AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್ ಕಲ್ಯಾಣ್ ಅಭಿಮಾನಿಗಳು ಈ ಸುದ್ದಿ ಓದಿದ್ರೆ ಬೇಸರ ಆಗೋದು ಪಕ್ಕಾ

ಪವನ್ ಕಲ್ಯಾಣ್ ಅವರ ‘ಹರಿ ಹರ ವೀರ ಮಲ್ಲು’ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟಿದೆ. ರಾಜಕೀಯ ಚಟುವಟಿಕೆಗಳಿಂದಾಗಿ ಚಿತ್ರೀಕರಣದಲ್ಲಿ ವಿಳಂಬ ಉಂಟಾಗಿದೆ. ಮಾರ್ಚ್ 28 ರ ಬಿಡುಗಡೆ ದಿನಾಂಕದ ಬದಲು ಮೇ ನಂತರ ಬಿಡುಗಡೆಯಾಗುವ ನಿರೀಕ್ಷೆಯಿದೆ. ಇದರಿಂದ ಅಭಿಮಾನಿಗಳಲ್ಲಿ ನಿರಾಶೆ ಮೂಡಿದೆ.

ಪವನ್ ಕಲ್ಯಾಣ್ ಅಭಿಮಾನಿಗಳು ಈ ಸುದ್ದಿ ಓದಿದ್ರೆ ಬೇಸರ ಆಗೋದು ಪಕ್ಕಾ
ಪವನ್ ಕಲ್ಯಾಣ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 04, 2025 | 8:04 AM

Share

ಪವನ್ ಕಲ್ಯಾಣ್ ಅವರು ಆಂಧ್ರ ಪ್ರದೇಶದ ಡಿಸಿಎಂ ಆಗಿದ್ದಾರೆ. ಇದಾದ ಬಳಿಕ ಅವರ ಅಭಿಮಾನಿಗಳು ಸಾಕಷ್ಟು ಕುತೂಹಲಗೊಂಡಿದ್ದರು. ಅವರು ರಾಜಕೀಯದಲ್ಲಿ ತೊಡಗಿಕೊಂಡರೆ ಸಿನಿಮಾ ಕೆಲಸಗಳನ್ನು ಹೇಗೆ ಮಾಡುತ್ತಾರೆ ಎನ್ನುವ ಪ್ರಶ್ನೆ ಮೂಡಿತ್ತು. ಆದರೆ, ರಾಜಕೀಯ ಸಿನಿಮಾ ಕೆಸಗಳನ್ನು ಬ್ಯಾಲೆನ್ಸ್ ಮಾಡಿಕೊಂಡು ಹೋಗೋದಾಗಿ ಅವರು ಹೇಳಿದ್ದರು. ಆದರೆ, ಇದು ಸಾಧ್ಯವಾಗುತ್ತಿಲ್ಲ. ಈಗ ಅವರ ಅಭಿಮಾನಿಗಳಿಗೆ ಬೇಸರದ ವಿಚಾರ ಇದೆ.

ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಸಿನಿಮಾ ಸೆಟ್ಟೇರಿ ಬಹಳ ಸಮಯವೇ ಕಳೆದಿದೆ. ಆದರೆ, ಪವನ್ ಕಲ್ಯಾಣ್ ಅವರು ಈ ಚಿತ್ರದ ಶೂಟ್​ನ ಅಂದುಕೊಂಡಂತೆ ಮುಗಿಸೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಚಿತ್ರದ ರಿಲೀಸ್ ಡೇಟ್ ಮುಂದಕ್ಕೆ ಹೋಗಿದೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಮಾರ್ಚ್ 28ರಂದು ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಅಂದುಕೊಂಡ ದಿನಾಂಕದಂದು ಚಿತ್ರ ಬರುತ್ತಿಲ್ಲ. ಇದು ಅವರ ಅಭಿಮಾನಿಗಳಿಗೆ ಬೇಸರ ಉಂಟು ಮಾಡಿದೆ. ಪವನ್ ಕಲ್ಯಾಣ್ ಹೀರೋ ಆಗಿ ನಟಿಸಿದ ಸಿನಿಮಾ ನೋಡಿ ಬಹಳ ವರ್ಷಗಳೇ ಕಳೆದಿವೆ. ಇದು ಕೂಡ ಬೇಸರ ಹೆಚ್ಚಲು ಕಾರಣ.

ಇದನ್ನೂ ಓದಿ
Image
ನಟ ಪೋಸಾನಿ ಕೃಷ್ಣ ಮುರಳಿ ಬಂಧನ, ಪವನ್ ಕಲ್ಯಾಣ್ ಕೈವಾಡ?
Image
ತಮ್ಮದೇ ಸಿನಿಮಾ ಸೀನ್ ವಿವರಿಸಿದ ಪವನ್ ಕಲ್ಯಾಣ್, ನಕ್ಕು ಸುಸ್ತಾದ ಸಚಿವರು
Image
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ

ಹಾಗಾದರೆ ಈ ಸಿನಿಮಾ ಬರೋದು ಯಾವಾಗ? ಸದ್ಯಕ್ಕಂತೂ ಯಾವುದೂ ಫೈನಲ್ ಆಗಿಲ್ಲ. ಇನ್ನೂ ಶೂಟಿಂಗ್ ಪ್ರಗತಿಯಲ್ಲಿ ಇದೆ. ಹೀಗಾಗಿ, ಮೇ ನಂತರ ಸಿನಿಮಾ ತೆರೆಗೆ ಬರಬಹುದು ಎಂದು ನಿರೀಕ್ಷಿಸಲಾಗುತ್ತಿದೆ. ಅಲ್ಲಿಯವರೆಗೆ ಕಾಯಲೇಬೇಕಾದ ಅನಿವಾರ್ಯತೆ ಅಭಿಮಾನಿಗಳಿಗೆ ಈಗ ಬಂದೊದಗಿದೆ.

2022ರಲ್ಲಿ ಬಂದ ‘ಭೀಮ್ಲಾ ನಾಯಕ್’ ಚಿತ್ರವೇ ಕೊನೆ. ಇದಾದ ಬಳಿಕ ಪವನ್ ಕಲ್ಯಾಣ್ ಹೀರೋ ಆಗಿ ನಟಿಸಿದ ಸಿನಿಮಾ ರಿಲೀಸ್ ಆಗಿಲ್ಲ. ಈ ಚಿತ್ರ ಕೂಡ ಹಿಟ್ ಆಗಿರಲಿಲ್ಲ. ಸದ್ಯ ಅವರ ನಟನೆಯ ‘ಹರಿ ಹರ ವೀರ ಮಲ್ಲು: ಪಾರ್ಟ್ 1’ ಜೊತೆಗೆ ‘ದೆ ಕಾಲ್​ ಮಿ ಒಜಿ’, ‘ಉಸ್ತಾದ್ ಭಗತ್ ಸಿಂಗ್’ ಕೆಲಸಗಳನ್ನೂ ಮಾಡಬೇಕಿದೆ. ‘ಹರಿ ಹರ ವೀರ ಮಲ್ಲು: ಪಾರ್ಟ್ 2’ ಕೂಡ ಬರಬೇಕಿದೆ.

ಇದನ್ನೂ ಓದಿ: ನಟ ಪೋಸಾನಿ ಕೃಷ್ಣ ಮುರಳಿ ಬಂಧನ, ಪವನ್ ಕಲ್ಯಾಣ್ ಕೈವಾಡ?

ಸದ್ಯ ತಂಡಕ್ಕೆ ಮತ್ತೊಂದು ಭಯ ಉಂಟಾಗಿದೆ. ಸಿನಿಮಾದ ಶೂಟ್ ವಿಳಂಬ ಆಗುತ್ತ ಹೋದಂತೆ ಕಂಟ್ಯೂನಿಟಿ ತಪ್ಪುವ ಭಯ ಇರುತ್ತದೆ. ಇದರಿಂದ ಸಿನಿಮಾ ಫ್ಲಾಪ್ ಆಗಲೂಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?