AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗದಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಪವನ್ ಕಲ್ಯಾಣ್; ಇನ್ನಾದರೂ ಬದಲಾಗ್ತಾರಾ?

ಪವನ್ ಕಲ್ಯಾಣ್ ನಟನೆಯ ‘ಹರಿಹರ ವೀರ ಮಲ್ಲು’ ಚಿತ್ರ ಸೆಟ್ಟೇರಿ ಐದು ವರ್ಷಗಳಾಗಿವೆ. ಆದಾಗ್ಯೂ ಸಿನಿಮಾ ರಿಲೀಸ್ ಆಗುತ್ತಿಲ್ಲ ಎಂಬುದು ಅಭಿಮಾನಿಗಳ ಕೊರಗು. ರಾಜಕೀಯ ಚಟುವಟಿಕೆಗಳು, ಆರೋಗ್ಯ ಸಮಸ್ಯೆಗಳು ಮತ್ತು VFX ಕೆಲಸಗಳ ಅಪೂರ್ಣತೆಯಿಂದಾಗಿ ಚಿತ್ರದ ಬಿಡುಗಡೆ ಮತ್ತೆ ಮುಂದೂಡಲ್ಪಟ್ಟಿದೆ .

ಚಿತ್ರರಂಗದಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಪವನ್ ಕಲ್ಯಾಣ್; ಇನ್ನಾದರೂ ಬದಲಾಗ್ತಾರಾ?
ಪವನ್ ಕಲ್ಯಾಣ್
Follow us
ರಾಜೇಶ್ ದುಗ್ಗುಮನೆ
|

Updated on: Apr 17, 2025 | 6:51 AM

ಪವನ್ ಕಲ್ಯಾಣ್ (Pawan Kalyan) ಅವರು ಟಾಲಿವುಡ್​ನಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ದೊಡ್ಡ ಅಭಿಮಾನಿ ಬಳಗ ಅವರಿಗೆ ಇದೆ. ಇತ್ತೀಚಿನ ದಿನಗಳಲ್ಲಿ ರಾಜಕೀಯದಲ್ಲಿ ಬ್ಯುಸಿ ಆಗಿರುವ ಕಾರಣಕ್ಕೆ ಸಿನಿಮಾ ಶೂಟ್​ಗೆ ಡೇಟ್ಸ್ ಕೊಡಲು ಅವರ ಬಳಿ ಸಮಯವೇ ಇಲ್ಲ. ಈ ಕಾರಣದಿಂದಲೇ ಪವನ್ ಕಲ್ಯಾಣ್ ಪಾಲಿಗೆ ಈಗ ಅತ್ಯಂತ ಕಳಪೆ ದಾಖಲೆಯೊಂದು ಸೇರಿಕೊಂಡಿದೆ. ಅಷ್ಟಕ್ಕೂ ಏನು ಅದು? ಪವನ್ ಕಲ್ಯಾಣ್ ಈ ಘಟನೆಯಿಂದ ಎಚ್ಚೆತ್ತುಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಸಾಮಾನ್ಯವಾಗಿ ಒಂದು ಸಿನಿಮಾ ಘೋಷಣೆ ಆದ ಬಳಿಕ ಅದನ್ನು ಗರಿಷ್ಠ ಎಂದರೆ ಮೂರು ವರ್ಷಗಳಲ್ಲಿ ಪೂರ್ಣಗೊಳಿಸಲಾಗುತ್ತದೆ. ಆದರೆ, ಪವನ್ ಕಲ್ಯಾಣ್ ನಟನೆಯ ‘ಹರಿಹರ ವೀರ ಮಲ್ಲು’ ಸಿನಿಮಾ ಸೆಟ್ಟೇರಿ ಐದು ವರ್ಷ ಕಳೆದರೂ ಅದರ ರಿಲೀಸ್ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಈ ಚಿತ್ರ ಈಗಾಗಲೇ ಹಲವು ಬಾರಿ ಪೋಸ್ಟ್​ಪೋನ್ ಆಗಿದೆ. ಈಗ ಸಿನಿಮಾ ಮತ್ತೊಮ್ಮೆ ಮುಂದಕ್ಕೆ ಹೋಗುವ ಸೂಚನೆ ಸಿಕ್ಕಿದೆ.

‘ಹರಿ ಹರ ವೀರ ಮಲ್ಲು’ ಸಿನಿಮಾ ಮೇ 9ರಂದು ರಿಲೀಸ್ ಆಗಬೇಕಿತ್ತು. ಆದರೆ, ಈಗ ಮತ್ತೊಮ್ಮೆ ಸಿನಿಮಾದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ ಎಂದು ವರದಿ ಆಗಿದೆ. ಪವನ್ ಕಲ್ಯಾಣ್ ಅವರು ಇತ್ತೀಚೆಗೆ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಇಷ್ಟೇ ಅಲ್ಲ, ಅವರ ಮಗ ಮಾರ್ಕ್ ಶಂಕರ್ ಅಗ್ನಿ ಅವಘಡದಿಂದ ತೊಂದರೆ ಅನುಭವಿಸಿದ್ದಾನೆ. ಈ ಎಲ್ಲಾ ಕಾರಣದಿಂದ ಪವನ್ ಕಲ್ಯಾಣ್ ಅವರು ಶೂಟ್​ನಲ್ಲಿ ಭಾಗಿ ಆಗಿಲ್ಲ.

ಇದನ್ನೂ ಓದಿ
Image
ಮತ್ತೆ ಅರೆಸ್ಟ್ ಆದ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್; ಕಾರಣ ಏನು?
Image
ರಶ್ಮಿಕಾ ಸಸ್ಯಾಹಾರಿಯೋ, ಮಾಂಸಹಾರಿಯೋ? ಈ ತರಕಾರಿ ಕಂಡರೆ ಆಗುವುದೇ ಇಲ್ಲ
Image
ಸೋತ ಅಜಿತ್ ಚಿತ್ರಕ್ಕೆ ಶಾಕ್ ಕೊಟ್ಟ ಇಳಯರಾಜ; 5 ಕೋಟಿಗೆ ಡಿಮ್ಯಾಂಡ್
Image
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ

‘ಹರಿ ಹರ ವೀರ ಮಲ್ಲು’ ಸಿನಿಮಾದ ವಿಎಫ್​ಎಕ್ಸ್ ಕೆಲಸಗಳು ಕೂಡ ಸಾಕಷ್ಟು ಬಾಕಿ ಉಳಿದುಕೊಂಡಿವೆ. ಇವುಗಳನ್ನು ಪೂರ್ಣಗೊಳಿಸಲು ಸಾಕಷ್ಟು ಸಮಯ ಬೇಕಿದೆ. ಈ ಎಲ್ಲಾ ಕಾರಣದಿಂದ ಸಿನಿಮಾ ಮತ್ತೊಮ್ಮೆ ಮುಂದಕ್ಕೆ ಹೋಗಲಿದೆ. ಟಾಲಿವುಡ್ ಇತಿಹಾಸವೊಂದರಲ್ಲಿ ಇಷ್ಟು ದೀರ್ಘ ಸಮಯದಿಂದ ಬಾಕಿ ಉಳಿದುಕೊಂಡಿರೋ ಎಕೈಕ ಸಿನಿಮಾ ಎಂಬ ಕುಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ.

ಇದನ್ನೂ ಓದಿ: ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಕಲ್ಯಾಣ್ ಪತ್ನಿ

ಈ ರೀತಿ ಸಾಕಷ್ಟು ಗ್ಯಾಪ್​ಗಳು ಉಂಟಾದಾಗ ದೃಶ್ಯಗಳ ಕಾಂಬಿನೇಷನ್ ಹೋಗಿ ಬಿಡುತ್ತದೆ. ಒಂದು ದೃಶ್ಯದಿಂದ ಮತ್ತೊಂದು ದೃಶ್ಯಕ್ಕೆ ಸಾಕಷ್ಟು ವ್ಯತ್ಯಾಸ ಕಾಣುತ್ತದೆ. ಇದು ಸಿನಿಮಾ ಸೋಲಿಗೂ ಕಾರಣ ಆಗಬಹುದು. ಈ ಭಯ ಅಭಿಮಾನಿಗಳಲ್ಲಿ ತೀವ್ರವಾಗಿ ಕಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು
12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು