ್ಬಿದ ಮುರಳಿ ಮಾಸ್ಟರ್

‘ಪಕ್ಷವನ್ನು ಮೂಲಭೂತ ಮಟ್ಟದಿಂದ ಬಲಪಡಿಸಬೇಕು. ಪಕ್ಷವನ್ನು ಸ್ಥಿರಗೊಳಿಸಬೇಕು. ಗೆಲುವು ಮತ್ತು ಸೋಲು ಆ ಬಳಿಕ ಬರುತ್ತದೆ. ಪಕ್ಷವನ್ನು ಸ್ಥಿರಗೊಳಿಸಿದ ಬಳಿಕ ಸಾರ್ವಜನಿಕರನ್ನು ತಲುಪಲು ಬಲವಾದ ಕಾರ್ಯವಿಧಾನವನ್ನು ರೂಪಿಸಬೇಕು. ಅದು ಅತ್ಯಂತ ಮುಖ್ಯವಾದ ವಿಷಯ’ ಎಂದು ಅವರು ಸೂಚಿಸಿದ್ದಾರೆ.

ಇದನ್ನೂ ಓದಿ: ಪವನ್ ಕಲ್ಯಾಣ್ ನಟನೆಯ ಹೊಸ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

ಪವನ್ ಕಲ್ಯಾಣ್ ಈಗಾಗಲೇ ರಾಜಕೀಯದಲ್ಲಿ ಬ್ಯುಸಿ ಇದ್ದಾರೆ. ಈ ಕಾರಣಕ್ಕೆ ಅವರ ಸಿನಿಮಾ ಕೆಲಸಗಳು ವೇಗ ಪಡೆದುಕೊಳ್ಳುತ್ತಿಲ್ಲ. ವಿಜಯ್ ಅವರು ಕೊನೆಯ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ‘ಜನ ನಾಯಗನ್’ ಎನ್ನುವ ಟೈಟಲ್ ಇಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:00 am, Tue, 25 March 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ