AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್​ಗೆ ಸಂದೇಶ ಕೊಟ್ಟ ಪವನ್ ಕಲ್ಯಾಣ್; ಹೇಳಿದ ಕಿವಿಮಾತೇನು?

Pawan Kalyan: ಪವನ್ ಕಲ್ಯಾಣ್ ಅವರು ಆಂಧ್ರಪ್ರದೇಶದಲ್ಲಿ ರಾಜಕೀಯ ಯಶಸ್ಸು ಕಂಡಿದ್ದಾರೆ. ಈಗ ತಮಿಳುನಾಡು ಚುನಾವಣೆಯಲ್ಲಿ ಗೆದ್ದು ಸಿಎಂ ಆಗುವ ಆಸೆ ವಿಜಯ್​ಗೆ ಇದೆ. ಇದಕ್ಕೆ ಪವನ್ ಕಿವಿ ಮಾತು ಹೇಳಿದ್ದಾರೆ. ಪಕ್ಷದ ಬಲಪಡಿಸುವಿಕೆ ಮತ್ತು ಸ್ಥಿರತೆಯ ಮಹತ್ವವನ್ನು ಪವನ್ ಒತ್ತಿ ಹೇಳಿದ್ದಾರೆ. ಜನರನ್ನು ತಲುಪುವ ಬಲವಾದ ವ್ಯವಸ್ಥೆಯ ಅಗತ್ಯವನ್ನೂ ಅವರು ಸೂಚಿಸಿದ್ದಾರೆ.

ದಳಪತಿ ವಿಜಯ್​ಗೆ ಸಂದೇಶ ಕೊಟ್ಟ ಪವನ್ ಕಲ್ಯಾಣ್; ಹೇಳಿದ ಕಿವಿಮಾತೇನು?
ಪವನ್-ವಿಜಯ್
ರಾಜೇಶ್ ದುಗ್ಗುಮನೆ
|

Updated on:Mar 25, 2025 | 8:14 AM

Share

ಪವನ್ ಕಲ್ಯಾಣ್ (Pawan Kalyan) ಅವರು ಆಂಧ್ರ ಪ್ರದೇಶದ ರಾಜಕೀಯದಲ್ಲಿ ಯಶಸ್ಸು ಕಂಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಅವರು 100 ಪರ್ಸೆಂಟ್ ಸ್ಟ್ರೈಕ್ ರೇ​ಟ್ ಕಾಪಾಡಿಕೊಂಡಿದ್ದಾರೆ. ಅಂದರೆ ಅವರ ಪಕ್ಷದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿದ 21 ಎಂಎಲ್​ಎಗಳು ಗೆಲುವು ಕಂಡಿದ್ದಾರೆ. ಸಂಸದ ಸ್ಥಾನಕ್ಕೆ ಸ್ಪರ್ಧಿಸಿದ ಇಬ್ಬರೂ ವಿಜಯ ಪತಾಕೆ ಹಾರಿಸಿದ್ದಾರೆ. ಅವರಿಗೆ ಈಗ ರಾಜಕೀಯದಲ್ಲಿ ಒಂದು ಹಿಡಿತ ಬಂದಿದೆ. ಈಗ ಪವನ್ ಕಲ್ಯಾಣ್ ಅವರು ಭವಿಷ್ಯದ ರಾಜಕಾರಣಿ ದಳಪತಿ ವಿಜಯ್​ಗೆ ಕಿವಿಮಾತೊಂದನ್ನು ಹೇಳಿದ್ದಾರೆ.

ತಮಿಳುನಾಡು ಚುನಾವಣೆಯಲ್ಲಿ ಗೆದ್ದು ರಾಜ್ಯದ ಸಿಎಂ ಆಗುವ ಕನಸನ್ನು ವಿಜಯ್ ಕಾಣುತ್ತಾ ಇದ್ದಾರೆ. ಆದರೆ, ಪಕ್ಷ ಸ್ಥಾಪಿಸಿ ಜನರ ಮನಸ್ಸು ಗೆಲ್ಲುವುದು ಅಷ್ಟು ಸುಲಭದ ಮಾತು ಅಲ್ಲವೇ ಅಲ್ಲ. ಇದೇ ಮಾತನ್ನು ಪವನ್ ಕಲ್ಯಾಣ್ ಅವರು ಹೇಳಿದ್ದಾರೆ. ತಮಿಳು ಸಂದರ್ಶನ ಒಂದರಲ್ಲಿ ಮಾತನಾಡಿದ ಪವನ್ ಕಲ್ಯಾಣ್ ಅವರು ಈ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ.

‘ವಿಜಯ್ ಅವರಿಗೆ ಹೇಳಲು ಹೆಚ್ಚೇನೂ ಇಲ್ಲ. ಅವರು ಸಾಕಷ್ಟು ಅನುಭವ ಹೊಂದಿದ್ದಾರೆ. ಅವರು ತಮ್ಮದೇ ಪ್ರಯಾಣ ಆರಂಭಿಸಿದ್ದಾರೆ. ನಾನು ಹೇಳುವ ಒಂದು ವಿಷಯ ಎಂದರೆ ಏನೇ ಆದರೂ ವ್ಯಕ್ತಿ ಒಂದೇ ವಿಷಯಕ್ಕೆ ಸ್ಟಿಕ್ ಆಗಿ ಇರಬೇಕು. ನಿಂದನೆಗಳು ಮತ್ತು ತೀವ್ರ ಒತ್ತಡ ಇರುತ್ತದೆ. ಆದರೆ ನಮ್ಮ ನೆಲೆಯನ್ನು ಹಿಡಿದಿಟ್ಟುಕೊಳ್ಳುವುದು ಮುಖ್ಯ. ರಾಜಕೀಯದಲ್ಲಿ ನೆಲೆ ಕಂಡುಕೊಳ್ಳುವುದು ಸುಲಭವಲ್ಲ. ಆದರೆ ನಮ್ಮ ಗುರಿಯನ್ನು ಸಾಧಿಸಲು ನಾವು ಕೊನೆಯವರೆಗೂ ಇರಬೇಕು’ ಎಂದು ಪವನ್ ಕಲ್ಯಾಣ್ ಅವರು ವಿಜಯ್ ಅವರಿಗೆ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ
Image
ರಶ್ಮಿಕಾ ಅಪ್ಪನಿಗೆ ಇಲ್ಲದೆ ತೊಂದರೆ ನಿಮಗೇಕೆ; ಸಲ್ಮಾನ್ ಖಾನ್ ನೇರ ಪ್ರಶ್ನೆ
Image
‘ಕನ್ನಡ ಸಿನಿಮಾ ಎಂದಾಗ ಬೇಸರ ಆಗೋದು ಏನು ಗೊತ್ತಾ?’; ವಿವರಿಸಿದ ಯಶ್
Image
ಮೊದಲ ಸಿನಿಮಾ ಅವಕಾಶ ಕೊಟ್ಟ ನಿರ್ಮಾಪಕನಿಗೆ ಯಶ್ ಧನ್ಯವಾದ
Image
ಮನದ ಕಡಲು ಇವೆಂಟ್​ಗೆ ಬಂದ ಯಶ್, ಬಾಚಿ ತಬ್ಬಿದ ಮುರಳಿ ಮಾಸ್ಟರ್

‘ಪಕ್ಷವನ್ನು ಮೂಲಭೂತ ಮಟ್ಟದಿಂದ ಬಲಪಡಿಸಬೇಕು. ಪಕ್ಷವನ್ನು ಸ್ಥಿರಗೊಳಿಸಬೇಕು. ಗೆಲುವು ಮತ್ತು ಸೋಲು ಆ ಬಳಿಕ ಬರುತ್ತದೆ. ಪಕ್ಷವನ್ನು ಸ್ಥಿರಗೊಳಿಸಿದ ಬಳಿಕ ಸಾರ್ವಜನಿಕರನ್ನು ತಲುಪಲು ಬಲವಾದ ಕಾರ್ಯವಿಧಾನವನ್ನು ರೂಪಿಸಬೇಕು. ಅದು ಅತ್ಯಂತ ಮುಖ್ಯವಾದ ವಿಷಯ’ ಎಂದು ಅವರು ಸೂಚಿಸಿದ್ದಾರೆ.

ಇದನ್ನೂ ಓದಿ: ಪವನ್ ಕಲ್ಯಾಣ್ ನಟನೆಯ ಹೊಸ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

ಪವನ್ ಕಲ್ಯಾಣ್ ಈಗಾಗಲೇ ರಾಜಕೀಯದಲ್ಲಿ ಬ್ಯುಸಿ ಇದ್ದಾರೆ. ಈ ಕಾರಣಕ್ಕೆ ಅವರ ಸಿನಿಮಾ ಕೆಲಸಗಳು ವೇಗ ಪಡೆದುಕೊಳ್ಳುತ್ತಿಲ್ಲ. ವಿಜಯ್ ಅವರು ಕೊನೆಯ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ‘ಜನ ನಾಯಗನ್’ ಎನ್ನುವ ಟೈಟಲ್ ಇಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:00 am, Tue, 25 March 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು