AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹರಿ ಹರ ವೀರ ಮಲ್ಲು’ ಕಲೆಕ್ಷನ್; ಪವನ್ ಕಲ್ಯಾಣ್ ಚಿತ್ರಕ್ಕೆ ಕುಂಟುವುದೊಂದೇ ಆಯ್ಕೆ

ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಕಾಣುತ್ತಿಲ್ಲ. ನಾಲ್ಕು ದಿನಗಳಲ್ಲಿ ಕೇವಲ 75 ಕೋಟಿ ರೂಪಾಯಿ ಗಳಿಕೆ ಮಾತ್ರ. ಚಿತ್ರದ ವಿಳಂಬ, ನಿರ್ದೇಶಕರ ಬದಲಾವಣೆ ಮತ್ತು ಕಥಾವಸ್ತುವಿನಲ್ಲಿನ ಅಸಮಂಜಸತೆಗಳು ಚಿತ್ರದ ಫಲಿತಾಂಶದ ಮೇಲೆ ಪರಿಣಾಮ ಬೀರಿವೆ ಎಂದು ಹೇಳಲಾಗುತ್ತಿದೆ.

‘ಹರಿ ಹರ ವೀರ ಮಲ್ಲು’ ಕಲೆಕ್ಷನ್; ಪವನ್ ಕಲ್ಯಾಣ್ ಚಿತ್ರಕ್ಕೆ ಕುಂಟುವುದೊಂದೇ ಆಯ್ಕೆ
ಪವನ್
ರಾಜೇಶ್ ದುಗ್ಗುಮನೆ
|

Updated on: Jul 28, 2025 | 8:57 AM

Share

ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾ (Hari Hara Veera Mallu) ಬಾಕ್ಸ್ ಆಫೀಸ್​ನಲ್ಲಿ ಕಳಪೆ ಪ್ರದರ್ಶನ ನೀಡುತ್ತಿದೆ. ಚಿತ್ರ ನಾಲ್ಕು ದಿನಕ್ಕೆ ಗಳಿಕೆ ಮಾಡಿದ್ದು ಕೇವಲ 75 ಕೋಟಿ ರೂಪಾಯಿ. ಈ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಲು ಒದ್ದಾಡುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ 75 ಕೋಟಿ ರೂಪಾಯಿ ದೊಡ್ಡ ಮೊತ್ತವೇ. ಆದರೆ, ಪವನ್ ಕಲ್ಯಾಣ್​ಗೆ ಇರುವ ಚಾರ್ಮ್ ಹಾಗೂ ಸಿನಿಮಾದ ಬಜೆಟ್​ಗೆ ಹೋಲಿಕೆ ಮಾಡಿದರೆ ಈ ಗಳಿಕೆ ದೊಡ್ಡದಲ್ಲ.

ಪವನ್ ಕಲ್ಯಾಣ್ ಅವರು ‘ಹರಿ ಹರ ವೀರ ಮಲ್ಲು’ ಚಿತ್ರವನ್ನು ಐದು ವರ್ಷಗಳ ಹಿಂದೆಯೇ ಘೋಷಣೆ ಮಾಡಿದ್ದರು. ರಾಜಕೀಯದಲ್ಲಿ ಹಾಗೂ ಪಕ್ಷ ಬಲ ಪಡಿಸುವಲ್ಲಿ ಅವರು ಬ್ಯುಸಿ ಆಗಿದ್ದರಿಂದ ಅವರಿಗೆ ಸಿನಿಮಾಗೆ ಟೈಮ್ ನೀಡೋಕೆ ಸಾಧ್ಯವೇ ಆಗಿಲ್ಲ. ಹೀಗಾಗಿ, ಸಿನಿಮಾ ವಿಳಂಬ ಆಗಿದ್ದು ಮಾತ್ರವಲ್ಲ ಚಿತ್ರದ ನಿರ್ದೇಶಕರು ಕೂಡ ಬದಲಾದರು. ಜೊತೆಗೆ ಸಾಕಷ್ಟು ಗ್ಯಾಪ್ ತೆಗೆದುಕೊಂಡು ಶೂಟ್ ಮಾಡಿದ್ದರಿಂದ ಸಿನಿಮಾಗೆ ಕಂಟ್ಯೂನಿಟಿ ಇರಲೇ ಇಲ್ಲ.

‘ಹರಿ ಹರ ವೀರ ಮಲ್ಲು’ ಸಿನಿಮಾ ಓಪನಿಂಗ್ ದಿನ (ಪ್ರೀಮಿಯರ್ ಶೋ ಗಳಿಕೆಯೂ ಸೇರಿ) 47 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಶುಕ್ರವಾರ 8 ಕೋಟಿ ರೂಪಾಯಿ, ಶನಿವಾರ 9 ಕೋಟಿ ರೂಪಾಯಿ, ಭಾನುವಾರ ಕೇವಲ 11 ಕೋಟಿ ರೂಪಾಯಿ ಗಳಿಸಿದೆ. ಈ ಮೂಲಕ ಸಿನಿಮಾ 100 ಕೋಟಿ ರೂಪಾಯಿ ಕ್ಲಬ್ ಸೇರಲು ಸಾಕಷ್ಟು ಕಷ್ಟಪಡುತ್ತಿದೆ. ಅದಕ್ಕೆ ಇನ್ನೂ ಒಂದು ವಾರ ಬೇಕಾಗಬಹುದು.

ಇದನ್ನೂ ಓದಿ
Image
ಶಾರುಖ್ ಖಾನ್ ಈ ಮೂಢನಂಬಿಕೆಯನ್ನು ತುಂಬಾನೇ ನಂಬುತ್ತಾರೆ
Image
‘ಭರ್ಜರಿ ಬ್ಯಾಚುಲರ್ಸ್ 2’ ವಿನ್ನರ್ ಸುನೀಲ್​; ಸಿಕ್ಕಿದ್ದು ಇಷ್ಟೊಂದು ಹಣವಾ
Image
‘ಸು ಫ್ರಮ್ ಸೋ’ ಬ್ಲಾಕ್​ಬಸ್ಟರ್ ಕಲೆಕ್ಷನ್; ‘ಎಕ್ಕ’ ದಾಖಲೆ ಉಡೀಸ್
Image
Exclusive: ಅಳಿಯ ಚಂದು ಚಿತ್ರಕ್ಕೆ ವಿಲನ್ ಆದ ದರ್ಶನ್; ದಿನಕರ್ ನಿರ್ದೇಶನ

ಪವನ್ ಕಲ್ಯಾಣ್ ಅವರ ಕಂಬ್ಯಾಕ್ ಸಿನಿಮಾ ಇದು. ಈ ಕಾರಣಕ್ಕೆ ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆ ಇತ್ತು. ಇನ್ನು, ಚಿತ್ರದ ಬಜೆಟ್ 250 ಕೋಟಿ ರೂಪಾಯಿ. ಹೀಗಾಗಿ, ಸಿನಿಮಾ ಲಾಭ ಕಾಣಬೇಕು ಎಂದರೆ ಸಾಕಷ್ಟು ಹಣ ಗಳಿಕೆ ಮಾಡಬೇಕಿತ್ತು. ಆದರೆ, ಸಿನಿಮಾ ಅಂದುಕೊಂಡ ರೀತಿಯಲ್ಲಿ ಗಳಿಕೆ ಮಾಡುತ್ತಿಲ್ಲ.

ಇದನ್ನೂ ಓದಿ: ಬುಕಿಂಗ್​ನಲ್ಲಿ ಪವನ್ ಕಲ್ಯಾಣ್ ಚಿತ್ರವನ್ನೂ ಬೀಟ್ ಮಾಡಿದ ‘ಸು ಫ್ರಮ್ ಸೋ’

ಕರ್ನಾಟಕದಲ್ಲಿ ರಾಜ್ ಬಿ ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಸಿನಿಮಾ ಗೆಲುವು ಕಂಡಿದೆ. ಈ ಚಿತ್ರದ ಗೆಲುವು ‘ಹರಿ ಹರ ವೀರ ಮಲ್ಲು’ ಚಿತ್ರದ ಮೇಲೆ ಪ್ರಭಾವ ಬೀರಿದೆ. ಪವನ್ ಸಿನಿಮಾ ಶೋ ತೆಗೆದು ‘ಸು ಫ್ರಮ್ ಸೋ’ ಪ್ರದರ್ಶಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್