ಆಂಧ್ರ ಪ್ರದೇಶದಲ್ಲಿ ಗಾಂಜಾ ಕಡಿಮೆ ಮಾಡಿದ ನಟ ಪವನ್ ಕಲ್ಯಾಣ್

ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ರಾಜ್ಯದಲ್ಲಿ ಅಕ್ರಮ ಗಾಂಜಾ ಬೆಳೆಯನ್ನು ತಡೆಯಲು ಕಠಿಣ ಕ್ರಮಗಳನ್ನು ಕೈಗೊಂಡಿದ್ದಾರೆ. "ಈಗಲ್" ತಂಡದ ಮೂಲಕ ವಿಶಾಲವಾದ ಗಾಂಜಾ ಬೆಳೆಗಳನ್ನು ನಾಶಪಡಿಸಲಾಗಿದೆ ಮತ್ತು 375 ಹಳ್ಳಿಗಳ ಮೇಲೆ ದಾಳಿ ನಡೆಸಲಾಗಿದೆ. ಪವನ್ ಕಲ್ಯಾಣ್ ಅವರ ಈ ಯಶಸ್ವಿ ಅಭಿಯಾನಕ್ಕೆ ಜನರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಆಂಧ್ರ ಪ್ರದೇಶದಲ್ಲಿ ಗಾಂಜಾ ಕಡಿಮೆ ಮಾಡಿದ ನಟ ಪವನ್ ಕಲ್ಯಾಣ್
ಪವನ್

Updated on: Jul 08, 2025 | 8:47 AM

ನಟ ಹಾಗೂ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಪಾಸಿಟಿವ್ ಸ್ಟೆಪ್​ಗಳನ್ನು ತೆಗೆದುಕೊಂಡಿದ್ದಾರೆ. ಈ ಪೈಕಿ ಆಂಧ್ರ ಪ್ರದೇಶದಲ್ಲಿ ಗಾಂಜಾ ಬೆಳೆಯದಂತೆ ತಡೆದಿರೋದು ಕೂಡ ಒಂದು ಒಂದು. ಇದಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ವಿಚಾರದಲ್ಲಿ ಪವನ್ (Pawan Kalyan) ಅವರನ್ನು ಅನೇಕರು ಹೊಗಳಿದ್ದಾರೆ.

ವೈಎಸ್ ಜಗನ್ ಅಧಿಕಾರದ ಅವಧಿಯಲ್ಲಿ ಆಂಧ್ರ ಪ್ರದೇಶದಲ್ಲಿ ಸಾಕಷ್ಟು ಗಾಂಜಾ ಬೆಳೆಯಲಾಗುತ್ತಿತ್ತು ಎನ್ನಲಾಗಿದೆ. ಪವನ್ ಕಲ್ಯಾಣ್ ಅಧಿಕಾರಕ್ಕೆ ಬರುತ್ತಿದ್ದಂತೆ ಅವರಿಗೆ ಅರಣ್ಯ ಖಾತೆ ನೀಡಲಾಯಿತು. ಹೀಗಾಗಿ, ಅವರು ಗಾಂಜಾ ಬೆಳೆ ತಡೆಗೆ ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡರು.

ಆಂಧ್ರದಲ್ಲಿ ಈ ಮೊದಲು ಸುಮಾರು 11 ಸಾವಿರ ಎಕರೆ ಭಾಗದಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯಲಾಗುತ್ತಿತ್ತು ಎನ್ನಲಾಗಿತ್ತು. ಇದನ್ನು ಯಾರೂ ತಡೆಯುವವರೇ ಇರಲಿಲ್ಲ. ಪವನ್ ಸರ್ಕಾರ ಇದರ ವಿರುದ್ಧ ಕ್ರಮ ಕೈಗೊಂಡಿದೆ. ಇದಕ್ಕಾಗಿ ಈಗಲ್ ಹೆಸರಿನ ತಂಡ ರಚಿಸಲಾಗಿದೆ. ವಿಶೇಷ ತಂಡ ಈ ಭಾಗದಲ್ಲಿ ಬೆಳೆದ ಗಾಂಜಾ ಬೆಳೆಯನ್ನು ನಾಶ ಮಾಡಿದೆ. ಗಾಂಜಾ ಕೃಷಿಯಲ್ಲಿ ಪ್ರಮುಖವಾಗಿ ತೊಡಗಿಸಿಕೊಂಡಿದ್ದ 375 ಹಳ್ಳಿಗಳ ಮೇಲೆ ಅಧಿಕಾರಿಗಳು ಸಂಪೂರ್ಣ ದಾಳಿ ನಡೆಸಿ ಇದಕ್ಕೆ ತಡೆ ಹಾಕಿದ್ದಾರೆ.

ಇದನ್ನೂ ಓದಿ
ಆಂಧ್ರ ಪ್ರದೇಶದಲ್ಲಿ ಗಾಂಜಾ ಕಡಿಮೆ ಮಾಡಿದ ನಟ ಪವನ್ ಕಲ್ಯಾಣ್
‘ನಿವೇದಿತಾಳನ್ನು ಈಗಲೂ ಮಿಸ್ ಮಾಡಿ ಕೊಳ್ತೀನಿ’; ಚಂದನ್ ಶೆಟ್ಟಿ
PHOTOS: ನಟ ವಿಷ್ಣು ವಿಶಾಲ್-ಜ್ವಾಲಾ ದಂಪತಿ ಮಗಳಿಗೆ ಹೆಸರಿಟ್ಟ ಆಮಿರ್
ರಿಲೀಸ್​ಗೆ ಒಂದು ತಿಂಗಳಿರುವಾಗ ಶೂಟ್ ಮುಗಿಸಿದ ‘ವಾರ್ 2’

ಸಾಮಾನ್ಯವಾಗಿ ಗಾಂಜಾ ಕೃಷಿ ಜುಲೈ ಅಥವಾ ಆಗಸ್ಟ್‌ನಲ್ಲಿ ಪ್ರಾರಂಭವಾಗುತ್ತಿತ್ತು. ಆದರೆ ಹೊಸ ಸರ್ಕಾರದ ಮುಂಜಾಗ್ರತಾ ಕ್ರಮಗಳಿಂದ ಕಳೆದ ಜುಲೈ ಮತ್ತು ಆಗಸ್ಟ್‌ನಲ್ಲಿ ಬಹುತೇಕ ಎಲ್ಲಾ ಬೆಳೆಗಳು ನಾಶವಾದವು. ಈ ಬಾರಿಯೂ ಹಾಗೆಯೇ ಮಾಡಲಾಗುತ್ತಿದೆ.

ರಾಜ್ಯದ ಜನತೆ ಮಾದಕ ವ್ಯಸನಗಳಿಗೆ ಒಳಗಾಗುತ್ತಿರುವ ಬಗ್ಗೆ ಪವನ್ ಕಲ್ಯಾಣ್ ಸಾಕಷ್ಟು ಬಾರಿ ಆತಂಕ ಹೊರಹಾಕಿದ್ದರು. ಈ ಕಾರಣದಿಂದಲೇ ಅವರು ನಿರಂತರವಾಗಿ ಈ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಳ್ಳುತ್ತಾ ಬರುತ್ತಿದ್ದಾರೆ.

ಇದನ್ನೂ ಓದಿ: ಪವನ್ ಕಲ್ಯಾಣ್ ಸಿನಿಮಾ ಪ್ರಚಾರಕ್ಕೆ ಬರಲಿದ್ದಾರೆ ಎರಡು ರಾಜ್ಯದ ಮುಖ್ಯಮಂತ್ರಿಗಳು

ಸದ್ಯ ಪವನ್ ಕಲ್ಯಾಣ್ ಕ್ರಮಕ್ಕೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅವರು ನಿಜವಾದ ಒಜಿ ಎಂದು ಅನೇಕರು ಹೇಳಿದ್ದಾರೆ. ಸಿನಿಮಾ ವಿಚಾರಕ್ಕೆ ಬರೋದಾದರೆ ಪವನ್ ಕಲ್ಯಾಣ್ ಅವರು ‘ಹರಿ ಹರ ವೀರ ಮಲ್ಲು’, ‘ಒಜಿ’ ಮೊದಲಾದ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:46 am, Tue, 8 July 25