AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್ ಕಲ್ಯಾಣ್ ಸಿನಿಮಾಗೆ ಕಂಬ್ಯಾಕ್ ತಡವಾಗುತ್ತಿರುವುದಕ್ಕೆ ರಾಜಕೀಯವಲ್ಲ ಕಾರಣ

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಆರೋಗ್ಯ ಸಮಸ್ಯೆಯಿಂದಾಗಿ ಸದ್ಯ ಸಿನಿಮಾಗಳಿಂದ ದೂರ ಉಳಿದಿದ್ದಾರೆ. ಹಳೆಯ ಗಾಯಗಳು ಮತ್ತು ಇತ್ತೀಚಿನ ಮೂಗಿನ ಶಸ್ತ್ರಚಿಕಿತ್ಸೆಯಿಂದ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಚಂದ್ರಬಾಬು ನಾಯ್ಡು ಅವರೊಂದಿಗೂ ಈ ಬಗ್ಗೆ ಮಾತನಾಡಿದ್ದಾರೆ. ಡಿಸಿಎಂ ಜವಾಬ್ದಾರಿ, ಆರೋಗ್ಯದ ಕಡೆ ಗಮನಹರಿಸುತ್ತಿದ್ದು, ದೈಹಿಕ ಸಾಮರ್ಥ್ಯ ಮರಳಿ ಪಡೆಯುವವರೆಗೂ ಚಿತ್ರೀಕರಣಕ್ಕೆ ಮರಳದಿರಲು ನಿರ್ಧರಿಸಿದ್ದಾರೆ.

ಪವನ್ ಕಲ್ಯಾಣ್ ಸಿನಿಮಾಗೆ ಕಂಬ್ಯಾಕ್ ತಡವಾಗುತ್ತಿರುವುದಕ್ಕೆ ರಾಜಕೀಯವಲ್ಲ ಕಾರಣ
ಪವನ್ ಕಲ್ಯಾಣ್
ರಾಜೇಶ್ ದುಗ್ಗುಮನೆ
|

Updated on: May 15, 2026 | 9:29 AM

Share

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಇತ್ತೀಚೆಗೆ ಮೂಗಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಪವನ್ ನಿವಾಸಕ್ಕೆ ಭೇಟಿ ನೀಡಿದ್ದಾಗ ಪವನ್ ಚೇತರಿಸಿಕೊಳ್ಳುತ್ತಿರುವುದು ಕಾಣಿಸಿದೆ. ಪವನ್ ಕಲ್ಯಾಣ್ ನಟನೆಗೆ ಮರಳಬೇಕು ಎಂಬುದು ಅನೇಕರ ಕೋರಿಕೆ ಆಗಿತ್ತು. ಅವರು ನಟನೆಗೆ ಮರಳದಿರಲು ರಾಜಕೀಯ ಕಾರಣ ಎನ್ನಲಾಗಿತ್ತು. ಆದರೆ, ಇದಕ್ಕೆ ಬೇರೆಯದೇ ಕಾರಣ ಇದೆ.

ಪವನ್ ಕಲ್ಯಾಣ್ ಅವರು ಡಿಸಿಎಂ ಆದ ಬಳಿಕ ಸಿನಿಮಾದಿಂದ ಅಂತರ ಕಾಯ್ದುಕೊಂಡರು. ಒಪ್ಪಿಕೊಂಡಿದ್ದ ಕೆಲಸ ಸಿನಿಮಾಗಳ ಕೆಲಸವನ್ನು ಕಷ್ಟಪಟ್ಟು ಮುಗಿಸಿದರು. ಹೊಸ ಸಿನಿಮಾ ಒಪ್ಪಿಕೊಳ್ಳದೆ ಹಲವು ವರ್ಷಗಳೇ ಕಳೆದಿವೆ. ಇದಕ್ಕೆ ಕಾರಣ ಅವರ ಅನಾರೋಗ್ಯ.

ವರದಿಗಳ ಪ್ರಕಾರ, ಪವನ್ ಕಲ್ಯಾಣ್ ಅವರು ಈ ಹಿಂದೆ ಸಿನಿಮಾ ಶೂಟಿಂಗ್‌ಗಳ ಸಮಯದಲ್ಲಿ ಅನೇಕ ಬಾರಿ ಪೆಟ್ಟು ಮಾಡಿಕೊಂಡಿದ್ದರು. ಆಗಿನ ಬಿಡುವಿಲ್ಲದ ವೇಳಾಪಟ್ಟಿಯಲ್ಲಿ ಆ ಗಾಯಗಳನ್ನು ಸರಿಯಾಗಿ ಗಮನಿಸದೆ ನಿರ್ಲಕ್ಷಿಸಲಾಗಿತ್ತು. ವರ್ಷಗಳ ಕಾಲ ಹಾಗೆಯೇ ಉಳಿದಿದ್ದ ಆ ಸಣ್ಣಪುಟ್ಟ ಗಾಯಗಳು ಈಗ ಕೆಲವು ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತಿವೆಯಂತೆ. ಈ ಬಗ್ಗೆ ಸ್ವತಃ ಪವನ್ ಅವರು ಚಂದ್ರಬಾಬು ನಾಯ್ಡು ಅವರ ಬಳಿ ಹಂಚಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಸದ್ಯ ಪವನ್ ಕಲ್ಯಾಣ್ ಅವರು ಉಪಮುಖ್ಯಮಂತ್ರಿಯಾಗಿ ದೊಡ್ಡ ಜವಾಬ್ದಾರಿ ಹೊತ್ತಿದ್ದಾರೆ. ಸರಣಿ ಸಭೆಗಳು, ಕ್ಷೇತ್ರ ಭೇಟಿಗಳು ಮತ್ತು ಪಕ್ಷದ ಕೆಲಸಗಳ ನಡುವೆ ಅವರಿಗೆ ವಿಶ್ರಾಂತಿ ಪಡೆಯಲು ಸಮಯ ಸಿಗುತ್ತಿಲ್ಲ. ಈ ಹಂತದಲ್ಲಿ ಮತ್ತೆ ಸಿನಿಮಾ ಶೂಟಿಂಗ್‌ನ ಅತಿಯಾದ ದೈಹಿಕ ಶ್ರಮದ ಕೆಲಸಗಳಿಗೆ ಕೈ ಹಾಕಿದರೆ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಬಹುದು ಎಂಬ ಆತಂಕ ಅವರ ಆಪ್ತ ವಲಯದಲ್ಲಿದೆ. ಹೀಗಾಗಿ, ಸಂಪೂರ್ಣವಾಗಿ ಗುಣಮುಖರಾಗುವವರೆಗೂ ಕ್ಯಾಮೆರಾ ಮುಂದೆ ಬರಬೇಡಿ ಎಂಬ ಸಲಹೆ ಅವರಿಗೆ ಸಿಕ್ಕಿದೆ ಎನ್ನಲಾಗಿದೆ.

ಇದನ್ನೂ ಓದಿ: ಶಸ್ತ್ರ ಚಿಕಿತ್ಸೆ ಬಳಿಕ ಪವನ್ ಕಲ್ಯಾಣ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಚಿರಂಜೀವಿ

ಸುರೇಂದರ್ ರೆಡ್ಡಿ ಸಿನಿಮಾದಲ್ಲಿ ಪವನ್ ನಟಿಸಬೇಕಿತ್ತು. ಈ ಚಿತ್ರದ ಚರ್ಚೆ ನಡೆದಿದೆ. ಆದರೆ, ಪವನ್ ಅವರ ಸದ್ಯದ ಆದ್ಯತೆ ಆರೋಗ್ಯ ಮತ್ತು ಆಡಳಿತ. ಶೂಟಿಂಗ್ ಆರಂಭಿಸುವ ಮೊದಲು ತಮ್ಮ ದೈಹಿಕ ಸಾಮರ್ಥ್ಯವನ್ನು ಪೂರ್ಣ ಪ್ರಮಾಣದಲ್ಲಿ ವಾಪಸ್ ಪಡೆಯಲು ಅವರು ನಿರ್ಧರಿಸಿದ್ದಾರೆ. ಹೀಗಾಗಿ, ಸದ್ಯಕ್ಕಂತೂ ಸಿನಿಮಾ ಸೆಟ್ಟೇರಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More