AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟನೆಯನ್ನು ಬಹುತೇಕ ತ್ಯಜಿಸಿದ ಪವನ್ ಕಲ್ಯಾಣ್; ದಿಟ್ಟ ನಿರ್ಧಾರ ಘೋಷಿಸಿದ ನಟ

ಪವನ್ ಕಲ್ಯಾಣ್ ಅವರು ಆಂಧ್ರಪ್ರದೇಶದ ಉಪಮುಖ್ಯಮಂತ್ರಿಯಾಗಿರುವುದರಿಂದ ಸಿನಿಮಾಗಳಲ್ಲಿ ಕಡಿಮೆ ಕೆಲಸ ಮಾಡುವ ನಿರ್ಧಾರವನ್ನು ಘೋಷಿಸಿದ್ದಾರೆ. ‘ಒಜಿ’ ಮತ್ತು ‘ಉಸ್ತಾದ್ ಭಗತ್ ಸಿಂಗ್’ ಚಿತ್ರಗಳ ಚಿತ್ರೀಕರಣವನ್ನು ಬೇಗ ಮುಗಿಸುವ ಯೋಜನೆಯನ್ನು ಅವರು ಹೊಂದಿದ್ದಾರೆ. ರಾಜಕೀಯ ಜವಾಬ್ದಾರಿಗಳಿಂದಾಗಿ ಭವಿಷ್ಯದಲ್ಲಿ ಕಡಿಮೆ ಸಿನಿಮಾಗಳಲ್ಲಿ ನಟಿಸುವುದಾಗಿ ಅವರು ತಿಳಿಸಿದ್ದಾರೆ.

ನಟನೆಯನ್ನು ಬಹುತೇಕ ತ್ಯಜಿಸಿದ ಪವನ್ ಕಲ್ಯಾಣ್; ದಿಟ್ಟ ನಿರ್ಧಾರ ಘೋಷಿಸಿದ ನಟ
ಪವನ್
ರಾಜೇಶ್ ದುಗ್ಗುಮನೆ
|

Updated on: Jul 23, 2025 | 8:47 AM

Share

ನಟ ಪವನ್ ಕಲ್ಯಾಣ್ (Pawan Kalyan) ಅವರು ಈ ಮೊದಲು ಸಿನಿಮಾ ಕೆಲಸಗಳ ಮೇಲೆ ಮಾತ್ರ ಗಮನ ಕೇಂದ್ರೀಕರಿಸುತ್ತಿದ್ದರು. ಯಾವಾಗ ಅವರು ರಾಜಕೀಯದಲ್ಲಿ ಬ್ಯುಸಿ ಆದರೋ ಆಗ ಬಿಡುವು ಮಾಡಿಕೊಂಡಾದರೂ ಸಿನಿಮಾ ಮಾಡುತ್ತಿದ್ದರು. ರಾಜಕೀಯದಲ್ಲಿ ಗೆಲುವು ಸಿಕ್ಕಿ, ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಆದ ಬಳಿಕ ಪವನ್ ಕಲ್ಯಾಣ್ ಸಿನಿಮಾ ನಿರ್ದೇಶಕರು ಹಾಗೂ ನಿರ್ಮಾಪಕರ ಕೈಗೆ ಸಿಗದಂತಾಗಿದ್ದಾರೆ. ಈ ಬಗ್ಗೆ ಫ್ಯಾನ್ಸ್​ಗೆ ಬೇಸರ ಇದೆ. ಹೀಗಿರುವಾಗಲೇ ಅವರು ಸಿನಿಮಾಗಳಿಂದ ದೂರವೇ ಇರುವ ನಿರ್ಧಾರ ಘೋಷಿಸಿದ್ದಾರೆ.

ಪವನ್ ಕಲ್ಯಾಣ್ ಈಗ ಜನ ಸೇವೆಯಲ್ಲಿ ಬ್ಯುಸಿ ಇದ್ದಾರೆ. ಇವುಗಳ ಜೊತೆ ಸಿನಿಮಾ ಕೆಲಸಗಳನ್ನು ಮಾಡುತ್ತಿದ್ದಾರೆ. ಬಹು ವರ್ಷಗಳಿಂದ ಪೆಂಡಿಂಗ್​ನಲ್ಲೇ ಉಳಿದುಕೊಂಡಿದ್ದ ‘ಹರಿ ಹರ ವೀರ ಮಲ್ಲು’ ಚಿತ್ರ ಈ ವಾರ ತೆರೆಗೆ ಬರುತ್ತಿದೆ. ನಿರ್ದೇಶಕರು ಹಾಗೂ ನಿರ್ಮಾಪಕರು ಸಾಕಷ್ಟು ಗೋಗರೆದ ಬಳಿಕ ಈ ಚಿತ್ರಕ್ಕಾಗಿ ಅವರು ಸಮಯ ಮೀಸಲಿಟ್ಟು ಚಿತ್ರ ಮಾಡಿಕೊಟ್ಟಿದ್ದಾರೆ. ಇದರ ಪ್ರಚಾರದ ಭಾಗವಾಗಿ ಅವರು ಮಾತನಾಡಿದ್ದಾರೆ. ಈ ವೇಳೆ ಅವರು ಶಾಕಿಂಗ್ ನಿರ್ಧಾರ ಘೋಷಿಸಿದ್ದಾರೆ.

‘ಒಜಿ’ ಹಾಗೂ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗಳನ್ನು ಪವನ್ ಕಲ್ಯಾಣ್ ಮಾಡಬೇಕಿದೆ. ಆದರೆ ಅವರ ಬಳಿ ಅದಕ್ಕೆ ಸಮಯ ಇಲ್ಲ. ‘ನಾನು ರಾಜಕೀಯದಲ್ಲಿ ತೊಡಗಿಕೊಂಡಿರುವುದರಿಂದ ಸಿನಿಮಾದಲ್ಲಿ ನಟಿಸಲು ಹೆಚ್ಚು ಸಮಯ ಇಲ್ಲ’ ಎಂದು ಅವರು ಹೇಳಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ಕಡಿಮೆ ಸಿನಿಮಾ ಮಾಡುತ್ತೇನೆ ಎಂದಿದ್ದಾರೆ. ಅಂದರೆ ಸದ್ಯದ ಪರಿಸ್ಥಿತಿಯಲ್ಲಿ ಅವರು ಹೊಸ ಸಿನಿಮಾದಲ್ಲಿ ನಟಿಸೋದು ಅನುಮಾನ ಎಂದೇ ಹೇಳಲಾಗುತ್ತಿದೆ. ಮುಂದಿನ ಚುನಾವಣೆಯಲ್ಲಿ ಮತ್ತೆ ಗೆಲುವು ಸಿಕ್ಕರೆ ಅವರು ಸಿಗೋದು ಅನುಮಾನವೇ.

ಇದನ್ನೂ ಓದಿ
Image
‘ನಾನು ಒಳ್ಳೆಯ ತಂದೆಯಲ್ಲ’; ಶಾರುಖ್ ಖಾನ್ ಬೇಸರ
Image
ಮಂಗಳವಾರ ಹೇಗಿದೆ ‘ಜೂನಿಯರ್’ ಹಾಗೂ ‘ಎಕ್ಕ’ ಸಿನಿಮಾ ಕಲೆಕ್ಷನ್?
Image
ಮಂಗಳವಾರದ ‘ಸೈಯಾರ’ ಕಲೆಕ್ಷನ್​ಗೆ ‘ಪಠಾಣ್’ ದಾಖಲೆಯೇ ಉಡೀಸ್
Image
ಈ ದಿನಂದು ‘ಕಣ್ಣಪ’ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಲಿದೆ?

ಇನ್ನು, ಪವನ್ ಕಲ್ಯಾಣ್ ಅವರು ನಿರ್ಮಾಣದಲ್ಲೂ ತೊಡಗಿಕೊಂಡಿದ್ದಾರೆ. ಅದನ್ನು ಮುಂದುವರಿಸೋದಾಗಿ ಹೇಳಿದ್ದಾರೆ. ಪವನ್ ಕಲ್ಯಾಣ್ ಅವರು ಆಂಧ್ರದ ಡಿಸಿಎಂ. ಈ ಹುದ್ದೆಗೆ ಅದರದ್ದೇ ಆದ ಒಂದಷ್ಟು ಜವಾಬ್ದಾರಿಗಳು ಇರುತ್ತವೆ. ಇವುಗಳ ಜೊತೆಗೆ ಅವರಿಗೆ ಪಕ್ಷ ಸಂಘಟನೆಯ ಜವಾಬ್ದಾರಿ ಕೂಡ ಇದೆ.

ಇದನ್ನೂ ಓದಿ: ರೀಮೇಕ್ ಸಿನಿಮಾ ಮಾಡುವುದೇಕೆ? ಪವನ್ ಕಲ್ಯಾಣ್ ಕೊಟ್ಟರು ಕಾರಣ

ಹಾಗಾದರೆ ‘ಒಜಿ’ ಹಾಗೂ ‘ಉಸ್ತಾದ್ ಭಗತ್ ಸಿಂಗ್’ ಚಿತ್ರಗಳ ಗತಿ ಏನು? ಇದಕ್ಕೂ ಅವರು ಉತ್ತರಿಸಿದ್ದಾರೆ. ಸದ್ಯದ ಮಟ್ಟಿಗೆ ಈ ಚಿತ್ರಗಳಿಗೆ ಪವನ್ ಕಲ್ಯಾಣ್ ಅವರಿಂದ ಸಾಕಷ್ಟು ನಷ್ಟವೇ ಆಗುತ್ತಿದೆ. ಹೀಗಾಗಿ, ಆದಷ್ಟು ಬೇಗ ಶೂಟಿಂಗ್ ಮುಗಿಸಿ ಕೊಡೋ ಆಲೋಚನೆ ಹೊಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ