ರಾಜಕೀಯದಲ್ಲಿ ಪವನ್ ಕಲ್ಯಾಣ್ ಬ್ಯುಸಿ, ಮಗನ ಸಿನಿಮಾ ಎಂಟ್ರಿಗೆ ಸಜ್ಜಾಗುತ್ತಿದೆ ವೇದಿಕೆ

ಪವನ್ ಕಲ್ಯಾಣ್ ಆಂಧ್ರದ ಉಪ ಮುಖ್ಯಮಂತ್ರಿ ಆಗಿದ್ದು ಸಿನಿಮಾಗಳಿಂದ ಅಂತರ ಕಾಯ್ದುಕೊಂಡಿದ್ದಾರೆ. ಇದರ ನಡುವೆ ಪವನ್ ಕಲ್ಯಾಣ್​ರ ಪುತ್ರನ ಚಿತ್ರರಂಗದಲ್ಲಿ ಎಂಟ್ರಿಗೆ ವೇದಿಕೆ ಸಜ್ಜಾಗುತ್ತಿದೆ. ಪವನ್ ಪುತ್ರನಿಗಾಗಿ ನಿರ್ದೇಶಕರೊಬ್ಬರು ಕತೆ ರೆಡಿ ಮಾಡುತ್ತಿದ್ದಾರೆ.

ರಾಜಕೀಯದಲ್ಲಿ ಪವನ್ ಕಲ್ಯಾಣ್ ಬ್ಯುಸಿ, ಮಗನ ಸಿನಿಮಾ ಎಂಟ್ರಿಗೆ ಸಜ್ಜಾಗುತ್ತಿದೆ ವೇದಿಕೆ
Follow us
|

Updated on: Jul 09, 2024 | 3:37 PM

ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಈಗ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿಯಾಗಿದ್ದಾರೆ. ಪಂಚಾಯತ್ ರಾಜ್ ಸೇರಿದಂತೆ ಕೆಲವು ಪ್ರಮುಖ ಖಾತೆಗಳನ್ನು ಸಹ ಪವನ್ ಕಲ್ಯಾಣ್ ಸಂಭಾಳಿಸುತ್ತಿದ್ದಾರೆ. ರಾಜಕೀಯ ಪಕ್ಷವೊಂದರ ಅಧ್ಯಕ್ಷರೂ ಆಗಿ, ರಾಜ್ಯವೊಂದರ ಉಪ ಮುಖ್ಯ ಮಂತ್ರಿಯೂ ಆಗಿರುವ ಪವನ್ ಕಲ್ಯಾಣ್​ಗೆ ಈಗ ಜವಾಬ್ದಾರಿ ಹೆಚ್ಚಿದ್ದು ಸಿನಿಮಾಗಳಿಂದ ತುಸು ಅಂತರ ಕಾಯ್ದುಕೊಳ್ಳಲಿದ್ದಾರೆ. ಪವನ್ ಗೆದ್ದು ಡಿಸಿಎಂ ಆಗಿರುವುದು ಅಭಿಮಾನಿಗಳಿಗೆ ಖುಷಿಯ ವಿಚಾರವಾದರೂ ಸಿನಿಮಾಗಳಿಂದ ಅಂತರ ಕಾಯ್ದುಕೊಂಡಿರುವುದು ಅಭಿಮಾನಿಗಳಿಗೆ ಬೇಸರ ತಂದಿದೆ. ಇದರ ನಡುವೆ ತಂದೆಯ ಕೊರತೆಯನ್ನು ನೀಗಿಸಲು ಪುತ್ರ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ.

ಪವನ್ ಕಲ್ಯಾಣ್​ರ ಎರಡನೇ ಪತ್ನಿ ರೇಣು ದೇಸಾಯಿ ಅವರ ಪುತ್ರ ಅಕಿರಾ ಚಿತ್ರರಂಗಕ್ಕೆ ಬರಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ. ಕಳೆದ ಕೆಲ ತಿಂಗಳುಗಳಿಂದಲೂ ಈ ಕುರಿತು ಚರ್ಚೆ ಜಾರಿಯಲ್ಲಿದೆ. ಅಕಿರ ಸಿನಿಮಾ ರಂಗಕ್ಕೆ ಎಂಟ್ರಿ ನೀಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಲೇ ಇವೆ. ಆದರೆ ಇದೀಗ ನಿರ್ದೇಶಕರೊಬ್ಬರು ಅಕಿರಾಗಾಗಿ ಕತೆ ಹೆಣೆಯುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಸ್ವತಃ ನಿರ್ದೇಶಕ ಹೇಳಿಕೊಂಡಿದ್ದಾರೆ.

ಪವನ್ ಕಲ್ಯಾಣ್​ರ ಹಿಟ್ ಸಿನಿಮಾ ‘ಗಬ್ಬರ್ ಸಿಂಗ್’ ನಿರ್ದೇಶನ ಮಾಡಿದ್ದ ಹರೀಶ್ ಶಂಕರ್, ಪವನ್​ರ ಪುತ್ರ ಅಕಿರಾಗಾಗಿ ಕತೆ ರೆಡಿ ಮಾಡುತ್ತಿದ್ದಾರಂತೆ. ಆದಷ್ಟು ಬೇಗ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ಅದೇ ‘ಗಬ್ಬರ್ ಸಿಂಗ್’ ಸೇರಿದಂತೆ ಇನ್ನೂ ಕೆಲ ಪವನ್ ಕಲ್ಯಾಣ್ ಸಿನಿಮಾಗಳಿಗೆ ಬಂಡವಾಳ ಹೂಡಿರುವ ಪವನ್​ರ ಆಪ್ತ ಬಂಡ್ಲ ಗಣೇಶ್, ತಾವು ಅಕಿರಾ ಸಿನಿಮಾಕ್ಕೆ ಬಂಡವಾಳ ಹೂಡುವುದಾಗಿ ಘೋಷಣೆ ಮಾಡಿದ್ದರು. ಬಹುಷಃ ಅವರೇ ಅಕಿರಾರ ಸಿನಿಮಾಕ್ಕೆ ಬಂಡವಾಳ ಹೂಡುವ ಸಾಧ್ಯತೆ ಇದೆ.

ಇದನ್ನೂ ಓದಿ:ನಟನೆ ಮುಂದುವರೆಸುತ್ತಾರಾ ಆಂಧ್ರ ಡಿಸಿಎಂ ಪವನ್ ಕಲ್ಯಾಣ್? ಕೊಟ್ಟರು ಸ್ಪಷ್ಟನೆ

ಅಕಿರಾ ನಂದ, ಪವನ್​ ಹಾಗೂ ರೇಣು ದೇಸಾಯಿಯ ಮೊದಲ ಪುತ್ರ. ಇತ್ತೀಚೆಗೆ ಪವನ್ ಕಲ್ಯಾಣ್ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ವಿಜಯ ಸಾಧಿಸಿದಾಗ ಅಕಿರಾ ನಂದ ಅವರನ್ನು ಪವನ್ ಜೊತೆಗೆ ಕರೆದೊಯ್ದು ಚಂದ್ರಬಾಬು ನಾಯ್ಡುಗೆ ಶುಭಾಶಯ ತಿಳಿಸಿದ್ದರು. ಪ್ರಧಾನಿ ಮೋದಿಯನ್ನೂ ಸಹ ಅಕಿರಾಗೆ ಭೇಟಿ ಮಾಡಿಸಿದ್ದರು. ಮಗನನ್ನು ಚಿತ್ರರಂಗಕ್ಕೆ ಕರೆತರಬೇಕೆನ್ನುವ ಆಸೆ ಪವನ್ ಕಲ್ಯಾಣ್​ ಗೆ ಹಾಗೂ ರೇಣು ದೇಸಾಯಿಗೂ ಸಹ ಇದೆ. ಈಗ ಅದಕ್ಕೆ ತಕ್ಕಂತೆ ಕತೆ ಸಹ ರೆಡಿಯಾಗುತ್ತಿದ್ದು ಆದಷ್ಟು ಬೇಗ ಅಕಿರಾ ಬೆಳ್ಳಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ