Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಕೈಯಲ್ಲಿರುವ ಸಿನಿಮಾಗಳೆಷ್ಟು?

ನಟ ಪವನ್ ಕಲ್ಯಾಣ್ ಈಗ ಆಂಧ್ರ ಪ್ರದೇಶದ ಉಪಮುಖ್ಯ ಮಂತ್ರಿ. ಪವನ್ ಇನ್ನುಮುಂದೆ ಸಿನಿಮಾಗಳಲ್ಲಿ ನಟಿಸುವುದಿಲ್ಲ ಎನ್ನಲಾಗುತ್ತಿದೆ. ಆದರೆ ಅಭಿಮಾನಿಗಳು ಪೂರ್ಣವಾಗಿ ನಿರಾಶರಾಗಬೇಕಿಲ್ಲ. ಅವರ ನಟನೆಯ ಮೂರು ಸಿನಿಮಾಗಳು ಬಿಡುಗಡೆಗೆ ರೆಡಿ ಇವೆ.

ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಕೈಯಲ್ಲಿರುವ ಸಿನಿಮಾಗಳೆಷ್ಟು?
ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಕೈಯಲ್ಲಿರುವ ಸಿನಿಮಾಗಳೆಷ್ಟು?
Follow us
ಮಂಜುನಾಥ ಸಿ.
|

Updated on: Jun 14, 2024 | 5:27 PM

ನಟ ಪವನ್ ಕಲ್ಯಾಣ್ (Pawan Kalyan) ಈಗ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಆಗಿದ್ದಾರೆ. ಕೇವಲ ಐದು ವರ್ಷದ ಮುಂಚೆ ಸ್ಪರ್ಧಿಸಿದ್ದ ಎರಡೂ ಕ್ಷೇತ್ರದಲ್ಲಿ ಸೋತು, ಪಕ್ಷದ ಒಬ್ಬನೇ ಒಬ್ಬ ಅಭ್ಯರ್ಥಿಯನ್ನೂ ಗೆಲ್ಲಿಸಿಕೊಳ್ಳಲಾಗದಿದ್ದ ಪವನ್ ಕಲ್ಯಾಣ್ ಕೇವಲ ಐದು ವರ್ಷದಲ್ಲಿ ತಮ್ಮ ಪಕ್ಷದ ಸ್ಥಿತಿಯನ್ನೇ ಬದಲಾಯಿಸಿದ್ದಾರೆ. ತಾವು ಸೇರಿದಂತೆ 21 ಜನ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬಂದಿರುವುದು ಮಾತ್ರವೇ ಅಲ್ಲದೆ ಕೇವಲ 21 ಸೀಟುಗಳನ್ನು ಹೊಂದಿದ್ದಾಗಿಯೂ ಆಂಧ್ರ ಪ್ರದೇಶದ ಉಪಮುಖ್ಯ ಮಂತ್ರಿ ಸ್ಥಾನದಲ್ಲಿ ಕೂತಿದ್ದಾರೆ. ಪವನ್​ರ ರಾಜಕೀಯ ಬೆಳವಣಿಗೆ ಅಭಿಮಾನಿಗಳಿಗೆ ಖುಷಿಯನ್ನೇನೋ ತಂದಿದೆ. ಆದರೆ ಪವನ್ ಅನ್ನು ಸಿನಿಮಾಗಳಿಂದ ಇದು ದೂರ ಮಾಡಿಬಿಡುತ್ತದೆಯೇನೋ ಎಂಬ ಆತಂಕವೂ ಅವರಿಗೆ ಇದೆ.

ಪವನ್ ಕಲ್ಯಾಣ್, ಅತಿ ಹೆಚ್ಚು ಅಭಿಮಾನಿಗಳಿರುವ ಭಾರತದ ಸ್ಟಾರ್ ನಟರಲ್ಲಿ ಪವನ್ ಕಲ್ಯಾಣ್ ಸಹ ಒಬ್ಬರು. ಅವರ ಸಿನಿಮಾಗಳಿಗಾಗಿ ಲಕ್ಷಾಂತರ ಅಭಿಮಾನಿಗಳು ಕಾತರದಿಂದ ಎದುರು ನೋಡುತ್ತಿರುತ್ತಾರೆ. ಅವರ ಸಿನಿಮಾಗಳು ಮೊದಲ ದಿನವೇ 30-40 ಕೋಟಿ ಗಳಿಸಿರುವ ಸಾಕಷ್ಟು ಉದಾಹರಣೆಗಳಿವೆ. ಹೀಗಿರುವಾಗ ಅವರು ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಕೊಂಡರೆ ಅವರಿಗೆ ಜನಪ್ರಿಯತೆ ತಂದುಕೊಟ್ಟ ಸಿನಿಮಾಪ್ರೇಮಿಗಳಿಗೆ ಬೇಸರ ಆಗುವುದಂತೂ ಖಚಿತ. ಆದರೆ ಅಭಿಮಾನಿಗಳು ಸಂಪೂರ್ಣವಾಗಿ ನಿರಾಶರಾಗಬೇಕಿಲ್ಲ. ಪವನ್ ನಟಿಸಿರುವ ಬರೋಬ್ಬರಿ ಮೂರು ಸಿನಿಮಾಗಳು ಬಿಡುಗಡೆಗೆ ರೆಡಿಯಾಗಿವೆ.

2018 ರಲ್ಲಿ ‘ಅಜ್ಞಾತವಾಸಿ’ ಸಿನಿಮಾದಲ್ಲಿ ನಟಿಸಿದ್ದ ಪವನ್ ಕಲ್ಯಾಣ್ ಅದಾದ ಬಳಿಕ ಮೂರು ವರ್ಷಗಳ ಕಾಲ ಸಿನಿಮಾರಂಗದಿಂದ ದೂರ ಉಳಿದಿದ್ದರು. 2021 ರಲ್ಲಿ ಬಿಡುಗಡೆ ಆದ ‘ವಕೀಲ್ ಸಾಬ್’ ಸಿನಿಮಾ ಮೂಲಕ ಭರ್ಜರಿ ಕಮ್ ಬ್ಯಾಕ್ ಮಾಡಿದರು. ಆ ಸಿನಿಮಾ ಬ್ಲಾಕ್ ಬಸ್ಟರ್ ಆಯ್ತು, ಜಗನ್ ಸರ್ಕಾರ ಒಡ್ಡಿದ ಅಡೆ-ತಡೆಗಳ ನಡುವೆಯೂ ಸಿನಿಮಾ ದೊಡ್ಡ ಹಿಟ್ ಆಯ್ತು. ಬಳಿಕ ಮಲಯಾಳಂನ ‘ಅಯ್ಯಪ್ಪನುಂ ಕೋಶಿಯುಂ’ ಸಿನಿಮಾವನ್ನು ‘ಭೀಮ್ಲ ನಾಯಕ್’ ಹೆಸರಲ್ಲಿ ರೀಮೇಕ್ ಮಾಡಿದರು. ಅದೂ ಸಹ ಹಿಟ್ ಆಯ್ತು. ಬಳಿಕ ತಮ್ಮ ಸಂಬಂಧಿ ಸಾಯಿ ಧರಮ್ ತೇಜ್ ಜೊತೆಗೆ ‘ಬ್ರೋ’ ಸಿನಿಮಾದಲ್ಲಿ ನಟಿಸಿದರು. ಅದೂ ಸಾಧಾರಣ ಯಶಸ್ಸು ಕಂಡಿತು.

ಇದನ್ನೂ ಓದಿ:ಪ್ರಮಾಣ ವಚನ ಸ್ವೀಕರಿಸಿ ಅಣ್ಣನ ಕಾಲಿಗೆರಗಿದ ಪವನ್ ಕಲ್ಯಾಣ್

‘ಬ್ರೋ’ ಸಿನಿಮಾದ ಬಳಿಕ ಪವನ್ ನಟನೆಯ ಯಾವುದೇ ಸಿನಿಮಾ ಬಿಡುಗಡೆ ಆಗಿಲ್ಲ. ಆದರೆ ಚುನಾವಣೆ ಪ್ರಚಾರಕ್ಕೂ ಹೋಗುವ ಮುನ್ನ ಪವನ್ ಕಲ್ಯಾಣ್ ಬರೋಬ್ಬರಿ ಮೂರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅದರಲ್ಲಿ ಎರಡು ಸಿನಿಮಾಗಳು ಈಗಾಗಲೇ ಬಿಡುಗಡೆಗೆ ರೆಡಿಯಾಗಿವೆ. ಪ್ರಚಾರಕ್ಕೆ ಹೋಗುವ ಮುನ್ನ ‘ಉಸ್ತಾದ್ ಭಗತ್ ಸಿಂಗ್’, ‘ಹರಿಹರ ವೀರ ಮಲ್ಲು’ ಹಾಗೂ ‘ಓಜಿ’ ಸಿನಿಮಾಗಳಲ್ಲಿ ಪವನ್ ಕಲ್ಯಾಣ್ ನಟಿಸಿದ್ದಾರೆ.

ಇವುಗಳಲ್ಲಿ ‘ಉಸ್ತಾದ್ ಭಗತ್ ಸಿಂಗ್’ ಹಾಗೂ ‘ಓಜಿ’ ಸಿನಿಮಾಗಳ ಚಿತ್ರೀಕರಣ ಸಂಪೂರ್ಣವಾಗಿ ಮುಗಿದಿದೆ ಎನ್ನಲಾಗುತ್ತಿದ್ದು, ಈ ಸಿನಿಮಾಗಳು ಬಿಡುಗಡೆಗೆ ರೆಡಿಯಾಗಿವೆಯಂತೆ. ಇನ್ನು ಐತಿಹಾಸಿಕ ಸಿನಿಮಾ ಆಗಿರುವ ‘ಹರಿಹರ ವೀರ ಮಲ್ಲು’ ಸಿನಿಮಾದ ಹಲವು ಭಾಗಗಳ ಚಿತ್ರೀಕರಣ ಮುಗಿದಿದ್ದು, ಕೆಲವು ಹಾಡು, ಹಾಗೂ ಆಕ್ಷನ್ ದೃಶ್ಯಗಳ ಚಿತ್ರೀಕರಣವಷ್ಟೆ ಬಾಕಿ ಇದೆ ಎನ್ನಲಾಗುತ್ತಿದೆ. ‘ಉಸ್ತಾದ್ ಭಗತ್ ಸಿಂಗ್’ ಹಾಗೂ ‘ಓಜಿ’ ಸಿನಿಮಾಗಳ ಟ್ರೈಲರ್​, ಟೀಸರ್​ಗಳು ಸಹ ಈಗಾಗಲೇ ಬಿಡುಗಡೆ ಆಗಿವೆ. ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾನಲ್ಲಿ ಪವನ್ ಕಲ್ಯಾಣ್ ಪೊಲೀಸ್ ಪಾತ್ರದಲ್ಲಿ ನಟಿಸಿದ್ದು, ಸಿನಿಮಾದ ನಾಯಕಿ ಕನ್ನಡತಿ ಶ್ರೀಲೀಲಾ. ಈ ಸಿನಿಮಾಗಳು ಶೀಘ್ರವೇ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ