AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಂದುಕೊಂಡಿದ್ದಕ್ಕಿಂತ ಹೆಚ್ಚೇ ಆಗಿದೆ’; ಮಗನ ಆರೋಗ್ಯದ ಅಪ್​ಡೇಟ್ ಕೊಟ್ಟ ಪವನ್ ಕಲ್ಯಾಣ್

ಸಿಂಗಾಪುರದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಪವನ್ ಕಲ್ಯಾಣ್ ಅವರ ಮಗ ಮಾರ್ಕ್ ಶಂಕರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೈ ಮತ್ತು ಕಾಲುಗಳಿಗೆ ತೀವ್ರ ಸುಟ್ಟಗಾಯಗಳಾಗಿವೆ. ಪವನ್ ಕಲ್ಯಾಣ್ ಅವರು ಮಾರ್ಕ್ ಶಂಕರ್‌ರ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿ, ಅವರ ಶ್ವಾಸಕೋಶಕ್ಕೆ ಹಾನಿಯಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಅವಘಡದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದೂ ಹೇಳಿದ್ದಾರೆ.

‘ಅಂದುಕೊಂಡಿದ್ದಕ್ಕಿಂತ ಹೆಚ್ಚೇ ಆಗಿದೆ’; ಮಗನ ಆರೋಗ್ಯದ ಅಪ್​ಡೇಟ್ ಕೊಟ್ಟ ಪವನ್ ಕಲ್ಯಾಣ್
ಪವನ್ ಕಲ್ಯಾಣ್
Follow us
ರಾಜೇಶ್ ದುಗ್ಗುಮನೆ
|

Updated on:Apr 09, 2025 | 7:05 AM

ಸಿಂಗಾಪುರದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಪವನ್​ ಕಲ್ಯಾಣ್ (Pawan Kalyan) ಅವರ ಕಿರಿಯ ಮಗ ಮಾರ್ಕ್ ಶಂಕರ್ ಅವರಿಗೆ ಗಾಯಗಳಾಗಿವೆ. ಅವರು ಅಲ್ಲಿ ಶಿಕ್ಷಣ ಪಡೆಯುತ್ತಿದ್ದು, ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಅವರ ಕೈ ಹಾಗೂ ಕಾಲಿಗೆ ಸುಟ್ಟ ಗಾಯಗಳಾಗಿವೆ. ನಂತರ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಈ ವಿಚಾರವಾಗಿ ಪವನ್ ಕಲ್ಯಾಣ್ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಮಾರ್ಕ್ ಶಂಕರ್ ಆರೋಗ್ಯದ ಬಗ್ಗೆ ಅಪ್​ಡೇಟ್ ನೀಡಿದ್ದಾರೆ.

ಮಾರ್ಕ್ ಶಂಕರ್ ಅವರು ಶಾಲೆಯಲ್ಲಿ ಬೇಸಿಗೆ ರಜದಲ್ಲಿ ಭಾಗಿ ಆಗಿದ್ದರು. ಈ ವೇಳೆ ಬೆಂಕಿ ಅವಘಡ ಸಂಭವಿಸಿದೆ. ಮಾರ್ಕ್ ಶಂಕರ್ ಜೊತೆ ಇತರ ವಿದ್ಯಾರ್ಥಿಗಳೂ ಇದ್ದರು ಎಂದು ಪವನ್ ಕಲ್ಯಾಣ್ ಅವರು ಹೇಳಿದ್ದಾರೆ. ಅಂದುಕೊಂಡಿದ್ದಕ್ಕಿಂತಲೂ ಹೆಚ್ಚಿನ ಸಮಸ್ಯೆ ಆಗಿದೆ ಎಂದು ಪವನ್ ಕಲ್ಯಾಣ್ ಅವರು ಹೇಳಿದ್ದಾರೆ.

‘ಶಂಕರ್ ಕಾಲು ಹಾಗೂ ಕೈಗೆ ಸುಟ್ಟ ಗಾಯಗಳಾಗಿವೆ. ನಾವು ಅಂದುಕೊಂಡಿದ್ದಕ್ಕಿಂತಲೂ ಹೆಚ್ಚೇ ಆಗಿದೆ. ಅವನ ಶ್ವಾಸಕೋಶವನ್ನು ಸರಿಪಡಿಸಲು ಬ್ರಾಂಕೋಸ್ಕೋಪಿ ಮಾಡಲಾಗಿದೆ. ಅವನ ದೇಹಕ್ಕೆ ಸಾಕಷ್ಟು ಹೊಗೆ ಸೇರಿದೆ. ನನ್ನ ಮಗನ ಮುಂದೆ ಕುಳಿತಿದ್ದ ಮತ್ತೋರ್ವನಿಗೆ ಇನ್ನೂ ಸಾಕಷ್ಟು ಗಾಯಗಳು ಆಗಿವೆ. ಮತ್ತೋರ್ವ ನಿಧನ ಹೊಂದಿದ್ದಾನೆ’ ಎಂದು ಪವನ್ ಕಲ್ಯಾಣ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ
Image
ಸಿನಿಮಾಗೆ ಮಾತ್ರವಲ್ಲ, ನನ್ನ ಜೀವನಕ್ಕೂ ಡಾಲಿ ಕೊಡುಗೆ ಜಾಸ್ತಿ ಇದೆ: ನಾಗಭೂಷಣ
Image
ಅಲ್ಲು ಅರ್ಜುನ್ ಮನೆ ಎದುರು ಅಭಿಮಾನಿಗಳ ದಂಡು; ಎಚ್ಚರಿಕೆಯಿಂದ ನಡೆದುಕೊಂಡ ನಟ
Image
ಕೇರೆ ಹಾವು ರಕ್ಷಿಸಿ ಅದರ ಮಹತ್ವ ತಿಳಿಸಿದ ದುನಿಯಾ ವಿಜಯ್
Image
ಶಾಲೆಯಲ್ಲಿ ಬೆಂಕಿ ಅವಘಡ, ಪವನ್ ಕಲ್ಯಾಣ್ ಪುತ್ರನಿಗೆ ತೀವ್ರ ಗಾಯ

ಪವನ್ ಕಲ್ಯಾಣ್ ಅವರು ಮಾಧ್ಯಮಗಳ ಜೊತೆ ಮಾತನಾಡಿದ ಬಳಿಕ ಸಿಂಗಾಪುರಕ್ಕೆ ಹಾರಿದ್ದಾರೆ. ಅವರು ಅಲ್ಲಿ ಸ್ವಲ್ಪ ಸಮಯ ಕಳೆದು ಆ ಬಳಿಕ ಮರಳಲಿದ್ದಾರೆ. ಪವನ್ ಕಲ್ಯಾಣ್ ಮಗ ಬೇಗ ಚೇತರಿಕೆ ಕಾಣಲಿ ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ. ಪವನ್ ಕಲ್ಯಾಣ್ ಅವರು ವಿಚಾರ ತಿಳಿಯುತ್ತಿದ್ದಂತೆ ಸಾಕಷ್ಟು ಆತಂಕಗೊಂಡಿದ್ದಾರೆ. ಅವರು ಈಗಾಗಲೇ ಸಿಂಗಾಪುರ ತೆರಳಿದ್ದು, ಅಲ್ಲಿ ಮಗನ ಆರೋಗ್ಯ ವಿಚಾರಿಸುತ್ತಿದ್ದಾರೆ.

ಇದನ್ನೂ ಓದಿ: ಶಾಲೆಯಲ್ಲಿ ಬೆಂಕಿ ಅವಘಡ, ಪವನ್ ಕಲ್ಯಾಣ್ ಪುತ್ರನಿಗೆ ತೀವ್ರ ಗಾಯ

ಪವನ್ ಕಲ್ಯಾಣ್ ಅವರು ರಾಜಕೀಯದಲ್ಲಿ ಬ್ಯುಸಿ ಇದ್ದಾರೆ. ಹೀಗಾಗಿ, ಸಿನಿಮಾ ಕೆಲಸಗಳು ವಿಳಂಬ ಆಗುತ್ತಿವೆ. ಮುಂದಿನ ದಿನಗಳಲ್ಲಿ ಅವರು ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸುವ ಸಾಧ್ಯತೆ ಇದೆ. ಆದರೆ, ಸದ್ಯಕ್ಕಂತೂ ಅವರು ರಾಜಕೀಯ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇವುಗಳ ಜೊತೆಗೆ ಕುಟುಂಬದಲ್ಲೂ ಸಮಸ್ಯೆ ಉಂಟಾಗಿದ್ದು ಅವರು ಬೇಸರ ಮಾಡಿಕೊಳ್ಳುವಂತೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:04 am, Wed, 9 April 25

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್