AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗದಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಪವನ್ ಕಲ್ಯಾಣ್; ಇನ್ನಾದರೂ ಬದಲಾಗ್ತಾರಾ?

ಪವನ್ ಕಲ್ಯಾಣ್ ನಟನೆಯ ‘ಹರಿಹರ ವೀರ ಮಲ್ಲು’ ಚಿತ್ರ ಸೆಟ್ಟೇರಿ ಐದು ವರ್ಷಗಳಾಗಿವೆ. ಆದಾಗ್ಯೂ ಸಿನಿಮಾ ರಿಲೀಸ್ ಆಗುತ್ತಿಲ್ಲ ಎಂಬುದು ಅಭಿಮಾನಿಗಳ ಕೊರಗು. ರಾಜಕೀಯ ಚಟುವಟಿಕೆಗಳು, ಆರೋಗ್ಯ ಸಮಸ್ಯೆಗಳು ಮತ್ತು VFX ಕೆಲಸಗಳ ಅಪೂರ್ಣತೆಯಿಂದಾಗಿ ಚಿತ್ರದ ಬಿಡುಗಡೆ ಮತ್ತೆ ಮುಂದೂಡಲ್ಪಟ್ಟಿದೆ .

ಚಿತ್ರರಂಗದಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಪವನ್ ಕಲ್ಯಾಣ್; ಇನ್ನಾದರೂ ಬದಲಾಗ್ತಾರಾ?
ಪವನ್ ಕಲ್ಯಾಣ್
ರಾಜೇಶ್ ದುಗ್ಗುಮನೆ
|

Updated on: Apr 17, 2025 | 6:51 AM

Share

ಪವನ್ ಕಲ್ಯಾಣ್ (Pawan Kalyan) ಅವರು ಟಾಲಿವುಡ್​ನಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ದೊಡ್ಡ ಅಭಿಮಾನಿ ಬಳಗ ಅವರಿಗೆ ಇದೆ. ಇತ್ತೀಚಿನ ದಿನಗಳಲ್ಲಿ ರಾಜಕೀಯದಲ್ಲಿ ಬ್ಯುಸಿ ಆಗಿರುವ ಕಾರಣಕ್ಕೆ ಸಿನಿಮಾ ಶೂಟ್​ಗೆ ಡೇಟ್ಸ್ ಕೊಡಲು ಅವರ ಬಳಿ ಸಮಯವೇ ಇಲ್ಲ. ಈ ಕಾರಣದಿಂದಲೇ ಪವನ್ ಕಲ್ಯಾಣ್ ಪಾಲಿಗೆ ಈಗ ಅತ್ಯಂತ ಕಳಪೆ ದಾಖಲೆಯೊಂದು ಸೇರಿಕೊಂಡಿದೆ. ಅಷ್ಟಕ್ಕೂ ಏನು ಅದು? ಪವನ್ ಕಲ್ಯಾಣ್ ಈ ಘಟನೆಯಿಂದ ಎಚ್ಚೆತ್ತುಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಸಾಮಾನ್ಯವಾಗಿ ಒಂದು ಸಿನಿಮಾ ಘೋಷಣೆ ಆದ ಬಳಿಕ ಅದನ್ನು ಗರಿಷ್ಠ ಎಂದರೆ ಮೂರು ವರ್ಷಗಳಲ್ಲಿ ಪೂರ್ಣಗೊಳಿಸಲಾಗುತ್ತದೆ. ಆದರೆ, ಪವನ್ ಕಲ್ಯಾಣ್ ನಟನೆಯ ‘ಹರಿಹರ ವೀರ ಮಲ್ಲು’ ಸಿನಿಮಾ ಸೆಟ್ಟೇರಿ ಐದು ವರ್ಷ ಕಳೆದರೂ ಅದರ ರಿಲೀಸ್ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಈ ಚಿತ್ರ ಈಗಾಗಲೇ ಹಲವು ಬಾರಿ ಪೋಸ್ಟ್​ಪೋನ್ ಆಗಿದೆ. ಈಗ ಸಿನಿಮಾ ಮತ್ತೊಮ್ಮೆ ಮುಂದಕ್ಕೆ ಹೋಗುವ ಸೂಚನೆ ಸಿಕ್ಕಿದೆ.

‘ಹರಿ ಹರ ವೀರ ಮಲ್ಲು’ ಸಿನಿಮಾ ಮೇ 9ರಂದು ರಿಲೀಸ್ ಆಗಬೇಕಿತ್ತು. ಆದರೆ, ಈಗ ಮತ್ತೊಮ್ಮೆ ಸಿನಿಮಾದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ ಎಂದು ವರದಿ ಆಗಿದೆ. ಪವನ್ ಕಲ್ಯಾಣ್ ಅವರು ಇತ್ತೀಚೆಗೆ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಇಷ್ಟೇ ಅಲ್ಲ, ಅವರ ಮಗ ಮಾರ್ಕ್ ಶಂಕರ್ ಅಗ್ನಿ ಅವಘಡದಿಂದ ತೊಂದರೆ ಅನುಭವಿಸಿದ್ದಾನೆ. ಈ ಎಲ್ಲಾ ಕಾರಣದಿಂದ ಪವನ್ ಕಲ್ಯಾಣ್ ಅವರು ಶೂಟ್​ನಲ್ಲಿ ಭಾಗಿ ಆಗಿಲ್ಲ.

ಇದನ್ನೂ ಓದಿ
Image
ಮತ್ತೆ ಅರೆಸ್ಟ್ ಆದ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್; ಕಾರಣ ಏನು?
Image
ರಶ್ಮಿಕಾ ಸಸ್ಯಾಹಾರಿಯೋ, ಮಾಂಸಹಾರಿಯೋ? ಈ ತರಕಾರಿ ಕಂಡರೆ ಆಗುವುದೇ ಇಲ್ಲ
Image
ಸೋತ ಅಜಿತ್ ಚಿತ್ರಕ್ಕೆ ಶಾಕ್ ಕೊಟ್ಟ ಇಳಯರಾಜ; 5 ಕೋಟಿಗೆ ಡಿಮ್ಯಾಂಡ್
Image
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ

‘ಹರಿ ಹರ ವೀರ ಮಲ್ಲು’ ಸಿನಿಮಾದ ವಿಎಫ್​ಎಕ್ಸ್ ಕೆಲಸಗಳು ಕೂಡ ಸಾಕಷ್ಟು ಬಾಕಿ ಉಳಿದುಕೊಂಡಿವೆ. ಇವುಗಳನ್ನು ಪೂರ್ಣಗೊಳಿಸಲು ಸಾಕಷ್ಟು ಸಮಯ ಬೇಕಿದೆ. ಈ ಎಲ್ಲಾ ಕಾರಣದಿಂದ ಸಿನಿಮಾ ಮತ್ತೊಮ್ಮೆ ಮುಂದಕ್ಕೆ ಹೋಗಲಿದೆ. ಟಾಲಿವುಡ್ ಇತಿಹಾಸವೊಂದರಲ್ಲಿ ಇಷ್ಟು ದೀರ್ಘ ಸಮಯದಿಂದ ಬಾಕಿ ಉಳಿದುಕೊಂಡಿರೋ ಎಕೈಕ ಸಿನಿಮಾ ಎಂಬ ಕುಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ.

ಇದನ್ನೂ ಓದಿ: ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಕಲ್ಯಾಣ್ ಪತ್ನಿ

ಈ ರೀತಿ ಸಾಕಷ್ಟು ಗ್ಯಾಪ್​ಗಳು ಉಂಟಾದಾಗ ದೃಶ್ಯಗಳ ಕಾಂಬಿನೇಷನ್ ಹೋಗಿ ಬಿಡುತ್ತದೆ. ಒಂದು ದೃಶ್ಯದಿಂದ ಮತ್ತೊಂದು ದೃಶ್ಯಕ್ಕೆ ಸಾಕಷ್ಟು ವ್ಯತ್ಯಾಸ ಕಾಣುತ್ತದೆ. ಇದು ಸಿನಿಮಾ ಸೋಲಿಗೂ ಕಾರಣ ಆಗಬಹುದು. ಈ ಭಯ ಅಭಿಮಾನಿಗಳಲ್ಲಿ ತೀವ್ರವಾಗಿ ಕಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ